Homeಕರ್ನಾಟಕಮಂಗಳೂರು | ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ ಘೋಷಿಸಿದ ಪಕ್ಷದ ಮುಸ್ಲಿಂ ಮುಖಂಡರು

ಮಂಗಳೂರು | ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ ಘೋಷಿಸಿದ ಪಕ್ಷದ ಮುಸ್ಲಿಂ ಮುಖಂಡರು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದ ಬೆಳವಣಿಗೆಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು‌ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ಗುರುವಾರ ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ. ಮಂಗಳೂರಿನ ಬೋಳಾರದಲ್ಲಿರುವ ಶಾದಿಮಹಲ್‌ನ ಸಭಾಂಗಣದಲ್ಲಿ ಸಭೆ ಕರೆದು, ಈ ತೀರ್ಮಾನವನ್ನು ಪ್ರಕಟಿಸಿದ್ದಾರೆ. ಮಂಗಳೂರು | ಕಾಂಗ್ರೆಸ್‌ಗೆ

ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ವೇದಿಕೆಯಲ್ಲಿ ಮಾತನಾಡುತ್ತಿರುವಾಗ ಕೋಲಾಹಲ ಉಂಟಾದ ಘಟನೆಯೂ ನಡೆಯಿತು. ಜಿಲ್ಲಾ ಘಟಕದ ಕರೆಗೆ ಸ್ಪಂದಿಸಿದ್ದ ಕಾಂಗ್ರೆಸ್‌ನ ನೂರಾರು ಮುಸ್ಲಿಂ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಕಾರ್ಯಕರ್ತರ ಕೋಲಾಹಲದ ನಡುವೆಯೇ ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆಯನ್ನು ಘೋಷಿಸಿದ್ದಾರೆ.

ಈ ನಡುವೆ, ಸಚಿವ ಜಮೀರ್ ಖಾನ್ ಅವರು ಮೊಬೈಲ್‌ನಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಅವರಿಗೆ ಗುರುವಾರ ಬೆಳಗ್ಗೆ ಕರೆ ಮಾಡಿದ್ದರು. ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಕೂಡಾ ಸಾಮೂಹಿಕ ರಾಜೀನಾಮೆಯಿಂದ ಹಿಂದೆ ಸರಿಯುವಂತೆ ಮನವಿ ಮಾಡಿದ್ದರು. ಅದಾಗ್ಯೂ, ಪಕ್ಷ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಬಹಿರಂಗವಾಗಿ ಘೋಷಿಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾಹುಲ್ ಹಮೀದ್ ಅವರು, “ದೇಶದ ಅಲ್ಪಸಂಖ್ಯಾತರ ರಕ್ತದಲ್ಲಿ ಕಾಂಗ್ರೆಸ್ ಹರಿಯುತ್ತಿದೆ. ಎಲ್ಲಾ ಸಂಕಷ್ಟದ ಸಮಯದಲ್ಲೂ ಅಲ್ಪಸಂಖ್ಯಾತರು ಕಾಂಗ್ರೆಸ್ ಜೊತೆ ನಿಂತಿದ್ದಾರೆ. ಆದರೆ ಅಲ್ಪಸಂಖ್ಯಾತರ ಮೇಲೆ ಬಿಜೆಪಿ ಮತ್ತು ಸಂಘಪರಿವಾರ ನಡೆಸುವ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಕಾಂಗ್ರೆಸ್ ಸರಕಾರದಿಂದ ಸಾಧ್ಯವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮುಸ್ಲಿಮರಿಗೆ ರಕ್ಷಣೆ ನೀಡಲು ಸಾಧ್ಯವಾಗದ ನೀವು ಕಾಂಗ್ರೆಸ್ ಪಕ್ಷದಲ್ಲಿ ಯಾಕೆ ಇದ್ದೀರಿ ಎಂದು ನಮ್ಮ ತಾಯಿ, ಹೆಂಡತಿ, ಮಕ್ಕಳೇ ಪ್ರಶ್ನಿಸುತ್ತಿದ್ದಾರೆ” ಎಂದು ಅವರು ಬೇಸರ ಹೊರಹಾಕಿದ್ದಾರೆ.

“ಅಬ್ದುಲ್ ರಹ್ಮಾನ್ ಹತ್ಯೆಯ ಬಳಿಕ ನಾವು ಆಸ್ಪತ್ರೆಗೆ ಹೋದಾಗ ಕಾಂಗ್ರೆಸ್ ನಲ್ಲಿರುವ ಮುಸ್ಲಿಮ್ ಕಾರ್ಯಕರ್ತರೇ ನಮ್ಮನ್ನು ತರಾಟೆಗೆ ತೆದುಕೊಳ್ಳುತ್ತಿದ್ದಾರೆ. ನಿಮ್ಮನ್ನು ಹತ್ಯೆ ಮಾಡಬೇಕಿತ್ತು. ನಿಮ್ಮ ಮಕ್ಕಳನ್ನು ಹತ್ಯೆ ಮಾಡಬೇಕಿತ್ತು ಎಂದು ನಮ್ಮ ಕಾರ್ಯಕರ್ತರೇ ನಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಮುಸ್ಲಿಮರಿಗೆ ರಕ್ಷಣೆ ನೀಡಲು ಸಾಧ್ಯವಾಗದಿದ್ದರೆ ನೀವು ಕಾಂಗ್ರೆಸ್‌ನಲ್ಲಿ ಯಾಕೆ ಇದ್ದೀರಿ. ರಾಜೀನಾಮೆ ಕೊಟ್ಟು ಹೊರ ಬನ್ನಿ ಎಂದು ಸಮುದಾಯದಲ್ಲಿ ಒತ್ತಡ ಬರುತ್ತಿದೆ. ಈ ಹಿನ್ನೆಲೆಯಲ್ಲಿ ನಾವು ರಾಜೀನಾಮೆಗೆ ನಿರ್ಧಾರ ಮಾಡಿದ್ದೆವು. ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್‌ನ ಎಲ್ಲಾ ಮುಸ್ಲಿಮ್ ಕಾರ್ಯಕರ್ತರು, ನಾಯಕರು ಬೆಂಬಲ ಸೂಚಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

“ಬೂತ್‌ ಮಟ್ಟದಿಂದ ರಾಜ್ಯಮಟ್ಟದವರೆಗೆ ಇರುವ ಜಿಲ್ಲೆಯ ಎಲ್ಲಾ ಮುಸ್ಲಿಮ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಘೋಷಿಸುವ ಹಿನ್ನೆಲೆಯಲ್ಲಿ ಇಲ್ಲಿ ಇಂದು ಸಭೆ ಕರೆಯಲಾಗಿದೆ. ನಮ್ಮ ಸರಕಾರ ನಮ್ಮ ನಾಯಕರು ಇನ್ನಾದರೂ ಎಚ್ಚೆತ್ತು ಕೊಳ್ಳುತ್ತದೆಯೋ ಕಾದು ನೋಡಲು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ನಮ್ಮ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಹಾಗಾಗಿ, ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ” ಎಂದು ಶಾಹುಲ್ ಹಮೀದ್ ತಿಳಿಸಿದ್ದಾರೆ.

“ನಮ್ಮನ್ನು ನಾಯಿ, ಎಸಿಯಲ್ಲಿ ಕೂತುಕೊಳ್ಳುವವರು ಎಂದು ನಿಂದಿಸಿದ್ದಾರೆ. ಗೃಹ ಸಚಿವ ಬಂದರೂ, ಉಸ್ತುವಾರಿ ಸಚಿವ ಬಂದರೂ ಜಿಲ್ಲೆಯಲ್ಲಿ ಶಾಂತಿ ನೆಲೆಸುತ್ತಿಲ್ಲ” ಎಂದು ಶಾಹುಲ್ ಹಮೀದ್ ನೋವು ತೋಡಿಕೊಂಡಿದ್ದಾರೆ. ಮಂಗಳೂರು | ಕಾಂಗ್ರೆಸ್‌ಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ

ಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...