Homeಮುಖಪುಟಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಮಣಿಕರ್ಣಿಕಾ ಚಿತ್ರದ 70 ಪ್ರತಿಶತವನ್ನು ತಾವೇ ನಿರ್ದೇಶಿಸಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದಕ್ಕೆ ಆಕೆಯ ಸಹೋದರಿ ರಂಗೋಲಿ ಬೆಂಬಲವಾಗಿ ನಿಂತಿದ್ದರು.

- Advertisement -
- Advertisement -

’ಮಣಿಕರ್ಣಿಕಾ: ದಿ ಕ್ವೀನ್ ಆಫ್ ಝೂನ್ಸಿ’ ಚಿತ್ರದ ನಿರ್ದೇಶನದ ಬಗ್ಗೆ ನಟಿ ಕಂಗನಾ ರಣಾವತ್ ಜೊತೆ ಭಿನ್ನಾಭಿಪ್ರಾಯ ಹೊಂದಿದ್ದ ನಿರ್ದೇಶಕ ಕ್ರಿಶ್ ಜಗಾರ್ಲಮುಡಿ, ವಿವಾದದ ಬಗ್ಗೆ ಮಾತನಾಡಿದ ಕ್ರಿಶ್, ಕಂಗನಾರಿಂದ ತಾನು ಜಗತ್ತಿಗೆ ಅಪರಿಚಿತನಾಗಿರಬಹುದೆಂಬ ಭಯವಿದೆ ಎಂದು ಹೇಳಿದ್ದಾರೆ.

ನಟಿ ಸಮಂತಾ ಅವರ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ಕೊನೆಯ ಬಾರಿಗೆ ವಿವಾದದ ಬಗ್ಗೆ ಮಾತನಾಡುತ್ತೇನೆ ಎಂದು ಹೇಳುತ್ತಾ ಹಲವು ವಿಚಾರಗಳನ್ನು ತೆರೆದಿಟ್ಟಿದ್ದಾರೆ. ನಟಿ ರಾಕುಲ್ ಪ್ರೀತ್ ಸಿಂಗ್ ಜೊತೆಗೆ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ಕಾಣಿಸಿಕೊಂಡರು.

ಡಿಸೆಂಬರ್ 18 ರಂದು ಒಟಿಟಿ ಪ್ಲಾಟ್‌ಫಾರ್ಮ್ ಆಹಾ ನಲ್ಲಿ  ಪ್ರಸಾರವಾಗಲಿರುವ, ನಟಿ ಸಮಂತಾ ಅವರ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ರಾಕುಲ್ ಪ್ರೀತ್ ಸಿಂಗ್ ಮತ್ತು ಕ್ರಿಶ್ ಜಗಾರ್ಲಮುಡಿ ಅವರು ಅತಿಥಿಗಳಾಗಿದ್ದಾರೆ. ಇತ್ತೀಚೆಗೆ, ಈ ಕಾರ್ಯಕ್ರಮದ ಪ್ರೋಮೋ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಇಬ್ಬರು ಕಲಾವಿದರು ತಮ್ಮ ಸುತ್ತಲು ಹರಡಿದ್ದ, ಕಾಡಿದ ವಿವಾದಗಳ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್

ಮಣಿಕರ್ಣಿಕಾ ಮತ್ತು ಕಂಗನಾ ರಣಾವತ್ ಅವರೊಂದಿಗೆ ಏನಾಯಿತು ಎಂದು ನಟಿ ಸಮಂತಾ ಕೇಳಿದಾಗ, “ನಾನು ಕೊನೆಯ ಬಾರಿಗೆ ಮಾತನಾಡಲು ಬಯಸುತ್ತೇನೆ. ಕಂಗನಾ ಮತ್ತು ಅವಳ ತಂಡವು ಚಿತ್ರವನ್ನು ವೀಕ್ಷಿಸಿತ್ತು. ಆದಾಗಿ ಎರಡು ದಿನಗಳ ನಂತರ ನನಗೆ ಕರೆ ಬಂತು ಎಂದಿದ್ದಾರೆ. ನನ್ನ ಏಕೈಕ ಭಯವೆಂದರೆ ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು. ಕಲಾವಿದರಾದ ನಾವು ಉತ್ತಮ ಅವಕಾಶಗಳನ್ನು ಪಡೆದಾಗ ಮಾತ್ರ ನಮ್ಮ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಬಹುದು” ಎಂದು ಕ್ರಿಶ್ ಹೇಳಿದ್ದಾರೆ.

ಮಣಿಕರ್ಣಿಕಾ ಚಿತ್ರ ವಿವಾದವೇನು…?

2019 ರಲ್ಲಿ ನಟಿ ಕಂಗನಾ ರಣಾವತ್ ಮಣಿಕರ್ಣಿಕಾ: ರಾಣಿ ಆಫ್ ಝಾನ್ಸಿ ಚಿತ್ರವನ್ನು ವಹಿಸಿಕೊಂಡು, ಚಿತ್ರದ ಬಹಳಷ್ಟು ಭಾಗಗಳನ್ನು ಮತ್ತೆ ಚಿತ್ರೀಕರಿಸಿದರು. ನಿರ್ದೇಶಕ ಕ್ರಿಶ್ ಜಗಾರ್ಲಮುಡಿ ಅವರೊಂದಿಗೆ ಸಹ-ನಿರ್ದೇಶಕರ ಕ್ರೆಡಿಟ್ ಕೂಡ ಹಂಚಿಕೊಂಡಿದ್ದರು. ನಂತರ ಚಿತ್ರದ 70 ಪ್ರತಿಶತವನ್ನು ತಾವೇ ನಿರ್ದೇಶಿಸಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದಕ್ಕೆ ಆಕೆಯ ಸಹೋದರಿ ರಂಗೋಲಿ ಬೆಂಬಲವಾಗಿ ನಿಂತಿದ್ದರು.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ಈ ಬಗ್ಗೆ ನಿರ್ದೇಶಕ ಕ್ರಿಶ್ ಜಗಾರ್ಲಮುಡಿ ಹಲವಾರು ಸಂದರ್ಶನಗಳಲ್ಲಿ, ಕಂಗನಾ ಅವರಿಂದ ಚಿತ್ರವನ್ನು ಸ್ವಾಧೀನಪಡಿಸಿಕೊಂಡ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಜೊತೆಗೆ ಚಿತ್ರದಲ್ಲಿ ಹಲವರ ಪಾತ್ರಗಳನ್ನು ಕಡಿತಗೊಳಿಸಿ, ಸಣ್ಣ ಪುಟ್ಟ ಬದಲಾವಣೆ ಮಾಡಬೇಕು ಎಂದು ಏನೇನೋ ಬದಲಾವಣೆ ಮಾಡಿದರು’ ಎಂದು ಆರೋಪಿಸಿದ್ದರು.

ವಿವಾದದಿಂದ ಬೇಸತ್ತ ಕ್ರಿಶ್, “ಕಂಗನಾ ಮತ್ತು ನಾನು ಇಬ್ಬರೂ ಈ ಉದ್ಯಮದಿಂದ ಬೇಗ ದೂರ  ಸರಿಯುವುದಿಲ್ಲ. ಭವಿಷ್ಯದಲ್ಲಿ ನಾನು ಇನ್ನೂ ಅನೇಕ ಚಿತ್ರಗಳನ್ನು ನಿರ್ದೇಶಿಸುತ್ತೇನೆ ಮತ್ತು ಅವರು ಕೂಡ ಚಿತ್ರರಂಗದಲ್ಲಿರುತ್ತಾರೆ. ಯಾರು ಎಲ್ಲಿ ನಿಲ್ಲುತ್ತಾರೆ ಎಂದು ಜನರಿಗೆ ತಿಳಿಯುತ್ತದೆ. ನಾನು ಕಂಗನಾ ಮತ್ತು ಇಡೀ ವಿವಾದದಿಂದ ದಣಿದಿದ್ದೇನೆ” ಎಂದು ಹೇಳಿದ್ದರು.

ಈಗ ಈ ಟಾಕ್ ಶೋನಿಂದ ಮತ್ತೊಮ್ಮೆ ಮಣಿಕರ್ಣಿಕಾ ಚಿತ್ರ ವಿವಾದ ಜನರ ನೆನಪಿಗೆ ಬಂದಿದೆ. ಬರೀ ಪ್ರೋಮೋ ಇಷ್ಟೊಂದು ವೈರಲ್ ಆಗಿದೆ. ಡಿಸೆಂಬರ್‌ 18 ರಂದು ಪೂರ್ತಿ ಕಾರ್ಯಕ್ರಮ ಪ್ರಸಾರವಾಗಲಿದ್ದು, ಕ್ರಿಶ್ ವಿವಾದದ ಬಗ್ಗೆ ಏನೇನು ಹೇಳಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಹೊರಬರಲಿದೆ.

ನಟಿ ಕಂಗನಾ ರಣಾವತ್ ಇತ್ತಿಚೆಗೆ ಹೆಚ್ಚು ಹೆಚ್ಚು ಟ್ರೋಲ್ ಮತ್ತು ಟೀಕೆಗಳಿಗೆ ಗುರಿಯಾಗುತ್ತಿದ್ದಾರೆ. ಈ ಸಂದರ್ಭದಲ್ಲೇ ಮತ್ತೆ ಮಣಿಕರ್ಣಿಕಾ ವಿವಾದ ಹೊರ ಬಿದ್ದಿದೆ.


ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...