Homeಕರ್ನಾಟಕಮಂಗಳೂರು ಪ್ರತಿಭಟನೆ ಕನ್ನಡ ನ್ಯೂಸ್ ಚಾನೆಲ್‍ಗಳ ಪಕ್ಷಪಾತದ ಧೋರಣೆ

ಮಂಗಳೂರು ಪ್ರತಿಭಟನೆ ಕನ್ನಡ ನ್ಯೂಸ್ ಚಾನೆಲ್‍ಗಳ ಪಕ್ಷಪಾತದ ಧೋರಣೆ

- Advertisement -
- Advertisement -

ಒಂದು ಪತ್ರ

‘ಪೌರತ್ವ’ ಕಾಯ್ದೆಯನ್ನು ವಿರೋಧಿಸಿ ಇತ್ತೀಚೆಗೆ ಮಂಗಳೂರಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಗೋಲಿಬಾರ್‍ನಿಂದ ಇಬ್ಬರು ಮೃತಪಟ್ಟು ಅನೇಕರು ಗಾಯಗೊಂಡಿರುವ ಸುದ್ದಿಯ ಗಂಭೀರತೆಯನ್ನು ತಗ್ಗಿಸಲು ಕೆಲವೂಂದು ಟಿ.ವಿ. ವಾಹಿನಿಗಳು ಪ್ರಯತ್ನಿಸುತ್ತಿದೆ. ಉತ್ತರಪ್ರದೇಶದಲ್ಲಿ ಸಂಘಪರಿವಾರದ ಜನರು ಹಾಡುಹಗಲೇ ಪೊಲೀಸರನ್ನು ಅಟ್ಟಾಡಿಸಿಕೊಂಡು ಕೊಂದ ಹಾಗೂ ಅವರ ಜೀಪಿನಲ್ಲಿಯೇ ಹತ್ಯೆಮಾಡಿದಾಗ ಜಾಗ್ರತಗೊಳ್ಳದ ಪೊಲೀಸ್‍ಪ್ರೇಮ ಈಗ ಯಡಿಯೂರಪ್ಪರವರ ನೆಚ್ಚಿನ ಪದದಲ್ಲಿ ಹೇಳುವುದಾದರೆ ನೂರಕ್ಕೆ ನೂರು ಜಾಗೃತವಾಗಿದೆ. ಅದಿರಲಿ.

ಪ್ರತಿಭಟನೆಯ ದೃಶ್ಯಾವಳಿಯ ತುಣುಕುಗಳನ್ನು ಪೋಣಿಸಿ ಪ್ರತಿಭಟನಾಕಾರರನ್ನೇ ಅಪರಾಧಿಗಳು ಎಂಬಂತೆ ಬಿಂಬಿಸುತ್ತಿರುವ ಹಿನ್ನೆಲೆಯಲ್ಲಿರುವ ಕನ್ನಡದ ಕೆಲವು ವಾಹಿನಿಗಳ ಮನೋಸ್ಥಿತಿ ಇಲ್ಲಿಯ ಮುಸ್ಲಿಮರಿಗೆ ಅಜ್ಞಾತವಲ್ಲ.

ಪಬ್ಲಿಕ್ ಟಿ.ವಿ. ಎಂಬ ಒಂದು ವಾಹಿನಿ ಪೊಲೀಸರ ಮೇಲಿನ ದಾಳಿಯನ್ನು ಪ್ರಸಾರಗೂಳಿಸಿದ ದೃಶ್ಯಾವಳಿಗಳ ಕುರಿತು ನಡೆಸಿದ ಪ್ಯಾನಲ್ ಚರ್ಚೆಯಲ್ಲಿ ಆ್ಯಂಕರ್‍ನೊಬ್ಬ ಪ್ರತಿಭಟನೆಗಾರರ ಪರವಾಗಿ ಭಾಗವಹಿಸಿದ ಅಶ್ರಫ್ ಎಂಬವರಿಗೆ ಎನ್.ಆರ್.ಸಿ, ಸಿ.ಎ.ಎ. ಎಂದರೇನೆಂದು ಎಂಬ ಪ್ರಶ್ನೆಯನ್ನು ಕೀ ಕೊಟ್ಟ ಗೊಂಬೆಯಂತೆ ಪುನರಾವರ್ತಿಸಿ ಅತನ ಚಾನಲ್ ಪ್ರಸಾರಗೊಳಿಸಿದ ದೃಶ್ಯಾವಳಿಯ ಸಾಚಾತನವನ್ನು ಪ್ರಶ್ನಿಸಲು ಅವಕಾಶವನ್ನೇ ಕೊಡಲಿಲ್ಲ. ಚರ್ಚೆಯ ನಡುವೆ ಅದರ ತುಣುಕುಗಳನ್ನು ಪ್ರಸಾರಗೊಳಿಸುತ್ತಲೂ ಇದ್ದರು. ಆದರೆ ಕ್ಯಾಪ್ಟನನ ಚಾನೆಲ್ ನೈಜಸಂಗತಿ ಹೊರಬಾರದಂತೆ ಪೌರತ್ವದ ಬೇಲಿ ಹಾಕಿತು. ಚಾಣಕ್ಯರಾದ ಅಶ್ರಫ್ ಬಾರಿಬಾರಿಗೂ ಚರ್ಚೆಯ ದಿಕ್ಕು ತಪ್ಪಿಸಬೇಡಿ ಎಂದು ವಿನಂತಿಸಿದರೂ ಪ್ರಯೋಜನವಾಗಲಿಲ್ಲ. ಪೊಲೀಸರ ಮೇಲಿನ ದಾಳಿಯನ್ನು ಪ್ರಸಾರಗೊಳಿಸಿದಂತೆ ಅವರು ನಡೆಸಿದ ದೌರ್ಜನ್ಯದ ದೃಶ್ಯಾವಳಿಗಳು ಲೋಕವನ್ನೆಲ್ಲ ಜಾಲಾಡುವ ಈ ಚಾನಲ್‍ಗೆ ಲಭ್ಯವಾಗದೆ ಹೋಯಿತೇ? ಸಂಘರ್ಷಪೀಡಿತ ಸಿರಿಯಾದ ಪಟ್ಟಣವಾದ ‘ಇದ್ಲಿಬ್’ಅನ್ನು ‘ಇದ್ರಿಸ್’ ಎಂದು ಉಚ್ಚರಿಸುವ ವಾಹಿನಿಯ ಕ್ಯಾಪ್ಟನ್ (ಹೀಗೆಂದು ಅಕ್ಕರೆಯಿಂದ ಕರೆಯುತ್ತಿದ್ದ ಒಬ್ಬ ಆ್ಯಂಕರ್ ಈಗ ಬೇರೊಂದು ಚಾನೆಲ್‍ನಲ್ಲಿದ್ದಾರೆ) ಮುಸ್ಲಿಮರ ಪರವಾಗಿ ಪ್ರಕಟಿಸದಿರಲು (ಎಲ್ಲಾ ಚಾನೆಲ್‍ಗಳು ಹಾಗೆ ಪ್ರಸಾರಗೊಳಿಸಿದ ನಂತರ) ಅಸಾಧ್ಯವಾದಾಗ ಒಂದು ಔದಾರ್ಯವೆಂಬಂತೆ ಪ್ರಸಾರಗೊಳಿಸುತ್ತಿರುವುದನ್ನು ಮುಸ್ಲಿಮರು ಬಲ್ಲರು. ಆತನ ಹಾವಭಾವ, ಮಾತಿನ ಶೈಲಿ, ಸ್ವರಗಳ ಏರಿಳಿತದಿಂದ ಇದನ್ನು ಗಮನಿಸಬಹುದಾಗಿದೆ. ಬಾರಿಬಾರಿಗೂ ತನ್ನನ್ನು ಚೆಡ್ದಿ ಎಂದು ಕರೆಯುತ್ತಾರೆಂದು ಅವಲತ್ತುಕೊಳ್ಳುವ ಅಥವಾ ಸಂತೋಷಪಡುವ ಕ್ಯಾಪ್ಟನ್ ಈಗ ಪ್ಯಾಂಟ್ ಬಂದಿರುವುದರಿಂದ ಚೆಡ್ಡಿ ಕಾಲಹರಣಗೊಂಡಿದೆಯೆಂದು ನೆನಪಿಸಿ ಕೊಡುವುದನ್ನು ಮರೆಯುವುದಿಲ್ಲ.

ಕೆಲವು ಚಾನೆಲ್‍ಗಳು ಮುಸ್ಲಿಮರ ಸಮಸ್ಯೆಗಳ ಕುರಿತು ಚರ್ಚೆ ನಡೆಸುವಾಗ ಒಂದಿಬ್ಬರು ಕಾಯಂ ಗಿರಾಕಿಗಳನ್ನು ಪ್ಯಾನೆಲ್‍ನಲ್ಲಿ ಕೂರಿಸಿ ಪೂರ್ವ ನಿರ್ಧರಿತವಾದಂತೆ ಸೋಲಿಸಿ ಹಿಂದೆ ಕಳುಹಿಸಿಬಿಡುತ್ತವೆ. ಜಿಲ್ಲೆಯ ವಿದ್ಯಾವಂತ, ಬುದ್ಧಿವಂತ ಮುಸ್ಲಿಮ್ ಪ್ರತಿಭೆಗಳನ್ನು ಪ್ಯಾನಲ್ ಚರ್ಚೆಗೆ ಕೂರಿಸುವ ಧೈರ್ಯ ತೆಗೆದುಕೊಳ್ಳುವುದಿಲ್ಲ. ಏಕೆಂದರೆ, ಮುಸ್ಲಿಮರ ನೈಜ ಸಮಸ್ಯೆಗಳು ಹೊರಬರುವುದು ಅವರಿಗೆ ಬೇಕಿಲ್ಲ.
ಪೌರತ್ವ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಬಾಂಗ್ಲಾದೇಶ, ಅಫಘಾನಿಸ್ತಾನದಿಂದ ಬರುವ ಮುಸ್ಲಿಮೇತರ ಅಕ್ರಮ ವಲಸಿಗರಿಗೆ ಭಾರತದ ಪೌರತ್ವ ಲಭಿಸುತ್ತದೆ. ಅಕ್ರಮ ವಲಸಿಗನಾದ ಓರ್ವ ಮುಸ್ಲಿಮ್ ಹಿಂದೂಧರ್ಮಕ್ಕೆ ಮತಾಂತರವಾದರೆ ಅವನಿಗೆ ಪೌರತ್ವ ಲಭಿಸುತ್ತದೆಯೇ? ಹಾಗೆಯೇ ಓರ್ವ ಹಿಂದೂ ಇಸ್ಲಾಮಿಗೆ ಮತಾಂತರವಾದರೆ ಅವನ ಪೌರತ್ವ ರದ್ದಾಗುತ್ತದೆಯೇ? ಒಟ್ಟಾರೆಯಗಿ ಧರ್ಮಾಧಾರಿತ ಪೌರತ್ವ ಸಂವಿಧಾನದ ಮೂಲಭೂತ ಸ್ವರೂಪಕ್ಕೆ ವಿರುದ್ಧವಾಗಿದೆ.

ಕನ್ನಡದ ಚಾನೆಲ್‍ಗಳು ದಿನಬೆಳಗಾದರೆ ಪ್ರಸಾರಗೊಳಿಸುತ್ತಿರುವ ಜ್ಯೋತಿಷ್ಯ, ಫಲ ಜ್ಯೋತಿಷ್ಯ, ವಾಸ್ತು, ಹೀಗೂ ಉಂಟೇ? ಮುಂತಾದ ಕಾರ್ಯಕ್ರಮದ ಪ್ರಕಾರ ಈ ಲೋಕ ಅದೆಷ್ಟೋ ಸಲ ನಿರ್ನಾಮವಾಗಬೇಕಿತ್ತು| ಕರಾವಳಿಯಂತೂ ನೂರಾರುಬಾರಿ ಸುನಾಮಿಗೆ ಕೊಚ್ಚಿಹೋಗಬೇಕಿತ್ತು| ಮಲೆಯಾಳಂ ಚಾನೆಲ್‍ಗಳು ಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಮೂಡಿಸಲು ಪ್ರಯತ್ನಿಸುವಾಗ ನಮ್ಮ ಕೆಲವು ಚಾನೆಲ್‍ಗಳು ಜನರನ್ನು ಮೂಢನಂಬಿಕೆ, ಕಂದಾಚಾರಗಳ ಕೂಪಕ್ಕೆ ತಳ್ಳುತ್ತಿದೆ. ನಮ್ಮ ಚಾನೆಲ್‍ಗಳು ಹತ್ತಿಪ್ಪತ್ತು ಮಂದಿಯನ್ನು ಗುಡ್ಡೆ ಹಾಕಿಕೊಂಡು ಚಾನೆಲನ್ನು ಮೀನು ಮಾರುಕಟ್ಟೆಯಾಗಿ ಮಾರ್ಪಡಿಸಿರುವ ಸುಳ್ಳಿನ ಸರದಾರ ಅರ್ನಾಬ್ ಗೋಸ್ವಾಮಿಯನ್ನು ಅನುಸರಿಸುವ ಬದಲು ಎನ್.ಡಿ.ಟಿ.ವಿ.ಯ ರವೀಶ್‍ಕುಮಾರ್ ಹಾಗೂ ಇಂಡಿಯಾ ಟುಡೆಯ ರಾಜ್‍ದೀಪ್ ಸರ್ದೇಸಾಯಿ ಅವರನ್ನು ಅನುಸರಿಸಲಿ. ಬಿ.ಬಿ.ಸಿ, ಸಿ.ಎನ್.ಎನ್, ಅಲ್ ಜಝೀರ ಪ್ರಸಾರಗೊಳಿಸುವ ಅಂತರ್ ರಾಷ್ಟ್ರೀಯ ಸುದ್ದಿಗಳನ್ನು ಮರುಪ್ರಸಾರಗೊಳಿಸಿ (ಮೌಢ್ಯ ಬಿತ್ತರಿಸುವ ಬದಲಿಗೆ) ತಮ್ಮ ಚಾನೆಲ್‍ಗಳ ಗುಣಮಟ್ಟವನ್ನು ಹೆಚ್ಚಿಸಲು ಪ್ರಯತ್ನಿಸಲಿ. ರಿಮೋಟ್ ಜನರ ಕೈಯಲ್ಲಿಯೇ ಇರುವುದರಿಂದ ಜನರು ತಾವು ಹೇಳಿದ್ದನ್ನೇ ಪರಮಸತ್ಯವೆಂದು ನಂಬುತ್ತಾರೆ ಎಂಬ ಭ್ರಮೆ ಯಾರಿಗೂ ಬೇಡ.

ಜಿಲ್ಲೆಯಮಟ್ಟಿಗೆ ಹೇಳುವುದಾದರೆ ಬೆಳಗ್ಗಿನ ಪತ್ರಿಕೆಗಳಿಗಿಂತ ಸಂಜೆ ಪತ್ರಿಕೆಗಳೇ ಹೆಚ್ಚು ಜಾತ್ಯತೀತವಾದಿಯಾಗಿವೆ. ಅವುಗಳ ಸಂಘಪರಿವಾರಕ್ಕೆ ನೀಡಿದಷ್ಟೇ ಪ್ರಾಮುಖ್ಯತೆಯನ್ನು ಇತರರಿಗೂ ನೀಡುವ ಮೂಲಕ ತಕ್ಕಡಿಯ ಮುಳ್ಳನ್ನು ನೇರವಾಗಿರಿಸಲು ಪ್ರಯತ್ನಿಸುತ್ತಿದೆ. ರಾಜ್ಯಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಜಾವಾಣಿ, ವಾರ್ತಾಭಾರತಿ, ನ್ಯಾಯಪಥದಂತಹ ಪತ್ರಿಕೆಗಳಿರುವಂತೆ ಒಂದು ಚಾನಲ್‍ನ ಅಗತ್ಯವಿದೆ. ಜಾತ್ಯತೀತ ಪ್ರೇಮಿಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವರೆಂದು ಆಶಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...