Homeಕರ್ನಾಟಕಮಂಗಳೂರು| ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಶಂಕೆ: ಮೂವರ ಬಂಧನ

ಮಂಗಳೂರು| ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಶಂಕೆ: ಮೂವರ ಬಂಧನ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುನ್ನೂರು ಗ್ರಾಮದ ನೇತ್ರಾವತಿ ನದಿ ಕಿನಾರೆಯಲ್ಲಿ ಪಶ್ಚಿಮ ಬಂಗಾಳದ ಯುವತಿ ಮೇಲೆ ಬುಧವಾರ (ಏ.16) ರಾತ್ರಿ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಗುರುವಾರ (ಏ.17) ಬಂಧಿಸಿದ್ದಾರೆ.

“ಗುರುವಾರ ನಸುಕಿನಲ್ಲಿ ನೀರು ಕೇಳುತ್ತಾ ಯುವತಿ ಮುನ್ನೂರು ಗ್ರಾಮದ ಮನೆಯೊಂದರ ಬಾಗಿಲು ಬಡಿದಿದ್ದರು. ಮೈತುಂಬ ಗಾಯಗೊಂಡಿದ್ದ ಆಕೆಗೆ ಸ್ವಲ್ಪ ಹೊತ್ತಿನಲ್ಲಿ ಪ್ರಜ್ಞೆ ತಪ್ಪಿತ್ತು. ಚಿಕಿತ್ಸೆ ಬಳಿಕ ಪೊಲೀಸರಿಗೆ ಹೇಳಿಕೆ ನೀಡಿರುವ ಯುವತಿ, ರಿಕ್ಷಾ ಚಾಲಕನೊಬ್ಬ ಆಹಾರದಲ್ಲಿ ಮತ್ತು ಬರುವ ಪದಾರ್ಥ ಸೇರಿಸಿ ತನ್ನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಇನ್ನಿಬ್ಬರು ಸ್ನೇಹಿತರ ಜೊತೆ ಸೇರಿ ಕಾರಿನಲ್ಲಿ ಅತ್ಯಾಚಾರ ನಡೆಸಿರುವ ಶಂಕೆ ಇದೆ ಎಂದು ತಿಳಿಸಿದ್ದಾರೆ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ರಿಕ್ಷಾ ಚಾಲಕನಾಗಿರುವ ಮೂಲ್ಕಿ ಕಾರ್ನಾಡು ನಿವಾಸಿ ಪ್ರಭುರಾಜ್ (38), ಕೋಟೆಕಾರು ಕುಂಪಲದ ಚಿತ್ರಾಂಜಲಿನಗರದ ನಿವಾಸಿ ಮಿಥುನ್ (37) ಹಾಗೂ ಮಂಗಳೂರಿನ ಪಡೀಲ್ ಕೋಡಕ್ಕಲ್ ನಿವಾಸಿ ಮನೀಶ್ (30) ಅವರನ್ನು ಬಂಧಿಸಲಾಗಿದೆ ಎಂದು ಅನುಪಮ್ ಅಗ್ರವಾಲ್ ಮಾಹಿತಿ ನೀಡಿದ್ದಾರೆ.

“ಪಶ್ಚಿಮ ಬಂಗಾಳದ ಕೂಚ್‌ಬಿಹಾರ್‌ ಮೂಲದ ಸುಮಾರು 20 ವರ್ಷ ಪ್ರಾಯದ ಯುವತಿ, ಕೇರಳದ ಪ್ಲೈವುಡ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಹೊಸ ಕೆಲಸ ಹುಡುಕುದಕ್ಕಾಗಿ ಗೆಳೆಯನ ಜೊತೆ ಮಂಗಳೂರಿಗೆ ಬಂದಿದ್ದರು. ಮಂಗಳೂರಲ್ಲಿ ಇಬ್ಬರ ನಡುವೆ ಜಗಳವಾಗಿತ್ತು. ಈ ವೇಳೆ ಯುವತಿಯ ಮೊಬೈಲ್ ಹಾನಿಗೊಂಡಿತ್ತು. ಅದನ್ನು ರಿಪೇರಿ ಮಾಡಿಸಲು ರಿಕ್ಷಾ ಹತ್ತಿದ ಯುವತಿ, ಮೊಬೈಲ್ ರಿಪೇರಿ ಆದ ಬಳಿಕ ಪಶ್ಚಿಮ ಬಂಗಾಳದ ರೈಲು ಹತ್ತಲು ತನ್ನನ್ನು ಸಮೀಪದ ರೈಲು ನಿಲ್ಧಾಣಕ್ಕೆ ಬಿಡುವಂತೆ ರಿಕ್ಷಾ ಚಾಲಕನಲ್ಲಿ ಕೋರಿದ್ದರು” ಎಂದು ಅಗ್ರವಾಲ್ ಹೇಳಿದ್ದಾರೆ.

“ಯುವತಿ ಗುರುವಾರ ನಸುಕಿನಲ್ಲಿ ಮುನ್ನೂರು ಗ್ರಾಮದ ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ತೀರ ಸಮೀಪದ ಮನೆಯೊಂದರ ಬಾಗಿಲು ಬಡಿದು ನೀರು ಕೇಳಿದ್ದರು. ಮನೆಯವರು ಬಾಗಿಲು ತೆಗೆದ ಸ್ವಲ್ಪ ಹೊತ್ತಿನಲ್ಲೇ ಆಕೆ ಪ್ರಜ್ಞೆ ತಪ್ಪಿದ್ದರು. ಈ ವೇಳೆ ಮನೆಯವರು ಪೊಲೀಸ್ ಸಹಾಯವಾಣಿಗೆ (112) ಕರೆ ಮಾಡಿ ವಿಷಯ ತಿಳಿಸಿದ್ದರು. ಸ್ವಲ್ಪ ಹೊತ್ತಿನಲ್ಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂತ್ರಸ್ತ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ”

“ರಿಕ್ಷಾ ಚಾಲಕ ಆಹಾರದಲ್ಲಿ ಮತ್ತು ಬರುವ ಪದಾರ್ಥ ಬೆರೆಸಿದ್ದರಿಂದ ಪ್ರಜ್ಞೆ ಕಳೆದುಕೊಂಡಿದ್ದೆ. ಪ್ರಜ್ಞೆ ಮರಳಿದಾಗ ಕಾರೊಂದರಲ್ಲಿ ರಿಕ್ಷಾ ಚಾಲಕ ಸೇರಿ ಮೂವರು ಯುವಕರ ಜೊತೆ ಇದ್ದೆ. ಕಿರುಚಾಡಿದಾಗ ಅವರು ನನ್ನನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದರು. ನಾನು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಮೂವರು ಸೇರಿ ನನ್ನ ಮೇಲೆ ಅತ್ಯಾಚಾರ ನಡೆಸಿರಬಹುದು” ಎಂದು ಯುವತಿ ಹೇಳಿಕೆ ನೀಡಿದ್ದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಯುವತಿ ನೀಡಿದ ಹೇಳಿಕೆ ಆಧರಿಸಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಆಕೆಯ ಮೇಲೆ ಅತ್ಯಾಚಾರ ನಡೆದಿದೆಯೇ?..ಇಲ್ಲವೇ? ಎಂಬುವುದು ವೈದ್ಯಕೀಯ ಪರೀಕ್ಷೆಯ ವರದಿ ಬಂದ ಬಳಿಕ ತಿಳಿಯಲಿದೆ ಎಂದು ಅನುಪಮ್ ಅಗ್ರವಾಲ್ ಹೇಳಿದ್ದಾರೆ.

ಬಂಧಿತರ ಪೈಕಿ ಪ್ರಭುರಾಜ್ 10 ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಆಟೋ ಚಾಲಕರಾಗಿದ್ದಾರೆ. ಆತ ಬುಧವಾರ ಮಧ್ಯಾಹ್ನ 2.30ರಿಂದಲೇ ಯುವತಿ ಜೊತೆಗಿದ್ದರು. ಮೊಬೈಲ್‌ ದುರಸ್ತಿಗಾಗಿ ಆತನ ಜೊತೆ ಯುವತಿ ಅನೇಕ ಮಳಿಗೆಗಳಿಗೆ ಸುತ್ತಿದ್ದಾರೆ. ಈ ವೇಳೆ ಪ್ರಭುರಾಜ್ ಆಕೆಗೆ ಉಪಾಹಾರ ನೀಡಿದ್ದರು. ಮೊಬೈಲ್ ದುರಸ್ತಿಯ ಹಣವನ್ನೂ ಅವರೇ ಪಾವತಿಸಿದ್ದರು. ಇನ್ನಿಬ್ಬರು ಆರೋಪಿಗಳಲ್ಲಿ ಆರೋಪಿ ಮಿಥುನ್ ಪೇಂಟಿಂಗ್‌, ಚಾಲಕ ಹಾಗೂ ಎಲೆಕ್ಟ್ರಿಷಿಯನ್ ಕೆಲಸಗಳನ್ನು ಮಾಡುತ್ತಿದ್ದರು. ಮನೀಶ್ ಡೆಲಿವರಿ ಬಾಯ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಯುವತಿಯ ಪ್ರಜ್ಞೆ ತಪ್ಪಿಸಿ ಮುನ್ನೂರು ಗ್ರಾಮಕ್ಕೆ ಕರೆದೊಯ್ಯುವಾಗ ಮೂವರು ಆರೋಪಿಗಳೂ ಮದ್ಯಪಾನ ಮಾಡಿದ್ದರು. ಯುವತಿಗೂ ಮದ್ಯ ಕುಡಿಸಿದ್ದರು ಎಂದು ಪೊಲೀಸ್ ಆಯುಕ್ತರು ವಿವರಿಸಿದ್ದಾರೆ.

ವರದಿಗಳ ಪ್ರಕಾರ, ಆರೋಪಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 126 (ಬಲವಂತದಿಂದ ಬಂಧನದಲ್ಲಿರಿಸುವುದು), ಸೆಕ್ಷನ್ 140 (2) (ಬಲವಂತದಿಂದ ಅಪಹರಣ ನಡೆಸುವುದು), 352 (ಶಾಂತಿಭಂಗವನ್ನುಂಟುಮಾಡುವುದು), ಸೆಕ್ಷನ್ 351 (1) ( ಕ್ರಿಮಿನಲ್ ಬೆದರಿಕೆ ಒಡ್ಡುವುದು) 115 (2) (ಹಲ್ಲೆನಡೆಸುವುದು), ಸೆಕ್ಷನ್‌ 64 (ಅತ್ಯಾಚಾರ ನಡೆಸುವುದು), ಸೆಕ್ಷನ್ 309 (6) (ಬೆದರಿಸಿ ಸುಲಿಗೆ ಮಾಡುವುದು), ಸೆಕ್ಷನ್‌ 70 (ಸಾಮೂಹಿಕ ಅತ್ಯಾಚಾರ) ಹಾಗೂ ಸೆಕ್ಷನ್ 3 (5)ರ (ಕೂಟ ರಚಿಸಿಕೊಂಡು ಕ್ರಿಮಿನಲ್ ಕೃತ್ಯ ನಡೆಸುವುದು) ಅಡಿ ಎಫ್‌ಐಆರ್ ದಾಖಲಾಗಿದೆ.

ಜಾತಿಗಣತಿ ಕುರಿತ ಸಚಿವ ಸಂಪುಟ ಸಭೆ ‘ಅಪೂರ್ಣ, ಆದರೆ ಸೌಹಾರ್ದಯುತ’: ಎಚ್.ಕೆ.ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...