Homeಮುಖಪುಟಮೋದಿಯವರದ್ದೇ ಯೂಟ್ಯೂಬ್‌ನಲ್ಲಿ ಅವರ ಜನಪ್ರಿಯತೆ ಕುಸಿತ: ಮನ್ ಕಿ ಬಾತ್ ತಿರಸ್ಕರಿಸಿದ ವಿದ್ಯಾರ್ಥಿಗಳು!

ಮೋದಿಯವರದ್ದೇ ಯೂಟ್ಯೂಬ್‌ನಲ್ಲಿ ಅವರ ಜನಪ್ರಿಯತೆ ಕುಸಿತ: ಮನ್ ಕಿ ಬಾತ್ ತಿರಸ್ಕರಿಸಿದ ವಿದ್ಯಾರ್ಥಿಗಳು!

ಎಷ್ಟೆಲ್ಲಾ ಕಟಿಬದ್ಧ ಐಟಿ ಸೆಲ್, ದೇಶದ ತುಂಬಾ ಅತಿ ದೊಡ್ಡ ಜಾಲವಿದ್ದರೂ ಸಹ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳ ಸಂಖ್ಯೆ ಏಳೆಂಟು ಪಟ್ಟು ಹೆಚ್ಚಾಗಿರುವುದು ಬಿಜೆಪಿಗೆ ದೊಡ್ಡ ತಲೆನೋವಿನ ವಿಷಯವಾಗಿದೆ.

- Advertisement -
- Advertisement -

ಪ್ರತಿ ಬಾರಿ ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿತ್ತು. ಆದರೆ ಈ ಬಾರಿಯ ಮನ್ ಕಿ ಬಾತ್‌ಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮೋದಿಯವರ ಜನಪ್ರಿಯತೆ ಕುಸಿದಿದೆ ಎಂಬ ಚರ್ಚೆ ಆರಂಭವಾಗಿದೆ.

ನಿನ್ನೆ ಮನ್ ಕಿ ಬಾತ್ ಪ್ರಸಾರವಾದಾಗಿನಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹೊತ್ತಲ್ಲಿ, ವಿದ್ಯಾರ್ಥಿಗಳ, ಹಲವು ರಾಜ್ಯಗಳ ವಿರೋಧದ ನಡುವೆಯೂ NEET ಮತ್ತು JEE ಪರೀಕ್ಷೆಗಳನ್ನು ನಡೆಸಲು ಕೇಂದ್ರ ತಯಾರಿ ನಡೆಸಿರುವುದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳು ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.

ಮನ್‌ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿತ್ತು. ಅಲ್ಲೆ ಅತ್ಯಧಿಕ ಜನ ಡಿಸ್‌ಲೈಕ್ ಮಾಡುವ ಮೂಲಕ ತಮ್ಮ ವಿರೋಧ ದಾಖಲಿಸಿದ್ದಾರೆ. ಈ ವರದಿ ಬರೆಯುವ ವೇಳೆಗೆ ಆ ವಿಡಿಯೋಗೆ 63,000 ಜನರು ಲೈಕ್ ಒತ್ತಿದರೆ, 4,37,000 ಜನರು ಡಿಸ್‌ಲೈಕ್‌ ಒತ್ತುವ ಮೂಲಕ ಮೋದಿಯವರನ್ನು ಮುಜುಗರಕ್ಕೀಡುಮಾಡಿದ್ದಾರೆ.

ಇನ್ನು ಪ್ರಧಾನಿ ಕಛೇರಿಯ ಅಧಿಕೃತ ಯೂಟ್ಯೂಬ್‌ನಲ್ಲಿ 35,000 ಜನ ಇಷ್ಟಪಟ್ಟರೆ 69,000 ಜನ ತಿರಸ್ಕರಿಸಿದ್ದಾರೆ. ಒಟ್ಟಿನಲ್ಲಿ ಎಲ್ಲಾ ವೇದಿಕೆಗಳಲ್ಲಿಯೂ ಮೋದಿಯವರ ಮನ್‌ಕಿ ಬಾತ್‌ಗೆ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳೇ ಅಧಿಕವಾಗಿವೆ.

ನಿನ್ನೆ ಸಂಜೆಯೇ ಮೋದಿಯವರ ವಿಡಿಯೋಗಳಿಗೆ ಡಿಸ್‌ಲೈಕ್‌ಗಳು ಜಾಸ್ತಿಯಾಗುತ್ತಿರುವುದು ಬಿಜೆಪಿ ಗಮನಕ್ಕೆ ಬಂದಿದೆ. ಕೂಡಲೇ ಐಟಿ ಸೆಲ್‌ ಗಮನಕ್ಕೆ ತಂದು ಲೈಕ್‌ಗಳ ಸಂಖ್ಯೆ ಜಾಸ್ತಿ ಮಾಡುವಂತೆ ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಎಷ್ಟೆಲ್ಲಾ ಕಟಿಬದ್ಧ ಐಟಿ ಸೆಲ್, ದೇಶದ ತುಂಬಾ ಅತಿ ದೊಡ್ಡ ಜಾಲವಿದ್ದರೂ ಸಹ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳ ಸಂಖ್ಯೆ ಏಳೆಂಟು ಪಟ್ಟು ಹೆಚ್ಚಾಗಿರುವುದು ಬಿಜೆಪಿಗೆ ದೊಡ್ಡ ತಲೆನೋವಿನ ವಿಷಯವಾಗಿದೆ.

ದೇಶದಲ್ಲಿ ನಿರುದ್ಯೋಗದ ಸಮಸ್ಯೆ ತಾಂಡವವಾಡುತ್ತಿದ್ದು, ಮನ್ ಕಿ ಬಾತ್ ಬಿಟ್ಟು, ಕಾಮ್ ಕಿ ಬಾತ್ ಹೇಳಿ ಎಂಬ ಕಾಮೆಂಟ್‌ಗಳು ಬಂದಿವೆ. ಗೊಂಬೆಗಳ ಬದಲು ಸಮಸ್ಯೆಗಳ ಬಗ್ಗೆ ಮಾತನಾಡಿ, ಪರಿಹಾರ ನೀಡಿ ಎಂಬಂತ ಕಾಮೆಂಟ್‌ಗಳು ಬರತೊಡಗಿದವು. ಯೂಟ್ಯೂಬ್‌ನಲ್ಲಿ ಕಾಮೆಂಟ್‌ಗಳಲ್ಲಿ ಪ್ರಶ್ನೆಗಳು ಹೆಚ್ಚಾಗತೊಡಗಿದಂತೆ ಬಿಜೆಪಿಯು ತಕ್ಷಣ ಕಾಮೆಂಟ್‌ಗಳನ್ನು ಸಾರ್ವಜನಿಕರಿಗೆ ಕಾಣಿಸದಂತೆ ಮರೆಮಾಚಿದೆ. ಜನ ಅದಕ್ಕೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್ ಚಾನೆಲ್‌ಗಳಲ್ಲಿ ಪ್ರಸಾರವಾದ ಕಾರ್ಯಕ್ರಮಕ್ಕೆ ಜನ ಈಗಲೂ ಕಾಮೆಂಟ್ ಮಾಡುತ್ತಿದ್ದಾರೆ. ಜೊತೆಗೆ ಡಿಸ್‌ಲೈಕ್ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಬ್ಯಾಂಕಿಂಗ್ ಪರೀಕ್ಷೆಗಳು, ನೀಟ್, ಜೆಇಇ ಪರೀಕ್ಷೆ ಮುಂದೂಡಿ, ಸರ್ಕಾರ ನಡೆಸಿರುವ ಪರೀಕ್ಷೆಗಳ ಫಲಿತಾಂಶ ಬಿಡುಗಡೆ ಮಾಡಿ, ಪರೀಕ್ಷೆಗಳ ಬಗ್ಗೆ ಮಾತನಾಡಿ ಎಂದರೆ ಗೊಂಬೆಗಳ ಬಗ್ಗೆ ಮಾತನಾಡುತ್ತಾರೆ ಎಂಬಂತ ಕಾಮೆಂಟ್‌ಗಳನ್ನು ಅಲ್ಲಿ ಕಾಣಬಹುದು.

ಖ್ಯಾತ ಯೂಟ್ಯೂಬರ್ ಮತ್ತು ಯುವ ಚಿಂತಕ ಧೃವ್ ರಾಠೀ ಟ್ವೀಟ್ ಮಾಡಿ “ಪಿಎಂಓ ಸರ್ಕಾರವನ್ನು ಟೀಕಿಸಿ, ಟೀಕೆಗಳು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುತ್ತದೆ ಎಂದು ಬರದುಕೊಂಡಿದ್ದಾರೆ. ಆದರೆ ಕಮೆಂಟ್ ಮೂಲಕ ಟೀಕೆ ಮಾಡಲು ಹೋದರೆ ಕಮೆಂಟ್ ಸೆಕ್ಷನ್ ಅನ್ನೇ ತೆಗೆದುಹಾಕಲಾಗುತ್ತದೆ” ಎಂದು ವ್ಯಂಗ್ಯವಾಡಿದ್ದಾರೆ.

ಇಷ್ಟು ದಿನ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಮಾತ್ರ ಪರೀಕ್ಷೆ ವಿರೋಧಿಸುತ್ತಿದ್ದಾರೆ ಎನ್ನಲಾಗುತ್ತಿತ್ತು. ಆದರೆ ನಿನ್ನೆಯಿಂದ ನಡೆಯುತ್ತಿರುವ ಈ ಡಿಸ್‌ಲೈಕ್ ಪ್ರಕ್ರಿಯೇ ಇಡೀ ದೇಶದ ಜನರು ಕೂಡ ಪರೀಕ್ಷೆ ವಿರೋಧಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ನೀತಿಗೆ ಭಾರೀ ವಿರೋಧ ಇದೆ ಎಂಬುದನ್ನು ಸಾಬೀತುಪಡಿಸುತ್ತಿದೆ.

ನಾಳೆಯಿಂದ ಜೆಇಇ ಪರೀಕ್ಷೆ ಆರಂಭವಾಗಲಿದೆ. ಈಗಾಗಲೇ ವಿರೋಧ ಪಕ್ಷಗಳು ಪರೀಕ್ಷೆಗೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿವೆ.


ಇದನ್ನೂ ಓದಿ: ಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...