Homeಕರ್ನಾಟಕಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಪತ್ತೆ

- Advertisement -
- Advertisement -

ಮಂಗಳೂರಿನ ಸುರತ್ಕಲ್‌ ಪ್ರದೇಶದ ಶಾಲೆಯೊಂದರ ನಾಲ್ವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ.

ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ ಪುತ್ರ ಯಶ್ಚಿತ್ ( 15) , ಹಳೆಯಂಗಡಿ ತೋಕೂರು ನಿವಾಸಿ ವಸಂತ ಎಂಬವರ ಪುತ್ರ ರಾಘವೇಂದ್ರ (15),ಸುರತ್ಕಲ್ ಗುಡ್ಡೆಕೊಪ್ಲ ನಿವಾಸಿ ವಿಶ್ವನಾಥ ಎಂಬವರ ಪುತ್ರ ನಿರೂಪ್ (15), ಚಿತ್ರಾಪುರ ನಿವಾಸಿ ದೇವದಾಸ್ ಎಂಬವರ ಪುತ್ರ ಅನ್ವಿತ್ (15) ಮೃತಪಟ್ಟ ವಿದ್ಯಾರ್ಥಿಗಳು. ಇವರು ಸುರತ್ಕಲ್‌ನ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿದ್ದರು.

ನಿನ್ನೆ ಶಾಲೆಯಲ್ಲಿ ಎಸೆಸೆಲ್ಸಿ ಇಂಗ್ಲೀಷ್‌ ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿದ ಬಳಿಕ ವಿದ್ಯಾರ್ಥಿಗಳು ಮನೆಗೆ ತೆರಳದೆ ನಾಪತ್ತೆಯಾಗಿದ್ದರು. ಮಕ್ಕಳು ಸಂಜೆಯಾದರೂ ಮನೆಗೆ ಬರದ ಹಿನ್ನೆಲೆ ಪೋಷಕರು ಹುಡುಕಾಟವನ್ನು ನಡೆಸಿದ್ದು, ಬಳಿಕ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸಿದ ಪೊಲೀಸರು ವಿವಿಧೆಡೆ ಸಿಸಿ ಟಿವಿ ಪರಿಶೀಲಿಸಿದ್ದಾರೆ. ಈ ವೇಳೆ, ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿಯಲ್ಲಿ ಇಳಿದು ಮುಂದಕ್ಕೆ ತೆರಳಿದ್ದಾರೆ ಎಂಬುದು ಗೊತ್ತಾಗಿದೆ. ಬಳಿಕ, ವಿದ್ಯಾರ್ಥಿಯೋರ್ವನ ಬಳಿಯಿದ್ದ ಮೊಬೈಲ್ ನ ಟವರ್ ಲೋಕೇಷನ್ ಆಧಾರದಲ್ಲಿ ಅವರು ನದಿ ತೀರಕ್ಕೆ ಹೋಗಿದ್ದಾರೆಂದು ಪೊಲೀಸರು ಕಂಡುಕೊಂಡಿದ್ದಾರೆ. ನದಿ ಬಳಿ ಪರಿಶೀಲನೆ ನಡೆಸಿದಾಗ, ವಿದ್ಯಾರ್ಥಿಗಳ ಬ್ಯಾಗ್‌, ಚಪ್ಪಲಿಗಳು ಪತ್ತೆಯಾಗಿವೆ. ನಂತರ ನದಿಯಲ್ಲಿ ಶೋಧ ನಡೆಸಿದ್ದು, ವಿದ್ಯಾರ್ಥಿಗಳ ಮೃತದೇಹಗಳು ಪತ್ತೆಯಾಗಿವೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ಲಾಕ್‌ ಆಸ್ಪತ್ರೆಗೆ ರವಾನಿಸಲಾಗಿದೆ.

ವಿದ್ಯಾರ್ಥಿಗಳು ಈಜಲೆಂದು ನದಿಗಿಳಿದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರರೆ ಎನ್ನಲಾಗಿದ್ದು, ನಾಲ್ಕು ಮಂದಿ ಮಕ್ಕಳು ತಮ್ಮ ಶಾಲಾ ಚೀಲಗಳನ್ನು ನದಿಯ ದಡದಲ್ಲಿಟ್ಟು ನೀರಿನಲ್ಲಿ ಇಳಿದಿದ್ದರು. ಸ್ನೇಹಿತರು ನೀರಿನಲ್ಲಿ ಮುಳುಗುತ್ತಿದ್ದಂತೆಯೇ ಜೊತೆಗಿದ್ದ ಮೂವರು ಸ್ಥಳದಿಂದ ತಮ್ಮ ಮನೆಗಳಿಗೆ ತೆರಳಿದ್ದರು ಎನ್ನಲಾಗುತ್ತಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನು ಓದಿ: ಲೋಕಪಾಲ್‌ ಮುಖ್ಯಸ್ಥರಾಗಿ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ನೇಮಕ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...