Homeಕರ್ನಾಟಕಮಂಗಳೂರು ಮಹಾನಗರ ಪಾಲಿಕೆ ಗದ್ದುಗೆಗಾಗಿ ಸಮಬಲದ ಗುದ್ದಾಟ!

ಮಂಗಳೂರು ಮಹಾನಗರ ಪಾಲಿಕೆ ಗದ್ದುಗೆಗಾಗಿ ಸಮಬಲದ ಗುದ್ದಾಟ!

- Advertisement -
- Advertisement -

| ಶುದ್ದೋದನ |

ಕರಾವಳಿಯ ಅವಳಿ ಜಿಲ್ಲೆಯಲ್ಲೀಗ ಪ್ರಳಯಾಂತಕ ಮಳೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯದೇ ಸುದ್ದಿ-ಸದ್ದು. ನವೆಂಬರ್ 12ರಂದು ನಡೆಯಲಿರುವ ಕಾರ್ಪೊರೇಷನ್ ಕದನಾಂಗಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುಖಾಮುಖಿ ನಿಂತು ಸೆಡ್ಡುಹೊಡೆಯುತ್ತಿವೆ ಅಸೆಂಬ್ಲಿ ಮತ್ತು ಪಾರ್ಲಿಮೆಂಟ್ ಚುನಾವಣೆಯಲ್ಲಿ ಧರ್ಮ ಸೂಕ್ಷ್ಮದ ದಾಳಗಳುರುಳಿಸಿ ದಿಗ್ವಿಜಯ ಸಾಧಿಸಿರುವ ಕೇಸರಿ ಕೋಟೆಯಲ್ಲೀಗ ಮೊದಲಿನ ಖದರು ಉಳಿದಿಲ್ಲ.

ಜನರ ಹತಾಶೆ, ಮಂಗಳೂರು ಮಹಾನಗರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಬಲದ ಸೆಣಸಾಟ ನಡೆಯುವುದು ಖಾತ್ರಿಪಡಿಸಿದೆ! ಇತ್ತೀಚಿನ ವರ್ಷದಲ್ಲಿ ಕಾರ್ಪೊರೇಷನ್ ಏರಿಯಾದಲ್ಲಿ ಕೇಸರಿ ಪರಿವಾರದ ಕರಾಮತ್ತು ಜೋರಾಗಿದ್ದರೂ ಕಾಂಗ್ರೆಸ್ ತೀರ ದುರ್ಬಲವಾಗೇನೂ ಇಲ್ಲ. ವಾರ್ಡ್‍ಗಳ ಮೀಸಲಾತಿ ಬದಲಾಗಿರೋದ್ರಿಂದ ಹೊಸ ಮುಖಗಳು ಸ್ಪರ್ಧೆಗೆ ಇಳಿಯಬೇಕಾಗಿದೆ. ಇದು ಕಾಂಗ್ರೆಸ್‍ಗೆ ಆಡಳಿತ ವಿರೋಧಿ ಅಲೆ ದೊಡ್ಡಮಟ್ಟದಲ್ಲಿ ಬಾಧಿಸದಂತೆ ತಡೆಯಲಿದೆ. ಕಳೆದೈದು ವರ್ಷದ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಅಭಿವೃದ್ಧಿ ಕೆಲಸಗಳು ಸಾಕಷ್ಟು ಆಗಿವೆ. ಹಾಗಾಗಿ ಮತದಾರರಿಗೆ ಕಾಂಗ್ರೆಸ್ ಮೇಲೆ ಅಂಥ ತಿರಸ್ಕಾರವೇನಿದ್ದಂತೆ ಕಾಣಿಸುತ್ತಿಲ್ಲ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎರಡೂ ವಿಧಾನಸಭಾ ಕ್ಷೇತ್ರಗಳು ಬಿಜೆಪಿ ತೆಕ್ಕೆಯಲ್ಲಿದೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 38 ವಾರ್ಡುಗಳಿದ್ದರೆ, ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 22 ವಾರ್ಡುಗಳು ಬರುತ್ತವೆ. ಇಲ್ಲೆಲ್ಲ ಬಿಜೆಪಿ ಪರಿವಾರದ ಬೇರುಗಳು ತೀರಾ ಆಳಕ್ಕೆ ಇಳಿದಿರುವುದರಿಂದ ಪಾಲಿಕೆ ಪಾರುಪತ್ಯ ವಶವಾಗಲಿದೆಯೆಂಬ ಲೆಕ್ಕಾಚಾರ ಸ್ಥಳೀಯ ಸಂಸದನೂ ರಾಜ್ಯ ಬಿಜೆಪಿ ಅಧ್ಯಕ್ಷನೂ ಆಗಿರುವ ನಳಿನ್‍ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್ ಮತ್ತು ಶಾಸಕ ಭರತ್ ಶೆಟ್ಟಿ ಬಳಗ ಹಾಕಿಕುಂತಿದೆ!

ಆದರೆ ರಾಜಕೀಯ ಸಮೀಕರಣದ ವಾಸ್ತವ ಅಷ್ಟು ಸರಳವಾಗಿಲ್ಲ. ಎತ್ತಿಂದೆತ್ತ ಕಳೆದು ಕೂಡಿಸಿ ತಾಳೆ ನೋಡಿದರೂ ಮೂರ್ನಾಲ್ಕು ಸೀಟುಗಳ ಅಂತರದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಗದ್ದುಗೆಯೇರಲಿದೆ ಎಂಬ ಅಂದಾಜು ಸಿಗುತ್ತದೆ. 1984ರಲ್ಲಿ ಮನಪಾ ಅಸ್ತಿತ್ವಕ್ಕೆ ಬಂದನಂತರ ಒಂದೇ ಒಂದು ಬಾರಿ (2007ರಲ್ಲಿ) ಮಾತ್ರ ಬಿಜೆಪಿ ಅಧಿಕಾರ ಪಡೆದಿತ್ತು. ಪಾಲಿಕೆ ಸರಹದ್ದಿನ ಶಾಸಕ-ಸಂಸದ ಸ್ಥಾನ ಕೈಲಿದ್ದರೂ ಬಿಜೆಪಿಗೆ ಪಾಲಿಕೆ ಆಡಳಿತ ದಕ್ಕಿಸಿಕೊಳ್ಳಲಾಗಿರಲಿಲ್ಲ. ಆಗೆಲ್ಲ ಕಾಂಗ್ರೆಸ್‍ನಲ್ಲಿ ಮಾಜಿ ಕೇಂದ್ರಮಂತ್ರಿ ಜನಾರ್ದನ ಪೂಜಾರಿ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಮತ್ತು ಎಐಸಿಸಿ ಮಾಜಿ ಜನರಲ್ ಸೆಕ್ರೆಟರಿ ಆಸ್ಕರ್ ಫರ್ನಾಂಡಿಸ್‍ರ ಮೇಲಾಟದ ಯಜಮಾನಿಕೆ ನಡೆಯುತಿತ್ತು. ತಂತಮ್ಮ ಹಿಂಬಾಲಕರಿಗೆ ಸೀಟು ಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ ಪೂಜಾರಿ ಮಾತೇ ಮೇಯರ್ ಆಯ್ಕೆಯಲ್ಲಿ ಅಂತಿಮ ಆಗುತ್ತಿತ್ತು.

ಮನಪಾದ ಮೂರು ದಶಕದ ಚುನಾವಣಾ ಇತಿಹಾಸದಲ್ಲಿ ಮೊದಲ ಬಾರಿ ಕಾಂಗ್ರೆಸ್‍ನ ತ್ರಿಮೂರ್ತಿ ಹಳಬರು ಮೂಲೆಗುಂಪಾಗಿದ್ದಾರೆ. ಅವರ ಜಾಗದಲ್ಲಿ ಹೊಸ ಮೂರು ಮುಖಂಡರು ಬಂದು ಕೂತಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನೂ ಎಮ್ಮೆಲ್ಸಿಯೂ ಆಗಿರುವ ಹರೀಶ್‍ಕುಮಾರ್, ಮಾಜಿ ಮಂತ್ರಿ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಕಾಂಗ್ರೆಸ್ ಕಾರ್ಪೊರೇಟರ್ ಟಿಕೆಟ್ ಹಂಚಿಕೆ ಹಾಗೂ ರಣತಂತ್ರ ಹೆಣೆಯುವಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಮಾಜಿ ಮಂತ್ರಿ ರಮಾನಾಥ ರೈ ಮಾತು ಸಣ್ಣ ಪ್ರಮಾಣದಲ್ಲಿ ನಡೆಯುತ್ತಿದೆ. ತಂತಮ್ಮ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಮಾಜಿ ಶಾಸಕರಾದ ಜಿ.ಅರ್.ಲೋಬೋ ಮತ್ತು ಮೊಹಿಯುದ್ದೀನ್ ಬಾವಾ ಆಟ ಆಡುತ್ತಿದ್ದಾರೆ. ಮೊದಲು ಕಾಂಗ್ರೆಸ್‍ನಲ್ಲಿದ್ದ ಗುಂಪುಗಾರಿಕೆ ಈಗ ಬಿಜೆಪಿ ಪಾಳೆಯದಲ್ಲೂ ಶುರುವಾಗಿದೆ.

ಗುರು ಕಲ್ಲಡ್ಕ ಭಟ್ಟರಿಗೇ ಸೆಡ್ಡು ಹೊಡೆದು ರಾಜ್ಯ ಬಿಜೆಪಿ ಅಧ್ಯಕ್ಷತೆ ಪಡೆದಿರುವ ನಳಿನ್‍ಕುಮಾರ್ ಆ ಪಕ್ಷದ ಪಾಲಿಕೆ ಅಭ್ಯರ್ಥಿ ಆಯ್ಕೆಯಲ್ಲಿ ಪ್ರಶ್ನಾತೀತ ನಾಯಕಾಗ್ರೇಸ! ಈ ನಳಿನ್ ಗ್ಯಾಂಗಲ್ಲಿ ಶಾಸಕ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಮತ್ತು ವಿನಾಯಕ ಬಾಳಿಗಾ ಎಂಬ ಆರ್‍ಟಿಐ ಕಾರ್ಯಕರ್ತನ ಮರ್ಡರ್ ಕೇಸ್ ಆಪಾದಿತ ನರೇಶ್ ಶೆಣೈ ಇದ್ದಾರೆ. ಸಮಾನಾಂತರವಾಗಿ ಕಲ್ಲಡ್ಕ ಭಟ್ಟರ ಬೆಟಾಲಿಯನ್ ನಿಂತಿದೆ. ರಾಜ್ಯ ಬಿಜೆಪಿಯ ಸೂತ್ರಧಾರ ಬಿ.ಎಲ್.ಸಂತೋಷ್ ಮತ್ತು ಕಲ್ಲಡ್ಕ ಭಟ್ಟರ ಸಂಬಂಧ ಅಷ್ಟಕಷ್ಟೇ. ಸಂತೋಷನ ಕೀಲುಗೊಂಬೆ ನಳಿನ್. ಹೀಗಾಗಿ ನಳಿನ್ ಹೇಳಿದವರಿಗೇ ಪಾಲಿಕೆಗೆ ಸ್ಪರ್ಧಿಸುವ ಬಿಜೆಪಿ ಟಿಕೆಟ್ ಗ್ಯಾರಂಟಿ. ಭಟ್ಟರೇನೂ ಖಾಲಿ ಕೈಲಿ ಕೂರುವುದಿಲ್ಲ. ಕೆಲವು ಸೀಟುಗಳಾದರೂ ತಮ್ಮ ಶಿಷ್ಯಸಂಕುಲಕ್ಕೆ ಕೊಡಿಸುತ್ತಾರೆ. ಈ ಶೀತಲ ಸಮರ ಬಿಜೆಪಿಗೆ ದೊಡ್ಡ ಹಾನಿ ಮಾಡಲಿದೆ.

ಚುನಾವಣೆ ಗೆಲ್ಲಲು ಜನಹಿತ ಕಾರ್ಯಕ್ರಮಗಳ್ಯಾವುದೂ ಇಲ್ಲದ ಕೇಸರಿ ಪಡೆ ಬಗ್ಗೆ ಮಂಗಳೂರಲ್ಲಿ ಒಂದು ಜೋಕ್ ಚಾಲ್ತಿಯಲ್ಲಿದೆ. ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಬಿಜೆಪಿಯನ್ನ ಬಚಾವ್ ಮಾಡಿದ “ಭಾವಿ-ಭಾರತರತ್ನ” ಸಾವರ್ಕರ್ ಪ್ರತಿಮೆ ಮಂಗಳೂರಿನ ನೆಹರು ಮೈದಾನದಲ್ಲಿ ಸ್ಥಾಪಿಸುತ್ತೇವೆಂದು ಹೇಳಿ ಮತದಾರರ ಮಂಗ ಮಾಡಲು ನಳಿನ್ ತಂಡ ತಯಾರಿ ನಡೆಸಿದೆಯಂತೆ! ಮತ್ತೊಂದೆಡೆ ಮಂಗಳೂರಿನ ಓಎನ್‍ಜಿಸಿ-ಸೆಜ್‍ನ ಉತ್ತರ ಭಾರತೀಯ ಕಾರ್ಮಿಕ ನಡುವೆ ಬಾಂಗ್ಲಾ ಉಗ್ರರು ನುಸುಳಿದ್ದಾರೆಂಬ ಧರ್ಮಾಂಧ ಎನ್‍ಆರ್‍ಸಿ ಕಾರ್ಪೊರೇಷನ್ ಇಲೆಕ್ಷನ್ ಈಶ್ಯೂ ಮಾಡಲು ಬಿಜೆಪಿ ಚಿಂತಕರ ಚಾವಡಿ ಯೋಜಿಸುತ್ತಿದೆ. ಒಟ್ಟಿನಲ್ಲಿ ಮಂಗಳೂರು ಪಾಲಿಕೆ ಪೀಠಕ್ಕಾಗಿ ಬಿಜೆಪಿ “ಧರ್ಮ” ತಡಕಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...