Homeಕರ್ನಾಟಕಮಂಗಳೂರು| ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಶಂಕೆ: ಮೂವರ ಬಂಧನ

ಮಂಗಳೂರು| ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಶಂಕೆ: ಮೂವರ ಬಂಧನ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುನ್ನೂರು ಗ್ರಾಮದ ನೇತ್ರಾವತಿ ನದಿ ಕಿನಾರೆಯಲ್ಲಿ ಪಶ್ಚಿಮ ಬಂಗಾಳದ ಯುವತಿ ಮೇಲೆ ಬುಧವಾರ (ಏ.16) ರಾತ್ರಿ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಗುರುವಾರ (ಏ.17) ಬಂಧಿಸಿದ್ದಾರೆ.

“ಗುರುವಾರ ನಸುಕಿನಲ್ಲಿ ನೀರು ಕೇಳುತ್ತಾ ಯುವತಿ ಮುನ್ನೂರು ಗ್ರಾಮದ ಮನೆಯೊಂದರ ಬಾಗಿಲು ಬಡಿದಿದ್ದರು. ಮೈತುಂಬ ಗಾಯಗೊಂಡಿದ್ದ ಆಕೆಗೆ ಸ್ವಲ್ಪ ಹೊತ್ತಿನಲ್ಲಿ ಪ್ರಜ್ಞೆ ತಪ್ಪಿತ್ತು. ಚಿಕಿತ್ಸೆ ಬಳಿಕ ಪೊಲೀಸರಿಗೆ ಹೇಳಿಕೆ ನೀಡಿರುವ ಯುವತಿ, ರಿಕ್ಷಾ ಚಾಲಕನೊಬ್ಬ ಆಹಾರದಲ್ಲಿ ಮತ್ತು ಬರುವ ಪದಾರ್ಥ ಸೇರಿಸಿ ತನ್ನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಇನ್ನಿಬ್ಬರು ಸ್ನೇಹಿತರ ಜೊತೆ ಸೇರಿ ಕಾರಿನಲ್ಲಿ ಅತ್ಯಾಚಾರ ನಡೆಸಿರುವ ಶಂಕೆ ಇದೆ ಎಂದು ತಿಳಿಸಿದ್ದಾರೆ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ರಿಕ್ಷಾ ಚಾಲಕನಾಗಿರುವ ಮೂಲ್ಕಿ ಕಾರ್ನಾಡು ನಿವಾಸಿ ಪ್ರಭುರಾಜ್ (38), ಕೋಟೆಕಾರು ಕುಂಪಲದ ಚಿತ್ರಾಂಜಲಿನಗರದ ನಿವಾಸಿ ಮಿಥುನ್ (37) ಹಾಗೂ ಮಂಗಳೂರಿನ ಪಡೀಲ್ ಕೋಡಕ್ಕಲ್ ನಿವಾಸಿ ಮನೀಶ್ (30) ಅವರನ್ನು ಬಂಧಿಸಲಾಗಿದೆ ಎಂದು ಅನುಪಮ್ ಅಗ್ರವಾಲ್ ಮಾಹಿತಿ ನೀಡಿದ್ದಾರೆ.

“ಪಶ್ಚಿಮ ಬಂಗಾಳದ ಕೂಚ್‌ಬಿಹಾರ್‌ ಮೂಲದ ಸುಮಾರು 20 ವರ್ಷ ಪ್ರಾಯದ ಯುವತಿ, ಕೇರಳದ ಪ್ಲೈವುಡ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಹೊಸ ಕೆಲಸ ಹುಡುಕುದಕ್ಕಾಗಿ ಗೆಳೆಯನ ಜೊತೆ ಮಂಗಳೂರಿಗೆ ಬಂದಿದ್ದರು. ಮಂಗಳೂರಲ್ಲಿ ಇಬ್ಬರ ನಡುವೆ ಜಗಳವಾಗಿತ್ತು. ಈ ವೇಳೆ ಯುವತಿಯ ಮೊಬೈಲ್ ಹಾನಿಗೊಂಡಿತ್ತು. ಅದನ್ನು ರಿಪೇರಿ ಮಾಡಿಸಲು ರಿಕ್ಷಾ ಹತ್ತಿದ ಯುವತಿ, ಮೊಬೈಲ್ ರಿಪೇರಿ ಆದ ಬಳಿಕ ಪಶ್ಚಿಮ ಬಂಗಾಳದ ರೈಲು ಹತ್ತಲು ತನ್ನನ್ನು ಸಮೀಪದ ರೈಲು ನಿಲ್ಧಾಣಕ್ಕೆ ಬಿಡುವಂತೆ ರಿಕ್ಷಾ ಚಾಲಕನಲ್ಲಿ ಕೋರಿದ್ದರು” ಎಂದು ಅಗ್ರವಾಲ್ ಹೇಳಿದ್ದಾರೆ.

“ಯುವತಿ ಗುರುವಾರ ನಸುಕಿನಲ್ಲಿ ಮುನ್ನೂರು ಗ್ರಾಮದ ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ತೀರ ಸಮೀಪದ ಮನೆಯೊಂದರ ಬಾಗಿಲು ಬಡಿದು ನೀರು ಕೇಳಿದ್ದರು. ಮನೆಯವರು ಬಾಗಿಲು ತೆಗೆದ ಸ್ವಲ್ಪ ಹೊತ್ತಿನಲ್ಲೇ ಆಕೆ ಪ್ರಜ್ಞೆ ತಪ್ಪಿದ್ದರು. ಈ ವೇಳೆ ಮನೆಯವರು ಪೊಲೀಸ್ ಸಹಾಯವಾಣಿಗೆ (112) ಕರೆ ಮಾಡಿ ವಿಷಯ ತಿಳಿಸಿದ್ದರು. ಸ್ವಲ್ಪ ಹೊತ್ತಿನಲ್ಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂತ್ರಸ್ತ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ”

“ರಿಕ್ಷಾ ಚಾಲಕ ಆಹಾರದಲ್ಲಿ ಮತ್ತು ಬರುವ ಪದಾರ್ಥ ಬೆರೆಸಿದ್ದರಿಂದ ಪ್ರಜ್ಞೆ ಕಳೆದುಕೊಂಡಿದ್ದೆ. ಪ್ರಜ್ಞೆ ಮರಳಿದಾಗ ಕಾರೊಂದರಲ್ಲಿ ರಿಕ್ಷಾ ಚಾಲಕ ಸೇರಿ ಮೂವರು ಯುವಕರ ಜೊತೆ ಇದ್ದೆ. ಕಿರುಚಾಡಿದಾಗ ಅವರು ನನ್ನನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದರು. ನಾನು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಮೂವರು ಸೇರಿ ನನ್ನ ಮೇಲೆ ಅತ್ಯಾಚಾರ ನಡೆಸಿರಬಹುದು” ಎಂದು ಯುವತಿ ಹೇಳಿಕೆ ನೀಡಿದ್ದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಯುವತಿ ನೀಡಿದ ಹೇಳಿಕೆ ಆಧರಿಸಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಆಕೆಯ ಮೇಲೆ ಅತ್ಯಾಚಾರ ನಡೆದಿದೆಯೇ?..ಇಲ್ಲವೇ? ಎಂಬುವುದು ವೈದ್ಯಕೀಯ ಪರೀಕ್ಷೆಯ ವರದಿ ಬಂದ ಬಳಿಕ ತಿಳಿಯಲಿದೆ ಎಂದು ಅನುಪಮ್ ಅಗ್ರವಾಲ್ ಹೇಳಿದ್ದಾರೆ.

ಬಂಧಿತರ ಪೈಕಿ ಪ್ರಭುರಾಜ್ 10 ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಆಟೋ ಚಾಲಕರಾಗಿದ್ದಾರೆ. ಆತ ಬುಧವಾರ ಮಧ್ಯಾಹ್ನ 2.30ರಿಂದಲೇ ಯುವತಿ ಜೊತೆಗಿದ್ದರು. ಮೊಬೈಲ್‌ ದುರಸ್ತಿಗಾಗಿ ಆತನ ಜೊತೆ ಯುವತಿ ಅನೇಕ ಮಳಿಗೆಗಳಿಗೆ ಸುತ್ತಿದ್ದಾರೆ. ಈ ವೇಳೆ ಪ್ರಭುರಾಜ್ ಆಕೆಗೆ ಉಪಾಹಾರ ನೀಡಿದ್ದರು. ಮೊಬೈಲ್ ದುರಸ್ತಿಯ ಹಣವನ್ನೂ ಅವರೇ ಪಾವತಿಸಿದ್ದರು. ಇನ್ನಿಬ್ಬರು ಆರೋಪಿಗಳಲ್ಲಿ ಆರೋಪಿ ಮಿಥುನ್ ಪೇಂಟಿಂಗ್‌, ಚಾಲಕ ಹಾಗೂ ಎಲೆಕ್ಟ್ರಿಷಿಯನ್ ಕೆಲಸಗಳನ್ನು ಮಾಡುತ್ತಿದ್ದರು. ಮನೀಶ್ ಡೆಲಿವರಿ ಬಾಯ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಯುವತಿಯ ಪ್ರಜ್ಞೆ ತಪ್ಪಿಸಿ ಮುನ್ನೂರು ಗ್ರಾಮಕ್ಕೆ ಕರೆದೊಯ್ಯುವಾಗ ಮೂವರು ಆರೋಪಿಗಳೂ ಮದ್ಯಪಾನ ಮಾಡಿದ್ದರು. ಯುವತಿಗೂ ಮದ್ಯ ಕುಡಿಸಿದ್ದರು ಎಂದು ಪೊಲೀಸ್ ಆಯುಕ್ತರು ವಿವರಿಸಿದ್ದಾರೆ.

ವರದಿಗಳ ಪ್ರಕಾರ, ಆರೋಪಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 126 (ಬಲವಂತದಿಂದ ಬಂಧನದಲ್ಲಿರಿಸುವುದು), ಸೆಕ್ಷನ್ 140 (2) (ಬಲವಂತದಿಂದ ಅಪಹರಣ ನಡೆಸುವುದು), 352 (ಶಾಂತಿಭಂಗವನ್ನುಂಟುಮಾಡುವುದು), ಸೆಕ್ಷನ್ 351 (1) ( ಕ್ರಿಮಿನಲ್ ಬೆದರಿಕೆ ಒಡ್ಡುವುದು) 115 (2) (ಹಲ್ಲೆನಡೆಸುವುದು), ಸೆಕ್ಷನ್‌ 64 (ಅತ್ಯಾಚಾರ ನಡೆಸುವುದು), ಸೆಕ್ಷನ್ 309 (6) (ಬೆದರಿಸಿ ಸುಲಿಗೆ ಮಾಡುವುದು), ಸೆಕ್ಷನ್‌ 70 (ಸಾಮೂಹಿಕ ಅತ್ಯಾಚಾರ) ಹಾಗೂ ಸೆಕ್ಷನ್ 3 (5)ರ (ಕೂಟ ರಚಿಸಿಕೊಂಡು ಕ್ರಿಮಿನಲ್ ಕೃತ್ಯ ನಡೆಸುವುದು) ಅಡಿ ಎಫ್‌ಐಆರ್ ದಾಖಲಾಗಿದೆ.

ಜಾತಿಗಣತಿ ಕುರಿತ ಸಚಿವ ಸಂಪುಟ ಸಭೆ ‘ಅಪೂರ್ಣ, ಆದರೆ ಸೌಹಾರ್ದಯುತ’: ಎಚ್.ಕೆ.ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...