Homeಕರ್ನಾಟಕಮಂಗಳೂರು ಪ್ರತಿಭಟನೆ ಕನ್ನಡ ನ್ಯೂಸ್ ಚಾನೆಲ್‍ಗಳ ಪಕ್ಷಪಾತದ ಧೋರಣೆ

ಮಂಗಳೂರು ಪ್ರತಿಭಟನೆ ಕನ್ನಡ ನ್ಯೂಸ್ ಚಾನೆಲ್‍ಗಳ ಪಕ್ಷಪಾತದ ಧೋರಣೆ

- Advertisement -
- Advertisement -

ಒಂದು ಪತ್ರ

‘ಪೌರತ್ವ’ ಕಾಯ್ದೆಯನ್ನು ವಿರೋಧಿಸಿ ಇತ್ತೀಚೆಗೆ ಮಂಗಳೂರಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಗೋಲಿಬಾರ್‍ನಿಂದ ಇಬ್ಬರು ಮೃತಪಟ್ಟು ಅನೇಕರು ಗಾಯಗೊಂಡಿರುವ ಸುದ್ದಿಯ ಗಂಭೀರತೆಯನ್ನು ತಗ್ಗಿಸಲು ಕೆಲವೂಂದು ಟಿ.ವಿ. ವಾಹಿನಿಗಳು ಪ್ರಯತ್ನಿಸುತ್ತಿದೆ. ಉತ್ತರಪ್ರದೇಶದಲ್ಲಿ ಸಂಘಪರಿವಾರದ ಜನರು ಹಾಡುಹಗಲೇ ಪೊಲೀಸರನ್ನು ಅಟ್ಟಾಡಿಸಿಕೊಂಡು ಕೊಂದ ಹಾಗೂ ಅವರ ಜೀಪಿನಲ್ಲಿಯೇ ಹತ್ಯೆಮಾಡಿದಾಗ ಜಾಗ್ರತಗೊಳ್ಳದ ಪೊಲೀಸ್‍ಪ್ರೇಮ ಈಗ ಯಡಿಯೂರಪ್ಪರವರ ನೆಚ್ಚಿನ ಪದದಲ್ಲಿ ಹೇಳುವುದಾದರೆ ನೂರಕ್ಕೆ ನೂರು ಜಾಗೃತವಾಗಿದೆ. ಅದಿರಲಿ.

ಪ್ರತಿಭಟನೆಯ ದೃಶ್ಯಾವಳಿಯ ತುಣುಕುಗಳನ್ನು ಪೋಣಿಸಿ ಪ್ರತಿಭಟನಾಕಾರರನ್ನೇ ಅಪರಾಧಿಗಳು ಎಂಬಂತೆ ಬಿಂಬಿಸುತ್ತಿರುವ ಹಿನ್ನೆಲೆಯಲ್ಲಿರುವ ಕನ್ನಡದ ಕೆಲವು ವಾಹಿನಿಗಳ ಮನೋಸ್ಥಿತಿ ಇಲ್ಲಿಯ ಮುಸ್ಲಿಮರಿಗೆ ಅಜ್ಞಾತವಲ್ಲ.

ಪಬ್ಲಿಕ್ ಟಿ.ವಿ. ಎಂಬ ಒಂದು ವಾಹಿನಿ ಪೊಲೀಸರ ಮೇಲಿನ ದಾಳಿಯನ್ನು ಪ್ರಸಾರಗೂಳಿಸಿದ ದೃಶ್ಯಾವಳಿಗಳ ಕುರಿತು ನಡೆಸಿದ ಪ್ಯಾನಲ್ ಚರ್ಚೆಯಲ್ಲಿ ಆ್ಯಂಕರ್‍ನೊಬ್ಬ ಪ್ರತಿಭಟನೆಗಾರರ ಪರವಾಗಿ ಭಾಗವಹಿಸಿದ ಅಶ್ರಫ್ ಎಂಬವರಿಗೆ ಎನ್.ಆರ್.ಸಿ, ಸಿ.ಎ.ಎ. ಎಂದರೇನೆಂದು ಎಂಬ ಪ್ರಶ್ನೆಯನ್ನು ಕೀ ಕೊಟ್ಟ ಗೊಂಬೆಯಂತೆ ಪುನರಾವರ್ತಿಸಿ ಅತನ ಚಾನಲ್ ಪ್ರಸಾರಗೊಳಿಸಿದ ದೃಶ್ಯಾವಳಿಯ ಸಾಚಾತನವನ್ನು ಪ್ರಶ್ನಿಸಲು ಅವಕಾಶವನ್ನೇ ಕೊಡಲಿಲ್ಲ. ಚರ್ಚೆಯ ನಡುವೆ ಅದರ ತುಣುಕುಗಳನ್ನು ಪ್ರಸಾರಗೊಳಿಸುತ್ತಲೂ ಇದ್ದರು. ಆದರೆ ಕ್ಯಾಪ್ಟನನ ಚಾನೆಲ್ ನೈಜಸಂಗತಿ ಹೊರಬಾರದಂತೆ ಪೌರತ್ವದ ಬೇಲಿ ಹಾಕಿತು. ಚಾಣಕ್ಯರಾದ ಅಶ್ರಫ್ ಬಾರಿಬಾರಿಗೂ ಚರ್ಚೆಯ ದಿಕ್ಕು ತಪ್ಪಿಸಬೇಡಿ ಎಂದು ವಿನಂತಿಸಿದರೂ ಪ್ರಯೋಜನವಾಗಲಿಲ್ಲ. ಪೊಲೀಸರ ಮೇಲಿನ ದಾಳಿಯನ್ನು ಪ್ರಸಾರಗೊಳಿಸಿದಂತೆ ಅವರು ನಡೆಸಿದ ದೌರ್ಜನ್ಯದ ದೃಶ್ಯಾವಳಿಗಳು ಲೋಕವನ್ನೆಲ್ಲ ಜಾಲಾಡುವ ಈ ಚಾನಲ್‍ಗೆ ಲಭ್ಯವಾಗದೆ ಹೋಯಿತೇ? ಸಂಘರ್ಷಪೀಡಿತ ಸಿರಿಯಾದ ಪಟ್ಟಣವಾದ ‘ಇದ್ಲಿಬ್’ಅನ್ನು ‘ಇದ್ರಿಸ್’ ಎಂದು ಉಚ್ಚರಿಸುವ ವಾಹಿನಿಯ ಕ್ಯಾಪ್ಟನ್ (ಹೀಗೆಂದು ಅಕ್ಕರೆಯಿಂದ ಕರೆಯುತ್ತಿದ್ದ ಒಬ್ಬ ಆ್ಯಂಕರ್ ಈಗ ಬೇರೊಂದು ಚಾನೆಲ್‍ನಲ್ಲಿದ್ದಾರೆ) ಮುಸ್ಲಿಮರ ಪರವಾಗಿ ಪ್ರಕಟಿಸದಿರಲು (ಎಲ್ಲಾ ಚಾನೆಲ್‍ಗಳು ಹಾಗೆ ಪ್ರಸಾರಗೊಳಿಸಿದ ನಂತರ) ಅಸಾಧ್ಯವಾದಾಗ ಒಂದು ಔದಾರ್ಯವೆಂಬಂತೆ ಪ್ರಸಾರಗೊಳಿಸುತ್ತಿರುವುದನ್ನು ಮುಸ್ಲಿಮರು ಬಲ್ಲರು. ಆತನ ಹಾವಭಾವ, ಮಾತಿನ ಶೈಲಿ, ಸ್ವರಗಳ ಏರಿಳಿತದಿಂದ ಇದನ್ನು ಗಮನಿಸಬಹುದಾಗಿದೆ. ಬಾರಿಬಾರಿಗೂ ತನ್ನನ್ನು ಚೆಡ್ದಿ ಎಂದು ಕರೆಯುತ್ತಾರೆಂದು ಅವಲತ್ತುಕೊಳ್ಳುವ ಅಥವಾ ಸಂತೋಷಪಡುವ ಕ್ಯಾಪ್ಟನ್ ಈಗ ಪ್ಯಾಂಟ್ ಬಂದಿರುವುದರಿಂದ ಚೆಡ್ಡಿ ಕಾಲಹರಣಗೊಂಡಿದೆಯೆಂದು ನೆನಪಿಸಿ ಕೊಡುವುದನ್ನು ಮರೆಯುವುದಿಲ್ಲ.

ಕೆಲವು ಚಾನೆಲ್‍ಗಳು ಮುಸ್ಲಿಮರ ಸಮಸ್ಯೆಗಳ ಕುರಿತು ಚರ್ಚೆ ನಡೆಸುವಾಗ ಒಂದಿಬ್ಬರು ಕಾಯಂ ಗಿರಾಕಿಗಳನ್ನು ಪ್ಯಾನೆಲ್‍ನಲ್ಲಿ ಕೂರಿಸಿ ಪೂರ್ವ ನಿರ್ಧರಿತವಾದಂತೆ ಸೋಲಿಸಿ ಹಿಂದೆ ಕಳುಹಿಸಿಬಿಡುತ್ತವೆ. ಜಿಲ್ಲೆಯ ವಿದ್ಯಾವಂತ, ಬುದ್ಧಿವಂತ ಮುಸ್ಲಿಮ್ ಪ್ರತಿಭೆಗಳನ್ನು ಪ್ಯಾನಲ್ ಚರ್ಚೆಗೆ ಕೂರಿಸುವ ಧೈರ್ಯ ತೆಗೆದುಕೊಳ್ಳುವುದಿಲ್ಲ. ಏಕೆಂದರೆ, ಮುಸ್ಲಿಮರ ನೈಜ ಸಮಸ್ಯೆಗಳು ಹೊರಬರುವುದು ಅವರಿಗೆ ಬೇಕಿಲ್ಲ.
ಪೌರತ್ವ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಬಾಂಗ್ಲಾದೇಶ, ಅಫಘಾನಿಸ್ತಾನದಿಂದ ಬರುವ ಮುಸ್ಲಿಮೇತರ ಅಕ್ರಮ ವಲಸಿಗರಿಗೆ ಭಾರತದ ಪೌರತ್ವ ಲಭಿಸುತ್ತದೆ. ಅಕ್ರಮ ವಲಸಿಗನಾದ ಓರ್ವ ಮುಸ್ಲಿಮ್ ಹಿಂದೂಧರ್ಮಕ್ಕೆ ಮತಾಂತರವಾದರೆ ಅವನಿಗೆ ಪೌರತ್ವ ಲಭಿಸುತ್ತದೆಯೇ? ಹಾಗೆಯೇ ಓರ್ವ ಹಿಂದೂ ಇಸ್ಲಾಮಿಗೆ ಮತಾಂತರವಾದರೆ ಅವನ ಪೌರತ್ವ ರದ್ದಾಗುತ್ತದೆಯೇ? ಒಟ್ಟಾರೆಯಗಿ ಧರ್ಮಾಧಾರಿತ ಪೌರತ್ವ ಸಂವಿಧಾನದ ಮೂಲಭೂತ ಸ್ವರೂಪಕ್ಕೆ ವಿರುದ್ಧವಾಗಿದೆ.

ಕನ್ನಡದ ಚಾನೆಲ್‍ಗಳು ದಿನಬೆಳಗಾದರೆ ಪ್ರಸಾರಗೊಳಿಸುತ್ತಿರುವ ಜ್ಯೋತಿಷ್ಯ, ಫಲ ಜ್ಯೋತಿಷ್ಯ, ವಾಸ್ತು, ಹೀಗೂ ಉಂಟೇ? ಮುಂತಾದ ಕಾರ್ಯಕ್ರಮದ ಪ್ರಕಾರ ಈ ಲೋಕ ಅದೆಷ್ಟೋ ಸಲ ನಿರ್ನಾಮವಾಗಬೇಕಿತ್ತು| ಕರಾವಳಿಯಂತೂ ನೂರಾರುಬಾರಿ ಸುನಾಮಿಗೆ ಕೊಚ್ಚಿಹೋಗಬೇಕಿತ್ತು| ಮಲೆಯಾಳಂ ಚಾನೆಲ್‍ಗಳು ಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಮೂಡಿಸಲು ಪ್ರಯತ್ನಿಸುವಾಗ ನಮ್ಮ ಕೆಲವು ಚಾನೆಲ್‍ಗಳು ಜನರನ್ನು ಮೂಢನಂಬಿಕೆ, ಕಂದಾಚಾರಗಳ ಕೂಪಕ್ಕೆ ತಳ್ಳುತ್ತಿದೆ. ನಮ್ಮ ಚಾನೆಲ್‍ಗಳು ಹತ್ತಿಪ್ಪತ್ತು ಮಂದಿಯನ್ನು ಗುಡ್ಡೆ ಹಾಕಿಕೊಂಡು ಚಾನೆಲನ್ನು ಮೀನು ಮಾರುಕಟ್ಟೆಯಾಗಿ ಮಾರ್ಪಡಿಸಿರುವ ಸುಳ್ಳಿನ ಸರದಾರ ಅರ್ನಾಬ್ ಗೋಸ್ವಾಮಿಯನ್ನು ಅನುಸರಿಸುವ ಬದಲು ಎನ್.ಡಿ.ಟಿ.ವಿ.ಯ ರವೀಶ್‍ಕುಮಾರ್ ಹಾಗೂ ಇಂಡಿಯಾ ಟುಡೆಯ ರಾಜ್‍ದೀಪ್ ಸರ್ದೇಸಾಯಿ ಅವರನ್ನು ಅನುಸರಿಸಲಿ. ಬಿ.ಬಿ.ಸಿ, ಸಿ.ಎನ್.ಎನ್, ಅಲ್ ಜಝೀರ ಪ್ರಸಾರಗೊಳಿಸುವ ಅಂತರ್ ರಾಷ್ಟ್ರೀಯ ಸುದ್ದಿಗಳನ್ನು ಮರುಪ್ರಸಾರಗೊಳಿಸಿ (ಮೌಢ್ಯ ಬಿತ್ತರಿಸುವ ಬದಲಿಗೆ) ತಮ್ಮ ಚಾನೆಲ್‍ಗಳ ಗುಣಮಟ್ಟವನ್ನು ಹೆಚ್ಚಿಸಲು ಪ್ರಯತ್ನಿಸಲಿ. ರಿಮೋಟ್ ಜನರ ಕೈಯಲ್ಲಿಯೇ ಇರುವುದರಿಂದ ಜನರು ತಾವು ಹೇಳಿದ್ದನ್ನೇ ಪರಮಸತ್ಯವೆಂದು ನಂಬುತ್ತಾರೆ ಎಂಬ ಭ್ರಮೆ ಯಾರಿಗೂ ಬೇಡ.

ಜಿಲ್ಲೆಯಮಟ್ಟಿಗೆ ಹೇಳುವುದಾದರೆ ಬೆಳಗ್ಗಿನ ಪತ್ರಿಕೆಗಳಿಗಿಂತ ಸಂಜೆ ಪತ್ರಿಕೆಗಳೇ ಹೆಚ್ಚು ಜಾತ್ಯತೀತವಾದಿಯಾಗಿವೆ. ಅವುಗಳ ಸಂಘಪರಿವಾರಕ್ಕೆ ನೀಡಿದಷ್ಟೇ ಪ್ರಾಮುಖ್ಯತೆಯನ್ನು ಇತರರಿಗೂ ನೀಡುವ ಮೂಲಕ ತಕ್ಕಡಿಯ ಮುಳ್ಳನ್ನು ನೇರವಾಗಿರಿಸಲು ಪ್ರಯತ್ನಿಸುತ್ತಿದೆ. ರಾಜ್ಯಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಜಾವಾಣಿ, ವಾರ್ತಾಭಾರತಿ, ನ್ಯಾಯಪಥದಂತಹ ಪತ್ರಿಕೆಗಳಿರುವಂತೆ ಒಂದು ಚಾನಲ್‍ನ ಅಗತ್ಯವಿದೆ. ಜಾತ್ಯತೀತ ಪ್ರೇಮಿಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವರೆಂದು ಆಶಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...