Homeಕರ್ನಾಟಕಮಂಗಳೂರು | ದುಷ್ಕರ್ಮಿಗಳಿಂದ ಯುವಕರ ಮೇಲೆ ತಲವಾರು ದಾಳಿ, ಒಬ್ಬ ಸಾವು

ಮಂಗಳೂರು | ದುಷ್ಕರ್ಮಿಗಳಿಂದ ಯುವಕರ ಮೇಲೆ ತಲವಾರು ದಾಳಿ, ಒಬ್ಬ ಸಾವು

- Advertisement -
- Advertisement -

ಇತ್ತಿಚೆಗಷ್ಟೆ ಕೋಮು ಘಟನೆಗೆ ನಲುಗಿ ಹೋಗಿದ್ದ ದಕ್ಷಿಣ ಕನ್ನಡದಲ್ಲಿ ಮಂಗಳವಾರ ಅಪರಾಹ್ನ ಮತ್ತೊಂದು ಯುವಕನ ಕೊಲೆ ನಡೆದಿದ್ದು, ನಾಗರಿಕರನ್ನು ಆತಂಕ ಮೂಡಿಸಿದೆ. ಜಿಲ್ಲೆಯ ಬಂಟ್ವಾಳ ಬಳಿಯ ಕೊಲ್ತಮಜಲು ಎಂಬಲ್ಲಿ ದುಷ್ಕರ್ಮಿಗಳ ತಂಡವೊಂದು ಪಿಕ್‌ಅಪ್ ವಾಹನದಲ್ಲಿದ್ದ ಇಬ್ಬರ ಮೇಲೆ ತಲವಾರು ದಾಳಿ ನಡಸಿದ್ದು, ಈ ವೇಳೆ ಒಬ್ಬ ಯುವಕ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಂಗಳೂರು | ದುಷ್ಕರ್ಮಿಗಳಿಂದ

ಘಟನೆಯಲ್ಲಿ ಮೃತಪಟ್ಟವರನ್ನು‌ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದ್ದು, ಗಾಯಗೊಂಡ ಯುವಕ ಕಲಂದರ್ ಶಾಫಿ ಎಂದು ತಿಳಿದು ಬಂದಿದೆ. ಇಬ್ಬರು ಯುವಕರ ಕೊಲ್ತಮಜಲು ಬಳಿ ಪಿಕ್‌ಅಪ್ ವಾಹನದಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ತಲವಾರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಘಟನೆಯ ಬಗ್ಗೆ ನಾಗರಿಕರು ಸೇರಿದಂತೆ ಜನಪರ ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಇದಕ್ಕೆಲ್ಲಾ ಕಾರಣ ರಾಜ್ಯದ ಸರ್ಕಾರ ಮತ್ತು ಜಿಲ್ಲೆಯ ಪೊಲೀಸರ ನಿಷ್ಕ್ರಿಯತೆ ಎಂದು ಆರೋಪಿಸಿದ್ದಾರೆ.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ, ಹೋರಾಟಗಾರ ಮುನೀರ್ ಕಾಟಿಪಳ್ಳ ಪ್ರತಿಕ್ರಿಯಿಸಿ, “ಮಂಗಳೂರಿನ ಹೊರ ವಲಯದಲ್ಲಿ ಮತ್ತೊಂದು ಯುವಕನ ಕೊಲೆಯಾಗಿದೆ. ದುಡಿಮೆಗೆ ಹೊರಟಿದ್ದ ಅಮಾಯಕ ಪಿಕಪ್ ಚಾಲಕ ಕತ್ತಿಯೇಟಿಗೆ ಬಲಿಯಾಗಿದ್ದಾನೆ. ಜನತೆ ಆತಂಕಗೊಂಡಿದ್ದಾರೆ. ಪ್ರತೀಕಾರದ, ದ್ವೇಷದ ಭಾಷಣಗಳು ಕರಾವಳಿಯನ್ನು ಸ್ಮಶಾನವಾಗಿಸುತ್ತಿದೆ.” ಎಂದು ಹೇಳಿದ್ದಾರೆ.

ರೌಡಿ ಸುಹಾಸ್ ಶೆಟ್ಟಿಯ ಕೊಲೆಯ ನಂತರ ಜಿಲ್ಲೆಯಲ್ಲಿ ಹಲವಾರು ಅಹಿತಕರ ಘಟನೆಗಳು ನಡೆದಿತ್ತು. ಜೊತೆಗೆ ಬಿಜೆಪಿ ನಾಯಕರು ತಮ್ಮ ಸಹ ಸಂಘಟನೆಗಳ ಜೊತೆಗೂಡಿ ನಡೆಸಿದ್ದ ಹಲವಾರು ಕಾರ್ಯಕ್ರಮಗಳಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಪ್ರಚೋದನೆ ನಡೆಸಿದ್ದರು. ಈ ಬಗ್ಗೆ ಪ್ರಕರಣ ಕೂಡಾ ದಾಖಲಾಗಿತ್ತು.

ಅಲ್ಲದೆ, ದಿನಗಳ ಹಿಂದೆಯಷ್ಟೆ ಬಿಜೆಪಿ ಪರ ಸಂಘಟನೆಗಳು ನಗರದ ಬಜ್ಪೆಯಲ್ಲಿ ರೌಡಿ ಸುಹಾಸ್ ಪರ ಸಭೆ ನಡೆಸಿದ್ದರು. ಈ ವೇಳೆ ಕೂಡಾ ದ್ವೇಷ ಭಾಷಣ ಮಾಡಲಾಗಿತ್ತು. ಅದಾಗಿ ಕೆಲವೆ ದಿನಗಳಲ್ಲಿ ಜಿಲ್ಲೆಯಲ್ಲಿ ಮತ್ತೊಂದು ಕೊಲೆ ನಡೆದಿದ್ದು ನಾಗರಿಕರಲ್ಲಿ ಆತಂಕ ಹುಟ್ಟುಹಾಕಿದೆ. ಮಂಗಳೂರು | ದುಷ್ಕರ್ಮಿಗಳಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...