Homeಕರ್ನಾಟಕದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ:...

ದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ: ಪಟ್ಟಿ ಬಿಡುಗಡೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಕೋಮು ಸಂಘರ್ಷದ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಪೊಲೀಸ್ ಮುಂದಾಗಿದ್ದು, ಸುಮಾರು 36 ಮಂದಿ ರೌಡಿಗಳನ್ನು ಗಡೀಪಾರು ಮಾಡಲು ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ವರದಿಯಾಗಿದೆ.ದಕ್ಷಿಣ ಕನ್ನಡ | ಸಂಘಪರಿವಾರದ

ಈ ಬಗ್ಗೆ ಸುಮಾರು 36 ಮಂದಿಯ ಪಟ್ಟಿಯನ್ನು ಬಿಡುಗಡೆ ಮಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, “ಒಟ್ಟು 36 ಆಸಾಮಿಗಳನ್ನು ಗಡೀಪಾರು ಮಾಡುವ ಸಂಬಂಧ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಗೀಡಾಗಿದ್ದ ಯುವತಿ ಸೌಜನ್ಯ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಸಂಘಪರಿವಾರದ ಅರುಣ್ ಕುಮಾರ್ ಪುತ್ತಿಲ, ಭರತ್ ಕುಮ್ದೇಲು ಸೇರಿದಂತೆ ಒಟ್ಟು 36 ಜನರ‌ ಪಟ್ಟಿಯನ್ನು ಪೊಲೀಸ್ ಇಲಾಖೆ ಸೋಮವಾರ ಬಿಡುಗಡೆ ಮಾಡಿದೆ.

ಜಿಲ್ಲೆಯಿಂದ ಗಡಿಪಾರುವ ಮಾಡುವ ಸಂಬಂಧ ಉಪ ವಿಭಾಗದ ದಂಡಾಧಿಕಾರಿ ಮೂಲಕ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ. ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ: 58ರಡಿ ಈ ನೋಟಿಸ್ ಜಾರಿ ಮಾಡಲಾಗಿದೆ. ಅರುಣ್ ಕುಮಾ‌ರ್ ಪುತ್ತಿಲ ಅವರಿಗೆ ಗಡೀಪಾರು ಬಗ್ಗೆ ನೋಟಿಸ್‌ ನೀಡಲಾಗಿದ್ದು ಜೂನ್ 6ರಂದು ವಿಚಾರಣೆ ಹಾಜರಾಗಲು ಈಗಾಗಲೇ ಪೊಲೀಸರು ಸೂಚನೆ ನೀಡಿದ್ದರು.

ಇದರ ಬೆನ್ನಲ್ಲೇ ಪೊಲೀಸ್‌ ಇಲಾಖೆ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಸುಳ್ಯ, ಬೆಳ್ಳಾರೆ, ವಿಟ್ಲ ಠಾಣಾ ವ್ಯಾಪ್ತಿಯ ರೌಡಿ ಲಿಸ್ಟ್ ಹೊಂದಿರುವ ದುಷ್ಕರ್ಮಿಗಳನ್ನು, ಸಂಘಪರಿವಾರದಲ್ಲಿ ಗುರುತಿಸಿಕೊಂಡವರನ್ನು ಪಟ್ಟಿ ರೆಡಿ ಮಾಡಿದ್ದಾರೆ. ಈಗಾಗಲೆ ಗಡೀಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭಿಸಿದೆ.

ವಿವಿಧ ಪೊಲೀಸ್ ಠಾಣೆಗಳಿಂದ ಗಡಿಪಾರು ಮಾಡಲು ಪ್ರಸ್ತಾವನೆ ಸಲ್ಲಿಸಲಾದ ಅಸಾಮಿಗಳ ಪಟ್ಟಿ ಕೆಳಗಿನಂತಿವೆ.

  1. ಬಂಟ್ವಾಳ ನಗರ ಠಾಣೆ: ಹಸೈನಾರ್, ಮುಹಮ್ಮದ್ ಸಫ್ವಾನ್, ರಾಜು ಯಾನೆ ರಾಜೇಶ್, ಭುವಿ ಯಾನೆ ಭುವಿತ್ ಶೆಟ್ಟಿ.
  2. ಬಂಟ್ವಾಳ ಗ್ರಾಮಾಂತರ ಠಾಣೆ: ಪವನ್ ಕುಮಾರ್, ಚರಣ್ ಯಾನೆ ಚರಣ್ ರಾಜ್, ಅಬ್ದುಲ್ ಲತೀಫ್, ಮುಹಮ್ಮದ್ ಅಶ್ರಫ್, ಮೊಯ್ದಿನ್ ಅದ್ನಾನ್ ಯಾನೆ ಅದ್ದು, ಭರತ್ ರಾಜ್ ಬಿ ಯಾನೆ ಭರತ್ ಕುಮ್ಡೇಲು.
  3. ವಿಟ್ಲ ಪೊಲೀಸ್ ಠಾಣೆ: ಗಣೇಶ ಯಾನೆ ಗಣೇಶ ಪೂಜಾರಿ, ಅಬ್ದುಲ್ ಖಾದರ್ ಯಾನೆ ಶೌಕತ್, ಚಂದ್ರಹಾಸ.
  4. ಪೂಂಜಾಲಕಟ್ಟೆ ಠಾಣೆ: ಅಶ್ರಫ್ ಬಿ ಯಾನೆ ಗರಗಸ ಅಶ್ರಫ್.
  5. ಬೆಳ್ತಂಗಡಿ ಠಾಣೆ: ಮನೋಜ್ ಕುಮಾರ್, ಮಹೇಶ ಶೆಟ್ಟಿ ತಿಮರೋಡಿ.
  6. ಪುತ್ತೂರು ನಗರ ಠಾಣೆ: ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ ಯಾನೆ ಅಬ್ದುಲ್ ಹಕೀಂ, ಅಜಿತ್ ರೈ, ಮನೀಶ್ ಎಸ್., ಅಬ್ದುಲ್ ರಹಿಮಾನ್, ಕೆ.ಅಝೀಝ್.
  7. ಪುತ್ತೂರು ಗ್ರಾಮಾಂತರ ಠಾಣೆ: ಕಿಶೋರ್, ರಾಕೇಶ್ ಕೆ., ನಿಶಾಂತ್ ಕುಮಾರ್.
  8. ಕಡಬ ಠಾಣೆ: ಮುಹಮ್ಮದ್ ನವಾಝ್.
  9. ಉಪ್ಪಿನಂಗಡಿ ಠಾಣೆ: ಸಂತೋಷ್ ಕುಮಾರ್ ರೈ ಯಾನೆ ಸಂತು ಅಡೆಕ್ಕಲ್, ಜಯರಾಮ, ಸಂಶುದ್ದೀನ್, ಸಂದೀಪ್, ಮುಹಮ್ಮದ್ ಶಾಕಿರ್, ಅಬ್ದುಲ್ ಅಝೀಝ್ ಯಾನೆ ಕರಾಯ ಅಝೀಝ್.
  10. ಸುಳ್ಯ ಠಾಣೆ: ಲತೇಶ್ ಗುಂಡ್ಯ, ಮನೋಹರ ಯಾನೆ ಮನು.
  11. ಬೆಳ್ಳಾರೆ ಠಾಣೆ: ಪ್ರಸಾದ್, ಶಮೀರ್ ಕೆ. ದಕ್ಷಿಣ ಕನ್ನಡ | ಸಂಘಪರಿವಾರದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಿಕ್ಕಿಂ | ಸೇನಾ ಶಿಬಿರದಲ್ಲಿ ಭೂಕುಸಿತ, ಮೂವರು ಸೈನಿಕರು ಸಾವು, 6 ಮಂದಿ ನಾಪತ್ತೆ

ಸಿಕ್ಕಿಂ | ಸೇನಾ ಶಿಬಿರದಲ್ಲಿ ಭೂಕುಸಿತ, ಮೂವರು ಸೈನಿಕರು ಸಾವು, 6 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...