Homeಕರ್ನಾಟಕಮಂಗಳೂರು| ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಶಂಕೆ: ಮೂವರ ಬಂಧನ

ಮಂಗಳೂರು| ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಶಂಕೆ: ಮೂವರ ಬಂಧನ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುನ್ನೂರು ಗ್ರಾಮದ ನೇತ್ರಾವತಿ ನದಿ ಕಿನಾರೆಯಲ್ಲಿ ಪಶ್ಚಿಮ ಬಂಗಾಳದ ಯುವತಿ ಮೇಲೆ ಬುಧವಾರ (ಏ.16) ರಾತ್ರಿ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಗುರುವಾರ (ಏ.17) ಬಂಧಿಸಿದ್ದಾರೆ.

“ಗುರುವಾರ ನಸುಕಿನಲ್ಲಿ ನೀರು ಕೇಳುತ್ತಾ ಯುವತಿ ಮುನ್ನೂರು ಗ್ರಾಮದ ಮನೆಯೊಂದರ ಬಾಗಿಲು ಬಡಿದಿದ್ದರು. ಮೈತುಂಬ ಗಾಯಗೊಂಡಿದ್ದ ಆಕೆಗೆ ಸ್ವಲ್ಪ ಹೊತ್ತಿನಲ್ಲಿ ಪ್ರಜ್ಞೆ ತಪ್ಪಿತ್ತು. ಚಿಕಿತ್ಸೆ ಬಳಿಕ ಪೊಲೀಸರಿಗೆ ಹೇಳಿಕೆ ನೀಡಿರುವ ಯುವತಿ, ರಿಕ್ಷಾ ಚಾಲಕನೊಬ್ಬ ಆಹಾರದಲ್ಲಿ ಮತ್ತು ಬರುವ ಪದಾರ್ಥ ಸೇರಿಸಿ ತನ್ನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಇನ್ನಿಬ್ಬರು ಸ್ನೇಹಿತರ ಜೊತೆ ಸೇರಿ ಕಾರಿನಲ್ಲಿ ಅತ್ಯಾಚಾರ ನಡೆಸಿರುವ ಶಂಕೆ ಇದೆ ಎಂದು ತಿಳಿಸಿದ್ದಾರೆ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ರಿಕ್ಷಾ ಚಾಲಕನಾಗಿರುವ ಮೂಲ್ಕಿ ಕಾರ್ನಾಡು ನಿವಾಸಿ ಪ್ರಭುರಾಜ್ (38), ಕೋಟೆಕಾರು ಕುಂಪಲದ ಚಿತ್ರಾಂಜಲಿನಗರದ ನಿವಾಸಿ ಮಿಥುನ್ (37) ಹಾಗೂ ಮಂಗಳೂರಿನ ಪಡೀಲ್ ಕೋಡಕ್ಕಲ್ ನಿವಾಸಿ ಮನೀಶ್ (30) ಅವರನ್ನು ಬಂಧಿಸಲಾಗಿದೆ ಎಂದು ಅನುಪಮ್ ಅಗ್ರವಾಲ್ ಮಾಹಿತಿ ನೀಡಿದ್ದಾರೆ.

“ಪಶ್ಚಿಮ ಬಂಗಾಳದ ಕೂಚ್‌ಬಿಹಾರ್‌ ಮೂಲದ ಸುಮಾರು 20 ವರ್ಷ ಪ್ರಾಯದ ಯುವತಿ, ಕೇರಳದ ಪ್ಲೈವುಡ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಹೊಸ ಕೆಲಸ ಹುಡುಕುದಕ್ಕಾಗಿ ಗೆಳೆಯನ ಜೊತೆ ಮಂಗಳೂರಿಗೆ ಬಂದಿದ್ದರು. ಮಂಗಳೂರಲ್ಲಿ ಇಬ್ಬರ ನಡುವೆ ಜಗಳವಾಗಿತ್ತು. ಈ ವೇಳೆ ಯುವತಿಯ ಮೊಬೈಲ್ ಹಾನಿಗೊಂಡಿತ್ತು. ಅದನ್ನು ರಿಪೇರಿ ಮಾಡಿಸಲು ರಿಕ್ಷಾ ಹತ್ತಿದ ಯುವತಿ, ಮೊಬೈಲ್ ರಿಪೇರಿ ಆದ ಬಳಿಕ ಪಶ್ಚಿಮ ಬಂಗಾಳದ ರೈಲು ಹತ್ತಲು ತನ್ನನ್ನು ಸಮೀಪದ ರೈಲು ನಿಲ್ಧಾಣಕ್ಕೆ ಬಿಡುವಂತೆ ರಿಕ್ಷಾ ಚಾಲಕನಲ್ಲಿ ಕೋರಿದ್ದರು” ಎಂದು ಅಗ್ರವಾಲ್ ಹೇಳಿದ್ದಾರೆ.

“ಯುವತಿ ಗುರುವಾರ ನಸುಕಿನಲ್ಲಿ ಮುನ್ನೂರು ಗ್ರಾಮದ ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ತೀರ ಸಮೀಪದ ಮನೆಯೊಂದರ ಬಾಗಿಲು ಬಡಿದು ನೀರು ಕೇಳಿದ್ದರು. ಮನೆಯವರು ಬಾಗಿಲು ತೆಗೆದ ಸ್ವಲ್ಪ ಹೊತ್ತಿನಲ್ಲೇ ಆಕೆ ಪ್ರಜ್ಞೆ ತಪ್ಪಿದ್ದರು. ಈ ವೇಳೆ ಮನೆಯವರು ಪೊಲೀಸ್ ಸಹಾಯವಾಣಿಗೆ (112) ಕರೆ ಮಾಡಿ ವಿಷಯ ತಿಳಿಸಿದ್ದರು. ಸ್ವಲ್ಪ ಹೊತ್ತಿನಲ್ಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂತ್ರಸ್ತ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ”

“ರಿಕ್ಷಾ ಚಾಲಕ ಆಹಾರದಲ್ಲಿ ಮತ್ತು ಬರುವ ಪದಾರ್ಥ ಬೆರೆಸಿದ್ದರಿಂದ ಪ್ರಜ್ಞೆ ಕಳೆದುಕೊಂಡಿದ್ದೆ. ಪ್ರಜ್ಞೆ ಮರಳಿದಾಗ ಕಾರೊಂದರಲ್ಲಿ ರಿಕ್ಷಾ ಚಾಲಕ ಸೇರಿ ಮೂವರು ಯುವಕರ ಜೊತೆ ಇದ್ದೆ. ಕಿರುಚಾಡಿದಾಗ ಅವರು ನನ್ನನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದರು. ನಾನು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಮೂವರು ಸೇರಿ ನನ್ನ ಮೇಲೆ ಅತ್ಯಾಚಾರ ನಡೆಸಿರಬಹುದು” ಎಂದು ಯುವತಿ ಹೇಳಿಕೆ ನೀಡಿದ್ದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಯುವತಿ ನೀಡಿದ ಹೇಳಿಕೆ ಆಧರಿಸಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಆಕೆಯ ಮೇಲೆ ಅತ್ಯಾಚಾರ ನಡೆದಿದೆಯೇ?..ಇಲ್ಲವೇ? ಎಂಬುವುದು ವೈದ್ಯಕೀಯ ಪರೀಕ್ಷೆಯ ವರದಿ ಬಂದ ಬಳಿಕ ತಿಳಿಯಲಿದೆ ಎಂದು ಅನುಪಮ್ ಅಗ್ರವಾಲ್ ಹೇಳಿದ್ದಾರೆ.

ಬಂಧಿತರ ಪೈಕಿ ಪ್ರಭುರಾಜ್ 10 ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಆಟೋ ಚಾಲಕರಾಗಿದ್ದಾರೆ. ಆತ ಬುಧವಾರ ಮಧ್ಯಾಹ್ನ 2.30ರಿಂದಲೇ ಯುವತಿ ಜೊತೆಗಿದ್ದರು. ಮೊಬೈಲ್‌ ದುರಸ್ತಿಗಾಗಿ ಆತನ ಜೊತೆ ಯುವತಿ ಅನೇಕ ಮಳಿಗೆಗಳಿಗೆ ಸುತ್ತಿದ್ದಾರೆ. ಈ ವೇಳೆ ಪ್ರಭುರಾಜ್ ಆಕೆಗೆ ಉಪಾಹಾರ ನೀಡಿದ್ದರು. ಮೊಬೈಲ್ ದುರಸ್ತಿಯ ಹಣವನ್ನೂ ಅವರೇ ಪಾವತಿಸಿದ್ದರು. ಇನ್ನಿಬ್ಬರು ಆರೋಪಿಗಳಲ್ಲಿ ಆರೋಪಿ ಮಿಥುನ್ ಪೇಂಟಿಂಗ್‌, ಚಾಲಕ ಹಾಗೂ ಎಲೆಕ್ಟ್ರಿಷಿಯನ್ ಕೆಲಸಗಳನ್ನು ಮಾಡುತ್ತಿದ್ದರು. ಮನೀಶ್ ಡೆಲಿವರಿ ಬಾಯ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಯುವತಿಯ ಪ್ರಜ್ಞೆ ತಪ್ಪಿಸಿ ಮುನ್ನೂರು ಗ್ರಾಮಕ್ಕೆ ಕರೆದೊಯ್ಯುವಾಗ ಮೂವರು ಆರೋಪಿಗಳೂ ಮದ್ಯಪಾನ ಮಾಡಿದ್ದರು. ಯುವತಿಗೂ ಮದ್ಯ ಕುಡಿಸಿದ್ದರು ಎಂದು ಪೊಲೀಸ್ ಆಯುಕ್ತರು ವಿವರಿಸಿದ್ದಾರೆ.

ವರದಿಗಳ ಪ್ರಕಾರ, ಆರೋಪಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 126 (ಬಲವಂತದಿಂದ ಬಂಧನದಲ್ಲಿರಿಸುವುದು), ಸೆಕ್ಷನ್ 140 (2) (ಬಲವಂತದಿಂದ ಅಪಹರಣ ನಡೆಸುವುದು), 352 (ಶಾಂತಿಭಂಗವನ್ನುಂಟುಮಾಡುವುದು), ಸೆಕ್ಷನ್ 351 (1) ( ಕ್ರಿಮಿನಲ್ ಬೆದರಿಕೆ ಒಡ್ಡುವುದು) 115 (2) (ಹಲ್ಲೆನಡೆಸುವುದು), ಸೆಕ್ಷನ್‌ 64 (ಅತ್ಯಾಚಾರ ನಡೆಸುವುದು), ಸೆಕ್ಷನ್ 309 (6) (ಬೆದರಿಸಿ ಸುಲಿಗೆ ಮಾಡುವುದು), ಸೆಕ್ಷನ್‌ 70 (ಸಾಮೂಹಿಕ ಅತ್ಯಾಚಾರ) ಹಾಗೂ ಸೆಕ್ಷನ್ 3 (5)ರ (ಕೂಟ ರಚಿಸಿಕೊಂಡು ಕ್ರಿಮಿನಲ್ ಕೃತ್ಯ ನಡೆಸುವುದು) ಅಡಿ ಎಫ್‌ಐಆರ್ ದಾಖಲಾಗಿದೆ.

ಜಾತಿಗಣತಿ ಕುರಿತ ಸಚಿವ ಸಂಪುಟ ಸಭೆ ‘ಅಪೂರ್ಣ, ಆದರೆ ಸೌಹಾರ್ದಯುತ’: ಎಚ್.ಕೆ.ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...