Homeಮುಖಪುಟಮಣಿಪುರ: ಗುಂಡಿನ ಚಕಮಕಿಯಲ್ಲಿ 10 ಮಿಲಿಟೆಂಟ್ ಗಳು ಸಾವು

ಮಣಿಪುರ: ಗುಂಡಿನ ಚಕಮಕಿಯಲ್ಲಿ 10 ಮಿಲಿಟೆಂಟ್ ಗಳು ಸಾವು

- Advertisement -
- Advertisement -

ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಬುಧವಾರ ಅಸ್ಸಾಂ ರೈಫಲ್ಸ್‌ನ ಒಂದು ಘಟಕವು ಕನಿಷ್ಠ 10 ಮಂದಿ ಮಿಲಿಟೆಂಟ್ ಗಳನ್ನು ಹೊಡೆದುರುಳಿಸಲಾಗಿದೆ. ಅವರಿಂದ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಂದು ಭಾರತೀಯ ಸೇನೆ ತಿಳಿಸಿದೆ.

ಇಂಡೋ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಚಾಂಡೆಲ್ ಜಿಲ್ಲೆಯ ನ್ಯೂ ಸಮ್ತಾಲ್ ಗ್ರಾಮದ ಬಳಿ ಸಶಸ್ತ್ರ ಮಿಲಿಟೆಂಟ್ ಗಳ ಚಲನವಲನದ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಅಸ್ಸಾಂ ರೈಫಲ್ಸ್ ಘಟಕವು ಕಾರ್ಯಾಚರಣೆ ನಡೆಸುತ್ತಿದೆ ಎಂದು ಸೇನೆಯ ಪೂರ್ವ ಕಮಾಂಡ್ ಎಕ್ಸ್‌ನಲ್ಲಿರುವ ಪೋಸ್ಟ್‌ನಲ್ಲಿ ತಿಳಿಸಿದೆ.

ಮಿಲಿಟೆಂಟ್ ಗಳು ಸೈನಿಕರ ಮೇಲೆ ಗುಂಡು ಹಾರಿಸಿದರು, ಅದಕ್ಕೆ ಅವರು ಪ್ರತಿದಾಳಿ ನಡೆಸಿದರು ಮತ್ತು ಗುಂಡಿನ ಚಕಮಕಿಯಲ್ಲಿ ಕನಿಷ್ಠ 10 ಮಂದಿ ಕೊಲ್ಲಲ್ಪಟ್ಟರು. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಪೋಸ್ಟ್ ತಿಳಿಸಿದೆ.

ಸೇನೆಯ ಪೂರ್ವ ಕಮಾಂಡ್ ಎಕ್ಸ್‌ ಪೋಸ್ಟ್‌ನಲ್ಲಿ, “ಇಂಡೋ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಚಾಂಡೆಲ್ ಜಿಲ್ಲೆಯ ಖೆಂಗ್‌ಜಾಯ್ ತಹಸಿಲ್‌ನ ನ್ಯೂ ಸಮ್ತಾಲ್ ಗ್ರಾಮದ ಬಳಿ ಸಶಸ್ತ್ರ ಕಾರ್ಯಕರ್ತರ ಚಲನವಲನದ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸುತ್ತಾ, ಅಸ್ಸಾಂ ರೈಫಲ್ಸ್ ಘಟಕವು ಮೇ 14ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಿತು” ಎಂದು ಹೇಳಿದೆ.

“ಕಾರ್ಯಾಚರಣೆಯ ಸಮಯದಲ್ಲಿ ಶಂಕಿತ ಕಾರ್ಯಕರ್ತರು ಸೈನಿಕರ ಮೇಲೆ ಗುಂಡು ಹಾರಿಸಿದರು. ಅವರು ತ್ವರಿತವಾಗಿ ಪ್ರತಿಕ್ರಿಯಿಸಿದರು. ನಂತರದ ಗುಂಡಿನ ಚಕಮಕಿಯಲ್ಲಿ 10 ಮಂದಿ ಮಿಲಿಟೆಂಟ್ ಗುಂಪಿನ ಕಾರ್ಯಕರ್ತರನ್ನು ಹೊಡೆದುರುಳಿಸಲಾಯಿತು ಮತ್ತು ಗಣನೀಯ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಯಿತು. ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ” ಎಂದು ಅದು ಹೇಳಿದೆ.

ಮಣಿಪುರದಾದ್ಯಂತ ಮಿಲಿಟೆಂಟ್ ಸಂಘಟನೆಗಳ ವಿರುದ್ಧ ರಾಜ್ಯಾದ್ಯಂತ ನಡೆಯುತ್ತಿರುವ ಕಾರ್ಯಾಚರಣೆಯ ಮಧ್ಯೆ ಈ ಕಾರ್ಯಾಚರಣೆ ನಡೆದಿದೆ. ಕಳೆದ ವಾರ ಮೇ 10ರಂದು ಮಣಿಪುರದಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕನಿಷ್ಠ 13 ಮಿಲಿಟೆಂಟ್ ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರು ನಿಷೇಧಿತ ದಂಗೆಕೋರ ಗುಂಪುಗಳ “ಸಕ್ರಿಯ” ಸದಸ್ಯರಾಗಿದ್ದರು ಮತ್ತು ಸುಲಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ 10ರಂದು ಬಂಧಿಸಲ್ಪಟ್ಟವರಲ್ಲಿ ಕಾಂಗ್ಲೈ ಪಾಕ್ ಕಮ್ಯುನಿಸ್ಟ್ ಪಾರ್ಟಿ – ಪೀಪಲ್ಸ್ ವಾರ್ ಗ್ರೂಪ್ [ಕೆಸಿಪಿ (ಪಿಡಬ್ಲ್ಯೂಜಿ)] ಬಣದ ಇಬ್ಬರು ಸಕ್ರಿಯ ಸದಸ್ಯರಾಗಿದ್ದಾರೆ. ಕಿರಣ್ ಮೈತೇಯಿ ಅಲಿಯಾಸ್ ಬೊಯಿನಾವೊ (29) ಮತ್ತು ಇನೋಚಾ ಸಿಂಗ್ (45) ಸೇರಿದ್ದಾರೆ, ಇಬ್ಬರೂ ಇಂಫಾಲ್ ಪಶ್ಚಿಮ ಜಿಲ್ಲೆಯ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

‘ನಾವು ಪಾಕಿಸ್ತಾನದ ಭಾಗವಲ್ಲ’: ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡ ಬಲೂಚಿಸ್ತಾನ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...