Homeಕರ್ನಾಟಕಮಂಗಳೂರು| ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಶಂಕೆ: ಮೂವರ ಬಂಧನ

ಮಂಗಳೂರು| ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಶಂಕೆ: ಮೂವರ ಬಂಧನ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುನ್ನೂರು ಗ್ರಾಮದ ನೇತ್ರಾವತಿ ನದಿ ಕಿನಾರೆಯಲ್ಲಿ ಪಶ್ಚಿಮ ಬಂಗಾಳದ ಯುವತಿ ಮೇಲೆ ಬುಧವಾರ (ಏ.16) ರಾತ್ರಿ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಗುರುವಾರ (ಏ.17) ಬಂಧಿಸಿದ್ದಾರೆ.

“ಗುರುವಾರ ನಸುಕಿನಲ್ಲಿ ನೀರು ಕೇಳುತ್ತಾ ಯುವತಿ ಮುನ್ನೂರು ಗ್ರಾಮದ ಮನೆಯೊಂದರ ಬಾಗಿಲು ಬಡಿದಿದ್ದರು. ಮೈತುಂಬ ಗಾಯಗೊಂಡಿದ್ದ ಆಕೆಗೆ ಸ್ವಲ್ಪ ಹೊತ್ತಿನಲ್ಲಿ ಪ್ರಜ್ಞೆ ತಪ್ಪಿತ್ತು. ಚಿಕಿತ್ಸೆ ಬಳಿಕ ಪೊಲೀಸರಿಗೆ ಹೇಳಿಕೆ ನೀಡಿರುವ ಯುವತಿ, ರಿಕ್ಷಾ ಚಾಲಕನೊಬ್ಬ ಆಹಾರದಲ್ಲಿ ಮತ್ತು ಬರುವ ಪದಾರ್ಥ ಸೇರಿಸಿ ತನ್ನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಇನ್ನಿಬ್ಬರು ಸ್ನೇಹಿತರ ಜೊತೆ ಸೇರಿ ಕಾರಿನಲ್ಲಿ ಅತ್ಯಾಚಾರ ನಡೆಸಿರುವ ಶಂಕೆ ಇದೆ ಎಂದು ತಿಳಿಸಿದ್ದಾರೆ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ರಿಕ್ಷಾ ಚಾಲಕನಾಗಿರುವ ಮೂಲ್ಕಿ ಕಾರ್ನಾಡು ನಿವಾಸಿ ಪ್ರಭುರಾಜ್ (38), ಕೋಟೆಕಾರು ಕುಂಪಲದ ಚಿತ್ರಾಂಜಲಿನಗರದ ನಿವಾಸಿ ಮಿಥುನ್ (37) ಹಾಗೂ ಮಂಗಳೂರಿನ ಪಡೀಲ್ ಕೋಡಕ್ಕಲ್ ನಿವಾಸಿ ಮನೀಶ್ (30) ಅವರನ್ನು ಬಂಧಿಸಲಾಗಿದೆ ಎಂದು ಅನುಪಮ್ ಅಗ್ರವಾಲ್ ಮಾಹಿತಿ ನೀಡಿದ್ದಾರೆ.

“ಪಶ್ಚಿಮ ಬಂಗಾಳದ ಕೂಚ್‌ಬಿಹಾರ್‌ ಮೂಲದ ಸುಮಾರು 20 ವರ್ಷ ಪ್ರಾಯದ ಯುವತಿ, ಕೇರಳದ ಪ್ಲೈವುಡ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಹೊಸ ಕೆಲಸ ಹುಡುಕುದಕ್ಕಾಗಿ ಗೆಳೆಯನ ಜೊತೆ ಮಂಗಳೂರಿಗೆ ಬಂದಿದ್ದರು. ಮಂಗಳೂರಲ್ಲಿ ಇಬ್ಬರ ನಡುವೆ ಜಗಳವಾಗಿತ್ತು. ಈ ವೇಳೆ ಯುವತಿಯ ಮೊಬೈಲ್ ಹಾನಿಗೊಂಡಿತ್ತು. ಅದನ್ನು ರಿಪೇರಿ ಮಾಡಿಸಲು ರಿಕ್ಷಾ ಹತ್ತಿದ ಯುವತಿ, ಮೊಬೈಲ್ ರಿಪೇರಿ ಆದ ಬಳಿಕ ಪಶ್ಚಿಮ ಬಂಗಾಳದ ರೈಲು ಹತ್ತಲು ತನ್ನನ್ನು ಸಮೀಪದ ರೈಲು ನಿಲ್ಧಾಣಕ್ಕೆ ಬಿಡುವಂತೆ ರಿಕ್ಷಾ ಚಾಲಕನಲ್ಲಿ ಕೋರಿದ್ದರು” ಎಂದು ಅಗ್ರವಾಲ್ ಹೇಳಿದ್ದಾರೆ.

“ಯುವತಿ ಗುರುವಾರ ನಸುಕಿನಲ್ಲಿ ಮುನ್ನೂರು ಗ್ರಾಮದ ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ತೀರ ಸಮೀಪದ ಮನೆಯೊಂದರ ಬಾಗಿಲು ಬಡಿದು ನೀರು ಕೇಳಿದ್ದರು. ಮನೆಯವರು ಬಾಗಿಲು ತೆಗೆದ ಸ್ವಲ್ಪ ಹೊತ್ತಿನಲ್ಲೇ ಆಕೆ ಪ್ರಜ್ಞೆ ತಪ್ಪಿದ್ದರು. ಈ ವೇಳೆ ಮನೆಯವರು ಪೊಲೀಸ್ ಸಹಾಯವಾಣಿಗೆ (112) ಕರೆ ಮಾಡಿ ವಿಷಯ ತಿಳಿಸಿದ್ದರು. ಸ್ವಲ್ಪ ಹೊತ್ತಿನಲ್ಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂತ್ರಸ್ತ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ”

“ರಿಕ್ಷಾ ಚಾಲಕ ಆಹಾರದಲ್ಲಿ ಮತ್ತು ಬರುವ ಪದಾರ್ಥ ಬೆರೆಸಿದ್ದರಿಂದ ಪ್ರಜ್ಞೆ ಕಳೆದುಕೊಂಡಿದ್ದೆ. ಪ್ರಜ್ಞೆ ಮರಳಿದಾಗ ಕಾರೊಂದರಲ್ಲಿ ರಿಕ್ಷಾ ಚಾಲಕ ಸೇರಿ ಮೂವರು ಯುವಕರ ಜೊತೆ ಇದ್ದೆ. ಕಿರುಚಾಡಿದಾಗ ಅವರು ನನ್ನನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದರು. ನಾನು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಮೂವರು ಸೇರಿ ನನ್ನ ಮೇಲೆ ಅತ್ಯಾಚಾರ ನಡೆಸಿರಬಹುದು” ಎಂದು ಯುವತಿ ಹೇಳಿಕೆ ನೀಡಿದ್ದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಯುವತಿ ನೀಡಿದ ಹೇಳಿಕೆ ಆಧರಿಸಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಆಕೆಯ ಮೇಲೆ ಅತ್ಯಾಚಾರ ನಡೆದಿದೆಯೇ?..ಇಲ್ಲವೇ? ಎಂಬುವುದು ವೈದ್ಯಕೀಯ ಪರೀಕ್ಷೆಯ ವರದಿ ಬಂದ ಬಳಿಕ ತಿಳಿಯಲಿದೆ ಎಂದು ಅನುಪಮ್ ಅಗ್ರವಾಲ್ ಹೇಳಿದ್ದಾರೆ.

ಬಂಧಿತರ ಪೈಕಿ ಪ್ರಭುರಾಜ್ 10 ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಆಟೋ ಚಾಲಕರಾಗಿದ್ದಾರೆ. ಆತ ಬುಧವಾರ ಮಧ್ಯಾಹ್ನ 2.30ರಿಂದಲೇ ಯುವತಿ ಜೊತೆಗಿದ್ದರು. ಮೊಬೈಲ್‌ ದುರಸ್ತಿಗಾಗಿ ಆತನ ಜೊತೆ ಯುವತಿ ಅನೇಕ ಮಳಿಗೆಗಳಿಗೆ ಸುತ್ತಿದ್ದಾರೆ. ಈ ವೇಳೆ ಪ್ರಭುರಾಜ್ ಆಕೆಗೆ ಉಪಾಹಾರ ನೀಡಿದ್ದರು. ಮೊಬೈಲ್ ದುರಸ್ತಿಯ ಹಣವನ್ನೂ ಅವರೇ ಪಾವತಿಸಿದ್ದರು. ಇನ್ನಿಬ್ಬರು ಆರೋಪಿಗಳಲ್ಲಿ ಆರೋಪಿ ಮಿಥುನ್ ಪೇಂಟಿಂಗ್‌, ಚಾಲಕ ಹಾಗೂ ಎಲೆಕ್ಟ್ರಿಷಿಯನ್ ಕೆಲಸಗಳನ್ನು ಮಾಡುತ್ತಿದ್ದರು. ಮನೀಶ್ ಡೆಲಿವರಿ ಬಾಯ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಯುವತಿಯ ಪ್ರಜ್ಞೆ ತಪ್ಪಿಸಿ ಮುನ್ನೂರು ಗ್ರಾಮಕ್ಕೆ ಕರೆದೊಯ್ಯುವಾಗ ಮೂವರು ಆರೋಪಿಗಳೂ ಮದ್ಯಪಾನ ಮಾಡಿದ್ದರು. ಯುವತಿಗೂ ಮದ್ಯ ಕುಡಿಸಿದ್ದರು ಎಂದು ಪೊಲೀಸ್ ಆಯುಕ್ತರು ವಿವರಿಸಿದ್ದಾರೆ.

ವರದಿಗಳ ಪ್ರಕಾರ, ಆರೋಪಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 126 (ಬಲವಂತದಿಂದ ಬಂಧನದಲ್ಲಿರಿಸುವುದು), ಸೆಕ್ಷನ್ 140 (2) (ಬಲವಂತದಿಂದ ಅಪಹರಣ ನಡೆಸುವುದು), 352 (ಶಾಂತಿಭಂಗವನ್ನುಂಟುಮಾಡುವುದು), ಸೆಕ್ಷನ್ 351 (1) ( ಕ್ರಿಮಿನಲ್ ಬೆದರಿಕೆ ಒಡ್ಡುವುದು) 115 (2) (ಹಲ್ಲೆನಡೆಸುವುದು), ಸೆಕ್ಷನ್‌ 64 (ಅತ್ಯಾಚಾರ ನಡೆಸುವುದು), ಸೆಕ್ಷನ್ 309 (6) (ಬೆದರಿಸಿ ಸುಲಿಗೆ ಮಾಡುವುದು), ಸೆಕ್ಷನ್‌ 70 (ಸಾಮೂಹಿಕ ಅತ್ಯಾಚಾರ) ಹಾಗೂ ಸೆಕ್ಷನ್ 3 (5)ರ (ಕೂಟ ರಚಿಸಿಕೊಂಡು ಕ್ರಿಮಿನಲ್ ಕೃತ್ಯ ನಡೆಸುವುದು) ಅಡಿ ಎಫ್‌ಐಆರ್ ದಾಖಲಾಗಿದೆ.

ಜಾತಿಗಣತಿ ಕುರಿತ ಸಚಿವ ಸಂಪುಟ ಸಭೆ ‘ಅಪೂರ್ಣ, ಆದರೆ ಸೌಹಾರ್ದಯುತ’: ಎಚ್.ಕೆ.ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...