Homeಕರ್ನಾಟಕಮಂಗಳೂರು | ಸಲೂನ್‌ ದಾಳಿ ಪ್ರಕರಣ : 14 ಜನರ ಬಂಧನ

ಮಂಗಳೂರು | ಸಲೂನ್‌ ದಾಳಿ ಪ್ರಕರಣ : 14 ಜನರ ಬಂಧನ

- Advertisement -
- Advertisement -

ಮಂಗಳೂರಿನಲ್ಲಿ ಸಲೂನ್‌ಗೆ ನುಗ್ಗಿ ದಾಂಧಲೆ ನಡೆಸಿ, ಸಿಬ್ಬಂದಿಗೆ ಬೆದರಿಕೆ ಹಾಕಿದ್ದ ಹಿಂದುತ್ವ ಸಂಘಟನೆ ರಾಮಸೇನಾದ 14 ಮಂದಿಯನ್ನು ಗುರುವಾರ (ಜ.23) ಪೊಲೀಸರು ಬಂಧಿಸಿದ್ದಾರೆ.

ಫರಂಗಿಪೇಟೆಯ ಹರ್ಷರಾಜ್‌ ಅಲಿಯಾಸ್‌ ಹರ್ಷಿತ್‌, ವಾಮಂಜೂರು ಮೂಡುಶೆಡ್ಡೆಯ ಮೋಹನದಾಸ್ ಅಲಿಯಾಸ್‌ ರವಿ, ಕಾಸರಗೋಡು ಉಪ್ಪಳದ ಪುರಂದರ, ವಾಮಂಜೂರು ಅಂಬೇಡ್ಕರ್‌ ನಗರದ ಸಚಿನ್, ಉಳಾಯಿಬೆಟ್ಟುವಿನ ರವೀಶ್‌, ಬೆಂಜನಪದವು ಶಿವಾಜಿನಗರದ ಸುಕೇಶ್‌, ವಾಮಂಜೂರಿನ ಅಂಕಿತ್‌, ಮೂಡುಶೆಡ್ಡೆ ಶಿವಾಜಿನಗರದ ಕಲಿ ಮುತ್ತು, ದೀಪಕ್‌, ಪ್ರದೀಪ್ ಪೂಜಾರಿ, ಬೊಂಡಂತಿಲ ತಾರಿಗುಡ್ಡೆಯ ಅಭಿಲಾಷ್‌, ನೀರುಮಾರ್ಗ ಪೆದಮಲೆ ಸರಿಪಲ್ಲದ ವಿಘ್ನೇಶ್‌, ನಗರದ ಮಂಕಿಸ್ಟ್ಯಾಂಡ್‌ನ ಶರಣ್‌ರಾಜ್ (ಕ್ಯಾಮರಾಮ್ಯಾನ್) ಹಾಗೂ ನಗರದ ನಿದ್ದಲೆಯ ಪ್ರಸಾದ್ ಅತ್ತಾವರ ಬಂಧಿತರು.

ಇವರ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 329(2) (ಅಕ್ರಮ ಪ್ರವೇಶ), ಸೆಕ್ಷನ್ 324(5) (ಸೊತ್ತುಗಳ ನಾಶ), ಸೆಕ್ಷನ್‌ 74 (ಮಹಿಳೆಯರ ಮೇಲೆ ಹಲ್ಲೆ, ಮಾನಭಂಗಯತ್ನ), ಸೆಕ್ಷನ್ 351 (3) (ಕ್ರಿಮಿನಲ್ ಬೆದರಿಕೆ ಒಡ್ಡುವುದು), ಸೆಕ್ಷನ್ 115 (2) (ಹಲ್ಲೆ ನಡೆಸುವುದು), ಸೆಕ್ಷನ್ 109 (ಕೊಲೆಯತ್ನ), ಸೆಕ್ಷನ್ 352 (ಅಪಮಾನಗೊಳಸಿ ಶಾಂತಿಭಂಗ ಮಾಡುವುದು) ಹಾಗೂ ಸೆಕ್ಷನ್ 190ರ (ಅಕ್ರಮ ಕೂಟ ರಚಿಸಿ ಅಪರಾಧ ಕೃತ್ಯ ನಡೆಸುವುದು) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳು ಗುರುವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ನಗರದ ಬಿಜೈ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿಯ ಕಲರ್ಸ್ ಯುನಿಸೆಕ್ಸ್ ಸಲೂನ್‌ಗೆ ನುಗ್ಗಿ ದಾಂಧಲೆ ನಡೆಸಿದ್ದರು. ಈ ವೇಳೆ ಮಹಿಳೆಯರು ಸೇರಿದಂತೆ ಸಲೂನ್‌ನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಸಲೂನ್‌ನ ಮಾಲೀಕ ನಗರದ ಆನೆಗುಂಡಿಯ ಸುಧೀರ್ ಶೆಟ್ಟಿ ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಬರ್ಕೆ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಕ್ಯಾಮರಾಮ್ಯಾನ್ ಬಂಧನ : ಆರೋಪಿಗಳು ದಾಳಿ ಮಾಡಲು ತೆರಳಿದ್ದ ವೇಳೆ ಅವರ ಜೊತೆ ಸ್ಥಳೀಯ ಟಿವಿ ವಾಹಿನಿಯೊಂದರ ಕ್ಯಾಮರಾಮ್ಯಾನ್ ಶರಣ್‌ರಾಜ್‌ನನ್ನೂ ಕರೆದುಕೊಂಡು ಹೋಗಿದ್ದರು. ಆತ, ದಾಳಿಯ ವಿಡಿಯೊ ಚಿತ್ರೀಕರಿಸಿದ್ದಾನೆ. ಆತನನ್ನೂ ಬಂಧಿಸಲಾಗಿದೆ. ಈ ಹಿಂದೆ ಪಡೀಲ್‌ನ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ದಾಳಿ ಪ್ರಕರಣದಲ್ಲೂ ಈತ ಬಂಧನಕ್ಕೊಳಗಾಗಿದ್ದ. ಆ ಪ್ರಕರಣದಲ್ಲಿ ದೋಷಮುಕ್ತನಾಗಿದ್ದ ಎಂದು ವರದಿಯಾಗಿದೆ.

ಮಂಗಳೂರು ಸಲೂನ್‌ ದಾಳಿ ಪ್ರಕರಣ | ಪ್ರಮುಖ ಆರೋಪಿ ಪ್ರಸಾದ್ ಅತ್ತಾವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...