Homeಕರ್ನಾಟಕಮಂಗಳೂರು | ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ ಘೋಷಿಸಿದ ಪಕ್ಷದ ಮುಸ್ಲಿಂ ಮುಖಂಡರು

ಮಂಗಳೂರು | ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ ಘೋಷಿಸಿದ ಪಕ್ಷದ ಮುಸ್ಲಿಂ ಮುಖಂಡರು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದ ಬೆಳವಣಿಗೆಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು‌ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ಗುರುವಾರ ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ. ಮಂಗಳೂರಿನ ಬೋಳಾರದಲ್ಲಿರುವ ಶಾದಿಮಹಲ್‌ನ ಸಭಾಂಗಣದಲ್ಲಿ ಸಭೆ ಕರೆದು, ಈ ತೀರ್ಮಾನವನ್ನು ಪ್ರಕಟಿಸಿದ್ದಾರೆ. ಮಂಗಳೂರು | ಕಾಂಗ್ರೆಸ್‌ಗೆ

ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ವೇದಿಕೆಯಲ್ಲಿ ಮಾತನಾಡುತ್ತಿರುವಾಗ ಕೋಲಾಹಲ ಉಂಟಾದ ಘಟನೆಯೂ ನಡೆಯಿತು. ಜಿಲ್ಲಾ ಘಟಕದ ಕರೆಗೆ ಸ್ಪಂದಿಸಿದ್ದ ಕಾಂಗ್ರೆಸ್‌ನ ನೂರಾರು ಮುಸ್ಲಿಂ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಕಾರ್ಯಕರ್ತರ ಕೋಲಾಹಲದ ನಡುವೆಯೇ ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆಯನ್ನು ಘೋಷಿಸಿದ್ದಾರೆ.

ಈ ನಡುವೆ, ಸಚಿವ ಜಮೀರ್ ಖಾನ್ ಅವರು ಮೊಬೈಲ್‌ನಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಅವರಿಗೆ ಗುರುವಾರ ಬೆಳಗ್ಗೆ ಕರೆ ಮಾಡಿದ್ದರು. ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಕೂಡಾ ಸಾಮೂಹಿಕ ರಾಜೀನಾಮೆಯಿಂದ ಹಿಂದೆ ಸರಿಯುವಂತೆ ಮನವಿ ಮಾಡಿದ್ದರು. ಅದಾಗ್ಯೂ, ಪಕ್ಷ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಬಹಿರಂಗವಾಗಿ ಘೋಷಿಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾಹುಲ್ ಹಮೀದ್ ಅವರು, “ದೇಶದ ಅಲ್ಪಸಂಖ್ಯಾತರ ರಕ್ತದಲ್ಲಿ ಕಾಂಗ್ರೆಸ್ ಹರಿಯುತ್ತಿದೆ. ಎಲ್ಲಾ ಸಂಕಷ್ಟದ ಸಮಯದಲ್ಲೂ ಅಲ್ಪಸಂಖ್ಯಾತರು ಕಾಂಗ್ರೆಸ್ ಜೊತೆ ನಿಂತಿದ್ದಾರೆ. ಆದರೆ ಅಲ್ಪಸಂಖ್ಯಾತರ ಮೇಲೆ ಬಿಜೆಪಿ ಮತ್ತು ಸಂಘಪರಿವಾರ ನಡೆಸುವ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಕಾಂಗ್ರೆಸ್ ಸರಕಾರದಿಂದ ಸಾಧ್ಯವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮುಸ್ಲಿಮರಿಗೆ ರಕ್ಷಣೆ ನೀಡಲು ಸಾಧ್ಯವಾಗದ ನೀವು ಕಾಂಗ್ರೆಸ್ ಪಕ್ಷದಲ್ಲಿ ಯಾಕೆ ಇದ್ದೀರಿ ಎಂದು ನಮ್ಮ ತಾಯಿ, ಹೆಂಡತಿ, ಮಕ್ಕಳೇ ಪ್ರಶ್ನಿಸುತ್ತಿದ್ದಾರೆ” ಎಂದು ಅವರು ಬೇಸರ ಹೊರಹಾಕಿದ್ದಾರೆ.

“ಅಬ್ದುಲ್ ರಹ್ಮಾನ್ ಹತ್ಯೆಯ ಬಳಿಕ ನಾವು ಆಸ್ಪತ್ರೆಗೆ ಹೋದಾಗ ಕಾಂಗ್ರೆಸ್ ನಲ್ಲಿರುವ ಮುಸ್ಲಿಮ್ ಕಾರ್ಯಕರ್ತರೇ ನಮ್ಮನ್ನು ತರಾಟೆಗೆ ತೆದುಕೊಳ್ಳುತ್ತಿದ್ದಾರೆ. ನಿಮ್ಮನ್ನು ಹತ್ಯೆ ಮಾಡಬೇಕಿತ್ತು. ನಿಮ್ಮ ಮಕ್ಕಳನ್ನು ಹತ್ಯೆ ಮಾಡಬೇಕಿತ್ತು ಎಂದು ನಮ್ಮ ಕಾರ್ಯಕರ್ತರೇ ನಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಮುಸ್ಲಿಮರಿಗೆ ರಕ್ಷಣೆ ನೀಡಲು ಸಾಧ್ಯವಾಗದಿದ್ದರೆ ನೀವು ಕಾಂಗ್ರೆಸ್‌ನಲ್ಲಿ ಯಾಕೆ ಇದ್ದೀರಿ. ರಾಜೀನಾಮೆ ಕೊಟ್ಟು ಹೊರ ಬನ್ನಿ ಎಂದು ಸಮುದಾಯದಲ್ಲಿ ಒತ್ತಡ ಬರುತ್ತಿದೆ. ಈ ಹಿನ್ನೆಲೆಯಲ್ಲಿ ನಾವು ರಾಜೀನಾಮೆಗೆ ನಿರ್ಧಾರ ಮಾಡಿದ್ದೆವು. ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್‌ನ ಎಲ್ಲಾ ಮುಸ್ಲಿಮ್ ಕಾರ್ಯಕರ್ತರು, ನಾಯಕರು ಬೆಂಬಲ ಸೂಚಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

“ಬೂತ್‌ ಮಟ್ಟದಿಂದ ರಾಜ್ಯಮಟ್ಟದವರೆಗೆ ಇರುವ ಜಿಲ್ಲೆಯ ಎಲ್ಲಾ ಮುಸ್ಲಿಮ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಘೋಷಿಸುವ ಹಿನ್ನೆಲೆಯಲ್ಲಿ ಇಲ್ಲಿ ಇಂದು ಸಭೆ ಕರೆಯಲಾಗಿದೆ. ನಮ್ಮ ಸರಕಾರ ನಮ್ಮ ನಾಯಕರು ಇನ್ನಾದರೂ ಎಚ್ಚೆತ್ತು ಕೊಳ್ಳುತ್ತದೆಯೋ ಕಾದು ನೋಡಲು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ನಮ್ಮ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಹಾಗಾಗಿ, ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ” ಎಂದು ಶಾಹುಲ್ ಹಮೀದ್ ತಿಳಿಸಿದ್ದಾರೆ.

“ನಮ್ಮನ್ನು ನಾಯಿ, ಎಸಿಯಲ್ಲಿ ಕೂತುಕೊಳ್ಳುವವರು ಎಂದು ನಿಂದಿಸಿದ್ದಾರೆ. ಗೃಹ ಸಚಿವ ಬಂದರೂ, ಉಸ್ತುವಾರಿ ಸಚಿವ ಬಂದರೂ ಜಿಲ್ಲೆಯಲ್ಲಿ ಶಾಂತಿ ನೆಲೆಸುತ್ತಿಲ್ಲ” ಎಂದು ಶಾಹುಲ್ ಹಮೀದ್ ನೋವು ತೋಡಿಕೊಂಡಿದ್ದಾರೆ. ಮಂಗಳೂರು | ಕಾಂಗ್ರೆಸ್‌ಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ

ಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...