Homeಅಂಕಣಗಳುಪ್ರಣಾಳಿಕೆ ನೋಡಿ ಓಟು ಹಾಕಿದರೆ ಕಾಂಗ್ರೆಸ್ ಗೆಲ್ಲುತ್ತದೆ: ಯೋಗೇಂದ್ರ ಯಾದವ್

ಪ್ರಣಾಳಿಕೆ ನೋಡಿ ಓಟು ಹಾಕಿದರೆ ಕಾಂಗ್ರೆಸ್ ಗೆಲ್ಲುತ್ತದೆ: ಯೋಗೇಂದ್ರ ಯಾದವ್

- Advertisement -
- Advertisement -

| ಯೋಗೇಂದ್ರ ಯಾದವ್ |

| ಕನ್ನಡಕ್ಕೆ: ರಾಜಶೇಖರ್ ಅಕ್ಕಿ |

ಕಳೆದ ವಾರ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ತಮ್ಮ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿದವು. ಒಂದು ವೇಳೆ ಪ್ರಣಾಳಿಕೆಯಿಂದಲೇ ಚುನಾವಣೆಗಳನ್ನು ಗೆಲ್ಲವಂತಾಗಿದ್ದಲ್ಲಿ ಕಾಂಗ್ರೆಸ್ ಈ ಚುನಾವಣೆ ಗೆಲ್ಲಬೇಕು. ಒಂದು ವೇಳೆ ಈ ದೇಶದ ಮತದಾರ ಪ್ರಣಾಳಿಕೆಗಳನ್ನು ಓದಿ ಅಂಕಗಳನ್ನು ಕೊಡುವಂತಿದ್ದರೆ ಖಂಡಿತವಾಗಿಯೂ ಬಿಜೆಪಿ ಈ ಪರೀಕ್ಷೆಯಲ್ಲಿ ಫೇಲಾಗಬೇಕು.

ಬಿಜೆಪಿಯ ಈ ‘ಸಂಕಲ್ಪ ಪತ್ರ’ ವನ್ನು ಓದಿದ ನಂತರ ಇದರಲ್ಲಿ ಏನು ಹೇಳಿದ್ದಾರೆ ಎನ್ನುವುದೇ ತಿಳಿಯುವುದಿಲ್ಲ. ಬಿಜೆಪಿಯು ‘ಜುಮ್ಲೆಬಾಝಿ’ಯ ಆಸರೆ ತೆಗೆದುಕೊಂಡಿರುವುದು ಸಮಸ್ಯೆಯಾಗಿಲ್ಲ. ವಾಸ್ತವದಲ್ಲಿ ಬಿಜೆಪಿಯ ಈ ಪ್ರಣಾಳಿಕೆಯ ಕಡತದಲ್ಲಿ ಅಸಂಭವ ಆಶ್ವಾಸನೆಗಳು ತುಂಬಾ ಕಡಿಮೆ ಇವೆ, ನಿಜ ಹೇಳಬೇಕೆಂದರೆ, ಸ್ಪಷ್ಟ ಭರವಸೆಗಳೇ ತುಂಬಾ ಕಡಿಮೆ. ಇದರಲ್ಲಿ ಕಳೆದ ಐದು ವರ್ಷಗಳ ಲೆಕ್ಕವೂ ಇಲ್ಲ ಹಾಗೂ ಮುಂದಿನ ಐದು ವರ್ಷಗಳಿಗಾಗಿ ಯಾವುದೇ ಹೊಸ ಘೋಷಣೆಯೂ ಇಲ್ಲ ಅಥವಾ ಯಾವುದೇ ದೊಡ್ಡ ಯೋಜನೆಗಳ ಪ್ರಸ್ತಾಪವೂ ಇಲ್ಲ. ಈ ಪ್ರಣಾಳಿಕೆ ಬರೆಯುವವರಿಗೆ ಸ್ಪಷ್ಟ ಸೂಚನೆ ನೀಡಿದಂತಿದೆ: ಐವತ್ತು ಪುಟಗಳನ್ನು ತುಂಬಿಸಿ, ಆದರೆ ಮುಂದೆ ಹೋಗಿ ಉತ್ತರ ಹೇಳಬೇಕಾಗುವಂಥದ್ದೇನನ್ನೂ ಬರೆಯಬೇಡಿ. ಹಾಗಾಗಿ ಪ್ರಾರಂಭದಿಂದ ಅಂತ್ಯದ ವರಗೆ ಸುತ್ತುತಿರುಗುವ ಮಾತುಗಳನ್ನೇ ಬರೆಯಲಾಗಿದೆ. ಅದರ ಮೇಲೆ, ರಾಮಮಂದಿರ ಮತ್ತು 370 ಸೆಕ್ಷನ್ ಬಗ್ಗೆಯೂ ಜಿಲೇಬಿ ಮಾಡುವ ಪ್ರಯತ್ನ ಮಾಡಿದ್ದಾರೆ. ಒಂದು ವೇಳೆ ಏನಾದರೂ ಸ್ಪಷ್ಟವಾಗಿ ಹೇಳಲೇಬೇಕಾದಲ್ಲಿ ಅದರೊಂದಿಗೆ ‘ಪ್ರಯತ್ನ ಮಾಡುವೆವು’ ಎನ್ನುವುದನ್ನು ಭರವಸೆಯಿಂದ ಹೊರಗೆ ನುಣುಚಿಕೊಳ್ಳುವ ದಾರಿ ತೆಗೆದರಿರಲಿ ಎಂದು ಸೇರಿಸಿಬಿಟ್ಟಿದ್ದಾರೆ.

ಆಕಡೆ ಕಾಂಗ್ರೆಸ್‍ನ ಪ್ರಣಾಳಿಕೆಯನ್ನು ಹಲವಾರು ತಿಂಗಳ ಕಾಲ ತಲೆಕೆಡಸಿಕೊಂಡು ಬರೆಯಲಾಗಿದೆ. ಯಾವ ವಿಷಯಗಳನ್ನು ಎತ್ತಬೇಕಾಗಿತ್ತೋ ಅವುಗಳನ್ನು ಎತ್ತಲಾಗಿದೆ: ಬಡತನ, ರೈತನ ಆದಾಯ, ಯುವಜನರು, ನಿರುದ್ಯೋಗ, ಆರೋಗ್ಯ, ಶಿಕ್ಷಣ ಮತ್ತು ಸುರಕ್ಷತೆ. ಮಾಡಿದ ಭರವಸೆಗಳೆಲ್ಲವೂ ಕಾಂಕ್ರೀಟ್ ಆಗಿವೆ, ಹೆಚ್ಚಿನವುಗಳ ಬಗ್ಗೆ ಭವಿಷ್ಯದಲ್ಲಿ ಪರಶೀಲನೆ ಮಾಡಬಹುದಾಗಿದೆ. ಕೆಲವನ್ನು ಹೊರತುಪಡಿಸಿ ಉಳಿದ ಎಲ್ಲಾ ಭರವಸೆಗಳ ಬಗ್ಗೆ ಹೇಗೆ ಅನುಷ್ಠಾನಗೊಳಿಸಬೇಕು ಎನ್ನುವುದರ ಬಗ್ಗೆ ಗಮನ ಕೊಡಲಾಗಿದೆ. ನೀವು ಈ ಪ್ರಣಾಳಿಕೆಯ ಅಂಶಗಳೊಂದಿಗೆ ಸಹಮತ ಹೊಂದಬಹುದು ಅಥವಾ ಹೊಂದದೇ ಇರಬಹುದು ಆದರೆ ಇಷ್ಟಂತೂ ಸತ್ಯ ಈ ಪ್ರಣಾಳಿಕೆ ಒಂದು ಹೊಸ ದಿಕ್ಕನ್ನು ತೋರಿಸುತ್ತದೆ, ಒಂದು ಚರ್ಚೆಯನ್ನು ಹುಟ್ಟುಹಾಕಲು ಆಮಂತ್ರಿಸುತ್ತದೆ. ಸಮಸ್ಯೆ ಏನೆಂದರೆ, ಹಾಳೆಯ ಮೇಲೆ ಯೋಜನೆಗಳನ್ನು ಮಾಡುವುದರಿಂದ ಜನ ವಿಶ್ವಾಸ ಗಳಿಸಬಹುದೆಂದು ಕಾಂಗ್ರೆಸ್ ತಿಳಿದುಕೊಂಡಂತಿದೆ. ಕಾಂಗ್ರೆಸ್ ಬಳಿ ತನ್ನ ಘೋಷಣೆಗಳನ್ನು ಸಾಮಾನ್ಯ ವ್ಯಕ್ತಿಗಳಿಗೆ ಮುಟ್ಟಿಸಲು ಯಾವುದೇ ತಂತ್ರವೂ ಇಲ್ಲ, ಅಥವಾ ಈ ಘೋಷಣೆಗಳ ಬಗ್ಗೆ ತಾನು ಗಂಭೀರವಾಗಿದೆ ಮತ್ತು ಪ್ರಾಮಾಣಿಕವಾಗಿದೆ ಎಂದು ಭರವಸೆ ಮೂಡಿಸುವ ಯಾವುದೇ ಮಾರ್ಗವೂ ಇಲ್ಲ. ಬಿಜೆಪಿಯ ಸಂಕಲ್ಪ ಪತ್ರದಲ್ಲಿ ಯಾವುದೇ ಯೋಜನೆ ಅಥವಾ ಪ್ರಕಲ್ಪವಿಲ್ಲದ್ದು ಎದ್ದು ಕಂಡರೆ, ಕಾಂಗ್ರೆಸ್‍ನ ಪ್ರಣಾಳಿಕೆಯ ಹಿಂದೆ ಯಾವುದೇ ಉದ್ಘೋಷ ಕಾಣುತ್ತಿಲ್ಲ.

ಇಂದು ದೇಶದ ಎರಡು ಅತಿ ಮುಖ್ಯ ಸಮಸ್ಯೆಗಳಾಗಿರುವ ಕೃಷಿ ಮತ್ತು ನಿರುದ್ಯೋಗದ ಬಗ್ಗೆ ಈ ಎರಡೂ ಪ್ರಣಾಳಿಕೆಗಳನ್ನು ಪರಿಶೀಲಿಸಿದರೆ ಈ ಅಂತರ ಸ್ಪಷ್ಟವಾಗುತ್ತದೆ. ರೈತರ ಪ್ರಮುಖ ಬೇಡಿಕೆಗಳ ಬಗ್ಗೆ ಬಿಜೆಪಿಯ ಪ್ರಣಾಳಿಕೆ ಮೌನವಹಿಸಿದೆ. ದೇಶಾದ್ಯಂತ ನಡೆದ ರೈತರ ಆಂದೋಲನಗಳು ಪದೇಪದೇ ಎರಡು ಬೇಡಿಕೆಗಳನ್ನು ಮುಂದಿಟ್ಟಿದ್ದವು; ಬೆಳೆಯ ಸಂಪೂರ್ಣ ಬೆಲೆ ಹಾಗೂ ಸಾಲ ಮುಕ್ತಿ. ಸಾಲದಲ್ಲಿ ಮುಳುಗಿರುವ ರೈತನ ಸಾಲಮುಕ್ತಿಯ ಪ್ರಶ್ನೆಯ ಬಗ್ಗೆ ಈ ಪ್ರಣಾಳಿಕೆಯಲ್ಲಿ ಒಂದು ಪದವೂ ಕಾಣಿಸಿಕೊಳ್ಳುವುದಿಲ್ಲ. ಈ ಪ್ರಶ್ನೆಯ ಬಗ್ಗೆ ತಾವೇನೂ ಮಾಡುವುದಿಲ್ಲ ಎಂದು ಬಿಜೆಪಿ ಸ್ಪಷ್ಟವಾಗಿ ಹೇಳುತ್ತಿದೆ ಹಾಗೂ ಮುಂದೆ ಏನಾದರೂ ಮಾಡುವ ಇರಾದೆಯನ್ನೂ ಹೊಂದಿಲ್ಲ ಎಂದೂ ಸ್ಪಷ್ಟವಾಗುತ್ತದೆ. ರೈತರಿಗೆ ತಮ್ಮ ಬೆಳೆಗಳ ಬೆಲೆಯ ಬಗ್ಗೆ ಪ್ರಣಾಳಿಕೆಯಲ್ಲಿ ಏನೂ ಇಲ್ಲ. ಎಮ್‍ಎಸ್‍ಪಿ, ಸ್ವಾಮಿನಾಥನ್ ಆಯೋಗ, ಸರಕಾರದ ಖರೀದಿ ಇವೆಲ್ಲವುಗಳ ಬಗ್ಗೆ ಒಂದು ಪದವೂ ಇಲ್ಲ. ರೈತರಿಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗುವಂತೆ, ಅದಕ್ಕಾಗಿ ‘ಪ್ರಯತ್ನ ಮಾಡಲಾಗುವುದು’ ಎನ್ನುವ ಸೂಚನೆಯನ್ನು ಮಾತ್ರ ನೀಡಲಾಗಿದೆ. ಅಂದರೆ, ಈ ಪ್ರಶ್ನೆಗೂ ಬಿಜೆಪಿಗೂ ಸಂಬಂಧವಿಲ್ಲ ಎನ್ನುವಂತಿದೆ.

ಈ ಎರಡೂ ವಿಷಯಗಳಲ್ಲಿ ಬಿಜೆಪಿ ವಹಿಸಿದ ಮೌನ ಗಮನಾರ್ಹವಾಗಿದೆ ಏಕೆಂದರೆ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಋಣಮುಕ್ತಿ ಹಾಗೂ ರೈತರಿಗೆ ಬೆಳೆಗಳಿಗೆ ಸರಿಯಾದ ಮೌಲ್ಯ ನೀಡುವುದಕ್ಕೆ ಒಂದು ಹೊಸ ವ್ಯವಸ್ಥೆಯ ಬಗ್ಗೆ ನಿರ್ದಿಷ್ಟ ಘೋಷಣೆಗಳನ್ನು ಮಾಡಿದೆ. ಕಾಂಗ್ರಸ್‍ನ ಪ್ರಣಾಳಿಕೆ ಹೇಳುವುದೇನೆಂದರೆ, ಹಲವು ರಾಜ್ಯಗಳಲ್ಲಿ ಮಾಡಿದ ಸಾಲಮನ್ನಾ ದಿಂದ ಒಂದು ಹೆಜ್ಜೆ ಮುಂದೆ ಹೋಗಿ ಈಗ ರೈತರ ಸಂಪೂರ್ಣ ಋಣಮುಕ್ತಿ ಮಾಡುವುದು. ಸಾಲಗಾರ ರೈತನ ವಿರುದ್ಧ ಚೆಕ್ ಬೌನ್ಸ್‍ನ ನೆಪ ಮಾಡಿಕೊಂಡು ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳುವದನ್ನು ನಿಲ್ಲಿಸಲಾಗುವುದು. ರೈತನಿಗೆ ತನ್ನ ವೆಚ್ಚದ ಒಂದೂವರೆ ಪಟ್ಟು ಬೆಲೆ ನೀಡುವುದರ ಬಗ್ಗೆ ಹೇಳಿಲ್ಲವಾದರೂ ಆದರೆ ಕನಿಷ್ಠ ಕೃಷಿ ವೆಚ್ಚ ಹಾಗೂ ಮೌಲ್ಯ ಆಯೋಗದ ಬದಲಿಗೆ ಒಂದು ಹೊಸ ಆಯೋಗ ರಚಿಸುವುದಾಗಿ ಭರವಸೆ ನೀಡಿದೆ. ಇದರೊಂದಿಗೆ ಕಾಂಗ್ರೆಸ್‍ನ ಪ್ರಣಾಳಿಕೆಯಲ್ಲಿ ಕಿಸಾನ್ ಬಜೆಟ್‍ನ ಪ್ರಸ್ತಾಪವೂ ಇದೆ. ಅದಕ್ಕಾಗಿಯೇ ಮೀಸಲಿರುವ ಬಜೆಟ್‍ನಿಂದ ರೈತನಿಗೆ ಏನಾದರೂ ಸಿಗುತ್ತೋ ಇಲ್ಲವೋ, ಅದರೆ ಸರಕಾರವು ರೈತರಿಗಾಗಿ ಏನೆಲ್ಲ ಮಾಡಿದೆ, ಮಾಡಿಲ್ಲ ಎನ್ನುವ ಲೆಕ್ಕವಂತೂ ಸಿಗುವುದು. ಕಾಂಗ್ರೆಸ್‍ನ ಈ ಘೋಷಣೆಗಳ ನಂತರ ಬಿಜೆಪಿಯು ಕನಿಷ್ಠ ಇಷ್ಟಾದರೂ ಆಥವಾ ಇದಕ್ಕಿಂತ ಹೆಚ್ಚಿನ ಘೋಷಣೆ ಮಾಡುವುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ಎರಡೂ ವಿಷಯಗಳ ಬಗ್ಗೆ ಮೌನ ವಹಿಸಿ ಬಿಜೆಪಿಯು ತನ್ನ ಇಂಗಿತವನ್ನು ಸ್ಪಷ್ಟಪಡಿಸಿದೆ.

ನಿರುದ್ಯೋಗದ ಬಗ್ಗೆಯೂ ಹೆಚ್ಚುಕಡಿಮೆ ಹೀಗೆ ಆಗಿದೆ. ಸತ್ಯವೇನೆಂದರೆ, ನೋಟುರದ್ದತಿಯ ನಂತರ ನಿರುದ್ಯೋಗ ದರವು ಇಂದಿನ ತನಕದ ಎಲ್ಲಾ ದಾಖಲೆಗಳನ್ನು ಮುರಿದುಹಾಕಿದೆ. ಪ್ರತಿಪಕ್ಷವಾಗಿರುವ ಕಾಂಗ್ರೆಸ್‍ಗೆ ಈ ಸತ್ಯವನ್ನು ಹೇಳುವುದು ಸುಲಭ ಆದರೆ ಬಿಜೆಪಿಗೆ ಈ ವಾಸ್ತವವನ್ನು ಒಪ್ಪಿಕೊಳ್ಳುವುದು ತುಂಬಾ ಕಷ್ಟ. ಇದಕ್ಕಿಂತ ಮಹತ್ವಪೂರ್ಣ ವಿಷಯವೇನೆಂದರೆ, ಕಾಂಗ್ರೆಸ್‍ನ ಪ್ರಣಾಳಿಕೆಯು ಈ ವಿಷಯದ ಬಗ್ಗೆ ಕೆಲವು ನಿರ್ದಿಷ್ಟ ಸಲಹೆಗಳನ್ನು ನೀಡುತ್ತದೆ. ಎಲ್ಲಕ್ಕಿಂತ ಮೊದಲನೇಯದಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಉದ್ಯೋಗಗಳಲ್ಲಿ ಖಾಲಿ ಉಳಿದಿರುವ 22 ಲಕ್ಷ ಹುದೆಗಳನ್ನು ಭರ್ತಿ ಮಾಡುವ ಭರವಸೆ ನೀಡಿದೆ. ಸರಾಕರಿ ಉದ್ಯೋಗಗಳಲ್ಲಿ ಅರ್ಜಿ ಸಲ್ಲಿಸುವ ಸಮಯದಲ್ಲಿ ಅದಕ್ಕೆ ಇರುವ ಶುಲ್ಕವನ್ನು ತೆಗೆದುಹಾಕುವ ಮಾತು ಹೇಳುತ್ತದೆ. ಪ್ರತಿ ಹಳ್ಳಿ ಮತ್ತು ಮುನಿಸಿಪಾಲ್ಟಿಯಲ್ಲಿ ‘ಸೇವಾ ಮಿತ್ರ’ ಎನ್ನುವ ಪೋಸ್ಟ್ ಸೃಷ್ಟಿಸುವ ಹಾಗೂ ದೊಡ್ಡ ಹಳ್ಳಿಗಳಲ್ಲಿ ಇನ್ನೊಬ್ಬ ‘ಆಶಾ’ ಕಾರ್ಯಕರ್ತರನ್ನು ನೇಮಿಸುವ ಆಶ್ವಾಸನೆ ನೀಡಿದೆ. ಆದರೆ ಕಾಂಗ್ರೆಸ್ ಆಳ್ವಿಕೆಯಿರುವ ರಾಜ್ಯಗಳಲ್ಲಿ ಈ ಸಲಹೆಗಳನ್ನು ಅನುಷ್ಠಾನಗೊಳಿಸಿದ್ದರೆ ಒಳ್ಳೆಯದಾಗ್ತಿತ್ತು. ಇನ್ನು ಬಿಜೆಪಿಯ ಪ್ರಣಾಳಿಕೆಯಂತೂ ಖಾಲಿ ಬಿದ್ದಿರುವ ಹುದ್ದೆಗಳ ಬಗ್ಗೆ ಹಾಗೂ ಹೊಸ ಉದ್ಯೋಗಗಳ ಪ್ರಶ್ನೆಗಳ ಬಗ್ಗೆ ಸಂಪೂರ್ಣ ಮೌನ ವಹಿಸಿದೆ. ಅಂದರೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಖಾಲಿ ಇರುವ ಹುದ್ದೆಗಳನ್ನು ತೆಗೆದುಹಾಕಲಾಗುವುದು ಎನ್ನುವುದು ಸ್ಪಷ್ಟ.

ಉದ್ಯೋಗದ ಪ್ರಶ್ನೆಯನ್ನು ಕೇವಲ ಸರಕಾರಿ ಉದ್ಯೋಗಗಳಿಂದ ಬಗೆಹರಿಸಲಾಗದು. ಕಾಂಗ್ರೆಸ್ ಪ್ರಣಾಳಿಕೆ ಉದ್ಯೋಗ ಸೃಷ್ಟಿಯ ಒಂದು ಯೋಜನೆ ನೀಡುತ್ತದೆ. ಒಂದು ಹೊಸ ಸಚಿವಾಲಯ ಸ್ಥಾಪಿಸುವುದು, ಅದರ ಮೂಲಕ ಖಾಸಗಿ ವಲಯದಲ್ಲಿ ಉದ್ಯೋಗಸೃಷ್ಟಿಗೆ ಪ್ರೋತ್ಸಾಹಿಸಲಾಗುವುದು. ಹೊಸ ವ್ಯಾಪಾರ ಪ್ರಾರಂಭಿಸಿದ ನಂತರ ಮೊದಲ ಮೂರು ವರ್ಷಗಳ ತನಕ ನಿಯಮ ಕಾನೂನುಗಳ ವಿನಾಯತಿ ನೀಡಲಾಗುವುದು. ಎಲ್ಲಾ ಉದ್ಯೋಗಗಳಿಗೂ ಅಪರೆಂಟಿಸ್ ನೀಡುವುದು ಕಡ್ಡಾಯ, ಅವರಿಗೆ ಸ್ಟೈಪೆಂಡ್ ಸಿಗುವುದು ಹಾಗೂ ಖಾಯಂ ಉದ್ಯೋಗಗಳಿಗೆ ಆದ್ಯತೆ ನೀಡಲಾಗುವುದು ಇತ್ಯಾದಿ. ಗ್ರಾಮೀಣ ಕ್ಷೇತ್ರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯ ಯೋಜನೆಯ ಅಭಾವದಿಂದ ಕಾಂಗ್ರೆಸ್‍ನ ಪ್ರಸ್ತಾಪ ಅಪೂರ್ಣವಾಗುತ್ತದೆ. ಆದರೆ ಬಿಜೆಪಿಯಂತೂ ನಿರುದ್ಯೋಗದ ಬಗ್ಗೆ ತನ್ನ ಪ್ರಣಾಳಿಕೆಯಲ್ಲಿ ನಿರುದ್ಯೋಗದ ಮಾತನ್ನೇ ಎತ್ತುವುದಿಲ್ಲ. ಪಕ್ಷದ 75 ಪ್ರಮುಖ ಸಂಕಲ್ಪಗಳಲ್ಲಿ ಒಂದೂ ದೇಶಾದ್ಯಂತ ಉದ್ಯೋಗ ಹೆಚ್ಚಿಸುವ ಬಗ್ಗೆ ಇಲ್ಲ.

ಪ್ರಣಾಳಿಕೆಯಲ್ಲಿ ಒಂದು ಕಡೆ ಸ್ಟಾರ್ಟ್ ಅಪ್‍ಗಳಿಗೆ ಅಗ್ಗದ ಸಾಲಗಳ ಹಾಗೂ 22 ರೀತಿಯ ಉದ್ಯೋಗಗಳಿಗೆ ಪ್ರೋತ್ಸಾಹನೆಯ ಮಾತುಗಳನ್ನಾಡಲಾಗಿದೆ ಮಾತ್ರ. ಯುವಜನರ ಭಾಗದಲ್ಲಿ ಎರಡು ಅಂಶಗಳು ಮಾತ್ರ ಉದ್ಯೋಗಕ್ಕೆ ಸಂಬಂಧಿಸಿದ ಅಂಶಗಳಿವೆ ಆದರೆ 6 ಅಂಶಗಳು ಆಟೋಟಗಳಗೆ ಸಂಬಂಧಪಟ್ಟವಾಗಿವೆ. ಸ್ಕಿಲ್ ಮಿಷನ್ ಮತ್ತು ಮುದ್ರಾ ಸಾಲಗಳ ಮಾತುಗಳನ್ನು ಪುನರಾವರ್ತಿಸಲಾಗಿದೆ. ಆದರೆ ನಿರುದ್ಯೋಗದ ಸಮಸ್ಯೆ ಇವುಗಳಿಂದ ಬಗೆಹರಿಯುವಂತಿದ್ದರೆ ಇಲ್ಲಿಯವರೆಗೆ ಯಾಕಾಗಿಲ್ಲ?ಒಟ್ಟಿನಲ್ಲಿ ಈ ಪ್ರಣಾಳಿಕೆಯ ಮುಖಾಂತರ ಬಿಜೆಪಿ ರೈತರಿಗೆ ಮತ್ತು ಯುವಜನರಿಗೆ ನೀಡುತ್ತಿರುವ ಸ್ಪಷ್ಟ ಸಂದೇಶವೇನೆಂದರೆ, “ಕಳೆದ ಐದು ವರ್ಷಗಳಲ್ಲಿ ನಿಮ್ಮೊಂದಿಗೆ ಏನು ಮಾಡಲಾಗಿತ್ತೋ, ಮುಂದಿನ ಐದು ವರ್ಷಗಳಲ್ಲೂ ಅದನ್ನೇ ಮಾಡಲಾಗುವುದು”. ಈ ಆಧಾರದಲ್ಲಂತೂ ಬಿಜೆಪಿಗೆ ಮತ ಸಿಗುವುದು ತುಂಬಾ ದೂರ. ಆದರೆ, ಸತ್ಯವೇನೆಂದರೆ, ಈ ಚುನಾವಣೆಯನ್ನು ಪ್ರಣಾಳಿಕೆಗಳ ಆಧಾರದ ಮೇಲೆ ಗೆಲ್ಲವುದಿಲ್ಲ, ಗೆಲ್ಲುವುದು ಪ್ರಚಾರ ಮತ್ತು ಪ್ರಸಾರದಿಂದ, ನೀತಿಗಳ ಮೇಲೆ ಸ್ಪರ್ಧೆಯಾಗದೇ ನಾಯಕರ ನಿಯತ್ತಿನ ಮೇಲೆ ಸ್ಪರ್ಧಿಸಲಾಗುತ್ತದೆ. ಇದೇ ಭಾರತದ ಇಂದಿನ ವಿಡಂಬನೆ. ಯಾರ ಬಳಿ ನೀತಿಗಳಿವೆಯೋ ಅವರ ನಾಯಕರ ಮತ್ತು ನಿಯತ್ತಿನ ಮೇಲೆ ದೇಶಕ್ಕೆ ಭರವಸೆಯಿಲ್ಲ. ಯಾರ ಬಳಿ ಪ್ರಚಾರ, ಪ್ರಸಾರ ಮತ್ತು ಪ್ರಭಾವವಿದೆಯೋ ಅವರ ಬಳಿ ದೇಶಕ್ಕಾಗಿ ಒಂದು ಸಕಾರಾತ್ಮಕ ವಿಕಲ್ಪ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...