Homeಕರ್ನಾಟಕಮಂಗಳೂರು ಮಹಾನಗರ ಪಾಲಿಕೆ ಗದ್ದುಗೆಗಾಗಿ ಸಮಬಲದ ಗುದ್ದಾಟ!

ಮಂಗಳೂರು ಮಹಾನಗರ ಪಾಲಿಕೆ ಗದ್ದುಗೆಗಾಗಿ ಸಮಬಲದ ಗುದ್ದಾಟ!

- Advertisement -
- Advertisement -

| ಶುದ್ದೋದನ |

ಕರಾವಳಿಯ ಅವಳಿ ಜಿಲ್ಲೆಯಲ್ಲೀಗ ಪ್ರಳಯಾಂತಕ ಮಳೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯದೇ ಸುದ್ದಿ-ಸದ್ದು. ನವೆಂಬರ್ 12ರಂದು ನಡೆಯಲಿರುವ ಕಾರ್ಪೊರೇಷನ್ ಕದನಾಂಗಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುಖಾಮುಖಿ ನಿಂತು ಸೆಡ್ಡುಹೊಡೆಯುತ್ತಿವೆ ಅಸೆಂಬ್ಲಿ ಮತ್ತು ಪಾರ್ಲಿಮೆಂಟ್ ಚುನಾವಣೆಯಲ್ಲಿ ಧರ್ಮ ಸೂಕ್ಷ್ಮದ ದಾಳಗಳುರುಳಿಸಿ ದಿಗ್ವಿಜಯ ಸಾಧಿಸಿರುವ ಕೇಸರಿ ಕೋಟೆಯಲ್ಲೀಗ ಮೊದಲಿನ ಖದರು ಉಳಿದಿಲ್ಲ.

ಜನರ ಹತಾಶೆ, ಮಂಗಳೂರು ಮಹಾನಗರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಬಲದ ಸೆಣಸಾಟ ನಡೆಯುವುದು ಖಾತ್ರಿಪಡಿಸಿದೆ! ಇತ್ತೀಚಿನ ವರ್ಷದಲ್ಲಿ ಕಾರ್ಪೊರೇಷನ್ ಏರಿಯಾದಲ್ಲಿ ಕೇಸರಿ ಪರಿವಾರದ ಕರಾಮತ್ತು ಜೋರಾಗಿದ್ದರೂ ಕಾಂಗ್ರೆಸ್ ತೀರ ದುರ್ಬಲವಾಗೇನೂ ಇಲ್ಲ. ವಾರ್ಡ್‍ಗಳ ಮೀಸಲಾತಿ ಬದಲಾಗಿರೋದ್ರಿಂದ ಹೊಸ ಮುಖಗಳು ಸ್ಪರ್ಧೆಗೆ ಇಳಿಯಬೇಕಾಗಿದೆ. ಇದು ಕಾಂಗ್ರೆಸ್‍ಗೆ ಆಡಳಿತ ವಿರೋಧಿ ಅಲೆ ದೊಡ್ಡಮಟ್ಟದಲ್ಲಿ ಬಾಧಿಸದಂತೆ ತಡೆಯಲಿದೆ. ಕಳೆದೈದು ವರ್ಷದ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಅಭಿವೃದ್ಧಿ ಕೆಲಸಗಳು ಸಾಕಷ್ಟು ಆಗಿವೆ. ಹಾಗಾಗಿ ಮತದಾರರಿಗೆ ಕಾಂಗ್ರೆಸ್ ಮೇಲೆ ಅಂಥ ತಿರಸ್ಕಾರವೇನಿದ್ದಂತೆ ಕಾಣಿಸುತ್ತಿಲ್ಲ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎರಡೂ ವಿಧಾನಸಭಾ ಕ್ಷೇತ್ರಗಳು ಬಿಜೆಪಿ ತೆಕ್ಕೆಯಲ್ಲಿದೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 38 ವಾರ್ಡುಗಳಿದ್ದರೆ, ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 22 ವಾರ್ಡುಗಳು ಬರುತ್ತವೆ. ಇಲ್ಲೆಲ್ಲ ಬಿಜೆಪಿ ಪರಿವಾರದ ಬೇರುಗಳು ತೀರಾ ಆಳಕ್ಕೆ ಇಳಿದಿರುವುದರಿಂದ ಪಾಲಿಕೆ ಪಾರುಪತ್ಯ ವಶವಾಗಲಿದೆಯೆಂಬ ಲೆಕ್ಕಾಚಾರ ಸ್ಥಳೀಯ ಸಂಸದನೂ ರಾಜ್ಯ ಬಿಜೆಪಿ ಅಧ್ಯಕ್ಷನೂ ಆಗಿರುವ ನಳಿನ್‍ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್ ಮತ್ತು ಶಾಸಕ ಭರತ್ ಶೆಟ್ಟಿ ಬಳಗ ಹಾಕಿಕುಂತಿದೆ!

ಆದರೆ ರಾಜಕೀಯ ಸಮೀಕರಣದ ವಾಸ್ತವ ಅಷ್ಟು ಸರಳವಾಗಿಲ್ಲ. ಎತ್ತಿಂದೆತ್ತ ಕಳೆದು ಕೂಡಿಸಿ ತಾಳೆ ನೋಡಿದರೂ ಮೂರ್ನಾಲ್ಕು ಸೀಟುಗಳ ಅಂತರದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಗದ್ದುಗೆಯೇರಲಿದೆ ಎಂಬ ಅಂದಾಜು ಸಿಗುತ್ತದೆ. 1984ರಲ್ಲಿ ಮನಪಾ ಅಸ್ತಿತ್ವಕ್ಕೆ ಬಂದನಂತರ ಒಂದೇ ಒಂದು ಬಾರಿ (2007ರಲ್ಲಿ) ಮಾತ್ರ ಬಿಜೆಪಿ ಅಧಿಕಾರ ಪಡೆದಿತ್ತು. ಪಾಲಿಕೆ ಸರಹದ್ದಿನ ಶಾಸಕ-ಸಂಸದ ಸ್ಥಾನ ಕೈಲಿದ್ದರೂ ಬಿಜೆಪಿಗೆ ಪಾಲಿಕೆ ಆಡಳಿತ ದಕ್ಕಿಸಿಕೊಳ್ಳಲಾಗಿರಲಿಲ್ಲ. ಆಗೆಲ್ಲ ಕಾಂಗ್ರೆಸ್‍ನಲ್ಲಿ ಮಾಜಿ ಕೇಂದ್ರಮಂತ್ರಿ ಜನಾರ್ದನ ಪೂಜಾರಿ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಮತ್ತು ಎಐಸಿಸಿ ಮಾಜಿ ಜನರಲ್ ಸೆಕ್ರೆಟರಿ ಆಸ್ಕರ್ ಫರ್ನಾಂಡಿಸ್‍ರ ಮೇಲಾಟದ ಯಜಮಾನಿಕೆ ನಡೆಯುತಿತ್ತು. ತಂತಮ್ಮ ಹಿಂಬಾಲಕರಿಗೆ ಸೀಟು ಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ ಪೂಜಾರಿ ಮಾತೇ ಮೇಯರ್ ಆಯ್ಕೆಯಲ್ಲಿ ಅಂತಿಮ ಆಗುತ್ತಿತ್ತು.

ಮನಪಾದ ಮೂರು ದಶಕದ ಚುನಾವಣಾ ಇತಿಹಾಸದಲ್ಲಿ ಮೊದಲ ಬಾರಿ ಕಾಂಗ್ರೆಸ್‍ನ ತ್ರಿಮೂರ್ತಿ ಹಳಬರು ಮೂಲೆಗುಂಪಾಗಿದ್ದಾರೆ. ಅವರ ಜಾಗದಲ್ಲಿ ಹೊಸ ಮೂರು ಮುಖಂಡರು ಬಂದು ಕೂತಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನೂ ಎಮ್ಮೆಲ್ಸಿಯೂ ಆಗಿರುವ ಹರೀಶ್‍ಕುಮಾರ್, ಮಾಜಿ ಮಂತ್ರಿ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಕಾಂಗ್ರೆಸ್ ಕಾರ್ಪೊರೇಟರ್ ಟಿಕೆಟ್ ಹಂಚಿಕೆ ಹಾಗೂ ರಣತಂತ್ರ ಹೆಣೆಯುವಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಮಾಜಿ ಮಂತ್ರಿ ರಮಾನಾಥ ರೈ ಮಾತು ಸಣ್ಣ ಪ್ರಮಾಣದಲ್ಲಿ ನಡೆಯುತ್ತಿದೆ. ತಂತಮ್ಮ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಮಾಜಿ ಶಾಸಕರಾದ ಜಿ.ಅರ್.ಲೋಬೋ ಮತ್ತು ಮೊಹಿಯುದ್ದೀನ್ ಬಾವಾ ಆಟ ಆಡುತ್ತಿದ್ದಾರೆ. ಮೊದಲು ಕಾಂಗ್ರೆಸ್‍ನಲ್ಲಿದ್ದ ಗುಂಪುಗಾರಿಕೆ ಈಗ ಬಿಜೆಪಿ ಪಾಳೆಯದಲ್ಲೂ ಶುರುವಾಗಿದೆ.

ಗುರು ಕಲ್ಲಡ್ಕ ಭಟ್ಟರಿಗೇ ಸೆಡ್ಡು ಹೊಡೆದು ರಾಜ್ಯ ಬಿಜೆಪಿ ಅಧ್ಯಕ್ಷತೆ ಪಡೆದಿರುವ ನಳಿನ್‍ಕುಮಾರ್ ಆ ಪಕ್ಷದ ಪಾಲಿಕೆ ಅಭ್ಯರ್ಥಿ ಆಯ್ಕೆಯಲ್ಲಿ ಪ್ರಶ್ನಾತೀತ ನಾಯಕಾಗ್ರೇಸ! ಈ ನಳಿನ್ ಗ್ಯಾಂಗಲ್ಲಿ ಶಾಸಕ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಮತ್ತು ವಿನಾಯಕ ಬಾಳಿಗಾ ಎಂಬ ಆರ್‍ಟಿಐ ಕಾರ್ಯಕರ್ತನ ಮರ್ಡರ್ ಕೇಸ್ ಆಪಾದಿತ ನರೇಶ್ ಶೆಣೈ ಇದ್ದಾರೆ. ಸಮಾನಾಂತರವಾಗಿ ಕಲ್ಲಡ್ಕ ಭಟ್ಟರ ಬೆಟಾಲಿಯನ್ ನಿಂತಿದೆ. ರಾಜ್ಯ ಬಿಜೆಪಿಯ ಸೂತ್ರಧಾರ ಬಿ.ಎಲ್.ಸಂತೋಷ್ ಮತ್ತು ಕಲ್ಲಡ್ಕ ಭಟ್ಟರ ಸಂಬಂಧ ಅಷ್ಟಕಷ್ಟೇ. ಸಂತೋಷನ ಕೀಲುಗೊಂಬೆ ನಳಿನ್. ಹೀಗಾಗಿ ನಳಿನ್ ಹೇಳಿದವರಿಗೇ ಪಾಲಿಕೆಗೆ ಸ್ಪರ್ಧಿಸುವ ಬಿಜೆಪಿ ಟಿಕೆಟ್ ಗ್ಯಾರಂಟಿ. ಭಟ್ಟರೇನೂ ಖಾಲಿ ಕೈಲಿ ಕೂರುವುದಿಲ್ಲ. ಕೆಲವು ಸೀಟುಗಳಾದರೂ ತಮ್ಮ ಶಿಷ್ಯಸಂಕುಲಕ್ಕೆ ಕೊಡಿಸುತ್ತಾರೆ. ಈ ಶೀತಲ ಸಮರ ಬಿಜೆಪಿಗೆ ದೊಡ್ಡ ಹಾನಿ ಮಾಡಲಿದೆ.

ಚುನಾವಣೆ ಗೆಲ್ಲಲು ಜನಹಿತ ಕಾರ್ಯಕ್ರಮಗಳ್ಯಾವುದೂ ಇಲ್ಲದ ಕೇಸರಿ ಪಡೆ ಬಗ್ಗೆ ಮಂಗಳೂರಲ್ಲಿ ಒಂದು ಜೋಕ್ ಚಾಲ್ತಿಯಲ್ಲಿದೆ. ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಬಿಜೆಪಿಯನ್ನ ಬಚಾವ್ ಮಾಡಿದ “ಭಾವಿ-ಭಾರತರತ್ನ” ಸಾವರ್ಕರ್ ಪ್ರತಿಮೆ ಮಂಗಳೂರಿನ ನೆಹರು ಮೈದಾನದಲ್ಲಿ ಸ್ಥಾಪಿಸುತ್ತೇವೆಂದು ಹೇಳಿ ಮತದಾರರ ಮಂಗ ಮಾಡಲು ನಳಿನ್ ತಂಡ ತಯಾರಿ ನಡೆಸಿದೆಯಂತೆ! ಮತ್ತೊಂದೆಡೆ ಮಂಗಳೂರಿನ ಓಎನ್‍ಜಿಸಿ-ಸೆಜ್‍ನ ಉತ್ತರ ಭಾರತೀಯ ಕಾರ್ಮಿಕ ನಡುವೆ ಬಾಂಗ್ಲಾ ಉಗ್ರರು ನುಸುಳಿದ್ದಾರೆಂಬ ಧರ್ಮಾಂಧ ಎನ್‍ಆರ್‍ಸಿ ಕಾರ್ಪೊರೇಷನ್ ಇಲೆಕ್ಷನ್ ಈಶ್ಯೂ ಮಾಡಲು ಬಿಜೆಪಿ ಚಿಂತಕರ ಚಾವಡಿ ಯೋಜಿಸುತ್ತಿದೆ. ಒಟ್ಟಿನಲ್ಲಿ ಮಂಗಳೂರು ಪಾಲಿಕೆ ಪೀಠಕ್ಕಾಗಿ ಬಿಜೆಪಿ “ಧರ್ಮ” ತಡಕಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...