Homeಕರ್ನಾಟಕದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ:...

ದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ: ಪಟ್ಟಿ ಬಿಡುಗಡೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಕೋಮು ಸಂಘರ್ಷದ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಪೊಲೀಸ್ ಮುಂದಾಗಿದ್ದು, ಸುಮಾರು 36 ಮಂದಿ ರೌಡಿಗಳನ್ನು ಗಡೀಪಾರು ಮಾಡಲು ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ವರದಿಯಾಗಿದೆ.ದಕ್ಷಿಣ ಕನ್ನಡ | ಸಂಘಪರಿವಾರದ

ಈ ಬಗ್ಗೆ ಸುಮಾರು 36 ಮಂದಿಯ ಪಟ್ಟಿಯನ್ನು ಬಿಡುಗಡೆ ಮಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, “ಒಟ್ಟು 36 ಆಸಾಮಿಗಳನ್ನು ಗಡೀಪಾರು ಮಾಡುವ ಸಂಬಂಧ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಗೀಡಾಗಿದ್ದ ಯುವತಿ ಸೌಜನ್ಯ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಸಂಘಪರಿವಾರದ ಅರುಣ್ ಕುಮಾರ್ ಪುತ್ತಿಲ, ಭರತ್ ಕುಮ್ದೇಲು ಸೇರಿದಂತೆ ಒಟ್ಟು 36 ಜನರ‌ ಪಟ್ಟಿಯನ್ನು ಪೊಲೀಸ್ ಇಲಾಖೆ ಸೋಮವಾರ ಬಿಡುಗಡೆ ಮಾಡಿದೆ.

ಜಿಲ್ಲೆಯಿಂದ ಗಡಿಪಾರುವ ಮಾಡುವ ಸಂಬಂಧ ಉಪ ವಿಭಾಗದ ದಂಡಾಧಿಕಾರಿ ಮೂಲಕ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ. ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ: 58ರಡಿ ಈ ನೋಟಿಸ್ ಜಾರಿ ಮಾಡಲಾಗಿದೆ. ಅರುಣ್ ಕುಮಾ‌ರ್ ಪುತ್ತಿಲ ಅವರಿಗೆ ಗಡೀಪಾರು ಬಗ್ಗೆ ನೋಟಿಸ್‌ ನೀಡಲಾಗಿದ್ದು ಜೂನ್ 6ರಂದು ವಿಚಾರಣೆ ಹಾಜರಾಗಲು ಈಗಾಗಲೇ ಪೊಲೀಸರು ಸೂಚನೆ ನೀಡಿದ್ದರು.

ಇದರ ಬೆನ್ನಲ್ಲೇ ಪೊಲೀಸ್‌ ಇಲಾಖೆ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಸುಳ್ಯ, ಬೆಳ್ಳಾರೆ, ವಿಟ್ಲ ಠಾಣಾ ವ್ಯಾಪ್ತಿಯ ರೌಡಿ ಲಿಸ್ಟ್ ಹೊಂದಿರುವ ದುಷ್ಕರ್ಮಿಗಳನ್ನು, ಸಂಘಪರಿವಾರದಲ್ಲಿ ಗುರುತಿಸಿಕೊಂಡವರನ್ನು ಪಟ್ಟಿ ರೆಡಿ ಮಾಡಿದ್ದಾರೆ. ಈಗಾಗಲೆ ಗಡೀಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭಿಸಿದೆ.

ವಿವಿಧ ಪೊಲೀಸ್ ಠಾಣೆಗಳಿಂದ ಗಡಿಪಾರು ಮಾಡಲು ಪ್ರಸ್ತಾವನೆ ಸಲ್ಲಿಸಲಾದ ಅಸಾಮಿಗಳ ಪಟ್ಟಿ ಕೆಳಗಿನಂತಿವೆ.

  1. ಬಂಟ್ವಾಳ ನಗರ ಠಾಣೆ: ಹಸೈನಾರ್, ಮುಹಮ್ಮದ್ ಸಫ್ವಾನ್, ರಾಜು ಯಾನೆ ರಾಜೇಶ್, ಭುವಿ ಯಾನೆ ಭುವಿತ್ ಶೆಟ್ಟಿ.
  2. ಬಂಟ್ವಾಳ ಗ್ರಾಮಾಂತರ ಠಾಣೆ: ಪವನ್ ಕುಮಾರ್, ಚರಣ್ ಯಾನೆ ಚರಣ್ ರಾಜ್, ಅಬ್ದುಲ್ ಲತೀಫ್, ಮುಹಮ್ಮದ್ ಅಶ್ರಫ್, ಮೊಯ್ದಿನ್ ಅದ್ನಾನ್ ಯಾನೆ ಅದ್ದು, ಭರತ್ ರಾಜ್ ಬಿ ಯಾನೆ ಭರತ್ ಕುಮ್ಡೇಲು.
  3. ವಿಟ್ಲ ಪೊಲೀಸ್ ಠಾಣೆ: ಗಣೇಶ ಯಾನೆ ಗಣೇಶ ಪೂಜಾರಿ, ಅಬ್ದುಲ್ ಖಾದರ್ ಯಾನೆ ಶೌಕತ್, ಚಂದ್ರಹಾಸ.
  4. ಪೂಂಜಾಲಕಟ್ಟೆ ಠಾಣೆ: ಅಶ್ರಫ್ ಬಿ ಯಾನೆ ಗರಗಸ ಅಶ್ರಫ್.
  5. ಬೆಳ್ತಂಗಡಿ ಠಾಣೆ: ಮನೋಜ್ ಕುಮಾರ್, ಮಹೇಶ ಶೆಟ್ಟಿ ತಿಮರೋಡಿ.
  6. ಪುತ್ತೂರು ನಗರ ಠಾಣೆ: ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ ಯಾನೆ ಅಬ್ದುಲ್ ಹಕೀಂ, ಅಜಿತ್ ರೈ, ಮನೀಶ್ ಎಸ್., ಅಬ್ದುಲ್ ರಹಿಮಾನ್, ಕೆ.ಅಝೀಝ್.
  7. ಪುತ್ತೂರು ಗ್ರಾಮಾಂತರ ಠಾಣೆ: ಕಿಶೋರ್, ರಾಕೇಶ್ ಕೆ., ನಿಶಾಂತ್ ಕುಮಾರ್.
  8. ಕಡಬ ಠಾಣೆ: ಮುಹಮ್ಮದ್ ನವಾಝ್.
  9. ಉಪ್ಪಿನಂಗಡಿ ಠಾಣೆ: ಸಂತೋಷ್ ಕುಮಾರ್ ರೈ ಯಾನೆ ಸಂತು ಅಡೆಕ್ಕಲ್, ಜಯರಾಮ, ಸಂಶುದ್ದೀನ್, ಸಂದೀಪ್, ಮುಹಮ್ಮದ್ ಶಾಕಿರ್, ಅಬ್ದುಲ್ ಅಝೀಝ್ ಯಾನೆ ಕರಾಯ ಅಝೀಝ್.
  10. ಸುಳ್ಯ ಠಾಣೆ: ಲತೇಶ್ ಗುಂಡ್ಯ, ಮನೋಹರ ಯಾನೆ ಮನು.
  11. ಬೆಳ್ಳಾರೆ ಠಾಣೆ: ಪ್ರಸಾದ್, ಶಮೀರ್ ಕೆ. ದಕ್ಷಿಣ ಕನ್ನಡ | ಸಂಘಪರಿವಾರದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಿಕ್ಕಿಂ | ಸೇನಾ ಶಿಬಿರದಲ್ಲಿ ಭೂಕುಸಿತ, ಮೂವರು ಸೈನಿಕರು ಸಾವು, 6 ಮಂದಿ ನಾಪತ್ತೆ

ಸಿಕ್ಕಿಂ | ಸೇನಾ ಶಿಬಿರದಲ್ಲಿ ಭೂಕುಸಿತ, ಮೂವರು ಸೈನಿಕರು ಸಾವು, 6 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...