Homeಕರ್ನಾಟಕಮಂಗಳೂರು: ಹೋಳಿ ಕಾರ್ಯಕ್ರಮಕ್ಕೆ ನುಗ್ಗಿ ಬಜರಂಗದಳ ಕಾರ್ಯಕರ್ತರ ಪುಂಡಾಟ; ಪ್ರಕರಣ ದಾಖಲು

ಮಂಗಳೂರು: ಹೋಳಿ ಕಾರ್ಯಕ್ರಮಕ್ಕೆ ನುಗ್ಗಿ ಬಜರಂಗದಳ ಕಾರ್ಯಕರ್ತರ ಪುಂಡಾಟ; ಪ್ರಕರಣ ದಾಖಲು

- Advertisement -
- Advertisement -

ಬಜರಂಗದಳದ ಕಾರ್ಯಕರ್ತರು ಹೋಳಿ ಹಬ್ಬ ಆಚರಿಸುತ್ತಿದ್ದ ಕಾರ್ಯಕ್ರಮಕ್ಕೆ ನುಗ್ಗಿ ಗಲಾಟೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮರೋಳಿಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಬಜರಂಗದಳದ ಆರು ಕಾರ್ಯಕರ್ತರ ಮೇಲೆ ಭಾನುವಾರ ಪ್ರಕರಣ ದಾಖಲಿಸಿದ್ದಾರೆ.

ಮರೋಳಿಯಲ್ಲಿ ರಂಗ್ ದೇ ಬರ್ಸಾ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ನುಗ್ಗಿದ ಬಜರಂಗದಳ ಕಾರ್ಯಕರ್ತರು ಆವರಣದಲ್ಲಿ ಹಾಕಲಾಗಿದ್ದ ಹೋಳಿ ಪಾರ್ಟಿಯ ಬ್ಯಾನರ್‌ಗಳನ್ನು ಹರಿದು ಹಾಕಿದ್ದಾರೆ.

ಈ ಕಾರ್ಯಕ್ರಮದಲ್ಲಿ ಯುವಕರು ಮತ್ತು ಯುವತಿಯರು ಸೇರಿ ಹೋಳಿ ಪಾರ್ಟಿಯನ್ನು ಆನಂದಿಸುತ್ತಿದ್ದರು. ಒಬ್ಬರ ಮೇಲೆ ಒಬ್ಬರು ಬಣ್ಣ ಎರಚುತ್ತಿದ್ದರು. ಆಗ ಅಲ್ಲಿಗೆ ನುಗ್ಗಿದ ಬಜರಂಗದಳ ಕಾರ್ಯಕರ್ತರು ಅಲ್ಲಿನ ಯುವಕರು ಅಸಭ್ಯ ವರ್ತನೆಯನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರು. ಅಲ್ಲದೇ ಅನ್ಯ ಧರ್ಮದ ಯುವಕರೂ ಸೇರಿ ಅಲ್ಲಿ ಹೋಳಿ ಆಚರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮದ ಆಯೋಜಕರೊಂದಿಗೆ ವಾಗ್ವಾದ ನಡೆಸಿ, ”ನಾವು ನಿಮಗೆ ಒಳ್ಳೆಯ ಮಾತುಗಳಲ್ಲಿ ಕಾರ್ಯಕ್ರಮವನ್ನು ನಿಲ್ಲಿಸಲು ಹೇಳಿದ್ದೇವೆ, ಆದರೆ ನೀವು ಕೇಳುತ್ತಿಲ್ಲ. ಸಂಸದರು ಮತ್ತು ಶಾಸಕರ ಹೆಸರನ್ನು ಇಲ್ಲಿ ತರಬೇಡಿ. ಕಾರ್ಯಕ್ರಮ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುತ್ತೇವೆ” ಎಂದು ವೈರಲ್ ಆಗಿರುವ ವೀಡಿಯೊದಲ್ಲಿ ಒಬ್ಬರು ಹೇಳುವುದನ್ನು ಕೇಳಬಹುದು.

 

ಇದನ್ನೂ ಓದಿ: ಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರು ಬಜರಂಗದಳ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಈ ಬಗ್ಗೆ ಮಾತನಾಡಿರುವ ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ಅವರು, ಈ ಕಾರ್ಯಕ್ರಮದ  ಆಯೋಜಕರು ಹೋಳಿ ಪಾರ್ಟಿಗೆ ಅನುಮತಿ ಪಡೆದಿದ್ದಾರೆ. ಯಾರಾದರೂ ಕಾರ್ಯಕ್ರಮವನ್ನು ವಿರೋಧಿಸುವುದಿದ್ದರೆ, ಪೊಲೀಸರಿಗೆ ದೂರು ನೀಡಬೇಕಾಗಿತ್ತು. ಬದಲಿಗೆ, ಈ ದಾಳಿ ನಡೆಸಿದ ಗುಂಪಿನವರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡಿದ್ದಾರೆ” ಎಂದು ಹೇಳಿದ್ದಾರೆ.

ಆಯೋಜಕರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತಿಚೇಗೆ ಶಿವಮೊಗ್ಗದಲ್ಲೂ ಬಜರಂಗದಳ ಕಾರ್ಯಕರ್ತರ ಪುಂಡಾಟ ಪ್ರದರ್ಶನ

ಮಾರ್ಚ್ 18ರಂದು ಶಿವಮೊಗ್ಗದ ಖಾಸಗಿ ಹೋಟೆಲೊಂದರಲ್ಲಿ ಆಯೋಜಿಸಿದ್ದ ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಕಾರ್ಯಕ್ರಮವನ್ನೇ ನಿಲ್ಲಿಸಿದ್ದರು. ಹೀಗೆ ಬಜರಂಗದಳ ಕಾರ್ಯಕರ್ತರ ಪುಂಡಾಟ ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿದೆ.

ನಗರದ ಕ್ಲಿಫ್ ಎಂಬಸಿ ಹೋಟೆಲ್‌ನ ಹೈವ್‌ ಸೈಬಾರ್‌ನಲ್ಲಿ ಲೇಡಿಸ್ ನೈಟ್ ಪಾರ್ಟಿ ಆಯೋಜಿಸಲಾಗಿತ್ತು. ವಿಷಯ ತಿಳಿದ ಬಜರಂಗದಳ ಕಾರ್ಯಕರ್ತರು, ಹೋಟೆಲ್ ಬಳಿ ಜಮಾಯಿಸಿ ಆಕ್ಷೇಪ ವ್ಯಕ್ತಪಡಿಸಿ ಪಾರ್ಟಿಯನ್ನು ನಿಲ್ಲಿಸಿದ್ದರು. ಹೆಣ್ಣು ಮಕ್ಕಳನ್ನು ಕರೆಯಿಸಿ ಡಾನ್ಸ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಜರಂಗದಳ ಆರೋಪಿಸಿತ್ತು.

ಬಜರಂಗದಳದ ಜಿಲ್ಲಾ ಸಂಚಾಲಕ ರಾಜೇಶ್ ಗೌಡ ಅವರು ಮಾತನಾಡಿ, ”ಇದು ಹಿಂದೂ ಸಂಸ್ಕೃತಿಗೆ ವಿರುದ್ಧವಾಗಿದೆ. ಪಾಶ್ಚಿಮಾತ್ಯ ಸಂಸ್ಕೃತಿಗೆ ಶಿವಮೊಗ್ಗದಲ್ಲಿ ಅವಕಾಶ ಕೊಡಲ್ಲ. ಮಲೆನಾಡಿನ ಜನರು ಸುಸಂಸ್ಕೃತರು, ಇಂತಹ ಕಾರ್ಯಕ್ರಮ ಆಯೋಜಿಸಿದರೆ ಸುಮ್ಮನಿರುವುದಿಲ್ಲ. ಲೇಟ್ ನೈಟ್ ಲೇಡಿಸ್ ಪಾರ್ಟಿ ಬಗ್ಗೆ ಈ ಮೊದಲೇ ಪೊಲೀಸರ ಗಮನಕ್ಕೆ ತಂದಿದ್ದೆವು. ಆದ್ದರಿಂದ ಪೊಲೀಸರ ಜತೆ ಬಂದು ಕಾರ್ಯಕ್ರಮ ನಿಲ್ಲಿಸಿದ್ದೇವೆ” ಎಂದು ಹೇಳಿದ್ದರು.

”ಶಿವಮೊಗ್ಗದಲ್ಲಿ ಇಂತಹ ಕಾರ್ಯಕ್ರಮಗಳಿಗೆ ನಾವು ಅವಕಾಶ ನೀಡುವುದಿಲ್ಲ ಏಕೆಂದರೆ ನಮ್ಮ ನಗರವು ಮತ್ತೊಂದು ಮಣಿಪಾಲವಾಗುವುದು ನಮಗೆ ಇಷ್ಟವಿಲ್ಲ. ಇಂತಹ ಘಟನೆಗಳನ್ನು ಭಜರಂಗದಳ ಸಹಿಸುವುದಿಲ್ಲ” ಎಂದು ಹೇಳಿದ ಅವರು, ಪಾರ್ಟಿಯಲ್ಲಿ ಮಹಿಳೆಯರ ಉಡುಗೆಯನ್ನೂ ಆಕ್ಷೇಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...