Homeಮುಖಪುಟಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಮಣಿಕರ್ಣಿಕಾ ಚಿತ್ರದ 70 ಪ್ರತಿಶತವನ್ನು ತಾವೇ ನಿರ್ದೇಶಿಸಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದಕ್ಕೆ ಆಕೆಯ ಸಹೋದರಿ ರಂಗೋಲಿ ಬೆಂಬಲವಾಗಿ ನಿಂತಿದ್ದರು.

- Advertisement -
- Advertisement -

’ಮಣಿಕರ್ಣಿಕಾ: ದಿ ಕ್ವೀನ್ ಆಫ್ ಝೂನ್ಸಿ’ ಚಿತ್ರದ ನಿರ್ದೇಶನದ ಬಗ್ಗೆ ನಟಿ ಕಂಗನಾ ರಣಾವತ್ ಜೊತೆ ಭಿನ್ನಾಭಿಪ್ರಾಯ ಹೊಂದಿದ್ದ ನಿರ್ದೇಶಕ ಕ್ರಿಶ್ ಜಗಾರ್ಲಮುಡಿ, ವಿವಾದದ ಬಗ್ಗೆ ಮಾತನಾಡಿದ ಕ್ರಿಶ್, ಕಂಗನಾರಿಂದ ತಾನು ಜಗತ್ತಿಗೆ ಅಪರಿಚಿತನಾಗಿರಬಹುದೆಂಬ ಭಯವಿದೆ ಎಂದು ಹೇಳಿದ್ದಾರೆ.

ನಟಿ ಸಮಂತಾ ಅವರ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ಕೊನೆಯ ಬಾರಿಗೆ ವಿವಾದದ ಬಗ್ಗೆ ಮಾತನಾಡುತ್ತೇನೆ ಎಂದು ಹೇಳುತ್ತಾ ಹಲವು ವಿಚಾರಗಳನ್ನು ತೆರೆದಿಟ್ಟಿದ್ದಾರೆ. ನಟಿ ರಾಕುಲ್ ಪ್ರೀತ್ ಸಿಂಗ್ ಜೊತೆಗೆ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ಕಾಣಿಸಿಕೊಂಡರು.

ಡಿಸೆಂಬರ್ 18 ರಂದು ಒಟಿಟಿ ಪ್ಲಾಟ್‌ಫಾರ್ಮ್ ಆಹಾ ನಲ್ಲಿ  ಪ್ರಸಾರವಾಗಲಿರುವ, ನಟಿ ಸಮಂತಾ ಅವರ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ರಾಕುಲ್ ಪ್ರೀತ್ ಸಿಂಗ್ ಮತ್ತು ಕ್ರಿಶ್ ಜಗಾರ್ಲಮುಡಿ ಅವರು ಅತಿಥಿಗಳಾಗಿದ್ದಾರೆ. ಇತ್ತೀಚೆಗೆ, ಈ ಕಾರ್ಯಕ್ರಮದ ಪ್ರೋಮೋ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಇಬ್ಬರು ಕಲಾವಿದರು ತಮ್ಮ ಸುತ್ತಲು ಹರಡಿದ್ದ, ಕಾಡಿದ ವಿವಾದಗಳ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್

ಮಣಿಕರ್ಣಿಕಾ ಮತ್ತು ಕಂಗನಾ ರಣಾವತ್ ಅವರೊಂದಿಗೆ ಏನಾಯಿತು ಎಂದು ನಟಿ ಸಮಂತಾ ಕೇಳಿದಾಗ, “ನಾನು ಕೊನೆಯ ಬಾರಿಗೆ ಮಾತನಾಡಲು ಬಯಸುತ್ತೇನೆ. ಕಂಗನಾ ಮತ್ತು ಅವಳ ತಂಡವು ಚಿತ್ರವನ್ನು ವೀಕ್ಷಿಸಿತ್ತು. ಆದಾಗಿ ಎರಡು ದಿನಗಳ ನಂತರ ನನಗೆ ಕರೆ ಬಂತು ಎಂದಿದ್ದಾರೆ. ನನ್ನ ಏಕೈಕ ಭಯವೆಂದರೆ ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು. ಕಲಾವಿದರಾದ ನಾವು ಉತ್ತಮ ಅವಕಾಶಗಳನ್ನು ಪಡೆದಾಗ ಮಾತ್ರ ನಮ್ಮ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಬಹುದು” ಎಂದು ಕ್ರಿಶ್ ಹೇಳಿದ್ದಾರೆ.

ಮಣಿಕರ್ಣಿಕಾ ಚಿತ್ರ ವಿವಾದವೇನು…?

2019 ರಲ್ಲಿ ನಟಿ ಕಂಗನಾ ರಣಾವತ್ ಮಣಿಕರ್ಣಿಕಾ: ರಾಣಿ ಆಫ್ ಝಾನ್ಸಿ ಚಿತ್ರವನ್ನು ವಹಿಸಿಕೊಂಡು, ಚಿತ್ರದ ಬಹಳಷ್ಟು ಭಾಗಗಳನ್ನು ಮತ್ತೆ ಚಿತ್ರೀಕರಿಸಿದರು. ನಿರ್ದೇಶಕ ಕ್ರಿಶ್ ಜಗಾರ್ಲಮುಡಿ ಅವರೊಂದಿಗೆ ಸಹ-ನಿರ್ದೇಶಕರ ಕ್ರೆಡಿಟ್ ಕೂಡ ಹಂಚಿಕೊಂಡಿದ್ದರು. ನಂತರ ಚಿತ್ರದ 70 ಪ್ರತಿಶತವನ್ನು ತಾವೇ ನಿರ್ದೇಶಿಸಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದಕ್ಕೆ ಆಕೆಯ ಸಹೋದರಿ ರಂಗೋಲಿ ಬೆಂಬಲವಾಗಿ ನಿಂತಿದ್ದರು.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ಈ ಬಗ್ಗೆ ನಿರ್ದೇಶಕ ಕ್ರಿಶ್ ಜಗಾರ್ಲಮುಡಿ ಹಲವಾರು ಸಂದರ್ಶನಗಳಲ್ಲಿ, ಕಂಗನಾ ಅವರಿಂದ ಚಿತ್ರವನ್ನು ಸ್ವಾಧೀನಪಡಿಸಿಕೊಂಡ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಜೊತೆಗೆ ಚಿತ್ರದಲ್ಲಿ ಹಲವರ ಪಾತ್ರಗಳನ್ನು ಕಡಿತಗೊಳಿಸಿ, ಸಣ್ಣ ಪುಟ್ಟ ಬದಲಾವಣೆ ಮಾಡಬೇಕು ಎಂದು ಏನೇನೋ ಬದಲಾವಣೆ ಮಾಡಿದರು’ ಎಂದು ಆರೋಪಿಸಿದ್ದರು.

ವಿವಾದದಿಂದ ಬೇಸತ್ತ ಕ್ರಿಶ್, “ಕಂಗನಾ ಮತ್ತು ನಾನು ಇಬ್ಬರೂ ಈ ಉದ್ಯಮದಿಂದ ಬೇಗ ದೂರ  ಸರಿಯುವುದಿಲ್ಲ. ಭವಿಷ್ಯದಲ್ಲಿ ನಾನು ಇನ್ನೂ ಅನೇಕ ಚಿತ್ರಗಳನ್ನು ನಿರ್ದೇಶಿಸುತ್ತೇನೆ ಮತ್ತು ಅವರು ಕೂಡ ಚಿತ್ರರಂಗದಲ್ಲಿರುತ್ತಾರೆ. ಯಾರು ಎಲ್ಲಿ ನಿಲ್ಲುತ್ತಾರೆ ಎಂದು ಜನರಿಗೆ ತಿಳಿಯುತ್ತದೆ. ನಾನು ಕಂಗನಾ ಮತ್ತು ಇಡೀ ವಿವಾದದಿಂದ ದಣಿದಿದ್ದೇನೆ” ಎಂದು ಹೇಳಿದ್ದರು.

ಈಗ ಈ ಟಾಕ್ ಶೋನಿಂದ ಮತ್ತೊಮ್ಮೆ ಮಣಿಕರ್ಣಿಕಾ ಚಿತ್ರ ವಿವಾದ ಜನರ ನೆನಪಿಗೆ ಬಂದಿದೆ. ಬರೀ ಪ್ರೋಮೋ ಇಷ್ಟೊಂದು ವೈರಲ್ ಆಗಿದೆ. ಡಿಸೆಂಬರ್‌ 18 ರಂದು ಪೂರ್ತಿ ಕಾರ್ಯಕ್ರಮ ಪ್ರಸಾರವಾಗಲಿದ್ದು, ಕ್ರಿಶ್ ವಿವಾದದ ಬಗ್ಗೆ ಏನೇನು ಹೇಳಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಹೊರಬರಲಿದೆ.

ನಟಿ ಕಂಗನಾ ರಣಾವತ್ ಇತ್ತಿಚೆಗೆ ಹೆಚ್ಚು ಹೆಚ್ಚು ಟ್ರೋಲ್ ಮತ್ತು ಟೀಕೆಗಳಿಗೆ ಗುರಿಯಾಗುತ್ತಿದ್ದಾರೆ. ಈ ಸಂದರ್ಭದಲ್ಲೇ ಮತ್ತೆ ಮಣಿಕರ್ಣಿಕಾ ವಿವಾದ ಹೊರ ಬಿದ್ದಿದೆ.


ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...