Homeಕರ್ನಾಟಕಮಂಗಳೂರು| ಸಂತ ಜೆರೋಸಾ ಶಾಲೆ ವಿವಾದ: ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ

ಮಂಗಳೂರು| ಸಂತ ಜೆರೋಸಾ ಶಾಲೆ ವಿವಾದ: ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ

- Advertisement -
- Advertisement -

ಮಂಗಳೂರಿನ ಸಂತ ಜೆರೋಸಾ ಶಾಲೆಯಲ್ಲಿ ಹಿಂದೂ ದೇವರನ್ನು ಅವಹೇಳನ ಮಾಡಿದ್ದಾರೆಂಬ ಆರೋಪದ ಬಗ್ಗೆ ತನಿಖೆಗೆ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಡಾ.ಆಕಾಶ್ ಶಂಕರ್ ಸೋಮವಾರ ನಗರಕ್ಕೆ ಆಗಮಿಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿರುವ ಡಿಡಿಪಿಐ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸತ್ಯಾನ್ವೇಷಣೆಗೆ ಆಗಮಿಸಿದ್ದೇನೆ. ಯಾವ ರೀತಿ ತನಿಖೆ ಮಾಡಬೇಕೆಂದು ನಾನೊಂದು ಯೋಜನೆ ರೂಪಿಸಿದ್ದೇನೆ. ಈಗಾಗಲೇ ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದೇನೆ. ಹಂತ ಹಂತವಾಗಿ ಬಹಳ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ : ಮಂಗಳೂರು ನಗರದ ವೆಲೆನ್ಸಿಯಾದ ಸೇಂಟ್ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗ ಹಿಂದೂ ಧರ್ಮದ ಅವಹೇಳನ ಮಾಡಿದ್ದಾರೆ. ಮಕ್ಕಳ ಮೇಲೆ ಕ್ರೈಸ್ತ ಧರ್ಮವನ್ನು ಹೇರಿಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಫೆ.10ರಂದು ಕೆಲ ವಿದ್ಯಾರ್ಥಿಗಳ ಫೋಷಕರು ಶಾಲೆಯ ಬಳಿ ಜಮಾಯಿಸಿ ಆಡಳಿತ ಮಂಡಳಿ ಮತ್ತು ಶಿಕ್ಷಕರೊಂದಿಗೆ ವಾಗ್ವಾದ ನಡೆಸಿದ್ದರು. ಶಿಕ್ಷಕಿ ಪ್ರಭಾ ಅವರನ್ನು ವಜಾ ಮಾಡುವಂತೆ ಆಗ್ರಹಿಸಿದ್ದರು.

ಇದಾಗಿ ಎರಡು ದಿನಗಳ ಬಳಿಕ, ಫೆ. 12ರಂದು ಶಾಸಕರಾದ ವೇದವ್ಯಾಸ್ ಕಾಮತ್ ಮತ್ತು ಭರತ್ ಶೆಟ್ಟಿ ನೇತೃತ್ವದಲ್ಲಿ ಶಾಲೆಯ ಬಳಿ ಜಮಾಯಿಸಿದ ಪೋಷಕರು, ವಿದ್ಯಾರ್ಥಿಗಳು ಮತ್ತು ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಶಿಕ್ಷಕಿ ಸಿಸ್ಟರ್ ಪ್ರಭಾ ಮತ್ತು ಸ್ಟೀವನ್ ಎಂಬ ಮತ್ತೊಬ್ಬ ಶಿಕ್ಷಕನ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದರು.

ಪೋಷಕರು ಮತ್ತು ಹಿಂದುತ್ವ ಸಂಘಟನೆಗಳ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಶಿಕ್ಷಕಿ ಸಿಸ್ಟರ್ ಪ್ರಭಾ ಮತ್ತು ಶಿಕ್ಷಕ ಸ್ಟೀವನ್ ಅವರನ್ನು ವಜಾ ಮಾಡಿರುವುದಾಗಿ ಶಾಲೆಯ ಆಡಳಿತ ಮಂಡಳಿ ಘೋಷಿಸಿತ್ತು. ಈ ವೇಳೆ ಶಾಸಕ ವೇದವ್ಯಾಸ ಕಾಮತ್ ಶಾಲೆಯ ಮುಂದೆ ಮಕ್ಕಳಿಂದ ಜೈ ಶ್ರೀರಾಮ್ ಘೋಷಣೆ ಕೂಗಿಸಿದ್ದರು. ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಇಬ್ಬರು ಶಾಸಕರು ಸೇರಿದಂತೆ ಐದು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ಘಟನೆಯ ವಿಚಾರ ವಿಧಾನಮಂಡಲದ ಬಜೆಟ್ ಅಧಿವೇಶನದಲ್ಲೂ ಪ್ರತಿಧ್ವನಿಸಿತ್ತು. ವಿವಾದ ಅಂತ್ಯಂತ ಸೂಕ್ಷ ಸ್ವರೂಪದ್ದಾಗಿದ್ದರಿಂದ ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ತನಿಖೆ ಮಾಡಿಸುವುದಾಗಿ ಸರ್ಕಾರ ಘೋಷಿಸಿತ್ತು. ಅದರಂತೆ, ಐಎಎಸ್ ಅಧಿಕಾರಿ ತನಿಖೆ ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ನಾಯಕರ ವಿರುದ್ಧದ ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...