Homeಮುಖಪುಟಮೋದಿಯವರದ್ದೇ ಯೂಟ್ಯೂಬ್‌ನಲ್ಲಿ ಅವರ ಜನಪ್ರಿಯತೆ ಕುಸಿತ: ಮನ್ ಕಿ ಬಾತ್ ತಿರಸ್ಕರಿಸಿದ ವಿದ್ಯಾರ್ಥಿಗಳು!

ಮೋದಿಯವರದ್ದೇ ಯೂಟ್ಯೂಬ್‌ನಲ್ಲಿ ಅವರ ಜನಪ್ರಿಯತೆ ಕುಸಿತ: ಮನ್ ಕಿ ಬಾತ್ ತಿರಸ್ಕರಿಸಿದ ವಿದ್ಯಾರ್ಥಿಗಳು!

ಎಷ್ಟೆಲ್ಲಾ ಕಟಿಬದ್ಧ ಐಟಿ ಸೆಲ್, ದೇಶದ ತುಂಬಾ ಅತಿ ದೊಡ್ಡ ಜಾಲವಿದ್ದರೂ ಸಹ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳ ಸಂಖ್ಯೆ ಏಳೆಂಟು ಪಟ್ಟು ಹೆಚ್ಚಾಗಿರುವುದು ಬಿಜೆಪಿಗೆ ದೊಡ್ಡ ತಲೆನೋವಿನ ವಿಷಯವಾಗಿದೆ.

- Advertisement -
- Advertisement -

ಪ್ರತಿ ಬಾರಿ ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿತ್ತು. ಆದರೆ ಈ ಬಾರಿಯ ಮನ್ ಕಿ ಬಾತ್‌ಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮೋದಿಯವರ ಜನಪ್ರಿಯತೆ ಕುಸಿದಿದೆ ಎಂಬ ಚರ್ಚೆ ಆರಂಭವಾಗಿದೆ.

ನಿನ್ನೆ ಮನ್ ಕಿ ಬಾತ್ ಪ್ರಸಾರವಾದಾಗಿನಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹೊತ್ತಲ್ಲಿ, ವಿದ್ಯಾರ್ಥಿಗಳ, ಹಲವು ರಾಜ್ಯಗಳ ವಿರೋಧದ ನಡುವೆಯೂ NEET ಮತ್ತು JEE ಪರೀಕ್ಷೆಗಳನ್ನು ನಡೆಸಲು ಕೇಂದ್ರ ತಯಾರಿ ನಡೆಸಿರುವುದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳು ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.

ಮನ್‌ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿತ್ತು. ಅಲ್ಲೆ ಅತ್ಯಧಿಕ ಜನ ಡಿಸ್‌ಲೈಕ್ ಮಾಡುವ ಮೂಲಕ ತಮ್ಮ ವಿರೋಧ ದಾಖಲಿಸಿದ್ದಾರೆ. ಈ ವರದಿ ಬರೆಯುವ ವೇಳೆಗೆ ಆ ವಿಡಿಯೋಗೆ 63,000 ಜನರು ಲೈಕ್ ಒತ್ತಿದರೆ, 4,37,000 ಜನರು ಡಿಸ್‌ಲೈಕ್‌ ಒತ್ತುವ ಮೂಲಕ ಮೋದಿಯವರನ್ನು ಮುಜುಗರಕ್ಕೀಡುಮಾಡಿದ್ದಾರೆ.

ಇನ್ನು ಪ್ರಧಾನಿ ಕಛೇರಿಯ ಅಧಿಕೃತ ಯೂಟ್ಯೂಬ್‌ನಲ್ಲಿ 35,000 ಜನ ಇಷ್ಟಪಟ್ಟರೆ 69,000 ಜನ ತಿರಸ್ಕರಿಸಿದ್ದಾರೆ. ಒಟ್ಟಿನಲ್ಲಿ ಎಲ್ಲಾ ವೇದಿಕೆಗಳಲ್ಲಿಯೂ ಮೋದಿಯವರ ಮನ್‌ಕಿ ಬಾತ್‌ಗೆ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳೇ ಅಧಿಕವಾಗಿವೆ.

ನಿನ್ನೆ ಸಂಜೆಯೇ ಮೋದಿಯವರ ವಿಡಿಯೋಗಳಿಗೆ ಡಿಸ್‌ಲೈಕ್‌ಗಳು ಜಾಸ್ತಿಯಾಗುತ್ತಿರುವುದು ಬಿಜೆಪಿ ಗಮನಕ್ಕೆ ಬಂದಿದೆ. ಕೂಡಲೇ ಐಟಿ ಸೆಲ್‌ ಗಮನಕ್ಕೆ ತಂದು ಲೈಕ್‌ಗಳ ಸಂಖ್ಯೆ ಜಾಸ್ತಿ ಮಾಡುವಂತೆ ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಎಷ್ಟೆಲ್ಲಾ ಕಟಿಬದ್ಧ ಐಟಿ ಸೆಲ್, ದೇಶದ ತುಂಬಾ ಅತಿ ದೊಡ್ಡ ಜಾಲವಿದ್ದರೂ ಸಹ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳ ಸಂಖ್ಯೆ ಏಳೆಂಟು ಪಟ್ಟು ಹೆಚ್ಚಾಗಿರುವುದು ಬಿಜೆಪಿಗೆ ದೊಡ್ಡ ತಲೆನೋವಿನ ವಿಷಯವಾಗಿದೆ.

ದೇಶದಲ್ಲಿ ನಿರುದ್ಯೋಗದ ಸಮಸ್ಯೆ ತಾಂಡವವಾಡುತ್ತಿದ್ದು, ಮನ್ ಕಿ ಬಾತ್ ಬಿಟ್ಟು, ಕಾಮ್ ಕಿ ಬಾತ್ ಹೇಳಿ ಎಂಬ ಕಾಮೆಂಟ್‌ಗಳು ಬಂದಿವೆ. ಗೊಂಬೆಗಳ ಬದಲು ಸಮಸ್ಯೆಗಳ ಬಗ್ಗೆ ಮಾತನಾಡಿ, ಪರಿಹಾರ ನೀಡಿ ಎಂಬಂತ ಕಾಮೆಂಟ್‌ಗಳು ಬರತೊಡಗಿದವು. ಯೂಟ್ಯೂಬ್‌ನಲ್ಲಿ ಕಾಮೆಂಟ್‌ಗಳಲ್ಲಿ ಪ್ರಶ್ನೆಗಳು ಹೆಚ್ಚಾಗತೊಡಗಿದಂತೆ ಬಿಜೆಪಿಯು ತಕ್ಷಣ ಕಾಮೆಂಟ್‌ಗಳನ್ನು ಸಾರ್ವಜನಿಕರಿಗೆ ಕಾಣಿಸದಂತೆ ಮರೆಮಾಚಿದೆ. ಜನ ಅದಕ್ಕೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್ ಚಾನೆಲ್‌ಗಳಲ್ಲಿ ಪ್ರಸಾರವಾದ ಕಾರ್ಯಕ್ರಮಕ್ಕೆ ಜನ ಈಗಲೂ ಕಾಮೆಂಟ್ ಮಾಡುತ್ತಿದ್ದಾರೆ. ಜೊತೆಗೆ ಡಿಸ್‌ಲೈಕ್ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಬ್ಯಾಂಕಿಂಗ್ ಪರೀಕ್ಷೆಗಳು, ನೀಟ್, ಜೆಇಇ ಪರೀಕ್ಷೆ ಮುಂದೂಡಿ, ಸರ್ಕಾರ ನಡೆಸಿರುವ ಪರೀಕ್ಷೆಗಳ ಫಲಿತಾಂಶ ಬಿಡುಗಡೆ ಮಾಡಿ, ಪರೀಕ್ಷೆಗಳ ಬಗ್ಗೆ ಮಾತನಾಡಿ ಎಂದರೆ ಗೊಂಬೆಗಳ ಬಗ್ಗೆ ಮಾತನಾಡುತ್ತಾರೆ ಎಂಬಂತ ಕಾಮೆಂಟ್‌ಗಳನ್ನು ಅಲ್ಲಿ ಕಾಣಬಹುದು.

ಖ್ಯಾತ ಯೂಟ್ಯೂಬರ್ ಮತ್ತು ಯುವ ಚಿಂತಕ ಧೃವ್ ರಾಠೀ ಟ್ವೀಟ್ ಮಾಡಿ “ಪಿಎಂಓ ಸರ್ಕಾರವನ್ನು ಟೀಕಿಸಿ, ಟೀಕೆಗಳು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುತ್ತದೆ ಎಂದು ಬರದುಕೊಂಡಿದ್ದಾರೆ. ಆದರೆ ಕಮೆಂಟ್ ಮೂಲಕ ಟೀಕೆ ಮಾಡಲು ಹೋದರೆ ಕಮೆಂಟ್ ಸೆಕ್ಷನ್ ಅನ್ನೇ ತೆಗೆದುಹಾಕಲಾಗುತ್ತದೆ” ಎಂದು ವ್ಯಂಗ್ಯವಾಡಿದ್ದಾರೆ.

ಇಷ್ಟು ದಿನ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಮಾತ್ರ ಪರೀಕ್ಷೆ ವಿರೋಧಿಸುತ್ತಿದ್ದಾರೆ ಎನ್ನಲಾಗುತ್ತಿತ್ತು. ಆದರೆ ನಿನ್ನೆಯಿಂದ ನಡೆಯುತ್ತಿರುವ ಈ ಡಿಸ್‌ಲೈಕ್ ಪ್ರಕ್ರಿಯೇ ಇಡೀ ದೇಶದ ಜನರು ಕೂಡ ಪರೀಕ್ಷೆ ವಿರೋಧಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ನೀತಿಗೆ ಭಾರೀ ವಿರೋಧ ಇದೆ ಎಂಬುದನ್ನು ಸಾಬೀತುಪಡಿಸುತ್ತಿದೆ.

ನಾಳೆಯಿಂದ ಜೆಇಇ ಪರೀಕ್ಷೆ ಆರಂಭವಾಗಲಿದೆ. ಈಗಾಗಲೇ ವಿರೋಧ ಪಕ್ಷಗಳು ಪರೀಕ್ಷೆಗೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿವೆ.


ಇದನ್ನೂ ಓದಿ: ಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...