Homeಕರ್ನಾಟಕಮಂಗಳೂರು ಮಹಾನಗರ ಪಾಲಿಕೆ ಗದ್ದುಗೆಗಾಗಿ ಸಮಬಲದ ಗುದ್ದಾಟ!

ಮಂಗಳೂರು ಮಹಾನಗರ ಪಾಲಿಕೆ ಗದ್ದುಗೆಗಾಗಿ ಸಮಬಲದ ಗುದ್ದಾಟ!

- Advertisement -
- Advertisement -

| ಶುದ್ದೋದನ |

ಕರಾವಳಿಯ ಅವಳಿ ಜಿಲ್ಲೆಯಲ್ಲೀಗ ಪ್ರಳಯಾಂತಕ ಮಳೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯದೇ ಸುದ್ದಿ-ಸದ್ದು. ನವೆಂಬರ್ 12ರಂದು ನಡೆಯಲಿರುವ ಕಾರ್ಪೊರೇಷನ್ ಕದನಾಂಗಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುಖಾಮುಖಿ ನಿಂತು ಸೆಡ್ಡುಹೊಡೆಯುತ್ತಿವೆ ಅಸೆಂಬ್ಲಿ ಮತ್ತು ಪಾರ್ಲಿಮೆಂಟ್ ಚುನಾವಣೆಯಲ್ಲಿ ಧರ್ಮ ಸೂಕ್ಷ್ಮದ ದಾಳಗಳುರುಳಿಸಿ ದಿಗ್ವಿಜಯ ಸಾಧಿಸಿರುವ ಕೇಸರಿ ಕೋಟೆಯಲ್ಲೀಗ ಮೊದಲಿನ ಖದರು ಉಳಿದಿಲ್ಲ.

ಜನರ ಹತಾಶೆ, ಮಂಗಳೂರು ಮಹಾನಗರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಬಲದ ಸೆಣಸಾಟ ನಡೆಯುವುದು ಖಾತ್ರಿಪಡಿಸಿದೆ! ಇತ್ತೀಚಿನ ವರ್ಷದಲ್ಲಿ ಕಾರ್ಪೊರೇಷನ್ ಏರಿಯಾದಲ್ಲಿ ಕೇಸರಿ ಪರಿವಾರದ ಕರಾಮತ್ತು ಜೋರಾಗಿದ್ದರೂ ಕಾಂಗ್ರೆಸ್ ತೀರ ದುರ್ಬಲವಾಗೇನೂ ಇಲ್ಲ. ವಾರ್ಡ್‍ಗಳ ಮೀಸಲಾತಿ ಬದಲಾಗಿರೋದ್ರಿಂದ ಹೊಸ ಮುಖಗಳು ಸ್ಪರ್ಧೆಗೆ ಇಳಿಯಬೇಕಾಗಿದೆ. ಇದು ಕಾಂಗ್ರೆಸ್‍ಗೆ ಆಡಳಿತ ವಿರೋಧಿ ಅಲೆ ದೊಡ್ಡಮಟ್ಟದಲ್ಲಿ ಬಾಧಿಸದಂತೆ ತಡೆಯಲಿದೆ. ಕಳೆದೈದು ವರ್ಷದ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಅಭಿವೃದ್ಧಿ ಕೆಲಸಗಳು ಸಾಕಷ್ಟು ಆಗಿವೆ. ಹಾಗಾಗಿ ಮತದಾರರಿಗೆ ಕಾಂಗ್ರೆಸ್ ಮೇಲೆ ಅಂಥ ತಿರಸ್ಕಾರವೇನಿದ್ದಂತೆ ಕಾಣಿಸುತ್ತಿಲ್ಲ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎರಡೂ ವಿಧಾನಸಭಾ ಕ್ಷೇತ್ರಗಳು ಬಿಜೆಪಿ ತೆಕ್ಕೆಯಲ್ಲಿದೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 38 ವಾರ್ಡುಗಳಿದ್ದರೆ, ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 22 ವಾರ್ಡುಗಳು ಬರುತ್ತವೆ. ಇಲ್ಲೆಲ್ಲ ಬಿಜೆಪಿ ಪರಿವಾರದ ಬೇರುಗಳು ತೀರಾ ಆಳಕ್ಕೆ ಇಳಿದಿರುವುದರಿಂದ ಪಾಲಿಕೆ ಪಾರುಪತ್ಯ ವಶವಾಗಲಿದೆಯೆಂಬ ಲೆಕ್ಕಾಚಾರ ಸ್ಥಳೀಯ ಸಂಸದನೂ ರಾಜ್ಯ ಬಿಜೆಪಿ ಅಧ್ಯಕ್ಷನೂ ಆಗಿರುವ ನಳಿನ್‍ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್ ಮತ್ತು ಶಾಸಕ ಭರತ್ ಶೆಟ್ಟಿ ಬಳಗ ಹಾಕಿಕುಂತಿದೆ!

ಆದರೆ ರಾಜಕೀಯ ಸಮೀಕರಣದ ವಾಸ್ತವ ಅಷ್ಟು ಸರಳವಾಗಿಲ್ಲ. ಎತ್ತಿಂದೆತ್ತ ಕಳೆದು ಕೂಡಿಸಿ ತಾಳೆ ನೋಡಿದರೂ ಮೂರ್ನಾಲ್ಕು ಸೀಟುಗಳ ಅಂತರದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಗದ್ದುಗೆಯೇರಲಿದೆ ಎಂಬ ಅಂದಾಜು ಸಿಗುತ್ತದೆ. 1984ರಲ್ಲಿ ಮನಪಾ ಅಸ್ತಿತ್ವಕ್ಕೆ ಬಂದನಂತರ ಒಂದೇ ಒಂದು ಬಾರಿ (2007ರಲ್ಲಿ) ಮಾತ್ರ ಬಿಜೆಪಿ ಅಧಿಕಾರ ಪಡೆದಿತ್ತು. ಪಾಲಿಕೆ ಸರಹದ್ದಿನ ಶಾಸಕ-ಸಂಸದ ಸ್ಥಾನ ಕೈಲಿದ್ದರೂ ಬಿಜೆಪಿಗೆ ಪಾಲಿಕೆ ಆಡಳಿತ ದಕ್ಕಿಸಿಕೊಳ್ಳಲಾಗಿರಲಿಲ್ಲ. ಆಗೆಲ್ಲ ಕಾಂಗ್ರೆಸ್‍ನಲ್ಲಿ ಮಾಜಿ ಕೇಂದ್ರಮಂತ್ರಿ ಜನಾರ್ದನ ಪೂಜಾರಿ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಮತ್ತು ಎಐಸಿಸಿ ಮಾಜಿ ಜನರಲ್ ಸೆಕ್ರೆಟರಿ ಆಸ್ಕರ್ ಫರ್ನಾಂಡಿಸ್‍ರ ಮೇಲಾಟದ ಯಜಮಾನಿಕೆ ನಡೆಯುತಿತ್ತು. ತಂತಮ್ಮ ಹಿಂಬಾಲಕರಿಗೆ ಸೀಟು ಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ ಪೂಜಾರಿ ಮಾತೇ ಮೇಯರ್ ಆಯ್ಕೆಯಲ್ಲಿ ಅಂತಿಮ ಆಗುತ್ತಿತ್ತು.

ಮನಪಾದ ಮೂರು ದಶಕದ ಚುನಾವಣಾ ಇತಿಹಾಸದಲ್ಲಿ ಮೊದಲ ಬಾರಿ ಕಾಂಗ್ರೆಸ್‍ನ ತ್ರಿಮೂರ್ತಿ ಹಳಬರು ಮೂಲೆಗುಂಪಾಗಿದ್ದಾರೆ. ಅವರ ಜಾಗದಲ್ಲಿ ಹೊಸ ಮೂರು ಮುಖಂಡರು ಬಂದು ಕೂತಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನೂ ಎಮ್ಮೆಲ್ಸಿಯೂ ಆಗಿರುವ ಹರೀಶ್‍ಕುಮಾರ್, ಮಾಜಿ ಮಂತ್ರಿ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಕಾಂಗ್ರೆಸ್ ಕಾರ್ಪೊರೇಟರ್ ಟಿಕೆಟ್ ಹಂಚಿಕೆ ಹಾಗೂ ರಣತಂತ್ರ ಹೆಣೆಯುವಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಮಾಜಿ ಮಂತ್ರಿ ರಮಾನಾಥ ರೈ ಮಾತು ಸಣ್ಣ ಪ್ರಮಾಣದಲ್ಲಿ ನಡೆಯುತ್ತಿದೆ. ತಂತಮ್ಮ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಮಾಜಿ ಶಾಸಕರಾದ ಜಿ.ಅರ್.ಲೋಬೋ ಮತ್ತು ಮೊಹಿಯುದ್ದೀನ್ ಬಾವಾ ಆಟ ಆಡುತ್ತಿದ್ದಾರೆ. ಮೊದಲು ಕಾಂಗ್ರೆಸ್‍ನಲ್ಲಿದ್ದ ಗುಂಪುಗಾರಿಕೆ ಈಗ ಬಿಜೆಪಿ ಪಾಳೆಯದಲ್ಲೂ ಶುರುವಾಗಿದೆ.

ಗುರು ಕಲ್ಲಡ್ಕ ಭಟ್ಟರಿಗೇ ಸೆಡ್ಡು ಹೊಡೆದು ರಾಜ್ಯ ಬಿಜೆಪಿ ಅಧ್ಯಕ್ಷತೆ ಪಡೆದಿರುವ ನಳಿನ್‍ಕುಮಾರ್ ಆ ಪಕ್ಷದ ಪಾಲಿಕೆ ಅಭ್ಯರ್ಥಿ ಆಯ್ಕೆಯಲ್ಲಿ ಪ್ರಶ್ನಾತೀತ ನಾಯಕಾಗ್ರೇಸ! ಈ ನಳಿನ್ ಗ್ಯಾಂಗಲ್ಲಿ ಶಾಸಕ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಮತ್ತು ವಿನಾಯಕ ಬಾಳಿಗಾ ಎಂಬ ಆರ್‍ಟಿಐ ಕಾರ್ಯಕರ್ತನ ಮರ್ಡರ್ ಕೇಸ್ ಆಪಾದಿತ ನರೇಶ್ ಶೆಣೈ ಇದ್ದಾರೆ. ಸಮಾನಾಂತರವಾಗಿ ಕಲ್ಲಡ್ಕ ಭಟ್ಟರ ಬೆಟಾಲಿಯನ್ ನಿಂತಿದೆ. ರಾಜ್ಯ ಬಿಜೆಪಿಯ ಸೂತ್ರಧಾರ ಬಿ.ಎಲ್.ಸಂತೋಷ್ ಮತ್ತು ಕಲ್ಲಡ್ಕ ಭಟ್ಟರ ಸಂಬಂಧ ಅಷ್ಟಕಷ್ಟೇ. ಸಂತೋಷನ ಕೀಲುಗೊಂಬೆ ನಳಿನ್. ಹೀಗಾಗಿ ನಳಿನ್ ಹೇಳಿದವರಿಗೇ ಪಾಲಿಕೆಗೆ ಸ್ಪರ್ಧಿಸುವ ಬಿಜೆಪಿ ಟಿಕೆಟ್ ಗ್ಯಾರಂಟಿ. ಭಟ್ಟರೇನೂ ಖಾಲಿ ಕೈಲಿ ಕೂರುವುದಿಲ್ಲ. ಕೆಲವು ಸೀಟುಗಳಾದರೂ ತಮ್ಮ ಶಿಷ್ಯಸಂಕುಲಕ್ಕೆ ಕೊಡಿಸುತ್ತಾರೆ. ಈ ಶೀತಲ ಸಮರ ಬಿಜೆಪಿಗೆ ದೊಡ್ಡ ಹಾನಿ ಮಾಡಲಿದೆ.

ಚುನಾವಣೆ ಗೆಲ್ಲಲು ಜನಹಿತ ಕಾರ್ಯಕ್ರಮಗಳ್ಯಾವುದೂ ಇಲ್ಲದ ಕೇಸರಿ ಪಡೆ ಬಗ್ಗೆ ಮಂಗಳೂರಲ್ಲಿ ಒಂದು ಜೋಕ್ ಚಾಲ್ತಿಯಲ್ಲಿದೆ. ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಬಿಜೆಪಿಯನ್ನ ಬಚಾವ್ ಮಾಡಿದ “ಭಾವಿ-ಭಾರತರತ್ನ” ಸಾವರ್ಕರ್ ಪ್ರತಿಮೆ ಮಂಗಳೂರಿನ ನೆಹರು ಮೈದಾನದಲ್ಲಿ ಸ್ಥಾಪಿಸುತ್ತೇವೆಂದು ಹೇಳಿ ಮತದಾರರ ಮಂಗ ಮಾಡಲು ನಳಿನ್ ತಂಡ ತಯಾರಿ ನಡೆಸಿದೆಯಂತೆ! ಮತ್ತೊಂದೆಡೆ ಮಂಗಳೂರಿನ ಓಎನ್‍ಜಿಸಿ-ಸೆಜ್‍ನ ಉತ್ತರ ಭಾರತೀಯ ಕಾರ್ಮಿಕ ನಡುವೆ ಬಾಂಗ್ಲಾ ಉಗ್ರರು ನುಸುಳಿದ್ದಾರೆಂಬ ಧರ್ಮಾಂಧ ಎನ್‍ಆರ್‍ಸಿ ಕಾರ್ಪೊರೇಷನ್ ಇಲೆಕ್ಷನ್ ಈಶ್ಯೂ ಮಾಡಲು ಬಿಜೆಪಿ ಚಿಂತಕರ ಚಾವಡಿ ಯೋಜಿಸುತ್ತಿದೆ. ಒಟ್ಟಿನಲ್ಲಿ ಮಂಗಳೂರು ಪಾಲಿಕೆ ಪೀಠಕ್ಕಾಗಿ ಬಿಜೆಪಿ “ಧರ್ಮ” ತಡಕಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...