Homeಕರ್ನಾಟಕಮಂಗಳೂರು ಮಹಾನಗರ ಪಾಲಿಕೆ ಗದ್ದುಗೆಗಾಗಿ ಸಮಬಲದ ಗುದ್ದಾಟ!

ಮಂಗಳೂರು ಮಹಾನಗರ ಪಾಲಿಕೆ ಗದ್ದುಗೆಗಾಗಿ ಸಮಬಲದ ಗುದ್ದಾಟ!

- Advertisement -
- Advertisement -

| ಶುದ್ದೋದನ |

ಕರಾವಳಿಯ ಅವಳಿ ಜಿಲ್ಲೆಯಲ್ಲೀಗ ಪ್ರಳಯಾಂತಕ ಮಳೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯದೇ ಸುದ್ದಿ-ಸದ್ದು. ನವೆಂಬರ್ 12ರಂದು ನಡೆಯಲಿರುವ ಕಾರ್ಪೊರೇಷನ್ ಕದನಾಂಗಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುಖಾಮುಖಿ ನಿಂತು ಸೆಡ್ಡುಹೊಡೆಯುತ್ತಿವೆ ಅಸೆಂಬ್ಲಿ ಮತ್ತು ಪಾರ್ಲಿಮೆಂಟ್ ಚುನಾವಣೆಯಲ್ಲಿ ಧರ್ಮ ಸೂಕ್ಷ್ಮದ ದಾಳಗಳುರುಳಿಸಿ ದಿಗ್ವಿಜಯ ಸಾಧಿಸಿರುವ ಕೇಸರಿ ಕೋಟೆಯಲ್ಲೀಗ ಮೊದಲಿನ ಖದರು ಉಳಿದಿಲ್ಲ.

ಜನರ ಹತಾಶೆ, ಮಂಗಳೂರು ಮಹಾನಗರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಬಲದ ಸೆಣಸಾಟ ನಡೆಯುವುದು ಖಾತ್ರಿಪಡಿಸಿದೆ! ಇತ್ತೀಚಿನ ವರ್ಷದಲ್ಲಿ ಕಾರ್ಪೊರೇಷನ್ ಏರಿಯಾದಲ್ಲಿ ಕೇಸರಿ ಪರಿವಾರದ ಕರಾಮತ್ತು ಜೋರಾಗಿದ್ದರೂ ಕಾಂಗ್ರೆಸ್ ತೀರ ದುರ್ಬಲವಾಗೇನೂ ಇಲ್ಲ. ವಾರ್ಡ್‍ಗಳ ಮೀಸಲಾತಿ ಬದಲಾಗಿರೋದ್ರಿಂದ ಹೊಸ ಮುಖಗಳು ಸ್ಪರ್ಧೆಗೆ ಇಳಿಯಬೇಕಾಗಿದೆ. ಇದು ಕಾಂಗ್ರೆಸ್‍ಗೆ ಆಡಳಿತ ವಿರೋಧಿ ಅಲೆ ದೊಡ್ಡಮಟ್ಟದಲ್ಲಿ ಬಾಧಿಸದಂತೆ ತಡೆಯಲಿದೆ. ಕಳೆದೈದು ವರ್ಷದ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಅಭಿವೃದ್ಧಿ ಕೆಲಸಗಳು ಸಾಕಷ್ಟು ಆಗಿವೆ. ಹಾಗಾಗಿ ಮತದಾರರಿಗೆ ಕಾಂಗ್ರೆಸ್ ಮೇಲೆ ಅಂಥ ತಿರಸ್ಕಾರವೇನಿದ್ದಂತೆ ಕಾಣಿಸುತ್ತಿಲ್ಲ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎರಡೂ ವಿಧಾನಸಭಾ ಕ್ಷೇತ್ರಗಳು ಬಿಜೆಪಿ ತೆಕ್ಕೆಯಲ್ಲಿದೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 38 ವಾರ್ಡುಗಳಿದ್ದರೆ, ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 22 ವಾರ್ಡುಗಳು ಬರುತ್ತವೆ. ಇಲ್ಲೆಲ್ಲ ಬಿಜೆಪಿ ಪರಿವಾರದ ಬೇರುಗಳು ತೀರಾ ಆಳಕ್ಕೆ ಇಳಿದಿರುವುದರಿಂದ ಪಾಲಿಕೆ ಪಾರುಪತ್ಯ ವಶವಾಗಲಿದೆಯೆಂಬ ಲೆಕ್ಕಾಚಾರ ಸ್ಥಳೀಯ ಸಂಸದನೂ ರಾಜ್ಯ ಬಿಜೆಪಿ ಅಧ್ಯಕ್ಷನೂ ಆಗಿರುವ ನಳಿನ್‍ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್ ಮತ್ತು ಶಾಸಕ ಭರತ್ ಶೆಟ್ಟಿ ಬಳಗ ಹಾಕಿಕುಂತಿದೆ!

ಆದರೆ ರಾಜಕೀಯ ಸಮೀಕರಣದ ವಾಸ್ತವ ಅಷ್ಟು ಸರಳವಾಗಿಲ್ಲ. ಎತ್ತಿಂದೆತ್ತ ಕಳೆದು ಕೂಡಿಸಿ ತಾಳೆ ನೋಡಿದರೂ ಮೂರ್ನಾಲ್ಕು ಸೀಟುಗಳ ಅಂತರದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಗದ್ದುಗೆಯೇರಲಿದೆ ಎಂಬ ಅಂದಾಜು ಸಿಗುತ್ತದೆ. 1984ರಲ್ಲಿ ಮನಪಾ ಅಸ್ತಿತ್ವಕ್ಕೆ ಬಂದನಂತರ ಒಂದೇ ಒಂದು ಬಾರಿ (2007ರಲ್ಲಿ) ಮಾತ್ರ ಬಿಜೆಪಿ ಅಧಿಕಾರ ಪಡೆದಿತ್ತು. ಪಾಲಿಕೆ ಸರಹದ್ದಿನ ಶಾಸಕ-ಸಂಸದ ಸ್ಥಾನ ಕೈಲಿದ್ದರೂ ಬಿಜೆಪಿಗೆ ಪಾಲಿಕೆ ಆಡಳಿತ ದಕ್ಕಿಸಿಕೊಳ್ಳಲಾಗಿರಲಿಲ್ಲ. ಆಗೆಲ್ಲ ಕಾಂಗ್ರೆಸ್‍ನಲ್ಲಿ ಮಾಜಿ ಕೇಂದ್ರಮಂತ್ರಿ ಜನಾರ್ದನ ಪೂಜಾರಿ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಮತ್ತು ಎಐಸಿಸಿ ಮಾಜಿ ಜನರಲ್ ಸೆಕ್ರೆಟರಿ ಆಸ್ಕರ್ ಫರ್ನಾಂಡಿಸ್‍ರ ಮೇಲಾಟದ ಯಜಮಾನಿಕೆ ನಡೆಯುತಿತ್ತು. ತಂತಮ್ಮ ಹಿಂಬಾಲಕರಿಗೆ ಸೀಟು ಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ ಪೂಜಾರಿ ಮಾತೇ ಮೇಯರ್ ಆಯ್ಕೆಯಲ್ಲಿ ಅಂತಿಮ ಆಗುತ್ತಿತ್ತು.

ಮನಪಾದ ಮೂರು ದಶಕದ ಚುನಾವಣಾ ಇತಿಹಾಸದಲ್ಲಿ ಮೊದಲ ಬಾರಿ ಕಾಂಗ್ರೆಸ್‍ನ ತ್ರಿಮೂರ್ತಿ ಹಳಬರು ಮೂಲೆಗುಂಪಾಗಿದ್ದಾರೆ. ಅವರ ಜಾಗದಲ್ಲಿ ಹೊಸ ಮೂರು ಮುಖಂಡರು ಬಂದು ಕೂತಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನೂ ಎಮ್ಮೆಲ್ಸಿಯೂ ಆಗಿರುವ ಹರೀಶ್‍ಕುಮಾರ್, ಮಾಜಿ ಮಂತ್ರಿ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಕಾಂಗ್ರೆಸ್ ಕಾರ್ಪೊರೇಟರ್ ಟಿಕೆಟ್ ಹಂಚಿಕೆ ಹಾಗೂ ರಣತಂತ್ರ ಹೆಣೆಯುವಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಮಾಜಿ ಮಂತ್ರಿ ರಮಾನಾಥ ರೈ ಮಾತು ಸಣ್ಣ ಪ್ರಮಾಣದಲ್ಲಿ ನಡೆಯುತ್ತಿದೆ. ತಂತಮ್ಮ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಮಾಜಿ ಶಾಸಕರಾದ ಜಿ.ಅರ್.ಲೋಬೋ ಮತ್ತು ಮೊಹಿಯುದ್ದೀನ್ ಬಾವಾ ಆಟ ಆಡುತ್ತಿದ್ದಾರೆ. ಮೊದಲು ಕಾಂಗ್ರೆಸ್‍ನಲ್ಲಿದ್ದ ಗುಂಪುಗಾರಿಕೆ ಈಗ ಬಿಜೆಪಿ ಪಾಳೆಯದಲ್ಲೂ ಶುರುವಾಗಿದೆ.

ಗುರು ಕಲ್ಲಡ್ಕ ಭಟ್ಟರಿಗೇ ಸೆಡ್ಡು ಹೊಡೆದು ರಾಜ್ಯ ಬಿಜೆಪಿ ಅಧ್ಯಕ್ಷತೆ ಪಡೆದಿರುವ ನಳಿನ್‍ಕುಮಾರ್ ಆ ಪಕ್ಷದ ಪಾಲಿಕೆ ಅಭ್ಯರ್ಥಿ ಆಯ್ಕೆಯಲ್ಲಿ ಪ್ರಶ್ನಾತೀತ ನಾಯಕಾಗ್ರೇಸ! ಈ ನಳಿನ್ ಗ್ಯಾಂಗಲ್ಲಿ ಶಾಸಕ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಮತ್ತು ವಿನಾಯಕ ಬಾಳಿಗಾ ಎಂಬ ಆರ್‍ಟಿಐ ಕಾರ್ಯಕರ್ತನ ಮರ್ಡರ್ ಕೇಸ್ ಆಪಾದಿತ ನರೇಶ್ ಶೆಣೈ ಇದ್ದಾರೆ. ಸಮಾನಾಂತರವಾಗಿ ಕಲ್ಲಡ್ಕ ಭಟ್ಟರ ಬೆಟಾಲಿಯನ್ ನಿಂತಿದೆ. ರಾಜ್ಯ ಬಿಜೆಪಿಯ ಸೂತ್ರಧಾರ ಬಿ.ಎಲ್.ಸಂತೋಷ್ ಮತ್ತು ಕಲ್ಲಡ್ಕ ಭಟ್ಟರ ಸಂಬಂಧ ಅಷ್ಟಕಷ್ಟೇ. ಸಂತೋಷನ ಕೀಲುಗೊಂಬೆ ನಳಿನ್. ಹೀಗಾಗಿ ನಳಿನ್ ಹೇಳಿದವರಿಗೇ ಪಾಲಿಕೆಗೆ ಸ್ಪರ್ಧಿಸುವ ಬಿಜೆಪಿ ಟಿಕೆಟ್ ಗ್ಯಾರಂಟಿ. ಭಟ್ಟರೇನೂ ಖಾಲಿ ಕೈಲಿ ಕೂರುವುದಿಲ್ಲ. ಕೆಲವು ಸೀಟುಗಳಾದರೂ ತಮ್ಮ ಶಿಷ್ಯಸಂಕುಲಕ್ಕೆ ಕೊಡಿಸುತ್ತಾರೆ. ಈ ಶೀತಲ ಸಮರ ಬಿಜೆಪಿಗೆ ದೊಡ್ಡ ಹಾನಿ ಮಾಡಲಿದೆ.

ಚುನಾವಣೆ ಗೆಲ್ಲಲು ಜನಹಿತ ಕಾರ್ಯಕ್ರಮಗಳ್ಯಾವುದೂ ಇಲ್ಲದ ಕೇಸರಿ ಪಡೆ ಬಗ್ಗೆ ಮಂಗಳೂರಲ್ಲಿ ಒಂದು ಜೋಕ್ ಚಾಲ್ತಿಯಲ್ಲಿದೆ. ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಬಿಜೆಪಿಯನ್ನ ಬಚಾವ್ ಮಾಡಿದ “ಭಾವಿ-ಭಾರತರತ್ನ” ಸಾವರ್ಕರ್ ಪ್ರತಿಮೆ ಮಂಗಳೂರಿನ ನೆಹರು ಮೈದಾನದಲ್ಲಿ ಸ್ಥಾಪಿಸುತ್ತೇವೆಂದು ಹೇಳಿ ಮತದಾರರ ಮಂಗ ಮಾಡಲು ನಳಿನ್ ತಂಡ ತಯಾರಿ ನಡೆಸಿದೆಯಂತೆ! ಮತ್ತೊಂದೆಡೆ ಮಂಗಳೂರಿನ ಓಎನ್‍ಜಿಸಿ-ಸೆಜ್‍ನ ಉತ್ತರ ಭಾರತೀಯ ಕಾರ್ಮಿಕ ನಡುವೆ ಬಾಂಗ್ಲಾ ಉಗ್ರರು ನುಸುಳಿದ್ದಾರೆಂಬ ಧರ್ಮಾಂಧ ಎನ್‍ಆರ್‍ಸಿ ಕಾರ್ಪೊರೇಷನ್ ಇಲೆಕ್ಷನ್ ಈಶ್ಯೂ ಮಾಡಲು ಬಿಜೆಪಿ ಚಿಂತಕರ ಚಾವಡಿ ಯೋಜಿಸುತ್ತಿದೆ. ಒಟ್ಟಿನಲ್ಲಿ ಮಂಗಳೂರು ಪಾಲಿಕೆ ಪೀಠಕ್ಕಾಗಿ ಬಿಜೆಪಿ “ಧರ್ಮ” ತಡಕಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...