Homeಕರ್ನಾಟಕಮಂಗಳೂರು: 'ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?': ಬಿಜೆಪಿಗೆ ಮತ ಹಾಕುವಂತೆ...

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ ಹಾಕುವಂತೆ ಆಗ್ರಹಿಸಿದ ‘ಕರಪತ್ರ’!

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ ಸಮುದಾಯದ ಪದ್ಮರಾಜ್ ಪೂಜಾರಿ ಕಣದಲ್ಲಿದ್ದಾರೆ. ಹಿಂದುತ್ವದ ಮತ್ತು ಬಿಜೆಪಿಯ ಭದ್ರಕೋಟೆ ಎನ್ನಲಾಗುತ್ತಿದ್ದ ಕರವಾಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿಗೆ ದೊಡ್ಡ ಸವಾಲು ಎದುರಾಗಿದೆ. ಬಂಟ ಸಮುದಾಯದ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಪಕ್ಷದೊಳಗಿದ್ದ ಅಸಮಾಧಾನದಿಂದ ಈ ಬಾರಿ ಅದೇ ಸಮುದಾಯಕ್ಕೆ ಸೇರಿದ ಕ್ಯಾಪ್ಟನ್ ಬ್ರಿಜೇಶ್ ಚೌಟಗೆ ಬಿಜೆಪಿ ಟಿಕೆಟ್‌ ನೀಡಲಾಗಿತ್ತು. ಆದರೆ ಕಾಂಗ್ರೆಸ್‌ ಬಿಲ್ಲವ ಸಮುದಾಯದ ಪದ್ಮರಾಜ್ ಪೂಜಾರಿ ಅವರಿಗೆ ಟಿಕೆಟ್‌ ನೀಡಿದೆ. ಇದರಿಂದಾಗಿ ಕ್ಷೇತ್ರದಲ್ಲಿ ನಿರ್ಣಾಯಕ ಮತದಾರರ ಸಂಖ್ಯೆಯನ್ನು ಹೊಂದಿರುವ ಬಿಲ್ಲವರ ಮತಗಳು ಈ ಬಾರಿ ಪದ್ಮರಾಜ್ ಪೂಜಾರಿ ಪಾಲಾಗುವ ಸಾಧ್ಯತೆ ಇದ್ದು, ಬಿಜೆಪಿಗೆ ದೊಡ್ಡ ಸವಾಲಾಗಿದೆ. ಇದರ ಬೆನ್ನಲ್ಲಿ ಬಂಟ ಬ್ರಿಗೇಡ್’ ಹೆಸರಲ್ಲಿ ಕರಪತ್ರವೊಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದು, ‘ನಮ್ಮ ಸಮುದಾಯದ ಬ್ರಿಜೇಶ್‌ ಚೌಟರನ್ನು ಗೆಲ್ಲಿಸಲು ಬಂಟ ಮತದಾರರಿಗೆ ಮನವಿ’ ಎಂಬ ಶೀರ್ಷಿಕೆಯ ಕರಪತ್ರದಲ್ಲಿ ‘ಶೂದ್ರ ವರ್ಗದ ಜನರು ನಮ್ಮನ್ನು ಆಳಲು ಹೊರಟರೆ ಅದನ್ನು ಸ್ವಾಭಿಮಾನಿಗಳಾದ ನಾವು ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’ಎಂದು ಉಲ್ಲೇಖಿಸಲಾಗಿದೆ. ಈ ಕರಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ಕರಪತ್ರದಲ್ಲಿ, ಮತವನ್ನು ದುಡ್ಡು ನೀಡಿ ಖರೀದಿಸುವ ಆವಕಾಶ ಸಿಕ್ಕರೆ, ಮತದಾರರಿಗೆ ಆಮಿಷ ಒಡ್ಡಿಯಾದರೂ ಕಾಂಗ್ರೆಸ್ಸಿಗೆ ಬೀಳುವ ಮತವನ್ನು ಬಿಜೆಪಿಗೆ ಹಾಕಿಸುವ ಕೆಲಸ ಮಾಡುವ ಮೂಲಕ ನಮ್ಮ ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕು ಎಂದು ಉಲ್ಲೇಖಿಸಲಾಗಿದೆ.

ಒಂದು ಕಾಲದಲ್ಲಿ ಗರಡಿಗಳಿಗೆ, ದೇವಸ್ಥಾನಗಳಿಗೆ ಪ್ರವೇಶವೇ ಇಲ್ಲದ ಇಂತಹ ಶೂದ್ರ ಜಾತಿಯವರು ಜನಾರ್ದನ ಪೂಜಾರಿಗೆ ಅಧಿಕಾರ ಸಿಕ್ಕ ಮೇಲೆ ನಮ್ಮ ಗರಡಿಗಳ ಮೇಲೆ, ನಮ್ಮ ದೇವಸ್ಥಾನಗಳ ಮೇಲೆ ಯಾವ ರೀತಿಯ ಪಾರಮ್ಯ ಮೆರೆದು ದೇವಸ್ಥಾನಗಳಿಗೆ ಪ್ರವೇಶವನ್ನು ಗಿಟ್ಟಿಸಿಕೊಂಡಿದ್ದಾರೆ ಎನ್ನುವ ಬಗ್ಗೆ ಪೀಳಿಗೆಗೆ ತಿಳಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದು ಕೂಡ ಉಲ್ಲೇಖಿಸಲಾಗಿದೆ.

ಕರಪತ್ರದ ವಿಶೇಷ ಸೂಚನೆಯಲ್ಲಿ ನಮ್ಮ ಸಮುದಾಯಕ್ಕೆ ಮಾತ್ರ ನೀಡಬೇಕು ಎಂದು ಉಲ್ಲೇಖಿಸಲಾಗಿದ್ದು, ಕೊನೆಗೆ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಬಂಟ ಬ್ರಿಗೇಡ್‌ ದಕ್ಷಿಣ ಕನ್ನಡ ಮಂಗಳೂರು ಎಂದು ಬರೆಯಲಾಗಿದೆ.

ವೈರಲ್‌ ಆದ ಕರಪತ್ರದಲ್ಲಿ ಏನೇನಿದೆ?

ಪ್ರೀತಿಯ ಸ್ವಜಾತಿ ಬಾಂಧವರೇ, ಚುನಾವಣೆಯ ಅಂತಿಮ ಘಟ್ಟದಲ್ಲಿ ನಾವಿದ್ದೇವೆ. ನಮ್ಮ ಸಮಾಜಕ್ಕೆ ಸೇರಿದ ಬ್ರಿಜೇಶ್ ಚೌಟರವರು ಭಾರತೀಯ ಜನತಾ ಪಕ್ಷದಿಂದ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಎದುರಾಳಿಯಾಗಿದ್ದಾರೆ. ಒಂದು ಕಾಲದಲ್ಲಿ ಬಂಟ ನಾಯಕರನ್ನು ಮೂಲೆಗೆ ಸರಿಸಿ ಬಿಲ್ಲವರು ಮೆರೆದಾಡಿದ್ದ ಕ್ಷೇತ್ರ ನಂತರದ ದಿನದಲ್ಲಿ ನಮ್ಮ ಬಂಟರ ತೆಕ್ಕೆಗೆ ಬಂದಿದೆ. ನಳಿನ್ ಕುಮಾರ್ ಕಟೀಲ್ ಸತತ ಮೂರು ಬಾರಿ ಗೆಲ್ಲುವ ಮೂಲಕ ನಾವು ನಮ್ಮ ಒಗ್ಗಟ್ಟನ್ನು ಸಾಬೀತುಪಡಿಸಿದ್ದೇವೆ.

ಆದರೆ ಒಂದು ಕಾಲದಲ್ಲಿ ನಮ್ಮ ಒಕ್ಕಲಿನಲ್ಲಿದ್ದ ಬಿಲ್ಲವರು, ಜನಾರ್ದನ ಪೂಜಾರಿಯವರು ಸಂಸದರಾದ ನಂತರ ದೊಡ್ಡ ದೊಡ್ಡ ಉದ್ಯಮದಲ್ಲಿ ತೊಡಗಿಸಿಕೊಂಡು ಊರಿಗೆ, ಜಿಲ್ಲೆಗೆ, ಪರ ಊರಿನಲ್ಲಿ ಪ್ರಭಾವಿಯಾಗಿದ್ದ ನಮ್ಮ ಸಮಾಜದವರ ಪ್ರಭಾವವನ್ನು ತಗ್ಗಿಸಿ ಮೆರೆದಾಡತೊಡಗಿದ್ದರು. ಇಂತಹ ಶೂದ್ರ ವರ್ಗದ ಜನರು ನಮ್ಮನ್ನು ಆಳಲು ಹೊರಟರೆ ಅದನ್ನು ಸ್ವಾಭಿಮಾನಿಗಳಾದ ನಾವು ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ? ಎನ್ನುವ ಪ್ರಶ್ನೆ ನಮ್ಮನ್ನು ಕಾಡುತ್ತಿದೆ. ಸೇಂದಿ ತೆಗೆದು, ಕೂಲಿ ನಾಲಿ ಮಾಡಿಕೊಂಡು ಬದುಕುತ್ತಿದ್ದವರು. ಇಂದು ನಮ್ಮ ಮೇಲೆ ಅಧಿಕಾರವನ್ನು ಚಲಾಯಿಸಲು ಹೊರಟರೆ ಅವರ ಕೈಕೆಳಗೆ ಬಾಳುವುದಕ್ಕೆ ನಮಗೆ ಸಾಧ್ಯವಿದೆಯೇ ಎನ್ನುವುದನ್ನು ಸ್ವಾಭಿಮಾನಿಗಳಾದ ನಾವು ಆತ್ಮವಿಮರ್ಶೆ ಮಾಡಿಕೊಳ್ಳಬೇಕಾಗಿದೆ. ಜನಾರ್ದನ ಪೂಜಾರಿಯ ನಂತರ ಮತ್ತೊಮ್ಮೆ ಅವರ ಶಿಷ್ಯನಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ಮೂಲಕ ನಮ್ಮ ಬಂಟ ಸಮಾಜಕ್ಕೆ ಸವಾಲನ್ನು ಎಸೆದಿದೆ. ಈ ಸವಾಲನ್ನು ನಾವು ಸ್ವೀಕರಿಸುವ ಮೂಲಕ ನಮ್ಮ ಸಮಾಜಕ್ಕೆ ಸೇರಿದ ಬ್ರಿಜೇಶ್ ಚೌಟರನ್ನು ಲಕ್ಷ ಲಕ್ಷ ಬಹುಮತದಿಂದ ಗೆಲ್ಲಿಸುವುದಕ್ಕೆ ರಾತ್ರಿ ಹಗಲೆನ್ನದೆ ದುಡಿಯಬೇಕಾಗಿದೆ

ಒಂದು ವೇಳೆ ಶೂದ್ರ ವರ್ಗಕ್ಕೆ ಸೇರಿದವ ಗೆದ್ದು ಬಂದರೆ ಮುಂದಿನ ದಿನದಲ್ಲಿ ಇತರ ಶೂದ್ರ ವರ್ಗಕ್ಕೆ ಸೇರಿದವರು ಗೌಡರು, ಕುಲಾಲ್, ಕೊಟ್ಟಾರಿ, ಗಾಣಿಗ, ಭಂಡಾರಿ, ನಾಯ್ಕ, ಎಸ್ಸಿ-ಎಸ್ಟಿಗಳು ಒಗ್ಗಟ್ಟಾಗಿ ನಮ್ಮನ್ನು ಆಳಲು ಹೊರಟರೆ, ಬೇರೆ ಬೇರೆ ಚುನಾವಣೆಗಳಲ್ಲಿ ಸ್ಪರ್ಧಿಸಿ ನಮ್ಮವರನ್ನು ಮೂಲೆಗುಂಪು ಮಾಡಿದರೆ ಅದನ್ನು ನಮಗೆ ಸಹಿಸುವುದಕ್ಕೆ ಸಾಧ್ಯವಿದೆಯೇ? ಊರಿಗೆ ಪಟೇಲರಾಗಿ ವಿವಿಧ ಸ್ಥರಗಳಲ್ಲಿ ಜನಪ್ರತಿನಿಧಿಗಳಾಗಿ ಮೆರೆದಿದ್ದ ನಮ್ಮ ಸಮಾಜ ಇಂತಹ ಸಮಾಜದ ಶೂದ್ರರ ಮುಂದೆ ಕೈಕಟ್ಟಿಕೊಂಡು ನಿಲ್ಲಬೇಕೆ?

ಒಂದು ಕಾಲದಲ್ಲಿ ಗರಡಿಗಳಿಗೆ, ದೇವಸ್ಥಾನಗಳಿಗೆ ಪ್ರವೇಶವೇ ಇಲ್ಲದ ಇಂತಹ ಶೂದ್ರ ಜಾತಿಯವರು ಜನಾರ್ದನ ಪೂಜಾರಿಗೆ ಅಧಿಕಾರ ಸಿಕ್ಕ ಮೇಲೆ ನಮ್ಮ ಗರಡಿಗಳ ಮೇಲೆ, ನಮ್ಮ ದೇವಸ್ಥಾನಗಳ ಮೇಲೆ ಯಾವ ರೀತಿಯ ಪಾರಮ್ಯ ಮೆರೆದು ದೇವಸ್ಥಾನಗಳಿಗೆ ಪ್ರವೇಶವನ್ನು ಗಿಟ್ಟಿಸಿಕೊಂಡಿದ್ದಾರೆ ಎನ್ನುವ ಸತ್ಯವನ್ನು ನಾವು ನಮ್ಮ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವನ್ನು ಮಾಡಬೇಕಾಗಿದೆ. ಜನಾರ್ದನ ಪೂಜಾರಿ ಗೆದ್ದ ನಂತರದ ಪರಿಸ್ಥಿತಿ ಅವರ ಶಿಷ್ಯ ಗೆದ್ದ ನಂತರ ನಮಗೆ ಬಾರದಿರಲಿ ಎನ್ನುವುದಾದರೆ ನಮ್ಮ ಸಮಾಜದ ಸೈನಿಕ ಬ್ರಿಜೇಶ್ ಚೌಟ ಗೆಲ್ಲಲೇಬೇಕು.

ಸತ್ಯಜಿತ್ ಸುರತ್ಕಲ್, ಬಿರುವೆರ್ ಕುಡ್ಲದ ಉದಯ ಪೂಜಾರಿ ಬಲ್ಲಾಲ್ ಭಾಗ್ ಇಂತಹವರು ವಿವಿಧ ಸಂಘಟನೆಗಳನ್ನು ಕಟ್ಟಿಕೊಂಡು ನಮ್ಮವರಿಗೆ ಯಾವ ರೀತಿಯಲ್ಲಿ ಮಗ್ಗುಲ ಮುಳ್ಳಾಗಿದ್ದಾರೆ ಎನ್ನುವುದನ್ನು ನಾವು ಮರೆಯಲಾಗುತ್ತದೆಯೇ?

ನಮ್ಮ ಸಮಾಜದ ಒಬ್ಬ ಯುವಕನನ್ನು ಗೆಲ್ಲಿಸುವುದಕ್ಕೆ ಬೇರೆ ಬೇರೆ ರೀತಿಯಲ್ಲಿ ನಮ್ಮ ಸಮಾಜದ ಹಿರಿಯರ ಸೂಚನೆಯಂತೆ ಕೆಲಸ ಮಾಡಲಾಗಿದೆ. ನಮ್ಮ ಅಭ್ಯರ್ಥಿಯಾದ ಚೌಟರಿಗೆ ದೊಡ್ಡ ಮೊತ್ತದ ಹಣದ ನೆರವನ್ನು ಕೂಡ ನೀಡಲಾಗಿದೆ. ಇದು ಸಾಲದು. ನಮ್ಮ ಕೃಷಿ ಕಾರ್ಯದಲ್ಲಿ, ನಮ್ಮ ಮನೆಯ ಕೂಲಿ ಕೆಲಸದಲ್ಲಿ, ನಮ್ಮ ಉದ್ಯಮಗಳಲ್ಲಿ, ನಮ್ಮಲ್ಲಿ ಒಕ್ಕಲು ಇರುವವರನ್ನು ನಮ್ಮ ಪ್ರಭಾವವನ್ನು ಬಳಸಿಕೊಂಡು ಚೌಟರಿಗೆ ಮತದಾನ ಮಾಡಿಸುವ ದೊಡ್ಡ ಜವಾಬ್ದಾರಿಯನ್ನು ನಮ್ಮ ಸಮಾಜದವರು ನಿರ್ವಹಣೆ ಮಾಡಿ, ಶೂದ್ರನೊಬ್ಬ ನಮ್ಮನ್ನು ಆಳದಂತೆ ಎಚ್ಚರಿಕೆಯ ಹೆಜ್ಜೆ ಇಡಬೇಕಾಗಿದೆ.

ನಿಮ್ಮ ವಾರ್ಡ್, ಗ್ರಾಮ ವ್ಯಾಪ್ತಿಯಲ್ಲಿ ಮತವನ್ನು ದುಡ್ಡು ನೀಡಿ ಖರೀದಿಸುವ ಆವಕಾಶ ಸಿಕ್ಕರೆ, ಮತದಾರರಿಗೆ ಆಮಿಷ ಒಡ್ಡಿಯಾದರೂ ಕಾಂಗ್ರೆಸ್ಸಿಗೆ ಬೀಳುವ ಮತವನ್ನು ಬಿಜೆಪಿಗೆ ಹಾಕಿಸುವ ಕೆಲಸ ಮಾಡುವ ಮೂಲಕ ನಮ್ಮ ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿ ತಮ್ಮಲ್ಲಿ ಕಳಕಳಿಯ ವಿನಂತಿಯನ್ನು ಮಾಡುತ್ತಿದ್ದೇವೆ. ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿ ತಮ್ಮಲ್ಲಿ ಕಳಕಳಿಯ ವಿನಂತಿಯನ್ನು ಮಾಡುತ್ತಿದ್ದೇವೆ ಎಂದು ಕರಪತ್ರದಲ್ಲಿ ಬರೆಯಲಾಗಿದೆ.

ಇದನ್ನು ಓದಿ: 2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Nange yaw rithiya desha bhaktha pradani sikkidru… Namma e silly buddi bidadidre… Uddara illa…vnammolage heege ide… Innu Muslim navru yenadru madidre thappu helthiri… Yentha cheap mentality marre Karapatra maadiddu…yentha raajamanetganalla aalvike yella helike shoodra varga yella helike…just prabapranhithvakke bembala needi… Olle nayakannu gouravisi… Adu bittu shoodra bhanta yen nimdu.. useless things

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...