Homeಮುಖಪುಟಮೋದಿಯವರದ್ದೇ ಯೂಟ್ಯೂಬ್‌ನಲ್ಲಿ ಅವರ ಜನಪ್ರಿಯತೆ ಕುಸಿತ: ಮನ್ ಕಿ ಬಾತ್ ತಿರಸ್ಕರಿಸಿದ ವಿದ್ಯಾರ್ಥಿಗಳು!

ಮೋದಿಯವರದ್ದೇ ಯೂಟ್ಯೂಬ್‌ನಲ್ಲಿ ಅವರ ಜನಪ್ರಿಯತೆ ಕುಸಿತ: ಮನ್ ಕಿ ಬಾತ್ ತಿರಸ್ಕರಿಸಿದ ವಿದ್ಯಾರ್ಥಿಗಳು!

ಎಷ್ಟೆಲ್ಲಾ ಕಟಿಬದ್ಧ ಐಟಿ ಸೆಲ್, ದೇಶದ ತುಂಬಾ ಅತಿ ದೊಡ್ಡ ಜಾಲವಿದ್ದರೂ ಸಹ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳ ಸಂಖ್ಯೆ ಏಳೆಂಟು ಪಟ್ಟು ಹೆಚ್ಚಾಗಿರುವುದು ಬಿಜೆಪಿಗೆ ದೊಡ್ಡ ತಲೆನೋವಿನ ವಿಷಯವಾಗಿದೆ.

- Advertisement -
- Advertisement -

ಪ್ರತಿ ಬಾರಿ ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿತ್ತು. ಆದರೆ ಈ ಬಾರಿಯ ಮನ್ ಕಿ ಬಾತ್‌ಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮೋದಿಯವರ ಜನಪ್ರಿಯತೆ ಕುಸಿದಿದೆ ಎಂಬ ಚರ್ಚೆ ಆರಂಭವಾಗಿದೆ.

ನಿನ್ನೆ ಮನ್ ಕಿ ಬಾತ್ ಪ್ರಸಾರವಾದಾಗಿನಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹೊತ್ತಲ್ಲಿ, ವಿದ್ಯಾರ್ಥಿಗಳ, ಹಲವು ರಾಜ್ಯಗಳ ವಿರೋಧದ ನಡುವೆಯೂ NEET ಮತ್ತು JEE ಪರೀಕ್ಷೆಗಳನ್ನು ನಡೆಸಲು ಕೇಂದ್ರ ತಯಾರಿ ನಡೆಸಿರುವುದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳು ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.

ಮನ್‌ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿತ್ತು. ಅಲ್ಲೆ ಅತ್ಯಧಿಕ ಜನ ಡಿಸ್‌ಲೈಕ್ ಮಾಡುವ ಮೂಲಕ ತಮ್ಮ ವಿರೋಧ ದಾಖಲಿಸಿದ್ದಾರೆ. ಈ ವರದಿ ಬರೆಯುವ ವೇಳೆಗೆ ಆ ವಿಡಿಯೋಗೆ 63,000 ಜನರು ಲೈಕ್ ಒತ್ತಿದರೆ, 4,37,000 ಜನರು ಡಿಸ್‌ಲೈಕ್‌ ಒತ್ತುವ ಮೂಲಕ ಮೋದಿಯವರನ್ನು ಮುಜುಗರಕ್ಕೀಡುಮಾಡಿದ್ದಾರೆ.

ಇನ್ನು ಪ್ರಧಾನಿ ಕಛೇರಿಯ ಅಧಿಕೃತ ಯೂಟ್ಯೂಬ್‌ನಲ್ಲಿ 35,000 ಜನ ಇಷ್ಟಪಟ್ಟರೆ 69,000 ಜನ ತಿರಸ್ಕರಿಸಿದ್ದಾರೆ. ಒಟ್ಟಿನಲ್ಲಿ ಎಲ್ಲಾ ವೇದಿಕೆಗಳಲ್ಲಿಯೂ ಮೋದಿಯವರ ಮನ್‌ಕಿ ಬಾತ್‌ಗೆ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳೇ ಅಧಿಕವಾಗಿವೆ.

ನಿನ್ನೆ ಸಂಜೆಯೇ ಮೋದಿಯವರ ವಿಡಿಯೋಗಳಿಗೆ ಡಿಸ್‌ಲೈಕ್‌ಗಳು ಜಾಸ್ತಿಯಾಗುತ್ತಿರುವುದು ಬಿಜೆಪಿ ಗಮನಕ್ಕೆ ಬಂದಿದೆ. ಕೂಡಲೇ ಐಟಿ ಸೆಲ್‌ ಗಮನಕ್ಕೆ ತಂದು ಲೈಕ್‌ಗಳ ಸಂಖ್ಯೆ ಜಾಸ್ತಿ ಮಾಡುವಂತೆ ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಎಷ್ಟೆಲ್ಲಾ ಕಟಿಬದ್ಧ ಐಟಿ ಸೆಲ್, ದೇಶದ ತುಂಬಾ ಅತಿ ದೊಡ್ಡ ಜಾಲವಿದ್ದರೂ ಸಹ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳ ಸಂಖ್ಯೆ ಏಳೆಂಟು ಪಟ್ಟು ಹೆಚ್ಚಾಗಿರುವುದು ಬಿಜೆಪಿಗೆ ದೊಡ್ಡ ತಲೆನೋವಿನ ವಿಷಯವಾಗಿದೆ.

ದೇಶದಲ್ಲಿ ನಿರುದ್ಯೋಗದ ಸಮಸ್ಯೆ ತಾಂಡವವಾಡುತ್ತಿದ್ದು, ಮನ್ ಕಿ ಬಾತ್ ಬಿಟ್ಟು, ಕಾಮ್ ಕಿ ಬಾತ್ ಹೇಳಿ ಎಂಬ ಕಾಮೆಂಟ್‌ಗಳು ಬಂದಿವೆ. ಗೊಂಬೆಗಳ ಬದಲು ಸಮಸ್ಯೆಗಳ ಬಗ್ಗೆ ಮಾತನಾಡಿ, ಪರಿಹಾರ ನೀಡಿ ಎಂಬಂತ ಕಾಮೆಂಟ್‌ಗಳು ಬರತೊಡಗಿದವು. ಯೂಟ್ಯೂಬ್‌ನಲ್ಲಿ ಕಾಮೆಂಟ್‌ಗಳಲ್ಲಿ ಪ್ರಶ್ನೆಗಳು ಹೆಚ್ಚಾಗತೊಡಗಿದಂತೆ ಬಿಜೆಪಿಯು ತಕ್ಷಣ ಕಾಮೆಂಟ್‌ಗಳನ್ನು ಸಾರ್ವಜನಿಕರಿಗೆ ಕಾಣಿಸದಂತೆ ಮರೆಮಾಚಿದೆ. ಜನ ಅದಕ್ಕೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್ ಚಾನೆಲ್‌ಗಳಲ್ಲಿ ಪ್ರಸಾರವಾದ ಕಾರ್ಯಕ್ರಮಕ್ಕೆ ಜನ ಈಗಲೂ ಕಾಮೆಂಟ್ ಮಾಡುತ್ತಿದ್ದಾರೆ. ಜೊತೆಗೆ ಡಿಸ್‌ಲೈಕ್ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಬ್ಯಾಂಕಿಂಗ್ ಪರೀಕ್ಷೆಗಳು, ನೀಟ್, ಜೆಇಇ ಪರೀಕ್ಷೆ ಮುಂದೂಡಿ, ಸರ್ಕಾರ ನಡೆಸಿರುವ ಪರೀಕ್ಷೆಗಳ ಫಲಿತಾಂಶ ಬಿಡುಗಡೆ ಮಾಡಿ, ಪರೀಕ್ಷೆಗಳ ಬಗ್ಗೆ ಮಾತನಾಡಿ ಎಂದರೆ ಗೊಂಬೆಗಳ ಬಗ್ಗೆ ಮಾತನಾಡುತ್ತಾರೆ ಎಂಬಂತ ಕಾಮೆಂಟ್‌ಗಳನ್ನು ಅಲ್ಲಿ ಕಾಣಬಹುದು.

ಖ್ಯಾತ ಯೂಟ್ಯೂಬರ್ ಮತ್ತು ಯುವ ಚಿಂತಕ ಧೃವ್ ರಾಠೀ ಟ್ವೀಟ್ ಮಾಡಿ “ಪಿಎಂಓ ಸರ್ಕಾರವನ್ನು ಟೀಕಿಸಿ, ಟೀಕೆಗಳು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುತ್ತದೆ ಎಂದು ಬರದುಕೊಂಡಿದ್ದಾರೆ. ಆದರೆ ಕಮೆಂಟ್ ಮೂಲಕ ಟೀಕೆ ಮಾಡಲು ಹೋದರೆ ಕಮೆಂಟ್ ಸೆಕ್ಷನ್ ಅನ್ನೇ ತೆಗೆದುಹಾಕಲಾಗುತ್ತದೆ” ಎಂದು ವ್ಯಂಗ್ಯವಾಡಿದ್ದಾರೆ.

ಇಷ್ಟು ದಿನ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಮಾತ್ರ ಪರೀಕ್ಷೆ ವಿರೋಧಿಸುತ್ತಿದ್ದಾರೆ ಎನ್ನಲಾಗುತ್ತಿತ್ತು. ಆದರೆ ನಿನ್ನೆಯಿಂದ ನಡೆಯುತ್ತಿರುವ ಈ ಡಿಸ್‌ಲೈಕ್ ಪ್ರಕ್ರಿಯೇ ಇಡೀ ದೇಶದ ಜನರು ಕೂಡ ಪರೀಕ್ಷೆ ವಿರೋಧಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ನೀತಿಗೆ ಭಾರೀ ವಿರೋಧ ಇದೆ ಎಂಬುದನ್ನು ಸಾಬೀತುಪಡಿಸುತ್ತಿದೆ.

ನಾಳೆಯಿಂದ ಜೆಇಇ ಪರೀಕ್ಷೆ ಆರಂಭವಾಗಲಿದೆ. ಈಗಾಗಲೇ ವಿರೋಧ ಪಕ್ಷಗಳು ಪರೀಕ್ಷೆಗೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿವೆ.


ಇದನ್ನೂ ಓದಿ: ಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...