Homeಕರ್ನಾಟಕಮಂಗಳೂರು ಪ್ರತಿಭಟನೆ ಕನ್ನಡ ನ್ಯೂಸ್ ಚಾನೆಲ್‍ಗಳ ಪಕ್ಷಪಾತದ ಧೋರಣೆ

ಮಂಗಳೂರು ಪ್ರತಿಭಟನೆ ಕನ್ನಡ ನ್ಯೂಸ್ ಚಾನೆಲ್‍ಗಳ ಪಕ್ಷಪಾತದ ಧೋರಣೆ

- Advertisement -
- Advertisement -

ಒಂದು ಪತ್ರ

‘ಪೌರತ್ವ’ ಕಾಯ್ದೆಯನ್ನು ವಿರೋಧಿಸಿ ಇತ್ತೀಚೆಗೆ ಮಂಗಳೂರಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಗೋಲಿಬಾರ್‍ನಿಂದ ಇಬ್ಬರು ಮೃತಪಟ್ಟು ಅನೇಕರು ಗಾಯಗೊಂಡಿರುವ ಸುದ್ದಿಯ ಗಂಭೀರತೆಯನ್ನು ತಗ್ಗಿಸಲು ಕೆಲವೂಂದು ಟಿ.ವಿ. ವಾಹಿನಿಗಳು ಪ್ರಯತ್ನಿಸುತ್ತಿದೆ. ಉತ್ತರಪ್ರದೇಶದಲ್ಲಿ ಸಂಘಪರಿವಾರದ ಜನರು ಹಾಡುಹಗಲೇ ಪೊಲೀಸರನ್ನು ಅಟ್ಟಾಡಿಸಿಕೊಂಡು ಕೊಂದ ಹಾಗೂ ಅವರ ಜೀಪಿನಲ್ಲಿಯೇ ಹತ್ಯೆಮಾಡಿದಾಗ ಜಾಗ್ರತಗೊಳ್ಳದ ಪೊಲೀಸ್‍ಪ್ರೇಮ ಈಗ ಯಡಿಯೂರಪ್ಪರವರ ನೆಚ್ಚಿನ ಪದದಲ್ಲಿ ಹೇಳುವುದಾದರೆ ನೂರಕ್ಕೆ ನೂರು ಜಾಗೃತವಾಗಿದೆ. ಅದಿರಲಿ.

ಪ್ರತಿಭಟನೆಯ ದೃಶ್ಯಾವಳಿಯ ತುಣುಕುಗಳನ್ನು ಪೋಣಿಸಿ ಪ್ರತಿಭಟನಾಕಾರರನ್ನೇ ಅಪರಾಧಿಗಳು ಎಂಬಂತೆ ಬಿಂಬಿಸುತ್ತಿರುವ ಹಿನ್ನೆಲೆಯಲ್ಲಿರುವ ಕನ್ನಡದ ಕೆಲವು ವಾಹಿನಿಗಳ ಮನೋಸ್ಥಿತಿ ಇಲ್ಲಿಯ ಮುಸ್ಲಿಮರಿಗೆ ಅಜ್ಞಾತವಲ್ಲ.

ಪಬ್ಲಿಕ್ ಟಿ.ವಿ. ಎಂಬ ಒಂದು ವಾಹಿನಿ ಪೊಲೀಸರ ಮೇಲಿನ ದಾಳಿಯನ್ನು ಪ್ರಸಾರಗೂಳಿಸಿದ ದೃಶ್ಯಾವಳಿಗಳ ಕುರಿತು ನಡೆಸಿದ ಪ್ಯಾನಲ್ ಚರ್ಚೆಯಲ್ಲಿ ಆ್ಯಂಕರ್‍ನೊಬ್ಬ ಪ್ರತಿಭಟನೆಗಾರರ ಪರವಾಗಿ ಭಾಗವಹಿಸಿದ ಅಶ್ರಫ್ ಎಂಬವರಿಗೆ ಎನ್.ಆರ್.ಸಿ, ಸಿ.ಎ.ಎ. ಎಂದರೇನೆಂದು ಎಂಬ ಪ್ರಶ್ನೆಯನ್ನು ಕೀ ಕೊಟ್ಟ ಗೊಂಬೆಯಂತೆ ಪುನರಾವರ್ತಿಸಿ ಅತನ ಚಾನಲ್ ಪ್ರಸಾರಗೊಳಿಸಿದ ದೃಶ್ಯಾವಳಿಯ ಸಾಚಾತನವನ್ನು ಪ್ರಶ್ನಿಸಲು ಅವಕಾಶವನ್ನೇ ಕೊಡಲಿಲ್ಲ. ಚರ್ಚೆಯ ನಡುವೆ ಅದರ ತುಣುಕುಗಳನ್ನು ಪ್ರಸಾರಗೊಳಿಸುತ್ತಲೂ ಇದ್ದರು. ಆದರೆ ಕ್ಯಾಪ್ಟನನ ಚಾನೆಲ್ ನೈಜಸಂಗತಿ ಹೊರಬಾರದಂತೆ ಪೌರತ್ವದ ಬೇಲಿ ಹಾಕಿತು. ಚಾಣಕ್ಯರಾದ ಅಶ್ರಫ್ ಬಾರಿಬಾರಿಗೂ ಚರ್ಚೆಯ ದಿಕ್ಕು ತಪ್ಪಿಸಬೇಡಿ ಎಂದು ವಿನಂತಿಸಿದರೂ ಪ್ರಯೋಜನವಾಗಲಿಲ್ಲ. ಪೊಲೀಸರ ಮೇಲಿನ ದಾಳಿಯನ್ನು ಪ್ರಸಾರಗೊಳಿಸಿದಂತೆ ಅವರು ನಡೆಸಿದ ದೌರ್ಜನ್ಯದ ದೃಶ್ಯಾವಳಿಗಳು ಲೋಕವನ್ನೆಲ್ಲ ಜಾಲಾಡುವ ಈ ಚಾನಲ್‍ಗೆ ಲಭ್ಯವಾಗದೆ ಹೋಯಿತೇ? ಸಂಘರ್ಷಪೀಡಿತ ಸಿರಿಯಾದ ಪಟ್ಟಣವಾದ ‘ಇದ್ಲಿಬ್’ಅನ್ನು ‘ಇದ್ರಿಸ್’ ಎಂದು ಉಚ್ಚರಿಸುವ ವಾಹಿನಿಯ ಕ್ಯಾಪ್ಟನ್ (ಹೀಗೆಂದು ಅಕ್ಕರೆಯಿಂದ ಕರೆಯುತ್ತಿದ್ದ ಒಬ್ಬ ಆ್ಯಂಕರ್ ಈಗ ಬೇರೊಂದು ಚಾನೆಲ್‍ನಲ್ಲಿದ್ದಾರೆ) ಮುಸ್ಲಿಮರ ಪರವಾಗಿ ಪ್ರಕಟಿಸದಿರಲು (ಎಲ್ಲಾ ಚಾನೆಲ್‍ಗಳು ಹಾಗೆ ಪ್ರಸಾರಗೊಳಿಸಿದ ನಂತರ) ಅಸಾಧ್ಯವಾದಾಗ ಒಂದು ಔದಾರ್ಯವೆಂಬಂತೆ ಪ್ರಸಾರಗೊಳಿಸುತ್ತಿರುವುದನ್ನು ಮುಸ್ಲಿಮರು ಬಲ್ಲರು. ಆತನ ಹಾವಭಾವ, ಮಾತಿನ ಶೈಲಿ, ಸ್ವರಗಳ ಏರಿಳಿತದಿಂದ ಇದನ್ನು ಗಮನಿಸಬಹುದಾಗಿದೆ. ಬಾರಿಬಾರಿಗೂ ತನ್ನನ್ನು ಚೆಡ್ದಿ ಎಂದು ಕರೆಯುತ್ತಾರೆಂದು ಅವಲತ್ತುಕೊಳ್ಳುವ ಅಥವಾ ಸಂತೋಷಪಡುವ ಕ್ಯಾಪ್ಟನ್ ಈಗ ಪ್ಯಾಂಟ್ ಬಂದಿರುವುದರಿಂದ ಚೆಡ್ಡಿ ಕಾಲಹರಣಗೊಂಡಿದೆಯೆಂದು ನೆನಪಿಸಿ ಕೊಡುವುದನ್ನು ಮರೆಯುವುದಿಲ್ಲ.

ಕೆಲವು ಚಾನೆಲ್‍ಗಳು ಮುಸ್ಲಿಮರ ಸಮಸ್ಯೆಗಳ ಕುರಿತು ಚರ್ಚೆ ನಡೆಸುವಾಗ ಒಂದಿಬ್ಬರು ಕಾಯಂ ಗಿರಾಕಿಗಳನ್ನು ಪ್ಯಾನೆಲ್‍ನಲ್ಲಿ ಕೂರಿಸಿ ಪೂರ್ವ ನಿರ್ಧರಿತವಾದಂತೆ ಸೋಲಿಸಿ ಹಿಂದೆ ಕಳುಹಿಸಿಬಿಡುತ್ತವೆ. ಜಿಲ್ಲೆಯ ವಿದ್ಯಾವಂತ, ಬುದ್ಧಿವಂತ ಮುಸ್ಲಿಮ್ ಪ್ರತಿಭೆಗಳನ್ನು ಪ್ಯಾನಲ್ ಚರ್ಚೆಗೆ ಕೂರಿಸುವ ಧೈರ್ಯ ತೆಗೆದುಕೊಳ್ಳುವುದಿಲ್ಲ. ಏಕೆಂದರೆ, ಮುಸ್ಲಿಮರ ನೈಜ ಸಮಸ್ಯೆಗಳು ಹೊರಬರುವುದು ಅವರಿಗೆ ಬೇಕಿಲ್ಲ.
ಪೌರತ್ವ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಬಾಂಗ್ಲಾದೇಶ, ಅಫಘಾನಿಸ್ತಾನದಿಂದ ಬರುವ ಮುಸ್ಲಿಮೇತರ ಅಕ್ರಮ ವಲಸಿಗರಿಗೆ ಭಾರತದ ಪೌರತ್ವ ಲಭಿಸುತ್ತದೆ. ಅಕ್ರಮ ವಲಸಿಗನಾದ ಓರ್ವ ಮುಸ್ಲಿಮ್ ಹಿಂದೂಧರ್ಮಕ್ಕೆ ಮತಾಂತರವಾದರೆ ಅವನಿಗೆ ಪೌರತ್ವ ಲಭಿಸುತ್ತದೆಯೇ? ಹಾಗೆಯೇ ಓರ್ವ ಹಿಂದೂ ಇಸ್ಲಾಮಿಗೆ ಮತಾಂತರವಾದರೆ ಅವನ ಪೌರತ್ವ ರದ್ದಾಗುತ್ತದೆಯೇ? ಒಟ್ಟಾರೆಯಗಿ ಧರ್ಮಾಧಾರಿತ ಪೌರತ್ವ ಸಂವಿಧಾನದ ಮೂಲಭೂತ ಸ್ವರೂಪಕ್ಕೆ ವಿರುದ್ಧವಾಗಿದೆ.

ಕನ್ನಡದ ಚಾನೆಲ್‍ಗಳು ದಿನಬೆಳಗಾದರೆ ಪ್ರಸಾರಗೊಳಿಸುತ್ತಿರುವ ಜ್ಯೋತಿಷ್ಯ, ಫಲ ಜ್ಯೋತಿಷ್ಯ, ವಾಸ್ತು, ಹೀಗೂ ಉಂಟೇ? ಮುಂತಾದ ಕಾರ್ಯಕ್ರಮದ ಪ್ರಕಾರ ಈ ಲೋಕ ಅದೆಷ್ಟೋ ಸಲ ನಿರ್ನಾಮವಾಗಬೇಕಿತ್ತು| ಕರಾವಳಿಯಂತೂ ನೂರಾರುಬಾರಿ ಸುನಾಮಿಗೆ ಕೊಚ್ಚಿಹೋಗಬೇಕಿತ್ತು| ಮಲೆಯಾಳಂ ಚಾನೆಲ್‍ಗಳು ಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಮೂಡಿಸಲು ಪ್ರಯತ್ನಿಸುವಾಗ ನಮ್ಮ ಕೆಲವು ಚಾನೆಲ್‍ಗಳು ಜನರನ್ನು ಮೂಢನಂಬಿಕೆ, ಕಂದಾಚಾರಗಳ ಕೂಪಕ್ಕೆ ತಳ್ಳುತ್ತಿದೆ. ನಮ್ಮ ಚಾನೆಲ್‍ಗಳು ಹತ್ತಿಪ್ಪತ್ತು ಮಂದಿಯನ್ನು ಗುಡ್ಡೆ ಹಾಕಿಕೊಂಡು ಚಾನೆಲನ್ನು ಮೀನು ಮಾರುಕಟ್ಟೆಯಾಗಿ ಮಾರ್ಪಡಿಸಿರುವ ಸುಳ್ಳಿನ ಸರದಾರ ಅರ್ನಾಬ್ ಗೋಸ್ವಾಮಿಯನ್ನು ಅನುಸರಿಸುವ ಬದಲು ಎನ್.ಡಿ.ಟಿ.ವಿ.ಯ ರವೀಶ್‍ಕುಮಾರ್ ಹಾಗೂ ಇಂಡಿಯಾ ಟುಡೆಯ ರಾಜ್‍ದೀಪ್ ಸರ್ದೇಸಾಯಿ ಅವರನ್ನು ಅನುಸರಿಸಲಿ. ಬಿ.ಬಿ.ಸಿ, ಸಿ.ಎನ್.ಎನ್, ಅಲ್ ಜಝೀರ ಪ್ರಸಾರಗೊಳಿಸುವ ಅಂತರ್ ರಾಷ್ಟ್ರೀಯ ಸುದ್ದಿಗಳನ್ನು ಮರುಪ್ರಸಾರಗೊಳಿಸಿ (ಮೌಢ್ಯ ಬಿತ್ತರಿಸುವ ಬದಲಿಗೆ) ತಮ್ಮ ಚಾನೆಲ್‍ಗಳ ಗುಣಮಟ್ಟವನ್ನು ಹೆಚ್ಚಿಸಲು ಪ್ರಯತ್ನಿಸಲಿ. ರಿಮೋಟ್ ಜನರ ಕೈಯಲ್ಲಿಯೇ ಇರುವುದರಿಂದ ಜನರು ತಾವು ಹೇಳಿದ್ದನ್ನೇ ಪರಮಸತ್ಯವೆಂದು ನಂಬುತ್ತಾರೆ ಎಂಬ ಭ್ರಮೆ ಯಾರಿಗೂ ಬೇಡ.

ಜಿಲ್ಲೆಯಮಟ್ಟಿಗೆ ಹೇಳುವುದಾದರೆ ಬೆಳಗ್ಗಿನ ಪತ್ರಿಕೆಗಳಿಗಿಂತ ಸಂಜೆ ಪತ್ರಿಕೆಗಳೇ ಹೆಚ್ಚು ಜಾತ್ಯತೀತವಾದಿಯಾಗಿವೆ. ಅವುಗಳ ಸಂಘಪರಿವಾರಕ್ಕೆ ನೀಡಿದಷ್ಟೇ ಪ್ರಾಮುಖ್ಯತೆಯನ್ನು ಇತರರಿಗೂ ನೀಡುವ ಮೂಲಕ ತಕ್ಕಡಿಯ ಮುಳ್ಳನ್ನು ನೇರವಾಗಿರಿಸಲು ಪ್ರಯತ್ನಿಸುತ್ತಿದೆ. ರಾಜ್ಯಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಜಾವಾಣಿ, ವಾರ್ತಾಭಾರತಿ, ನ್ಯಾಯಪಥದಂತಹ ಪತ್ರಿಕೆಗಳಿರುವಂತೆ ಒಂದು ಚಾನಲ್‍ನ ಅಗತ್ಯವಿದೆ. ಜಾತ್ಯತೀತ ಪ್ರೇಮಿಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವರೆಂದು ಆಶಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...