Homeಮುಖಪುಟಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಮಣಿಕರ್ಣಿಕಾ ಚಿತ್ರದ 70 ಪ್ರತಿಶತವನ್ನು ತಾವೇ ನಿರ್ದೇಶಿಸಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದಕ್ಕೆ ಆಕೆಯ ಸಹೋದರಿ ರಂಗೋಲಿ ಬೆಂಬಲವಾಗಿ ನಿಂತಿದ್ದರು.

- Advertisement -
- Advertisement -

’ಮಣಿಕರ್ಣಿಕಾ: ದಿ ಕ್ವೀನ್ ಆಫ್ ಝೂನ್ಸಿ’ ಚಿತ್ರದ ನಿರ್ದೇಶನದ ಬಗ್ಗೆ ನಟಿ ಕಂಗನಾ ರಣಾವತ್ ಜೊತೆ ಭಿನ್ನಾಭಿಪ್ರಾಯ ಹೊಂದಿದ್ದ ನಿರ್ದೇಶಕ ಕ್ರಿಶ್ ಜಗಾರ್ಲಮುಡಿ, ವಿವಾದದ ಬಗ್ಗೆ ಮಾತನಾಡಿದ ಕ್ರಿಶ್, ಕಂಗನಾರಿಂದ ತಾನು ಜಗತ್ತಿಗೆ ಅಪರಿಚಿತನಾಗಿರಬಹುದೆಂಬ ಭಯವಿದೆ ಎಂದು ಹೇಳಿದ್ದಾರೆ.

ನಟಿ ಸಮಂತಾ ಅವರ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ಕೊನೆಯ ಬಾರಿಗೆ ವಿವಾದದ ಬಗ್ಗೆ ಮಾತನಾಡುತ್ತೇನೆ ಎಂದು ಹೇಳುತ್ತಾ ಹಲವು ವಿಚಾರಗಳನ್ನು ತೆರೆದಿಟ್ಟಿದ್ದಾರೆ. ನಟಿ ರಾಕುಲ್ ಪ್ರೀತ್ ಸಿಂಗ್ ಜೊತೆಗೆ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ಕಾಣಿಸಿಕೊಂಡರು.

ಡಿಸೆಂಬರ್ 18 ರಂದು ಒಟಿಟಿ ಪ್ಲಾಟ್‌ಫಾರ್ಮ್ ಆಹಾ ನಲ್ಲಿ  ಪ್ರಸಾರವಾಗಲಿರುವ, ನಟಿ ಸಮಂತಾ ಅವರ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ರಾಕುಲ್ ಪ್ರೀತ್ ಸಿಂಗ್ ಮತ್ತು ಕ್ರಿಶ್ ಜಗಾರ್ಲಮುಡಿ ಅವರು ಅತಿಥಿಗಳಾಗಿದ್ದಾರೆ. ಇತ್ತೀಚೆಗೆ, ಈ ಕಾರ್ಯಕ್ರಮದ ಪ್ರೋಮೋ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಇಬ್ಬರು ಕಲಾವಿದರು ತಮ್ಮ ಸುತ್ತಲು ಹರಡಿದ್ದ, ಕಾಡಿದ ವಿವಾದಗಳ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್

ಮಣಿಕರ್ಣಿಕಾ ಮತ್ತು ಕಂಗನಾ ರಣಾವತ್ ಅವರೊಂದಿಗೆ ಏನಾಯಿತು ಎಂದು ನಟಿ ಸಮಂತಾ ಕೇಳಿದಾಗ, “ನಾನು ಕೊನೆಯ ಬಾರಿಗೆ ಮಾತನಾಡಲು ಬಯಸುತ್ತೇನೆ. ಕಂಗನಾ ಮತ್ತು ಅವಳ ತಂಡವು ಚಿತ್ರವನ್ನು ವೀಕ್ಷಿಸಿತ್ತು. ಆದಾಗಿ ಎರಡು ದಿನಗಳ ನಂತರ ನನಗೆ ಕರೆ ಬಂತು ಎಂದಿದ್ದಾರೆ. ನನ್ನ ಏಕೈಕ ಭಯವೆಂದರೆ ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು. ಕಲಾವಿದರಾದ ನಾವು ಉತ್ತಮ ಅವಕಾಶಗಳನ್ನು ಪಡೆದಾಗ ಮಾತ್ರ ನಮ್ಮ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಬಹುದು” ಎಂದು ಕ್ರಿಶ್ ಹೇಳಿದ್ದಾರೆ.

ಮಣಿಕರ್ಣಿಕಾ ಚಿತ್ರ ವಿವಾದವೇನು…?

2019 ರಲ್ಲಿ ನಟಿ ಕಂಗನಾ ರಣಾವತ್ ಮಣಿಕರ್ಣಿಕಾ: ರಾಣಿ ಆಫ್ ಝಾನ್ಸಿ ಚಿತ್ರವನ್ನು ವಹಿಸಿಕೊಂಡು, ಚಿತ್ರದ ಬಹಳಷ್ಟು ಭಾಗಗಳನ್ನು ಮತ್ತೆ ಚಿತ್ರೀಕರಿಸಿದರು. ನಿರ್ದೇಶಕ ಕ್ರಿಶ್ ಜಗಾರ್ಲಮುಡಿ ಅವರೊಂದಿಗೆ ಸಹ-ನಿರ್ದೇಶಕರ ಕ್ರೆಡಿಟ್ ಕೂಡ ಹಂಚಿಕೊಂಡಿದ್ದರು. ನಂತರ ಚಿತ್ರದ 70 ಪ್ರತಿಶತವನ್ನು ತಾವೇ ನಿರ್ದೇಶಿಸಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದಕ್ಕೆ ಆಕೆಯ ಸಹೋದರಿ ರಂಗೋಲಿ ಬೆಂಬಲವಾಗಿ ನಿಂತಿದ್ದರು.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ಈ ಬಗ್ಗೆ ನಿರ್ದೇಶಕ ಕ್ರಿಶ್ ಜಗಾರ್ಲಮುಡಿ ಹಲವಾರು ಸಂದರ್ಶನಗಳಲ್ಲಿ, ಕಂಗನಾ ಅವರಿಂದ ಚಿತ್ರವನ್ನು ಸ್ವಾಧೀನಪಡಿಸಿಕೊಂಡ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಜೊತೆಗೆ ಚಿತ್ರದಲ್ಲಿ ಹಲವರ ಪಾತ್ರಗಳನ್ನು ಕಡಿತಗೊಳಿಸಿ, ಸಣ್ಣ ಪುಟ್ಟ ಬದಲಾವಣೆ ಮಾಡಬೇಕು ಎಂದು ಏನೇನೋ ಬದಲಾವಣೆ ಮಾಡಿದರು’ ಎಂದು ಆರೋಪಿಸಿದ್ದರು.

ವಿವಾದದಿಂದ ಬೇಸತ್ತ ಕ್ರಿಶ್, “ಕಂಗನಾ ಮತ್ತು ನಾನು ಇಬ್ಬರೂ ಈ ಉದ್ಯಮದಿಂದ ಬೇಗ ದೂರ  ಸರಿಯುವುದಿಲ್ಲ. ಭವಿಷ್ಯದಲ್ಲಿ ನಾನು ಇನ್ನೂ ಅನೇಕ ಚಿತ್ರಗಳನ್ನು ನಿರ್ದೇಶಿಸುತ್ತೇನೆ ಮತ್ತು ಅವರು ಕೂಡ ಚಿತ್ರರಂಗದಲ್ಲಿರುತ್ತಾರೆ. ಯಾರು ಎಲ್ಲಿ ನಿಲ್ಲುತ್ತಾರೆ ಎಂದು ಜನರಿಗೆ ತಿಳಿಯುತ್ತದೆ. ನಾನು ಕಂಗನಾ ಮತ್ತು ಇಡೀ ವಿವಾದದಿಂದ ದಣಿದಿದ್ದೇನೆ” ಎಂದು ಹೇಳಿದ್ದರು.

ಈಗ ಈ ಟಾಕ್ ಶೋನಿಂದ ಮತ್ತೊಮ್ಮೆ ಮಣಿಕರ್ಣಿಕಾ ಚಿತ್ರ ವಿವಾದ ಜನರ ನೆನಪಿಗೆ ಬಂದಿದೆ. ಬರೀ ಪ್ರೋಮೋ ಇಷ್ಟೊಂದು ವೈರಲ್ ಆಗಿದೆ. ಡಿಸೆಂಬರ್‌ 18 ರಂದು ಪೂರ್ತಿ ಕಾರ್ಯಕ್ರಮ ಪ್ರಸಾರವಾಗಲಿದ್ದು, ಕ್ರಿಶ್ ವಿವಾದದ ಬಗ್ಗೆ ಏನೇನು ಹೇಳಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಹೊರಬರಲಿದೆ.

ನಟಿ ಕಂಗನಾ ರಣಾವತ್ ಇತ್ತಿಚೆಗೆ ಹೆಚ್ಚು ಹೆಚ್ಚು ಟ್ರೋಲ್ ಮತ್ತು ಟೀಕೆಗಳಿಗೆ ಗುರಿಯಾಗುತ್ತಿದ್ದಾರೆ. ಈ ಸಂದರ್ಭದಲ್ಲೇ ಮತ್ತೆ ಮಣಿಕರ್ಣಿಕಾ ವಿವಾದ ಹೊರ ಬಿದ್ದಿದೆ.


ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...