Homeಮುಖಪುಟಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಮಣಿಕರ್ಣಿಕಾ ಚಿತ್ರದ 70 ಪ್ರತಿಶತವನ್ನು ತಾವೇ ನಿರ್ದೇಶಿಸಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದಕ್ಕೆ ಆಕೆಯ ಸಹೋದರಿ ರಂಗೋಲಿ ಬೆಂಬಲವಾಗಿ ನಿಂತಿದ್ದರು.

- Advertisement -
- Advertisement -

’ಮಣಿಕರ್ಣಿಕಾ: ದಿ ಕ್ವೀನ್ ಆಫ್ ಝೂನ್ಸಿ’ ಚಿತ್ರದ ನಿರ್ದೇಶನದ ಬಗ್ಗೆ ನಟಿ ಕಂಗನಾ ರಣಾವತ್ ಜೊತೆ ಭಿನ್ನಾಭಿಪ್ರಾಯ ಹೊಂದಿದ್ದ ನಿರ್ದೇಶಕ ಕ್ರಿಶ್ ಜಗಾರ್ಲಮುಡಿ, ವಿವಾದದ ಬಗ್ಗೆ ಮಾತನಾಡಿದ ಕ್ರಿಶ್, ಕಂಗನಾರಿಂದ ತಾನು ಜಗತ್ತಿಗೆ ಅಪರಿಚಿತನಾಗಿರಬಹುದೆಂಬ ಭಯವಿದೆ ಎಂದು ಹೇಳಿದ್ದಾರೆ.

ನಟಿ ಸಮಂತಾ ಅವರ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ಕೊನೆಯ ಬಾರಿಗೆ ವಿವಾದದ ಬಗ್ಗೆ ಮಾತನಾಡುತ್ತೇನೆ ಎಂದು ಹೇಳುತ್ತಾ ಹಲವು ವಿಚಾರಗಳನ್ನು ತೆರೆದಿಟ್ಟಿದ್ದಾರೆ. ನಟಿ ರಾಕುಲ್ ಪ್ರೀತ್ ಸಿಂಗ್ ಜೊತೆಗೆ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ಕಾಣಿಸಿಕೊಂಡರು.

ಡಿಸೆಂಬರ್ 18 ರಂದು ಒಟಿಟಿ ಪ್ಲಾಟ್‌ಫಾರ್ಮ್ ಆಹಾ ನಲ್ಲಿ  ಪ್ರಸಾರವಾಗಲಿರುವ, ನಟಿ ಸಮಂತಾ ಅವರ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ರಾಕುಲ್ ಪ್ರೀತ್ ಸಿಂಗ್ ಮತ್ತು ಕ್ರಿಶ್ ಜಗಾರ್ಲಮುಡಿ ಅವರು ಅತಿಥಿಗಳಾಗಿದ್ದಾರೆ. ಇತ್ತೀಚೆಗೆ, ಈ ಕಾರ್ಯಕ್ರಮದ ಪ್ರೋಮೋ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಇಬ್ಬರು ಕಲಾವಿದರು ತಮ್ಮ ಸುತ್ತಲು ಹರಡಿದ್ದ, ಕಾಡಿದ ವಿವಾದಗಳ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್

ಮಣಿಕರ್ಣಿಕಾ ಮತ್ತು ಕಂಗನಾ ರಣಾವತ್ ಅವರೊಂದಿಗೆ ಏನಾಯಿತು ಎಂದು ನಟಿ ಸಮಂತಾ ಕೇಳಿದಾಗ, “ನಾನು ಕೊನೆಯ ಬಾರಿಗೆ ಮಾತನಾಡಲು ಬಯಸುತ್ತೇನೆ. ಕಂಗನಾ ಮತ್ತು ಅವಳ ತಂಡವು ಚಿತ್ರವನ್ನು ವೀಕ್ಷಿಸಿತ್ತು. ಆದಾಗಿ ಎರಡು ದಿನಗಳ ನಂತರ ನನಗೆ ಕರೆ ಬಂತು ಎಂದಿದ್ದಾರೆ. ನನ್ನ ಏಕೈಕ ಭಯವೆಂದರೆ ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು. ಕಲಾವಿದರಾದ ನಾವು ಉತ್ತಮ ಅವಕಾಶಗಳನ್ನು ಪಡೆದಾಗ ಮಾತ್ರ ನಮ್ಮ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಬಹುದು” ಎಂದು ಕ್ರಿಶ್ ಹೇಳಿದ್ದಾರೆ.

ಮಣಿಕರ್ಣಿಕಾ ಚಿತ್ರ ವಿವಾದವೇನು…?

2019 ರಲ್ಲಿ ನಟಿ ಕಂಗನಾ ರಣಾವತ್ ಮಣಿಕರ್ಣಿಕಾ: ರಾಣಿ ಆಫ್ ಝಾನ್ಸಿ ಚಿತ್ರವನ್ನು ವಹಿಸಿಕೊಂಡು, ಚಿತ್ರದ ಬಹಳಷ್ಟು ಭಾಗಗಳನ್ನು ಮತ್ತೆ ಚಿತ್ರೀಕರಿಸಿದರು. ನಿರ್ದೇಶಕ ಕ್ರಿಶ್ ಜಗಾರ್ಲಮುಡಿ ಅವರೊಂದಿಗೆ ಸಹ-ನಿರ್ದೇಶಕರ ಕ್ರೆಡಿಟ್ ಕೂಡ ಹಂಚಿಕೊಂಡಿದ್ದರು. ನಂತರ ಚಿತ್ರದ 70 ಪ್ರತಿಶತವನ್ನು ತಾವೇ ನಿರ್ದೇಶಿಸಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದಕ್ಕೆ ಆಕೆಯ ಸಹೋದರಿ ರಂಗೋಲಿ ಬೆಂಬಲವಾಗಿ ನಿಂತಿದ್ದರು.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ಈ ಬಗ್ಗೆ ನಿರ್ದೇಶಕ ಕ್ರಿಶ್ ಜಗಾರ್ಲಮುಡಿ ಹಲವಾರು ಸಂದರ್ಶನಗಳಲ್ಲಿ, ಕಂಗನಾ ಅವರಿಂದ ಚಿತ್ರವನ್ನು ಸ್ವಾಧೀನಪಡಿಸಿಕೊಂಡ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಜೊತೆಗೆ ಚಿತ್ರದಲ್ಲಿ ಹಲವರ ಪಾತ್ರಗಳನ್ನು ಕಡಿತಗೊಳಿಸಿ, ಸಣ್ಣ ಪುಟ್ಟ ಬದಲಾವಣೆ ಮಾಡಬೇಕು ಎಂದು ಏನೇನೋ ಬದಲಾವಣೆ ಮಾಡಿದರು’ ಎಂದು ಆರೋಪಿಸಿದ್ದರು.

ವಿವಾದದಿಂದ ಬೇಸತ್ತ ಕ್ರಿಶ್, “ಕಂಗನಾ ಮತ್ತು ನಾನು ಇಬ್ಬರೂ ಈ ಉದ್ಯಮದಿಂದ ಬೇಗ ದೂರ  ಸರಿಯುವುದಿಲ್ಲ. ಭವಿಷ್ಯದಲ್ಲಿ ನಾನು ಇನ್ನೂ ಅನೇಕ ಚಿತ್ರಗಳನ್ನು ನಿರ್ದೇಶಿಸುತ್ತೇನೆ ಮತ್ತು ಅವರು ಕೂಡ ಚಿತ್ರರಂಗದಲ್ಲಿರುತ್ತಾರೆ. ಯಾರು ಎಲ್ಲಿ ನಿಲ್ಲುತ್ತಾರೆ ಎಂದು ಜನರಿಗೆ ತಿಳಿಯುತ್ತದೆ. ನಾನು ಕಂಗನಾ ಮತ್ತು ಇಡೀ ವಿವಾದದಿಂದ ದಣಿದಿದ್ದೇನೆ” ಎಂದು ಹೇಳಿದ್ದರು.

ಈಗ ಈ ಟಾಕ್ ಶೋನಿಂದ ಮತ್ತೊಮ್ಮೆ ಮಣಿಕರ್ಣಿಕಾ ಚಿತ್ರ ವಿವಾದ ಜನರ ನೆನಪಿಗೆ ಬಂದಿದೆ. ಬರೀ ಪ್ರೋಮೋ ಇಷ್ಟೊಂದು ವೈರಲ್ ಆಗಿದೆ. ಡಿಸೆಂಬರ್‌ 18 ರಂದು ಪೂರ್ತಿ ಕಾರ್ಯಕ್ರಮ ಪ್ರಸಾರವಾಗಲಿದ್ದು, ಕ್ರಿಶ್ ವಿವಾದದ ಬಗ್ಗೆ ಏನೇನು ಹೇಳಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಹೊರಬರಲಿದೆ.

ನಟಿ ಕಂಗನಾ ರಣಾವತ್ ಇತ್ತಿಚೆಗೆ ಹೆಚ್ಚು ಹೆಚ್ಚು ಟ್ರೋಲ್ ಮತ್ತು ಟೀಕೆಗಳಿಗೆ ಗುರಿಯಾಗುತ್ತಿದ್ದಾರೆ. ಈ ಸಂದರ್ಭದಲ್ಲೇ ಮತ್ತೆ ಮಣಿಕರ್ಣಿಕಾ ವಿವಾದ ಹೊರ ಬಿದ್ದಿದೆ.


ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....