Homeಮುಖಪುಟಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಮಣಿಕರ್ಣಿಕಾ ಚಿತ್ರದ 70 ಪ್ರತಿಶತವನ್ನು ತಾವೇ ನಿರ್ದೇಶಿಸಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದಕ್ಕೆ ಆಕೆಯ ಸಹೋದರಿ ರಂಗೋಲಿ ಬೆಂಬಲವಾಗಿ ನಿಂತಿದ್ದರು.

- Advertisement -
- Advertisement -

’ಮಣಿಕರ್ಣಿಕಾ: ದಿ ಕ್ವೀನ್ ಆಫ್ ಝೂನ್ಸಿ’ ಚಿತ್ರದ ನಿರ್ದೇಶನದ ಬಗ್ಗೆ ನಟಿ ಕಂಗನಾ ರಣಾವತ್ ಜೊತೆ ಭಿನ್ನಾಭಿಪ್ರಾಯ ಹೊಂದಿದ್ದ ನಿರ್ದೇಶಕ ಕ್ರಿಶ್ ಜಗಾರ್ಲಮುಡಿ, ವಿವಾದದ ಬಗ್ಗೆ ಮಾತನಾಡಿದ ಕ್ರಿಶ್, ಕಂಗನಾರಿಂದ ತಾನು ಜಗತ್ತಿಗೆ ಅಪರಿಚಿತನಾಗಿರಬಹುದೆಂಬ ಭಯವಿದೆ ಎಂದು ಹೇಳಿದ್ದಾರೆ.

ನಟಿ ಸಮಂತಾ ಅವರ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ಕೊನೆಯ ಬಾರಿಗೆ ವಿವಾದದ ಬಗ್ಗೆ ಮಾತನಾಡುತ್ತೇನೆ ಎಂದು ಹೇಳುತ್ತಾ ಹಲವು ವಿಚಾರಗಳನ್ನು ತೆರೆದಿಟ್ಟಿದ್ದಾರೆ. ನಟಿ ರಾಕುಲ್ ಪ್ರೀತ್ ಸಿಂಗ್ ಜೊತೆಗೆ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ಕಾಣಿಸಿಕೊಂಡರು.

ಡಿಸೆಂಬರ್ 18 ರಂದು ಒಟಿಟಿ ಪ್ಲಾಟ್‌ಫಾರ್ಮ್ ಆಹಾ ನಲ್ಲಿ  ಪ್ರಸಾರವಾಗಲಿರುವ, ನಟಿ ಸಮಂತಾ ಅವರ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ರಾಕುಲ್ ಪ್ರೀತ್ ಸಿಂಗ್ ಮತ್ತು ಕ್ರಿಶ್ ಜಗಾರ್ಲಮುಡಿ ಅವರು ಅತಿಥಿಗಳಾಗಿದ್ದಾರೆ. ಇತ್ತೀಚೆಗೆ, ಈ ಕಾರ್ಯಕ್ರಮದ ಪ್ರೋಮೋ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಇಬ್ಬರು ಕಲಾವಿದರು ತಮ್ಮ ಸುತ್ತಲು ಹರಡಿದ್ದ, ಕಾಡಿದ ವಿವಾದಗಳ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್

ಮಣಿಕರ್ಣಿಕಾ ಮತ್ತು ಕಂಗನಾ ರಣಾವತ್ ಅವರೊಂದಿಗೆ ಏನಾಯಿತು ಎಂದು ನಟಿ ಸಮಂತಾ ಕೇಳಿದಾಗ, “ನಾನು ಕೊನೆಯ ಬಾರಿಗೆ ಮಾತನಾಡಲು ಬಯಸುತ್ತೇನೆ. ಕಂಗನಾ ಮತ್ತು ಅವಳ ತಂಡವು ಚಿತ್ರವನ್ನು ವೀಕ್ಷಿಸಿತ್ತು. ಆದಾಗಿ ಎರಡು ದಿನಗಳ ನಂತರ ನನಗೆ ಕರೆ ಬಂತು ಎಂದಿದ್ದಾರೆ. ನನ್ನ ಏಕೈಕ ಭಯವೆಂದರೆ ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು. ಕಲಾವಿದರಾದ ನಾವು ಉತ್ತಮ ಅವಕಾಶಗಳನ್ನು ಪಡೆದಾಗ ಮಾತ್ರ ನಮ್ಮ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಬಹುದು” ಎಂದು ಕ್ರಿಶ್ ಹೇಳಿದ್ದಾರೆ.

ಮಣಿಕರ್ಣಿಕಾ ಚಿತ್ರ ವಿವಾದವೇನು…?

2019 ರಲ್ಲಿ ನಟಿ ಕಂಗನಾ ರಣಾವತ್ ಮಣಿಕರ್ಣಿಕಾ: ರಾಣಿ ಆಫ್ ಝಾನ್ಸಿ ಚಿತ್ರವನ್ನು ವಹಿಸಿಕೊಂಡು, ಚಿತ್ರದ ಬಹಳಷ್ಟು ಭಾಗಗಳನ್ನು ಮತ್ತೆ ಚಿತ್ರೀಕರಿಸಿದರು. ನಿರ್ದೇಶಕ ಕ್ರಿಶ್ ಜಗಾರ್ಲಮುಡಿ ಅವರೊಂದಿಗೆ ಸಹ-ನಿರ್ದೇಶಕರ ಕ್ರೆಡಿಟ್ ಕೂಡ ಹಂಚಿಕೊಂಡಿದ್ದರು. ನಂತರ ಚಿತ್ರದ 70 ಪ್ರತಿಶತವನ್ನು ತಾವೇ ನಿರ್ದೇಶಿಸಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದಕ್ಕೆ ಆಕೆಯ ಸಹೋದರಿ ರಂಗೋಲಿ ಬೆಂಬಲವಾಗಿ ನಿಂತಿದ್ದರು.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ಈ ಬಗ್ಗೆ ನಿರ್ದೇಶಕ ಕ್ರಿಶ್ ಜಗಾರ್ಲಮುಡಿ ಹಲವಾರು ಸಂದರ್ಶನಗಳಲ್ಲಿ, ಕಂಗನಾ ಅವರಿಂದ ಚಿತ್ರವನ್ನು ಸ್ವಾಧೀನಪಡಿಸಿಕೊಂಡ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಜೊತೆಗೆ ಚಿತ್ರದಲ್ಲಿ ಹಲವರ ಪಾತ್ರಗಳನ್ನು ಕಡಿತಗೊಳಿಸಿ, ಸಣ್ಣ ಪುಟ್ಟ ಬದಲಾವಣೆ ಮಾಡಬೇಕು ಎಂದು ಏನೇನೋ ಬದಲಾವಣೆ ಮಾಡಿದರು’ ಎಂದು ಆರೋಪಿಸಿದ್ದರು.

ವಿವಾದದಿಂದ ಬೇಸತ್ತ ಕ್ರಿಶ್, “ಕಂಗನಾ ಮತ್ತು ನಾನು ಇಬ್ಬರೂ ಈ ಉದ್ಯಮದಿಂದ ಬೇಗ ದೂರ  ಸರಿಯುವುದಿಲ್ಲ. ಭವಿಷ್ಯದಲ್ಲಿ ನಾನು ಇನ್ನೂ ಅನೇಕ ಚಿತ್ರಗಳನ್ನು ನಿರ್ದೇಶಿಸುತ್ತೇನೆ ಮತ್ತು ಅವರು ಕೂಡ ಚಿತ್ರರಂಗದಲ್ಲಿರುತ್ತಾರೆ. ಯಾರು ಎಲ್ಲಿ ನಿಲ್ಲುತ್ತಾರೆ ಎಂದು ಜನರಿಗೆ ತಿಳಿಯುತ್ತದೆ. ನಾನು ಕಂಗನಾ ಮತ್ತು ಇಡೀ ವಿವಾದದಿಂದ ದಣಿದಿದ್ದೇನೆ” ಎಂದು ಹೇಳಿದ್ದರು.

ಈಗ ಈ ಟಾಕ್ ಶೋನಿಂದ ಮತ್ತೊಮ್ಮೆ ಮಣಿಕರ್ಣಿಕಾ ಚಿತ್ರ ವಿವಾದ ಜನರ ನೆನಪಿಗೆ ಬಂದಿದೆ. ಬರೀ ಪ್ರೋಮೋ ಇಷ್ಟೊಂದು ವೈರಲ್ ಆಗಿದೆ. ಡಿಸೆಂಬರ್‌ 18 ರಂದು ಪೂರ್ತಿ ಕಾರ್ಯಕ್ರಮ ಪ್ರಸಾರವಾಗಲಿದ್ದು, ಕ್ರಿಶ್ ವಿವಾದದ ಬಗ್ಗೆ ಏನೇನು ಹೇಳಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಹೊರಬರಲಿದೆ.

ನಟಿ ಕಂಗನಾ ರಣಾವತ್ ಇತ್ತಿಚೆಗೆ ಹೆಚ್ಚು ಹೆಚ್ಚು ಟ್ರೋಲ್ ಮತ್ತು ಟೀಕೆಗಳಿಗೆ ಗುರಿಯಾಗುತ್ತಿದ್ದಾರೆ. ಈ ಸಂದರ್ಭದಲ್ಲೇ ಮತ್ತೆ ಮಣಿಕರ್ಣಿಕಾ ವಿವಾದ ಹೊರ ಬಿದ್ದಿದೆ.


ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....