Homeಕರ್ನಾಟಕಮಂಗಳೂರು | ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ ಘೋಷಿಸಿದ ಪಕ್ಷದ ಮುಸ್ಲಿಂ ಮುಖಂಡರು

ಮಂಗಳೂರು | ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ ಘೋಷಿಸಿದ ಪಕ್ಷದ ಮುಸ್ಲಿಂ ಮುಖಂಡರು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದ ಬೆಳವಣಿಗೆಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು‌ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ಗುರುವಾರ ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ. ಮಂಗಳೂರಿನ ಬೋಳಾರದಲ್ಲಿರುವ ಶಾದಿಮಹಲ್‌ನ ಸಭಾಂಗಣದಲ್ಲಿ ಸಭೆ ಕರೆದು, ಈ ತೀರ್ಮಾನವನ್ನು ಪ್ರಕಟಿಸಿದ್ದಾರೆ. ಮಂಗಳೂರು | ಕಾಂಗ್ರೆಸ್‌ಗೆ

ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ವೇದಿಕೆಯಲ್ಲಿ ಮಾತನಾಡುತ್ತಿರುವಾಗ ಕೋಲಾಹಲ ಉಂಟಾದ ಘಟನೆಯೂ ನಡೆಯಿತು. ಜಿಲ್ಲಾ ಘಟಕದ ಕರೆಗೆ ಸ್ಪಂದಿಸಿದ್ದ ಕಾಂಗ್ರೆಸ್‌ನ ನೂರಾರು ಮುಸ್ಲಿಂ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಕಾರ್ಯಕರ್ತರ ಕೋಲಾಹಲದ ನಡುವೆಯೇ ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆಯನ್ನು ಘೋಷಿಸಿದ್ದಾರೆ.

ಈ ನಡುವೆ, ಸಚಿವ ಜಮೀರ್ ಖಾನ್ ಅವರು ಮೊಬೈಲ್‌ನಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಅವರಿಗೆ ಗುರುವಾರ ಬೆಳಗ್ಗೆ ಕರೆ ಮಾಡಿದ್ದರು. ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಕೂಡಾ ಸಾಮೂಹಿಕ ರಾಜೀನಾಮೆಯಿಂದ ಹಿಂದೆ ಸರಿಯುವಂತೆ ಮನವಿ ಮಾಡಿದ್ದರು. ಅದಾಗ್ಯೂ, ಪಕ್ಷ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಬಹಿರಂಗವಾಗಿ ಘೋಷಿಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾಹುಲ್ ಹಮೀದ್ ಅವರು, “ದೇಶದ ಅಲ್ಪಸಂಖ್ಯಾತರ ರಕ್ತದಲ್ಲಿ ಕಾಂಗ್ರೆಸ್ ಹರಿಯುತ್ತಿದೆ. ಎಲ್ಲಾ ಸಂಕಷ್ಟದ ಸಮಯದಲ್ಲೂ ಅಲ್ಪಸಂಖ್ಯಾತರು ಕಾಂಗ್ರೆಸ್ ಜೊತೆ ನಿಂತಿದ್ದಾರೆ. ಆದರೆ ಅಲ್ಪಸಂಖ್ಯಾತರ ಮೇಲೆ ಬಿಜೆಪಿ ಮತ್ತು ಸಂಘಪರಿವಾರ ನಡೆಸುವ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಕಾಂಗ್ರೆಸ್ ಸರಕಾರದಿಂದ ಸಾಧ್ಯವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮುಸ್ಲಿಮರಿಗೆ ರಕ್ಷಣೆ ನೀಡಲು ಸಾಧ್ಯವಾಗದ ನೀವು ಕಾಂಗ್ರೆಸ್ ಪಕ್ಷದಲ್ಲಿ ಯಾಕೆ ಇದ್ದೀರಿ ಎಂದು ನಮ್ಮ ತಾಯಿ, ಹೆಂಡತಿ, ಮಕ್ಕಳೇ ಪ್ರಶ್ನಿಸುತ್ತಿದ್ದಾರೆ” ಎಂದು ಅವರು ಬೇಸರ ಹೊರಹಾಕಿದ್ದಾರೆ.

“ಅಬ್ದುಲ್ ರಹ್ಮಾನ್ ಹತ್ಯೆಯ ಬಳಿಕ ನಾವು ಆಸ್ಪತ್ರೆಗೆ ಹೋದಾಗ ಕಾಂಗ್ರೆಸ್ ನಲ್ಲಿರುವ ಮುಸ್ಲಿಮ್ ಕಾರ್ಯಕರ್ತರೇ ನಮ್ಮನ್ನು ತರಾಟೆಗೆ ತೆದುಕೊಳ್ಳುತ್ತಿದ್ದಾರೆ. ನಿಮ್ಮನ್ನು ಹತ್ಯೆ ಮಾಡಬೇಕಿತ್ತು. ನಿಮ್ಮ ಮಕ್ಕಳನ್ನು ಹತ್ಯೆ ಮಾಡಬೇಕಿತ್ತು ಎಂದು ನಮ್ಮ ಕಾರ್ಯಕರ್ತರೇ ನಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಮುಸ್ಲಿಮರಿಗೆ ರಕ್ಷಣೆ ನೀಡಲು ಸಾಧ್ಯವಾಗದಿದ್ದರೆ ನೀವು ಕಾಂಗ್ರೆಸ್‌ನಲ್ಲಿ ಯಾಕೆ ಇದ್ದೀರಿ. ರಾಜೀನಾಮೆ ಕೊಟ್ಟು ಹೊರ ಬನ್ನಿ ಎಂದು ಸಮುದಾಯದಲ್ಲಿ ಒತ್ತಡ ಬರುತ್ತಿದೆ. ಈ ಹಿನ್ನೆಲೆಯಲ್ಲಿ ನಾವು ರಾಜೀನಾಮೆಗೆ ನಿರ್ಧಾರ ಮಾಡಿದ್ದೆವು. ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್‌ನ ಎಲ್ಲಾ ಮುಸ್ಲಿಮ್ ಕಾರ್ಯಕರ್ತರು, ನಾಯಕರು ಬೆಂಬಲ ಸೂಚಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

“ಬೂತ್‌ ಮಟ್ಟದಿಂದ ರಾಜ್ಯಮಟ್ಟದವರೆಗೆ ಇರುವ ಜಿಲ್ಲೆಯ ಎಲ್ಲಾ ಮುಸ್ಲಿಮ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಘೋಷಿಸುವ ಹಿನ್ನೆಲೆಯಲ್ಲಿ ಇಲ್ಲಿ ಇಂದು ಸಭೆ ಕರೆಯಲಾಗಿದೆ. ನಮ್ಮ ಸರಕಾರ ನಮ್ಮ ನಾಯಕರು ಇನ್ನಾದರೂ ಎಚ್ಚೆತ್ತು ಕೊಳ್ಳುತ್ತದೆಯೋ ಕಾದು ನೋಡಲು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ನಮ್ಮ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಹಾಗಾಗಿ, ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ” ಎಂದು ಶಾಹುಲ್ ಹಮೀದ್ ತಿಳಿಸಿದ್ದಾರೆ.

“ನಮ್ಮನ್ನು ನಾಯಿ, ಎಸಿಯಲ್ಲಿ ಕೂತುಕೊಳ್ಳುವವರು ಎಂದು ನಿಂದಿಸಿದ್ದಾರೆ. ಗೃಹ ಸಚಿವ ಬಂದರೂ, ಉಸ್ತುವಾರಿ ಸಚಿವ ಬಂದರೂ ಜಿಲ್ಲೆಯಲ್ಲಿ ಶಾಂತಿ ನೆಲೆಸುತ್ತಿಲ್ಲ” ಎಂದು ಶಾಹುಲ್ ಹಮೀದ್ ನೋವು ತೋಡಿಕೊಂಡಿದ್ದಾರೆ. ಮಂಗಳೂರು | ಕಾಂಗ್ರೆಸ್‌ಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ

ಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...