Homeಕರ್ನಾಟಕಮಂಗಳೂರು ಮಹಾನಗರ ಪಾಲಿಕೆ ಗದ್ದುಗೆಗಾಗಿ ಸಮಬಲದ ಗುದ್ದಾಟ!

ಮಂಗಳೂರು ಮಹಾನಗರ ಪಾಲಿಕೆ ಗದ್ದುಗೆಗಾಗಿ ಸಮಬಲದ ಗುದ್ದಾಟ!

- Advertisement -
- Advertisement -

| ಶುದ್ದೋದನ |

ಕರಾವಳಿಯ ಅವಳಿ ಜಿಲ್ಲೆಯಲ್ಲೀಗ ಪ್ರಳಯಾಂತಕ ಮಳೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯದೇ ಸುದ್ದಿ-ಸದ್ದು. ನವೆಂಬರ್ 12ರಂದು ನಡೆಯಲಿರುವ ಕಾರ್ಪೊರೇಷನ್ ಕದನಾಂಗಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುಖಾಮುಖಿ ನಿಂತು ಸೆಡ್ಡುಹೊಡೆಯುತ್ತಿವೆ ಅಸೆಂಬ್ಲಿ ಮತ್ತು ಪಾರ್ಲಿಮೆಂಟ್ ಚುನಾವಣೆಯಲ್ಲಿ ಧರ್ಮ ಸೂಕ್ಷ್ಮದ ದಾಳಗಳುರುಳಿಸಿ ದಿಗ್ವಿಜಯ ಸಾಧಿಸಿರುವ ಕೇಸರಿ ಕೋಟೆಯಲ್ಲೀಗ ಮೊದಲಿನ ಖದರು ಉಳಿದಿಲ್ಲ.

ಜನರ ಹತಾಶೆ, ಮಂಗಳೂರು ಮಹಾನಗರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಬಲದ ಸೆಣಸಾಟ ನಡೆಯುವುದು ಖಾತ್ರಿಪಡಿಸಿದೆ! ಇತ್ತೀಚಿನ ವರ್ಷದಲ್ಲಿ ಕಾರ್ಪೊರೇಷನ್ ಏರಿಯಾದಲ್ಲಿ ಕೇಸರಿ ಪರಿವಾರದ ಕರಾಮತ್ತು ಜೋರಾಗಿದ್ದರೂ ಕಾಂಗ್ರೆಸ್ ತೀರ ದುರ್ಬಲವಾಗೇನೂ ಇಲ್ಲ. ವಾರ್ಡ್‍ಗಳ ಮೀಸಲಾತಿ ಬದಲಾಗಿರೋದ್ರಿಂದ ಹೊಸ ಮುಖಗಳು ಸ್ಪರ್ಧೆಗೆ ಇಳಿಯಬೇಕಾಗಿದೆ. ಇದು ಕಾಂಗ್ರೆಸ್‍ಗೆ ಆಡಳಿತ ವಿರೋಧಿ ಅಲೆ ದೊಡ್ಡಮಟ್ಟದಲ್ಲಿ ಬಾಧಿಸದಂತೆ ತಡೆಯಲಿದೆ. ಕಳೆದೈದು ವರ್ಷದ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಅಭಿವೃದ್ಧಿ ಕೆಲಸಗಳು ಸಾಕಷ್ಟು ಆಗಿವೆ. ಹಾಗಾಗಿ ಮತದಾರರಿಗೆ ಕಾಂಗ್ರೆಸ್ ಮೇಲೆ ಅಂಥ ತಿರಸ್ಕಾರವೇನಿದ್ದಂತೆ ಕಾಣಿಸುತ್ತಿಲ್ಲ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎರಡೂ ವಿಧಾನಸಭಾ ಕ್ಷೇತ್ರಗಳು ಬಿಜೆಪಿ ತೆಕ್ಕೆಯಲ್ಲಿದೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 38 ವಾರ್ಡುಗಳಿದ್ದರೆ, ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 22 ವಾರ್ಡುಗಳು ಬರುತ್ತವೆ. ಇಲ್ಲೆಲ್ಲ ಬಿಜೆಪಿ ಪರಿವಾರದ ಬೇರುಗಳು ತೀರಾ ಆಳಕ್ಕೆ ಇಳಿದಿರುವುದರಿಂದ ಪಾಲಿಕೆ ಪಾರುಪತ್ಯ ವಶವಾಗಲಿದೆಯೆಂಬ ಲೆಕ್ಕಾಚಾರ ಸ್ಥಳೀಯ ಸಂಸದನೂ ರಾಜ್ಯ ಬಿಜೆಪಿ ಅಧ್ಯಕ್ಷನೂ ಆಗಿರುವ ನಳಿನ್‍ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್ ಮತ್ತು ಶಾಸಕ ಭರತ್ ಶೆಟ್ಟಿ ಬಳಗ ಹಾಕಿಕುಂತಿದೆ!

ಆದರೆ ರಾಜಕೀಯ ಸಮೀಕರಣದ ವಾಸ್ತವ ಅಷ್ಟು ಸರಳವಾಗಿಲ್ಲ. ಎತ್ತಿಂದೆತ್ತ ಕಳೆದು ಕೂಡಿಸಿ ತಾಳೆ ನೋಡಿದರೂ ಮೂರ್ನಾಲ್ಕು ಸೀಟುಗಳ ಅಂತರದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಗದ್ದುಗೆಯೇರಲಿದೆ ಎಂಬ ಅಂದಾಜು ಸಿಗುತ್ತದೆ. 1984ರಲ್ಲಿ ಮನಪಾ ಅಸ್ತಿತ್ವಕ್ಕೆ ಬಂದನಂತರ ಒಂದೇ ಒಂದು ಬಾರಿ (2007ರಲ್ಲಿ) ಮಾತ್ರ ಬಿಜೆಪಿ ಅಧಿಕಾರ ಪಡೆದಿತ್ತು. ಪಾಲಿಕೆ ಸರಹದ್ದಿನ ಶಾಸಕ-ಸಂಸದ ಸ್ಥಾನ ಕೈಲಿದ್ದರೂ ಬಿಜೆಪಿಗೆ ಪಾಲಿಕೆ ಆಡಳಿತ ದಕ್ಕಿಸಿಕೊಳ್ಳಲಾಗಿರಲಿಲ್ಲ. ಆಗೆಲ್ಲ ಕಾಂಗ್ರೆಸ್‍ನಲ್ಲಿ ಮಾಜಿ ಕೇಂದ್ರಮಂತ್ರಿ ಜನಾರ್ದನ ಪೂಜಾರಿ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಮತ್ತು ಎಐಸಿಸಿ ಮಾಜಿ ಜನರಲ್ ಸೆಕ್ರೆಟರಿ ಆಸ್ಕರ್ ಫರ್ನಾಂಡಿಸ್‍ರ ಮೇಲಾಟದ ಯಜಮಾನಿಕೆ ನಡೆಯುತಿತ್ತು. ತಂತಮ್ಮ ಹಿಂಬಾಲಕರಿಗೆ ಸೀಟು ಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ ಪೂಜಾರಿ ಮಾತೇ ಮೇಯರ್ ಆಯ್ಕೆಯಲ್ಲಿ ಅಂತಿಮ ಆಗುತ್ತಿತ್ತು.

ಮನಪಾದ ಮೂರು ದಶಕದ ಚುನಾವಣಾ ಇತಿಹಾಸದಲ್ಲಿ ಮೊದಲ ಬಾರಿ ಕಾಂಗ್ರೆಸ್‍ನ ತ್ರಿಮೂರ್ತಿ ಹಳಬರು ಮೂಲೆಗುಂಪಾಗಿದ್ದಾರೆ. ಅವರ ಜಾಗದಲ್ಲಿ ಹೊಸ ಮೂರು ಮುಖಂಡರು ಬಂದು ಕೂತಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನೂ ಎಮ್ಮೆಲ್ಸಿಯೂ ಆಗಿರುವ ಹರೀಶ್‍ಕುಮಾರ್, ಮಾಜಿ ಮಂತ್ರಿ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಕಾಂಗ್ರೆಸ್ ಕಾರ್ಪೊರೇಟರ್ ಟಿಕೆಟ್ ಹಂಚಿಕೆ ಹಾಗೂ ರಣತಂತ್ರ ಹೆಣೆಯುವಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಮಾಜಿ ಮಂತ್ರಿ ರಮಾನಾಥ ರೈ ಮಾತು ಸಣ್ಣ ಪ್ರಮಾಣದಲ್ಲಿ ನಡೆಯುತ್ತಿದೆ. ತಂತಮ್ಮ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಮಾಜಿ ಶಾಸಕರಾದ ಜಿ.ಅರ್.ಲೋಬೋ ಮತ್ತು ಮೊಹಿಯುದ್ದೀನ್ ಬಾವಾ ಆಟ ಆಡುತ್ತಿದ್ದಾರೆ. ಮೊದಲು ಕಾಂಗ್ರೆಸ್‍ನಲ್ಲಿದ್ದ ಗುಂಪುಗಾರಿಕೆ ಈಗ ಬಿಜೆಪಿ ಪಾಳೆಯದಲ್ಲೂ ಶುರುವಾಗಿದೆ.

ಗುರು ಕಲ್ಲಡ್ಕ ಭಟ್ಟರಿಗೇ ಸೆಡ್ಡು ಹೊಡೆದು ರಾಜ್ಯ ಬಿಜೆಪಿ ಅಧ್ಯಕ್ಷತೆ ಪಡೆದಿರುವ ನಳಿನ್‍ಕುಮಾರ್ ಆ ಪಕ್ಷದ ಪಾಲಿಕೆ ಅಭ್ಯರ್ಥಿ ಆಯ್ಕೆಯಲ್ಲಿ ಪ್ರಶ್ನಾತೀತ ನಾಯಕಾಗ್ರೇಸ! ಈ ನಳಿನ್ ಗ್ಯಾಂಗಲ್ಲಿ ಶಾಸಕ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಮತ್ತು ವಿನಾಯಕ ಬಾಳಿಗಾ ಎಂಬ ಆರ್‍ಟಿಐ ಕಾರ್ಯಕರ್ತನ ಮರ್ಡರ್ ಕೇಸ್ ಆಪಾದಿತ ನರೇಶ್ ಶೆಣೈ ಇದ್ದಾರೆ. ಸಮಾನಾಂತರವಾಗಿ ಕಲ್ಲಡ್ಕ ಭಟ್ಟರ ಬೆಟಾಲಿಯನ್ ನಿಂತಿದೆ. ರಾಜ್ಯ ಬಿಜೆಪಿಯ ಸೂತ್ರಧಾರ ಬಿ.ಎಲ್.ಸಂತೋಷ್ ಮತ್ತು ಕಲ್ಲಡ್ಕ ಭಟ್ಟರ ಸಂಬಂಧ ಅಷ್ಟಕಷ್ಟೇ. ಸಂತೋಷನ ಕೀಲುಗೊಂಬೆ ನಳಿನ್. ಹೀಗಾಗಿ ನಳಿನ್ ಹೇಳಿದವರಿಗೇ ಪಾಲಿಕೆಗೆ ಸ್ಪರ್ಧಿಸುವ ಬಿಜೆಪಿ ಟಿಕೆಟ್ ಗ್ಯಾರಂಟಿ. ಭಟ್ಟರೇನೂ ಖಾಲಿ ಕೈಲಿ ಕೂರುವುದಿಲ್ಲ. ಕೆಲವು ಸೀಟುಗಳಾದರೂ ತಮ್ಮ ಶಿಷ್ಯಸಂಕುಲಕ್ಕೆ ಕೊಡಿಸುತ್ತಾರೆ. ಈ ಶೀತಲ ಸಮರ ಬಿಜೆಪಿಗೆ ದೊಡ್ಡ ಹಾನಿ ಮಾಡಲಿದೆ.

ಚುನಾವಣೆ ಗೆಲ್ಲಲು ಜನಹಿತ ಕಾರ್ಯಕ್ರಮಗಳ್ಯಾವುದೂ ಇಲ್ಲದ ಕೇಸರಿ ಪಡೆ ಬಗ್ಗೆ ಮಂಗಳೂರಲ್ಲಿ ಒಂದು ಜೋಕ್ ಚಾಲ್ತಿಯಲ್ಲಿದೆ. ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಬಿಜೆಪಿಯನ್ನ ಬಚಾವ್ ಮಾಡಿದ “ಭಾವಿ-ಭಾರತರತ್ನ” ಸಾವರ್ಕರ್ ಪ್ರತಿಮೆ ಮಂಗಳೂರಿನ ನೆಹರು ಮೈದಾನದಲ್ಲಿ ಸ್ಥಾಪಿಸುತ್ತೇವೆಂದು ಹೇಳಿ ಮತದಾರರ ಮಂಗ ಮಾಡಲು ನಳಿನ್ ತಂಡ ತಯಾರಿ ನಡೆಸಿದೆಯಂತೆ! ಮತ್ತೊಂದೆಡೆ ಮಂಗಳೂರಿನ ಓಎನ್‍ಜಿಸಿ-ಸೆಜ್‍ನ ಉತ್ತರ ಭಾರತೀಯ ಕಾರ್ಮಿಕ ನಡುವೆ ಬಾಂಗ್ಲಾ ಉಗ್ರರು ನುಸುಳಿದ್ದಾರೆಂಬ ಧರ್ಮಾಂಧ ಎನ್‍ಆರ್‍ಸಿ ಕಾರ್ಪೊರೇಷನ್ ಇಲೆಕ್ಷನ್ ಈಶ್ಯೂ ಮಾಡಲು ಬಿಜೆಪಿ ಚಿಂತಕರ ಚಾವಡಿ ಯೋಜಿಸುತ್ತಿದೆ. ಒಟ್ಟಿನಲ್ಲಿ ಮಂಗಳೂರು ಪಾಲಿಕೆ ಪೀಠಕ್ಕಾಗಿ ಬಿಜೆಪಿ “ಧರ್ಮ” ತಡಕಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...