ಮಂಗಳೂರಿನ ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಡಿಸೆಂಬರ್ 24ರಂದು ಹತ್ಯೆಯಾದ ಅಬ್ದುಲ್ ಜಲೀಲ್ಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಇಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಎಸ್ಎಸ್ಎಫ್, ಎಸ್ವೈಎಸ್ ಸಂಘಟನೆಗಳು ಕರೆ ನೀಡಿದ್ದ ಪ್ರತಿಭಟನೆಯಲ್ಲಿ ನೂರಾರು ಜನರು ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಾಕುವ ಸರ್ಕಾರವನ್ನು ನಾಡಿನ ಜನತೆ ಎಂದೂ ಕ್ಷಮಿಸುವುದಿಲ್ಲ, ಜಿಲ್ಲೆಯ ಶಾಂತಿಗೆ ಬೆಂಕಿ ಇಟ್ಟು ಮಣ್ಣಿನ ಶಾಪಕ್ಕೆ ಗುರಿಯಾಗಿರುವ ಜನಪ್ರತಿನಿಧಿಗಳೆ ಆಲಿಸಿ ಆಡಳಿತವೆಂಬುದು ಶಾಶ್ವತವಲ್ಲ ಎಂಬ ಘೋಷಣೆಗಳನ್ನು ಕೂಗಲಾಯಿತು.
Huge protest by #Muslim community in #Mangalore demanding justice for Jaleel who was stabbed in his shop. Meanwhile, one more person arrested in Jaleel murder case Lakshmi Devadiga (28) from Katipalla now in custody. So far, 4 arrests have been made in the case #Karnataka pic.twitter.com/IUhnKoj0z9
— Imran Khan (@KeypadGuerilla) December 27, 2022
ನಾಲ್ಕನೇ ಆರೋಪಿ ಲಕ್ಷ್ಮೀಶ ದೇವಾಡಿಗ ಬಂಧನ
ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಂದು ನಾಲ್ಕನೇ ಆರೋಪಿ ಲಕ್ಷ್ಮೀಶ ದೇವಾಡಿಗ ಎಂಬಾತನನ್ನು ಬಂಧಿಸಿದ್ದಾರೆ. ಆತ ಕಾಟಿಪಳ್ಳ 4ನೇ ಬ್ಲಾಕ್ ನಿವಾಸಿ ಎಂದು ತಿಳಿದುಬಂದಿದೆ.
ಇದುವರೆಗೂ ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸುವಿನ್ ಕಾಂಚನ್ ಅಲಿಯಾಸ್ ಮುನ್ನ (24) ಹೆಜಮಾಡಿ ಉಡುಪಿ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಎಂಬವರನ್ನು ಮಂಗಳೂರು ಪೊಲೀಸರು ಸೋಮವಾರ ಬಂಧಿಸಿದ್ದರು.
ಪ್ರಕರಣದ ಪ್ರಮುಖ ಆರೋಪಿ ಶೈಲೇಶ್ ಪೂಜಾರಿ ರೌಡಿ ಶೀಟರ್ ಆಗಿದ್ದು, ಹಲವು ಪ್ರಕರಣಗಳಲ್ಲಿ ಶೈಲೇಶ್ ಆರೋಪಿಯಾಗಿದ್ದಾನೆ. ಸುವಿನ್ ಕಾಂಚನ್ ಸಹ ಮೂಲ್ಕಿ ಹಾಗು ಸುರತ್ಕಲ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು ಈತನ ವಿರುದ್ಧ ಮೂಲ್ಕಿ ಮೈಸೂರು, ಪಡುಬಿದ್ರೆ, ಸುರತ್ಕಲ್ ಠಾಣೆಗಳಲ್ಲಿ ಹಲವು ಪ್ರಕರಣಗಳಿವೆ ಎಂದು ತಿಳಿದುಬಂದಿದೆ.
ಶನಿವಾರ ಕಾಟಿಪಳ್ಳ 4ನೇ ಬ್ಲಾಕ್ನ ನೈತಂಗಡಿ ಎಂಬಲ್ಲಿರುವ ಅಬ್ದುಲ್ ಜಲೀಲ್ ಅವರ ಲತೀಫಾ ಫ್ಯಾನ್ಸಿ ಮತ್ತು ಚಪ್ಪಲಿಯ ಅಂಗಡಿಯ ಮುಂಭಾಗವೇ ಚೂರಿಯಿಂದ ಇರಿದು, ಕೊಲೆ ಮಾಡಲಾಗಿತ್ತು.
ಇದನ್ನೂ ಓದಿ: ಚೂಪಾದ ಆಯುಧಗಳನ್ನಿಟ್ಟುಕೊಳ್ಳಿ, ವಿರೋಧಿಗಳ ತಲೆ ಕಡಿಯಿರಿ: ಕೋಮು ಪ್ರಚೋದನಾ ಭಾಷಣ ಮಾಡಿದ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್