Homeಕರ್ನಾಟಕಮಂಗಳೂರು | ದುಷ್ಕರ್ಮಿಗಳಿಂದ ಯುವಕರ ಮೇಲೆ ತಲವಾರು ದಾಳಿ, ಒಬ್ಬ ಸಾವು

ಮಂಗಳೂರು | ದುಷ್ಕರ್ಮಿಗಳಿಂದ ಯುವಕರ ಮೇಲೆ ತಲವಾರು ದಾಳಿ, ಒಬ್ಬ ಸಾವು

- Advertisement -
- Advertisement -

ಇತ್ತಿಚೆಗಷ್ಟೆ ಕೋಮು ಘಟನೆಗೆ ನಲುಗಿ ಹೋಗಿದ್ದ ದಕ್ಷಿಣ ಕನ್ನಡದಲ್ಲಿ ಮಂಗಳವಾರ ಅಪರಾಹ್ನ ಮತ್ತೊಂದು ಯುವಕನ ಕೊಲೆ ನಡೆದಿದ್ದು, ನಾಗರಿಕರನ್ನು ಆತಂಕ ಮೂಡಿಸಿದೆ. ಜಿಲ್ಲೆಯ ಬಂಟ್ವಾಳ ಬಳಿಯ ಕೊಲ್ತಮಜಲು ಎಂಬಲ್ಲಿ ದುಷ್ಕರ್ಮಿಗಳ ತಂಡವೊಂದು ಪಿಕ್‌ಅಪ್ ವಾಹನದಲ್ಲಿದ್ದ ಇಬ್ಬರ ಮೇಲೆ ತಲವಾರು ದಾಳಿ ನಡಸಿದ್ದು, ಈ ವೇಳೆ ಒಬ್ಬ ಯುವಕ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಂಗಳೂರು | ದುಷ್ಕರ್ಮಿಗಳಿಂದ

ಘಟನೆಯಲ್ಲಿ ಮೃತಪಟ್ಟವರನ್ನು‌ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದ್ದು, ಗಾಯಗೊಂಡ ಯುವಕ ಕಲಂದರ್ ಶಾಫಿ ಎಂದು ತಿಳಿದು ಬಂದಿದೆ. ಇಬ್ಬರು ಯುವಕರ ಕೊಲ್ತಮಜಲು ಬಳಿ ಪಿಕ್‌ಅಪ್ ವಾಹನದಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ತಲವಾರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಘಟನೆಯ ಬಗ್ಗೆ ನಾಗರಿಕರು ಸೇರಿದಂತೆ ಜನಪರ ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಇದಕ್ಕೆಲ್ಲಾ ಕಾರಣ ರಾಜ್ಯದ ಸರ್ಕಾರ ಮತ್ತು ಜಿಲ್ಲೆಯ ಪೊಲೀಸರ ನಿಷ್ಕ್ರಿಯತೆ ಎಂದು ಆರೋಪಿಸಿದ್ದಾರೆ.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ, ಹೋರಾಟಗಾರ ಮುನೀರ್ ಕಾಟಿಪಳ್ಳ ಪ್ರತಿಕ್ರಿಯಿಸಿ, “ಮಂಗಳೂರಿನ ಹೊರ ವಲಯದಲ್ಲಿ ಮತ್ತೊಂದು ಯುವಕನ ಕೊಲೆಯಾಗಿದೆ. ದುಡಿಮೆಗೆ ಹೊರಟಿದ್ದ ಅಮಾಯಕ ಪಿಕಪ್ ಚಾಲಕ ಕತ್ತಿಯೇಟಿಗೆ ಬಲಿಯಾಗಿದ್ದಾನೆ. ಜನತೆ ಆತಂಕಗೊಂಡಿದ್ದಾರೆ. ಪ್ರತೀಕಾರದ, ದ್ವೇಷದ ಭಾಷಣಗಳು ಕರಾವಳಿಯನ್ನು ಸ್ಮಶಾನವಾಗಿಸುತ್ತಿದೆ.” ಎಂದು ಹೇಳಿದ್ದಾರೆ.

ರೌಡಿ ಸುಹಾಸ್ ಶೆಟ್ಟಿಯ ಕೊಲೆಯ ನಂತರ ಜಿಲ್ಲೆಯಲ್ಲಿ ಹಲವಾರು ಅಹಿತಕರ ಘಟನೆಗಳು ನಡೆದಿತ್ತು. ಜೊತೆಗೆ ಬಿಜೆಪಿ ನಾಯಕರು ತಮ್ಮ ಸಹ ಸಂಘಟನೆಗಳ ಜೊತೆಗೂಡಿ ನಡೆಸಿದ್ದ ಹಲವಾರು ಕಾರ್ಯಕ್ರಮಗಳಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಪ್ರಚೋದನೆ ನಡೆಸಿದ್ದರು. ಈ ಬಗ್ಗೆ ಪ್ರಕರಣ ಕೂಡಾ ದಾಖಲಾಗಿತ್ತು.

ಅಲ್ಲದೆ, ದಿನಗಳ ಹಿಂದೆಯಷ್ಟೆ ಬಿಜೆಪಿ ಪರ ಸಂಘಟನೆಗಳು ನಗರದ ಬಜ್ಪೆಯಲ್ಲಿ ರೌಡಿ ಸುಹಾಸ್ ಪರ ಸಭೆ ನಡೆಸಿದ್ದರು. ಈ ವೇಳೆ ಕೂಡಾ ದ್ವೇಷ ಭಾಷಣ ಮಾಡಲಾಗಿತ್ತು. ಅದಾಗಿ ಕೆಲವೆ ದಿನಗಳಲ್ಲಿ ಜಿಲ್ಲೆಯಲ್ಲಿ ಮತ್ತೊಂದು ಕೊಲೆ ನಡೆದಿದ್ದು ನಾಗರಿಕರಲ್ಲಿ ಆತಂಕ ಹುಟ್ಟುಹಾಕಿದೆ. ಮಂಗಳೂರು | ದುಷ್ಕರ್ಮಿಗಳಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...