Homeಮುಖಪುಟಮೋದಿಯವರದ್ದೇ ಯೂಟ್ಯೂಬ್‌ನಲ್ಲಿ ಅವರ ಜನಪ್ರಿಯತೆ ಕುಸಿತ: ಮನ್ ಕಿ ಬಾತ್ ತಿರಸ್ಕರಿಸಿದ ವಿದ್ಯಾರ್ಥಿಗಳು!

ಮೋದಿಯವರದ್ದೇ ಯೂಟ್ಯೂಬ್‌ನಲ್ಲಿ ಅವರ ಜನಪ್ರಿಯತೆ ಕುಸಿತ: ಮನ್ ಕಿ ಬಾತ್ ತಿರಸ್ಕರಿಸಿದ ವಿದ್ಯಾರ್ಥಿಗಳು!

ಎಷ್ಟೆಲ್ಲಾ ಕಟಿಬದ್ಧ ಐಟಿ ಸೆಲ್, ದೇಶದ ತುಂಬಾ ಅತಿ ದೊಡ್ಡ ಜಾಲವಿದ್ದರೂ ಸಹ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳ ಸಂಖ್ಯೆ ಏಳೆಂಟು ಪಟ್ಟು ಹೆಚ್ಚಾಗಿರುವುದು ಬಿಜೆಪಿಗೆ ದೊಡ್ಡ ತಲೆನೋವಿನ ವಿಷಯವಾಗಿದೆ.

- Advertisement -
- Advertisement -

ಪ್ರತಿ ಬಾರಿ ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿತ್ತು. ಆದರೆ ಈ ಬಾರಿಯ ಮನ್ ಕಿ ಬಾತ್‌ಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮೋದಿಯವರ ಜನಪ್ರಿಯತೆ ಕುಸಿದಿದೆ ಎಂಬ ಚರ್ಚೆ ಆರಂಭವಾಗಿದೆ.

ನಿನ್ನೆ ಮನ್ ಕಿ ಬಾತ್ ಪ್ರಸಾರವಾದಾಗಿನಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹೊತ್ತಲ್ಲಿ, ವಿದ್ಯಾರ್ಥಿಗಳ, ಹಲವು ರಾಜ್ಯಗಳ ವಿರೋಧದ ನಡುವೆಯೂ NEET ಮತ್ತು JEE ಪರೀಕ್ಷೆಗಳನ್ನು ನಡೆಸಲು ಕೇಂದ್ರ ತಯಾರಿ ನಡೆಸಿರುವುದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳು ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.

ಮನ್‌ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿತ್ತು. ಅಲ್ಲೆ ಅತ್ಯಧಿಕ ಜನ ಡಿಸ್‌ಲೈಕ್ ಮಾಡುವ ಮೂಲಕ ತಮ್ಮ ವಿರೋಧ ದಾಖಲಿಸಿದ್ದಾರೆ. ಈ ವರದಿ ಬರೆಯುವ ವೇಳೆಗೆ ಆ ವಿಡಿಯೋಗೆ 63,000 ಜನರು ಲೈಕ್ ಒತ್ತಿದರೆ, 4,37,000 ಜನರು ಡಿಸ್‌ಲೈಕ್‌ ಒತ್ತುವ ಮೂಲಕ ಮೋದಿಯವರನ್ನು ಮುಜುಗರಕ್ಕೀಡುಮಾಡಿದ್ದಾರೆ.

ಇನ್ನು ಪ್ರಧಾನಿ ಕಛೇರಿಯ ಅಧಿಕೃತ ಯೂಟ್ಯೂಬ್‌ನಲ್ಲಿ 35,000 ಜನ ಇಷ್ಟಪಟ್ಟರೆ 69,000 ಜನ ತಿರಸ್ಕರಿಸಿದ್ದಾರೆ. ಒಟ್ಟಿನಲ್ಲಿ ಎಲ್ಲಾ ವೇದಿಕೆಗಳಲ್ಲಿಯೂ ಮೋದಿಯವರ ಮನ್‌ಕಿ ಬಾತ್‌ಗೆ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳೇ ಅಧಿಕವಾಗಿವೆ.

ನಿನ್ನೆ ಸಂಜೆಯೇ ಮೋದಿಯವರ ವಿಡಿಯೋಗಳಿಗೆ ಡಿಸ್‌ಲೈಕ್‌ಗಳು ಜಾಸ್ತಿಯಾಗುತ್ತಿರುವುದು ಬಿಜೆಪಿ ಗಮನಕ್ಕೆ ಬಂದಿದೆ. ಕೂಡಲೇ ಐಟಿ ಸೆಲ್‌ ಗಮನಕ್ಕೆ ತಂದು ಲೈಕ್‌ಗಳ ಸಂಖ್ಯೆ ಜಾಸ್ತಿ ಮಾಡುವಂತೆ ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಎಷ್ಟೆಲ್ಲಾ ಕಟಿಬದ್ಧ ಐಟಿ ಸೆಲ್, ದೇಶದ ತುಂಬಾ ಅತಿ ದೊಡ್ಡ ಜಾಲವಿದ್ದರೂ ಸಹ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳ ಸಂಖ್ಯೆ ಏಳೆಂಟು ಪಟ್ಟು ಹೆಚ್ಚಾಗಿರುವುದು ಬಿಜೆಪಿಗೆ ದೊಡ್ಡ ತಲೆನೋವಿನ ವಿಷಯವಾಗಿದೆ.

ದೇಶದಲ್ಲಿ ನಿರುದ್ಯೋಗದ ಸಮಸ್ಯೆ ತಾಂಡವವಾಡುತ್ತಿದ್ದು, ಮನ್ ಕಿ ಬಾತ್ ಬಿಟ್ಟು, ಕಾಮ್ ಕಿ ಬಾತ್ ಹೇಳಿ ಎಂಬ ಕಾಮೆಂಟ್‌ಗಳು ಬಂದಿವೆ. ಗೊಂಬೆಗಳ ಬದಲು ಸಮಸ್ಯೆಗಳ ಬಗ್ಗೆ ಮಾತನಾಡಿ, ಪರಿಹಾರ ನೀಡಿ ಎಂಬಂತ ಕಾಮೆಂಟ್‌ಗಳು ಬರತೊಡಗಿದವು. ಯೂಟ್ಯೂಬ್‌ನಲ್ಲಿ ಕಾಮೆಂಟ್‌ಗಳಲ್ಲಿ ಪ್ರಶ್ನೆಗಳು ಹೆಚ್ಚಾಗತೊಡಗಿದಂತೆ ಬಿಜೆಪಿಯು ತಕ್ಷಣ ಕಾಮೆಂಟ್‌ಗಳನ್ನು ಸಾರ್ವಜನಿಕರಿಗೆ ಕಾಣಿಸದಂತೆ ಮರೆಮಾಚಿದೆ. ಜನ ಅದಕ್ಕೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್ ಚಾನೆಲ್‌ಗಳಲ್ಲಿ ಪ್ರಸಾರವಾದ ಕಾರ್ಯಕ್ರಮಕ್ಕೆ ಜನ ಈಗಲೂ ಕಾಮೆಂಟ್ ಮಾಡುತ್ತಿದ್ದಾರೆ. ಜೊತೆಗೆ ಡಿಸ್‌ಲೈಕ್ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಬ್ಯಾಂಕಿಂಗ್ ಪರೀಕ್ಷೆಗಳು, ನೀಟ್, ಜೆಇಇ ಪರೀಕ್ಷೆ ಮುಂದೂಡಿ, ಸರ್ಕಾರ ನಡೆಸಿರುವ ಪರೀಕ್ಷೆಗಳ ಫಲಿತಾಂಶ ಬಿಡುಗಡೆ ಮಾಡಿ, ಪರೀಕ್ಷೆಗಳ ಬಗ್ಗೆ ಮಾತನಾಡಿ ಎಂದರೆ ಗೊಂಬೆಗಳ ಬಗ್ಗೆ ಮಾತನಾಡುತ್ತಾರೆ ಎಂಬಂತ ಕಾಮೆಂಟ್‌ಗಳನ್ನು ಅಲ್ಲಿ ಕಾಣಬಹುದು.

ಖ್ಯಾತ ಯೂಟ್ಯೂಬರ್ ಮತ್ತು ಯುವ ಚಿಂತಕ ಧೃವ್ ರಾಠೀ ಟ್ವೀಟ್ ಮಾಡಿ “ಪಿಎಂಓ ಸರ್ಕಾರವನ್ನು ಟೀಕಿಸಿ, ಟೀಕೆಗಳು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುತ್ತದೆ ಎಂದು ಬರದುಕೊಂಡಿದ್ದಾರೆ. ಆದರೆ ಕಮೆಂಟ್ ಮೂಲಕ ಟೀಕೆ ಮಾಡಲು ಹೋದರೆ ಕಮೆಂಟ್ ಸೆಕ್ಷನ್ ಅನ್ನೇ ತೆಗೆದುಹಾಕಲಾಗುತ್ತದೆ” ಎಂದು ವ್ಯಂಗ್ಯವಾಡಿದ್ದಾರೆ.

ಇಷ್ಟು ದಿನ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಮಾತ್ರ ಪರೀಕ್ಷೆ ವಿರೋಧಿಸುತ್ತಿದ್ದಾರೆ ಎನ್ನಲಾಗುತ್ತಿತ್ತು. ಆದರೆ ನಿನ್ನೆಯಿಂದ ನಡೆಯುತ್ತಿರುವ ಈ ಡಿಸ್‌ಲೈಕ್ ಪ್ರಕ್ರಿಯೇ ಇಡೀ ದೇಶದ ಜನರು ಕೂಡ ಪರೀಕ್ಷೆ ವಿರೋಧಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ನೀತಿಗೆ ಭಾರೀ ವಿರೋಧ ಇದೆ ಎಂಬುದನ್ನು ಸಾಬೀತುಪಡಿಸುತ್ತಿದೆ.

ನಾಳೆಯಿಂದ ಜೆಇಇ ಪರೀಕ್ಷೆ ಆರಂಭವಾಗಲಿದೆ. ಈಗಾಗಲೇ ವಿರೋಧ ಪಕ್ಷಗಳು ಪರೀಕ್ಷೆಗೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿವೆ.


ಇದನ್ನೂ ಓದಿ: ಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...