Homeಕರ್ನಾಟಕಮಂಗಳೂರು | ದುಷ್ಕರ್ಮಿಗಳಿಂದ ಯುವಕರ ಮೇಲೆ ತಲವಾರು ದಾಳಿ, ಒಬ್ಬ ಸಾವು

ಮಂಗಳೂರು | ದುಷ್ಕರ್ಮಿಗಳಿಂದ ಯುವಕರ ಮೇಲೆ ತಲವಾರು ದಾಳಿ, ಒಬ್ಬ ಸಾವು

- Advertisement -
- Advertisement -

ಇತ್ತಿಚೆಗಷ್ಟೆ ಕೋಮು ಘಟನೆಗೆ ನಲುಗಿ ಹೋಗಿದ್ದ ದಕ್ಷಿಣ ಕನ್ನಡದಲ್ಲಿ ಮಂಗಳವಾರ ಅಪರಾಹ್ನ ಮತ್ತೊಂದು ಯುವಕನ ಕೊಲೆ ನಡೆದಿದ್ದು, ನಾಗರಿಕರನ್ನು ಆತಂಕ ಮೂಡಿಸಿದೆ. ಜಿಲ್ಲೆಯ ಬಂಟ್ವಾಳ ಬಳಿಯ ಕೊಲ್ತಮಜಲು ಎಂಬಲ್ಲಿ ದುಷ್ಕರ್ಮಿಗಳ ತಂಡವೊಂದು ಪಿಕ್‌ಅಪ್ ವಾಹನದಲ್ಲಿದ್ದ ಇಬ್ಬರ ಮೇಲೆ ತಲವಾರು ದಾಳಿ ನಡಸಿದ್ದು, ಈ ವೇಳೆ ಒಬ್ಬ ಯುವಕ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಂಗಳೂರು | ದುಷ್ಕರ್ಮಿಗಳಿಂದ

ಘಟನೆಯಲ್ಲಿ ಮೃತಪಟ್ಟವರನ್ನು‌ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದ್ದು, ಗಾಯಗೊಂಡ ಯುವಕ ಕಲಂದರ್ ಶಾಫಿ ಎಂದು ತಿಳಿದು ಬಂದಿದೆ. ಇಬ್ಬರು ಯುವಕರ ಕೊಲ್ತಮಜಲು ಬಳಿ ಪಿಕ್‌ಅಪ್ ವಾಹನದಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ತಲವಾರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಘಟನೆಯ ಬಗ್ಗೆ ನಾಗರಿಕರು ಸೇರಿದಂತೆ ಜನಪರ ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಇದಕ್ಕೆಲ್ಲಾ ಕಾರಣ ರಾಜ್ಯದ ಸರ್ಕಾರ ಮತ್ತು ಜಿಲ್ಲೆಯ ಪೊಲೀಸರ ನಿಷ್ಕ್ರಿಯತೆ ಎಂದು ಆರೋಪಿಸಿದ್ದಾರೆ.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ, ಹೋರಾಟಗಾರ ಮುನೀರ್ ಕಾಟಿಪಳ್ಳ ಪ್ರತಿಕ್ರಿಯಿಸಿ, “ಮಂಗಳೂರಿನ ಹೊರ ವಲಯದಲ್ಲಿ ಮತ್ತೊಂದು ಯುವಕನ ಕೊಲೆಯಾಗಿದೆ. ದುಡಿಮೆಗೆ ಹೊರಟಿದ್ದ ಅಮಾಯಕ ಪಿಕಪ್ ಚಾಲಕ ಕತ್ತಿಯೇಟಿಗೆ ಬಲಿಯಾಗಿದ್ದಾನೆ. ಜನತೆ ಆತಂಕಗೊಂಡಿದ್ದಾರೆ. ಪ್ರತೀಕಾರದ, ದ್ವೇಷದ ಭಾಷಣಗಳು ಕರಾವಳಿಯನ್ನು ಸ್ಮಶಾನವಾಗಿಸುತ್ತಿದೆ.” ಎಂದು ಹೇಳಿದ್ದಾರೆ.

ರೌಡಿ ಸುಹಾಸ್ ಶೆಟ್ಟಿಯ ಕೊಲೆಯ ನಂತರ ಜಿಲ್ಲೆಯಲ್ಲಿ ಹಲವಾರು ಅಹಿತಕರ ಘಟನೆಗಳು ನಡೆದಿತ್ತು. ಜೊತೆಗೆ ಬಿಜೆಪಿ ನಾಯಕರು ತಮ್ಮ ಸಹ ಸಂಘಟನೆಗಳ ಜೊತೆಗೂಡಿ ನಡೆಸಿದ್ದ ಹಲವಾರು ಕಾರ್ಯಕ್ರಮಗಳಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಪ್ರಚೋದನೆ ನಡೆಸಿದ್ದರು. ಈ ಬಗ್ಗೆ ಪ್ರಕರಣ ಕೂಡಾ ದಾಖಲಾಗಿತ್ತು.

ಅಲ್ಲದೆ, ದಿನಗಳ ಹಿಂದೆಯಷ್ಟೆ ಬಿಜೆಪಿ ಪರ ಸಂಘಟನೆಗಳು ನಗರದ ಬಜ್ಪೆಯಲ್ಲಿ ರೌಡಿ ಸುಹಾಸ್ ಪರ ಸಭೆ ನಡೆಸಿದ್ದರು. ಈ ವೇಳೆ ಕೂಡಾ ದ್ವೇಷ ಭಾಷಣ ಮಾಡಲಾಗಿತ್ತು. ಅದಾಗಿ ಕೆಲವೆ ದಿನಗಳಲ್ಲಿ ಜಿಲ್ಲೆಯಲ್ಲಿ ಮತ್ತೊಂದು ಕೊಲೆ ನಡೆದಿದ್ದು ನಾಗರಿಕರಲ್ಲಿ ಆತಂಕ ಹುಟ್ಟುಹಾಕಿದೆ. ಮಂಗಳೂರು | ದುಷ್ಕರ್ಮಿಗಳಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...