Homeಕರ್ನಾಟಕಮಂಗಳೂರು| ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಶಂಕೆ: ಮೂವರ ಬಂಧನ

ಮಂಗಳೂರು| ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಶಂಕೆ: ಮೂವರ ಬಂಧನ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುನ್ನೂರು ಗ್ರಾಮದ ನೇತ್ರಾವತಿ ನದಿ ಕಿನಾರೆಯಲ್ಲಿ ಪಶ್ಚಿಮ ಬಂಗಾಳದ ಯುವತಿ ಮೇಲೆ ಬುಧವಾರ (ಏ.16) ರಾತ್ರಿ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಗುರುವಾರ (ಏ.17) ಬಂಧಿಸಿದ್ದಾರೆ.

“ಗುರುವಾರ ನಸುಕಿನಲ್ಲಿ ನೀರು ಕೇಳುತ್ತಾ ಯುವತಿ ಮುನ್ನೂರು ಗ್ರಾಮದ ಮನೆಯೊಂದರ ಬಾಗಿಲು ಬಡಿದಿದ್ದರು. ಮೈತುಂಬ ಗಾಯಗೊಂಡಿದ್ದ ಆಕೆಗೆ ಸ್ವಲ್ಪ ಹೊತ್ತಿನಲ್ಲಿ ಪ್ರಜ್ಞೆ ತಪ್ಪಿತ್ತು. ಚಿಕಿತ್ಸೆ ಬಳಿಕ ಪೊಲೀಸರಿಗೆ ಹೇಳಿಕೆ ನೀಡಿರುವ ಯುವತಿ, ರಿಕ್ಷಾ ಚಾಲಕನೊಬ್ಬ ಆಹಾರದಲ್ಲಿ ಮತ್ತು ಬರುವ ಪದಾರ್ಥ ಸೇರಿಸಿ ತನ್ನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಇನ್ನಿಬ್ಬರು ಸ್ನೇಹಿತರ ಜೊತೆ ಸೇರಿ ಕಾರಿನಲ್ಲಿ ಅತ್ಯಾಚಾರ ನಡೆಸಿರುವ ಶಂಕೆ ಇದೆ ಎಂದು ತಿಳಿಸಿದ್ದಾರೆ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ರಿಕ್ಷಾ ಚಾಲಕನಾಗಿರುವ ಮೂಲ್ಕಿ ಕಾರ್ನಾಡು ನಿವಾಸಿ ಪ್ರಭುರಾಜ್ (38), ಕೋಟೆಕಾರು ಕುಂಪಲದ ಚಿತ್ರಾಂಜಲಿನಗರದ ನಿವಾಸಿ ಮಿಥುನ್ (37) ಹಾಗೂ ಮಂಗಳೂರಿನ ಪಡೀಲ್ ಕೋಡಕ್ಕಲ್ ನಿವಾಸಿ ಮನೀಶ್ (30) ಅವರನ್ನು ಬಂಧಿಸಲಾಗಿದೆ ಎಂದು ಅನುಪಮ್ ಅಗ್ರವಾಲ್ ಮಾಹಿತಿ ನೀಡಿದ್ದಾರೆ.

“ಪಶ್ಚಿಮ ಬಂಗಾಳದ ಕೂಚ್‌ಬಿಹಾರ್‌ ಮೂಲದ ಸುಮಾರು 20 ವರ್ಷ ಪ್ರಾಯದ ಯುವತಿ, ಕೇರಳದ ಪ್ಲೈವುಡ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಹೊಸ ಕೆಲಸ ಹುಡುಕುದಕ್ಕಾಗಿ ಗೆಳೆಯನ ಜೊತೆ ಮಂಗಳೂರಿಗೆ ಬಂದಿದ್ದರು. ಮಂಗಳೂರಲ್ಲಿ ಇಬ್ಬರ ನಡುವೆ ಜಗಳವಾಗಿತ್ತು. ಈ ವೇಳೆ ಯುವತಿಯ ಮೊಬೈಲ್ ಹಾನಿಗೊಂಡಿತ್ತು. ಅದನ್ನು ರಿಪೇರಿ ಮಾಡಿಸಲು ರಿಕ್ಷಾ ಹತ್ತಿದ ಯುವತಿ, ಮೊಬೈಲ್ ರಿಪೇರಿ ಆದ ಬಳಿಕ ಪಶ್ಚಿಮ ಬಂಗಾಳದ ರೈಲು ಹತ್ತಲು ತನ್ನನ್ನು ಸಮೀಪದ ರೈಲು ನಿಲ್ಧಾಣಕ್ಕೆ ಬಿಡುವಂತೆ ರಿಕ್ಷಾ ಚಾಲಕನಲ್ಲಿ ಕೋರಿದ್ದರು” ಎಂದು ಅಗ್ರವಾಲ್ ಹೇಳಿದ್ದಾರೆ.

“ಯುವತಿ ಗುರುವಾರ ನಸುಕಿನಲ್ಲಿ ಮುನ್ನೂರು ಗ್ರಾಮದ ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ತೀರ ಸಮೀಪದ ಮನೆಯೊಂದರ ಬಾಗಿಲು ಬಡಿದು ನೀರು ಕೇಳಿದ್ದರು. ಮನೆಯವರು ಬಾಗಿಲು ತೆಗೆದ ಸ್ವಲ್ಪ ಹೊತ್ತಿನಲ್ಲೇ ಆಕೆ ಪ್ರಜ್ಞೆ ತಪ್ಪಿದ್ದರು. ಈ ವೇಳೆ ಮನೆಯವರು ಪೊಲೀಸ್ ಸಹಾಯವಾಣಿಗೆ (112) ಕರೆ ಮಾಡಿ ವಿಷಯ ತಿಳಿಸಿದ್ದರು. ಸ್ವಲ್ಪ ಹೊತ್ತಿನಲ್ಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂತ್ರಸ್ತ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ”

“ರಿಕ್ಷಾ ಚಾಲಕ ಆಹಾರದಲ್ಲಿ ಮತ್ತು ಬರುವ ಪದಾರ್ಥ ಬೆರೆಸಿದ್ದರಿಂದ ಪ್ರಜ್ಞೆ ಕಳೆದುಕೊಂಡಿದ್ದೆ. ಪ್ರಜ್ಞೆ ಮರಳಿದಾಗ ಕಾರೊಂದರಲ್ಲಿ ರಿಕ್ಷಾ ಚಾಲಕ ಸೇರಿ ಮೂವರು ಯುವಕರ ಜೊತೆ ಇದ್ದೆ. ಕಿರುಚಾಡಿದಾಗ ಅವರು ನನ್ನನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದರು. ನಾನು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಮೂವರು ಸೇರಿ ನನ್ನ ಮೇಲೆ ಅತ್ಯಾಚಾರ ನಡೆಸಿರಬಹುದು” ಎಂದು ಯುವತಿ ಹೇಳಿಕೆ ನೀಡಿದ್ದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಯುವತಿ ನೀಡಿದ ಹೇಳಿಕೆ ಆಧರಿಸಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಆಕೆಯ ಮೇಲೆ ಅತ್ಯಾಚಾರ ನಡೆದಿದೆಯೇ?..ಇಲ್ಲವೇ? ಎಂಬುವುದು ವೈದ್ಯಕೀಯ ಪರೀಕ್ಷೆಯ ವರದಿ ಬಂದ ಬಳಿಕ ತಿಳಿಯಲಿದೆ ಎಂದು ಅನುಪಮ್ ಅಗ್ರವಾಲ್ ಹೇಳಿದ್ದಾರೆ.

ಬಂಧಿತರ ಪೈಕಿ ಪ್ರಭುರಾಜ್ 10 ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಆಟೋ ಚಾಲಕರಾಗಿದ್ದಾರೆ. ಆತ ಬುಧವಾರ ಮಧ್ಯಾಹ್ನ 2.30ರಿಂದಲೇ ಯುವತಿ ಜೊತೆಗಿದ್ದರು. ಮೊಬೈಲ್‌ ದುರಸ್ತಿಗಾಗಿ ಆತನ ಜೊತೆ ಯುವತಿ ಅನೇಕ ಮಳಿಗೆಗಳಿಗೆ ಸುತ್ತಿದ್ದಾರೆ. ಈ ವೇಳೆ ಪ್ರಭುರಾಜ್ ಆಕೆಗೆ ಉಪಾಹಾರ ನೀಡಿದ್ದರು. ಮೊಬೈಲ್ ದುರಸ್ತಿಯ ಹಣವನ್ನೂ ಅವರೇ ಪಾವತಿಸಿದ್ದರು. ಇನ್ನಿಬ್ಬರು ಆರೋಪಿಗಳಲ್ಲಿ ಆರೋಪಿ ಮಿಥುನ್ ಪೇಂಟಿಂಗ್‌, ಚಾಲಕ ಹಾಗೂ ಎಲೆಕ್ಟ್ರಿಷಿಯನ್ ಕೆಲಸಗಳನ್ನು ಮಾಡುತ್ತಿದ್ದರು. ಮನೀಶ್ ಡೆಲಿವರಿ ಬಾಯ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಯುವತಿಯ ಪ್ರಜ್ಞೆ ತಪ್ಪಿಸಿ ಮುನ್ನೂರು ಗ್ರಾಮಕ್ಕೆ ಕರೆದೊಯ್ಯುವಾಗ ಮೂವರು ಆರೋಪಿಗಳೂ ಮದ್ಯಪಾನ ಮಾಡಿದ್ದರು. ಯುವತಿಗೂ ಮದ್ಯ ಕುಡಿಸಿದ್ದರು ಎಂದು ಪೊಲೀಸ್ ಆಯುಕ್ತರು ವಿವರಿಸಿದ್ದಾರೆ.

ವರದಿಗಳ ಪ್ರಕಾರ, ಆರೋಪಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 126 (ಬಲವಂತದಿಂದ ಬಂಧನದಲ್ಲಿರಿಸುವುದು), ಸೆಕ್ಷನ್ 140 (2) (ಬಲವಂತದಿಂದ ಅಪಹರಣ ನಡೆಸುವುದು), 352 (ಶಾಂತಿಭಂಗವನ್ನುಂಟುಮಾಡುವುದು), ಸೆಕ್ಷನ್ 351 (1) ( ಕ್ರಿಮಿನಲ್ ಬೆದರಿಕೆ ಒಡ್ಡುವುದು) 115 (2) (ಹಲ್ಲೆನಡೆಸುವುದು), ಸೆಕ್ಷನ್‌ 64 (ಅತ್ಯಾಚಾರ ನಡೆಸುವುದು), ಸೆಕ್ಷನ್ 309 (6) (ಬೆದರಿಸಿ ಸುಲಿಗೆ ಮಾಡುವುದು), ಸೆಕ್ಷನ್‌ 70 (ಸಾಮೂಹಿಕ ಅತ್ಯಾಚಾರ) ಹಾಗೂ ಸೆಕ್ಷನ್ 3 (5)ರ (ಕೂಟ ರಚಿಸಿಕೊಂಡು ಕ್ರಿಮಿನಲ್ ಕೃತ್ಯ ನಡೆಸುವುದು) ಅಡಿ ಎಫ್‌ಐಆರ್ ದಾಖಲಾಗಿದೆ.

ಜಾತಿಗಣತಿ ಕುರಿತ ಸಚಿವ ಸಂಪುಟ ಸಭೆ ‘ಅಪೂರ್ಣ, ಆದರೆ ಸೌಹಾರ್ದಯುತ’: ಎಚ್.ಕೆ.ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...