Homeಕರ್ನಾಟಕಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಪತ್ತೆ

- Advertisement -
- Advertisement -

ಮಂಗಳೂರಿನ ಸುರತ್ಕಲ್‌ ಪ್ರದೇಶದ ಶಾಲೆಯೊಂದರ ನಾಲ್ವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ.

ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ ಪುತ್ರ ಯಶ್ಚಿತ್ ( 15) , ಹಳೆಯಂಗಡಿ ತೋಕೂರು ನಿವಾಸಿ ವಸಂತ ಎಂಬವರ ಪುತ್ರ ರಾಘವೇಂದ್ರ (15),ಸುರತ್ಕಲ್ ಗುಡ್ಡೆಕೊಪ್ಲ ನಿವಾಸಿ ವಿಶ್ವನಾಥ ಎಂಬವರ ಪುತ್ರ ನಿರೂಪ್ (15), ಚಿತ್ರಾಪುರ ನಿವಾಸಿ ದೇವದಾಸ್ ಎಂಬವರ ಪುತ್ರ ಅನ್ವಿತ್ (15) ಮೃತಪಟ್ಟ ವಿದ್ಯಾರ್ಥಿಗಳು. ಇವರು ಸುರತ್ಕಲ್‌ನ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿದ್ದರು.

ನಿನ್ನೆ ಶಾಲೆಯಲ್ಲಿ ಎಸೆಸೆಲ್ಸಿ ಇಂಗ್ಲೀಷ್‌ ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿದ ಬಳಿಕ ವಿದ್ಯಾರ್ಥಿಗಳು ಮನೆಗೆ ತೆರಳದೆ ನಾಪತ್ತೆಯಾಗಿದ್ದರು. ಮಕ್ಕಳು ಸಂಜೆಯಾದರೂ ಮನೆಗೆ ಬರದ ಹಿನ್ನೆಲೆ ಪೋಷಕರು ಹುಡುಕಾಟವನ್ನು ನಡೆಸಿದ್ದು, ಬಳಿಕ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸಿದ ಪೊಲೀಸರು ವಿವಿಧೆಡೆ ಸಿಸಿ ಟಿವಿ ಪರಿಶೀಲಿಸಿದ್ದಾರೆ. ಈ ವೇಳೆ, ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿಯಲ್ಲಿ ಇಳಿದು ಮುಂದಕ್ಕೆ ತೆರಳಿದ್ದಾರೆ ಎಂಬುದು ಗೊತ್ತಾಗಿದೆ. ಬಳಿಕ, ವಿದ್ಯಾರ್ಥಿಯೋರ್ವನ ಬಳಿಯಿದ್ದ ಮೊಬೈಲ್ ನ ಟವರ್ ಲೋಕೇಷನ್ ಆಧಾರದಲ್ಲಿ ಅವರು ನದಿ ತೀರಕ್ಕೆ ಹೋಗಿದ್ದಾರೆಂದು ಪೊಲೀಸರು ಕಂಡುಕೊಂಡಿದ್ದಾರೆ. ನದಿ ಬಳಿ ಪರಿಶೀಲನೆ ನಡೆಸಿದಾಗ, ವಿದ್ಯಾರ್ಥಿಗಳ ಬ್ಯಾಗ್‌, ಚಪ್ಪಲಿಗಳು ಪತ್ತೆಯಾಗಿವೆ. ನಂತರ ನದಿಯಲ್ಲಿ ಶೋಧ ನಡೆಸಿದ್ದು, ವಿದ್ಯಾರ್ಥಿಗಳ ಮೃತದೇಹಗಳು ಪತ್ತೆಯಾಗಿವೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ಲಾಕ್‌ ಆಸ್ಪತ್ರೆಗೆ ರವಾನಿಸಲಾಗಿದೆ.

ವಿದ್ಯಾರ್ಥಿಗಳು ಈಜಲೆಂದು ನದಿಗಿಳಿದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರರೆ ಎನ್ನಲಾಗಿದ್ದು, ನಾಲ್ಕು ಮಂದಿ ಮಕ್ಕಳು ತಮ್ಮ ಶಾಲಾ ಚೀಲಗಳನ್ನು ನದಿಯ ದಡದಲ್ಲಿಟ್ಟು ನೀರಿನಲ್ಲಿ ಇಳಿದಿದ್ದರು. ಸ್ನೇಹಿತರು ನೀರಿನಲ್ಲಿ ಮುಳುಗುತ್ತಿದ್ದಂತೆಯೇ ಜೊತೆಗಿದ್ದ ಮೂವರು ಸ್ಥಳದಿಂದ ತಮ್ಮ ಮನೆಗಳಿಗೆ ತೆರಳಿದ್ದರು ಎನ್ನಲಾಗುತ್ತಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನು ಓದಿ: ಲೋಕಪಾಲ್‌ ಮುಖ್ಯಸ್ಥರಾಗಿ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ನೇಮಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...