Homeಕರ್ನಾಟಕದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ:...

ದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ: ಪಟ್ಟಿ ಬಿಡುಗಡೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಕೋಮು ಸಂಘರ್ಷದ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಪೊಲೀಸ್ ಮುಂದಾಗಿದ್ದು, ಸುಮಾರು 36 ಮಂದಿ ರೌಡಿಗಳನ್ನು ಗಡೀಪಾರು ಮಾಡಲು ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ವರದಿಯಾಗಿದೆ.ದಕ್ಷಿಣ ಕನ್ನಡ | ಸಂಘಪರಿವಾರದ

ಈ ಬಗ್ಗೆ ಸುಮಾರು 36 ಮಂದಿಯ ಪಟ್ಟಿಯನ್ನು ಬಿಡುಗಡೆ ಮಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, “ಒಟ್ಟು 36 ಆಸಾಮಿಗಳನ್ನು ಗಡೀಪಾರು ಮಾಡುವ ಸಂಬಂಧ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಗೀಡಾಗಿದ್ದ ಯುವತಿ ಸೌಜನ್ಯ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಸಂಘಪರಿವಾರದ ಅರುಣ್ ಕುಮಾರ್ ಪುತ್ತಿಲ, ಭರತ್ ಕುಮ್ದೇಲು ಸೇರಿದಂತೆ ಒಟ್ಟು 36 ಜನರ‌ ಪಟ್ಟಿಯನ್ನು ಪೊಲೀಸ್ ಇಲಾಖೆ ಸೋಮವಾರ ಬಿಡುಗಡೆ ಮಾಡಿದೆ.

ಜಿಲ್ಲೆಯಿಂದ ಗಡಿಪಾರುವ ಮಾಡುವ ಸಂಬಂಧ ಉಪ ವಿಭಾಗದ ದಂಡಾಧಿಕಾರಿ ಮೂಲಕ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ. ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ: 58ರಡಿ ಈ ನೋಟಿಸ್ ಜಾರಿ ಮಾಡಲಾಗಿದೆ. ಅರುಣ್ ಕುಮಾ‌ರ್ ಪುತ್ತಿಲ ಅವರಿಗೆ ಗಡೀಪಾರು ಬಗ್ಗೆ ನೋಟಿಸ್‌ ನೀಡಲಾಗಿದ್ದು ಜೂನ್ 6ರಂದು ವಿಚಾರಣೆ ಹಾಜರಾಗಲು ಈಗಾಗಲೇ ಪೊಲೀಸರು ಸೂಚನೆ ನೀಡಿದ್ದರು.

ಇದರ ಬೆನ್ನಲ್ಲೇ ಪೊಲೀಸ್‌ ಇಲಾಖೆ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಸುಳ್ಯ, ಬೆಳ್ಳಾರೆ, ವಿಟ್ಲ ಠಾಣಾ ವ್ಯಾಪ್ತಿಯ ರೌಡಿ ಲಿಸ್ಟ್ ಹೊಂದಿರುವ ದುಷ್ಕರ್ಮಿಗಳನ್ನು, ಸಂಘಪರಿವಾರದಲ್ಲಿ ಗುರುತಿಸಿಕೊಂಡವರನ್ನು ಪಟ್ಟಿ ರೆಡಿ ಮಾಡಿದ್ದಾರೆ. ಈಗಾಗಲೆ ಗಡೀಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭಿಸಿದೆ.

ವಿವಿಧ ಪೊಲೀಸ್ ಠಾಣೆಗಳಿಂದ ಗಡಿಪಾರು ಮಾಡಲು ಪ್ರಸ್ತಾವನೆ ಸಲ್ಲಿಸಲಾದ ಅಸಾಮಿಗಳ ಪಟ್ಟಿ ಕೆಳಗಿನಂತಿವೆ.

  1. ಬಂಟ್ವಾಳ ನಗರ ಠಾಣೆ: ಹಸೈನಾರ್, ಮುಹಮ್ಮದ್ ಸಫ್ವಾನ್, ರಾಜು ಯಾನೆ ರಾಜೇಶ್, ಭುವಿ ಯಾನೆ ಭುವಿತ್ ಶೆಟ್ಟಿ.
  2. ಬಂಟ್ವಾಳ ಗ್ರಾಮಾಂತರ ಠಾಣೆ: ಪವನ್ ಕುಮಾರ್, ಚರಣ್ ಯಾನೆ ಚರಣ್ ರಾಜ್, ಅಬ್ದುಲ್ ಲತೀಫ್, ಮುಹಮ್ಮದ್ ಅಶ್ರಫ್, ಮೊಯ್ದಿನ್ ಅದ್ನಾನ್ ಯಾನೆ ಅದ್ದು, ಭರತ್ ರಾಜ್ ಬಿ ಯಾನೆ ಭರತ್ ಕುಮ್ಡೇಲು.
  3. ವಿಟ್ಲ ಪೊಲೀಸ್ ಠಾಣೆ: ಗಣೇಶ ಯಾನೆ ಗಣೇಶ ಪೂಜಾರಿ, ಅಬ್ದುಲ್ ಖಾದರ್ ಯಾನೆ ಶೌಕತ್, ಚಂದ್ರಹಾಸ.
  4. ಪೂಂಜಾಲಕಟ್ಟೆ ಠಾಣೆ: ಅಶ್ರಫ್ ಬಿ ಯಾನೆ ಗರಗಸ ಅಶ್ರಫ್.
  5. ಬೆಳ್ತಂಗಡಿ ಠಾಣೆ: ಮನೋಜ್ ಕುಮಾರ್, ಮಹೇಶ ಶೆಟ್ಟಿ ತಿಮರೋಡಿ.
  6. ಪುತ್ತೂರು ನಗರ ಠಾಣೆ: ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ ಯಾನೆ ಅಬ್ದುಲ್ ಹಕೀಂ, ಅಜಿತ್ ರೈ, ಮನೀಶ್ ಎಸ್., ಅಬ್ದುಲ್ ರಹಿಮಾನ್, ಕೆ.ಅಝೀಝ್.
  7. ಪುತ್ತೂರು ಗ್ರಾಮಾಂತರ ಠಾಣೆ: ಕಿಶೋರ್, ರಾಕೇಶ್ ಕೆ., ನಿಶಾಂತ್ ಕುಮಾರ್.
  8. ಕಡಬ ಠಾಣೆ: ಮುಹಮ್ಮದ್ ನವಾಝ್.
  9. ಉಪ್ಪಿನಂಗಡಿ ಠಾಣೆ: ಸಂತೋಷ್ ಕುಮಾರ್ ರೈ ಯಾನೆ ಸಂತು ಅಡೆಕ್ಕಲ್, ಜಯರಾಮ, ಸಂಶುದ್ದೀನ್, ಸಂದೀಪ್, ಮುಹಮ್ಮದ್ ಶಾಕಿರ್, ಅಬ್ದುಲ್ ಅಝೀಝ್ ಯಾನೆ ಕರಾಯ ಅಝೀಝ್.
  10. ಸುಳ್ಯ ಠಾಣೆ: ಲತೇಶ್ ಗುಂಡ್ಯ, ಮನೋಹರ ಯಾನೆ ಮನು.
  11. ಬೆಳ್ಳಾರೆ ಠಾಣೆ: ಪ್ರಸಾದ್, ಶಮೀರ್ ಕೆ. ದಕ್ಷಿಣ ಕನ್ನಡ | ಸಂಘಪರಿವಾರದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಿಕ್ಕಿಂ | ಸೇನಾ ಶಿಬಿರದಲ್ಲಿ ಭೂಕುಸಿತ, ಮೂವರು ಸೈನಿಕರು ಸಾವು, 6 ಮಂದಿ ನಾಪತ್ತೆ

ಸಿಕ್ಕಿಂ | ಸೇನಾ ಶಿಬಿರದಲ್ಲಿ ಭೂಕುಸಿತ, ಮೂವರು ಸೈನಿಕರು ಸಾವು, 6 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...