Homeಮುಖಪುಟಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಮಣಿಕರ್ಣಿಕಾ ಚಿತ್ರದ 70 ಪ್ರತಿಶತವನ್ನು ತಾವೇ ನಿರ್ದೇಶಿಸಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದಕ್ಕೆ ಆಕೆಯ ಸಹೋದರಿ ರಂಗೋಲಿ ಬೆಂಬಲವಾಗಿ ನಿಂತಿದ್ದರು.

- Advertisement -
- Advertisement -

’ಮಣಿಕರ್ಣಿಕಾ: ದಿ ಕ್ವೀನ್ ಆಫ್ ಝೂನ್ಸಿ’ ಚಿತ್ರದ ನಿರ್ದೇಶನದ ಬಗ್ಗೆ ನಟಿ ಕಂಗನಾ ರಣಾವತ್ ಜೊತೆ ಭಿನ್ನಾಭಿಪ್ರಾಯ ಹೊಂದಿದ್ದ ನಿರ್ದೇಶಕ ಕ್ರಿಶ್ ಜಗಾರ್ಲಮುಡಿ, ವಿವಾದದ ಬಗ್ಗೆ ಮಾತನಾಡಿದ ಕ್ರಿಶ್, ಕಂಗನಾರಿಂದ ತಾನು ಜಗತ್ತಿಗೆ ಅಪರಿಚಿತನಾಗಿರಬಹುದೆಂಬ ಭಯವಿದೆ ಎಂದು ಹೇಳಿದ್ದಾರೆ.

ನಟಿ ಸಮಂತಾ ಅವರ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ಕೊನೆಯ ಬಾರಿಗೆ ವಿವಾದದ ಬಗ್ಗೆ ಮಾತನಾಡುತ್ತೇನೆ ಎಂದು ಹೇಳುತ್ತಾ ಹಲವು ವಿಚಾರಗಳನ್ನು ತೆರೆದಿಟ್ಟಿದ್ದಾರೆ. ನಟಿ ರಾಕುಲ್ ಪ್ರೀತ್ ಸಿಂಗ್ ಜೊತೆಗೆ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ಕಾಣಿಸಿಕೊಂಡರು.

ಡಿಸೆಂಬರ್ 18 ರಂದು ಒಟಿಟಿ ಪ್ಲಾಟ್‌ಫಾರ್ಮ್ ಆಹಾ ನಲ್ಲಿ  ಪ್ರಸಾರವಾಗಲಿರುವ, ನಟಿ ಸಮಂತಾ ಅವರ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ರಾಕುಲ್ ಪ್ರೀತ್ ಸಿಂಗ್ ಮತ್ತು ಕ್ರಿಶ್ ಜಗಾರ್ಲಮುಡಿ ಅವರು ಅತಿಥಿಗಳಾಗಿದ್ದಾರೆ. ಇತ್ತೀಚೆಗೆ, ಈ ಕಾರ್ಯಕ್ರಮದ ಪ್ರೋಮೋ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಇಬ್ಬರು ಕಲಾವಿದರು ತಮ್ಮ ಸುತ್ತಲು ಹರಡಿದ್ದ, ಕಾಡಿದ ವಿವಾದಗಳ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್

ಮಣಿಕರ್ಣಿಕಾ ಮತ್ತು ಕಂಗನಾ ರಣಾವತ್ ಅವರೊಂದಿಗೆ ಏನಾಯಿತು ಎಂದು ನಟಿ ಸಮಂತಾ ಕೇಳಿದಾಗ, “ನಾನು ಕೊನೆಯ ಬಾರಿಗೆ ಮಾತನಾಡಲು ಬಯಸುತ್ತೇನೆ. ಕಂಗನಾ ಮತ್ತು ಅವಳ ತಂಡವು ಚಿತ್ರವನ್ನು ವೀಕ್ಷಿಸಿತ್ತು. ಆದಾಗಿ ಎರಡು ದಿನಗಳ ನಂತರ ನನಗೆ ಕರೆ ಬಂತು ಎಂದಿದ್ದಾರೆ. ನನ್ನ ಏಕೈಕ ಭಯವೆಂದರೆ ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು. ಕಲಾವಿದರಾದ ನಾವು ಉತ್ತಮ ಅವಕಾಶಗಳನ್ನು ಪಡೆದಾಗ ಮಾತ್ರ ನಮ್ಮ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಬಹುದು” ಎಂದು ಕ್ರಿಶ್ ಹೇಳಿದ್ದಾರೆ.

ಮಣಿಕರ್ಣಿಕಾ ಚಿತ್ರ ವಿವಾದವೇನು…?

2019 ರಲ್ಲಿ ನಟಿ ಕಂಗನಾ ರಣಾವತ್ ಮಣಿಕರ್ಣಿಕಾ: ರಾಣಿ ಆಫ್ ಝಾನ್ಸಿ ಚಿತ್ರವನ್ನು ವಹಿಸಿಕೊಂಡು, ಚಿತ್ರದ ಬಹಳಷ್ಟು ಭಾಗಗಳನ್ನು ಮತ್ತೆ ಚಿತ್ರೀಕರಿಸಿದರು. ನಿರ್ದೇಶಕ ಕ್ರಿಶ್ ಜಗಾರ್ಲಮುಡಿ ಅವರೊಂದಿಗೆ ಸಹ-ನಿರ್ದೇಶಕರ ಕ್ರೆಡಿಟ್ ಕೂಡ ಹಂಚಿಕೊಂಡಿದ್ದರು. ನಂತರ ಚಿತ್ರದ 70 ಪ್ರತಿಶತವನ್ನು ತಾವೇ ನಿರ್ದೇಶಿಸಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದಕ್ಕೆ ಆಕೆಯ ಸಹೋದರಿ ರಂಗೋಲಿ ಬೆಂಬಲವಾಗಿ ನಿಂತಿದ್ದರು.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ಈ ಬಗ್ಗೆ ನಿರ್ದೇಶಕ ಕ್ರಿಶ್ ಜಗಾರ್ಲಮುಡಿ ಹಲವಾರು ಸಂದರ್ಶನಗಳಲ್ಲಿ, ಕಂಗನಾ ಅವರಿಂದ ಚಿತ್ರವನ್ನು ಸ್ವಾಧೀನಪಡಿಸಿಕೊಂಡ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಜೊತೆಗೆ ಚಿತ್ರದಲ್ಲಿ ಹಲವರ ಪಾತ್ರಗಳನ್ನು ಕಡಿತಗೊಳಿಸಿ, ಸಣ್ಣ ಪುಟ್ಟ ಬದಲಾವಣೆ ಮಾಡಬೇಕು ಎಂದು ಏನೇನೋ ಬದಲಾವಣೆ ಮಾಡಿದರು’ ಎಂದು ಆರೋಪಿಸಿದ್ದರು.

ವಿವಾದದಿಂದ ಬೇಸತ್ತ ಕ್ರಿಶ್, “ಕಂಗನಾ ಮತ್ತು ನಾನು ಇಬ್ಬರೂ ಈ ಉದ್ಯಮದಿಂದ ಬೇಗ ದೂರ  ಸರಿಯುವುದಿಲ್ಲ. ಭವಿಷ್ಯದಲ್ಲಿ ನಾನು ಇನ್ನೂ ಅನೇಕ ಚಿತ್ರಗಳನ್ನು ನಿರ್ದೇಶಿಸುತ್ತೇನೆ ಮತ್ತು ಅವರು ಕೂಡ ಚಿತ್ರರಂಗದಲ್ಲಿರುತ್ತಾರೆ. ಯಾರು ಎಲ್ಲಿ ನಿಲ್ಲುತ್ತಾರೆ ಎಂದು ಜನರಿಗೆ ತಿಳಿಯುತ್ತದೆ. ನಾನು ಕಂಗನಾ ಮತ್ತು ಇಡೀ ವಿವಾದದಿಂದ ದಣಿದಿದ್ದೇನೆ” ಎಂದು ಹೇಳಿದ್ದರು.

ಈಗ ಈ ಟಾಕ್ ಶೋನಿಂದ ಮತ್ತೊಮ್ಮೆ ಮಣಿಕರ್ಣಿಕಾ ಚಿತ್ರ ವಿವಾದ ಜನರ ನೆನಪಿಗೆ ಬಂದಿದೆ. ಬರೀ ಪ್ರೋಮೋ ಇಷ್ಟೊಂದು ವೈರಲ್ ಆಗಿದೆ. ಡಿಸೆಂಬರ್‌ 18 ರಂದು ಪೂರ್ತಿ ಕಾರ್ಯಕ್ರಮ ಪ್ರಸಾರವಾಗಲಿದ್ದು, ಕ್ರಿಶ್ ವಿವಾದದ ಬಗ್ಗೆ ಏನೇನು ಹೇಳಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಹೊರಬರಲಿದೆ.

ನಟಿ ಕಂಗನಾ ರಣಾವತ್ ಇತ್ತಿಚೆಗೆ ಹೆಚ್ಚು ಹೆಚ್ಚು ಟ್ರೋಲ್ ಮತ್ತು ಟೀಕೆಗಳಿಗೆ ಗುರಿಯಾಗುತ್ತಿದ್ದಾರೆ. ಈ ಸಂದರ್ಭದಲ್ಲೇ ಮತ್ತೆ ಮಣಿಕರ್ಣಿಕಾ ವಿವಾದ ಹೊರ ಬಿದ್ದಿದೆ.


ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...