Homeಮುಖಪುಟಮಣಿಪುರ: ‘ಒಂದೇ ಸಭಾಂಗಣದಲ್ಲಿ 500 ಜನರು, ಸ್ನಾನಗೃಹವಿಲ್ಲ,’ -ಹೃದಯ ವಿದ್ರಾವಕವಾಗಿವೆ ಶಿಬಿರಗಳು; INDIA ನಿಯೋಗ

ಮಣಿಪುರ: ‘ಒಂದೇ ಸಭಾಂಗಣದಲ್ಲಿ 500 ಜನರು, ಸ್ನಾನಗೃಹವಿಲ್ಲ,’ -ಹೃದಯ ವಿದ್ರಾವಕವಾಗಿವೆ ಶಿಬಿರಗಳು; INDIA ನಿಯೋಗ

- Advertisement -
- Advertisement -

ಮಣಿಪುರದಲ್ಲಿ ನಡೆದ ಹಿಂಸಾಚಾರದಿಂದಾಗಿ ನಿರಾಶ್ರಿತರಾಗಿರುವ ಜನರು ಸರ್ಕಾರ ಮಂಜೂರು ಮಾಡಿದ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಆದರೆ ಅಲ್ಲಿ ಮೂಲಭೂತ ಸೌಕರ್ಯಗಳಿಲ್ಲ ಎಂದು ಅಲ್ಲಿಯ ಜನರು ವಿರೋಧ ಪಕ್ಷಗಳ ಒಕ್ಕೂಟ INDIAದ ನಿಯೋಗದ ಎದುರು ನೋವು ತೋಡಿಕೊಂಡಿದ್ದಾರೆ.

ಮಣಿಪುರಕ್ಕೆ ಭೇಟಿ ನೀಡಿರುವ INDIAದ ನಿಯೋಗದ ಪರವಾಗಿ ಮಾತನಾಡಿದ ಕಾಂಗ್ರೆಸ್ ಸಂಸದೆ ಫುಲೋದೇವಿ ನೇತಂ ಅವರು, ”…ಒಂದು ಸಭಾಂಗಣದಲ್ಲಿ 400-500 ಜನರು ತಂಗಿದ್ದಾರೆ. ರಾಜ್ಯ ಸರ್ಕಾರ ಅವರಿಗೆ ದಾಲ್-ಚವಾಲ್ ನೀಡುತ್ತಿದೆ, ಮಕ್ಕಳಿಗೆ ಇಡೀ ದಿನ ತಿನ್ನಲು ಬೇರೆ ಏನೂ ಸಿಗುತ್ತಿಲ್ಲ. ಶೌಚಾಲಯ ಅಥವಾ ಸ್ನಾನದ ವ್ಯವಸ್ಥೆ ಇಲ್ಲ. ಶಿಬಿರಗಳಲ್ಲಿ ಜನರು ವಾಸಿಸುವ ರೀತಿ ತುಂಬಾ ಹೃದಯ ವಿದ್ರಾವಕವಾಗಿದೆ … ”

”ರಾಜ್ಯವು ಶಾಂತಿಯುತವಾಗಿದೆ ಎಂಬ ಸರ್ಕಾರದ ಹೇಳಿಕೆ ನಿಜವಾಗಿದ್ದರೆ, ಕಳೆದ ಮೂರು ತಿಂಗಳಿನಿಂದ ಬಂದಿರುವ ಪರಿಹಾರ ಶಿಬಿರಗಳನ್ನು ನಡೆಸುವ ಅಗತ್ಯವೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಮಣಿಪುರದಲ್ಲಿ ಮೂರು ತಿಂಗಳ ಕಾಲ ನಡೆದ ಜನಾಂಗೀಯ ಗಲಭೆಗಳ ಸಂತ್ರಸ್ತರನ್ನು ಭೇಟಿ ಮಾಡಲು 21 ಸಂಸದರ ಪ್ರತಿಪಕ್ಷಗಳ ನಿಯೋಗ ಶನಿವಾರ ಮಣಿಪುರಕ್ಕೆ ಆಗಮಿಸಿದೆ. ಭಾನುವಾರ ಅವರು ರಾಜಭವನದಲ್ಲಿ ಮಣಿಪುರ ರಾಜ್ಯಪಾಲರಾದ ಅನುಸೂಯಾ ಉಯಿಕೆ ಅವರನ್ನು ಭೇಟಿ ಮಾಡಿ ತಮ್ಮ ಅವಲೋಕನಗಳ ಕುರಿತು ಜ್ಞಾಪಕ ಪತ್ರವನ್ನು ಸಲ್ಲಿಸಿದರು.

ಸಭೆಯ ನಂತರ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ”ಮಣಿಪುರ ಜನಾಂಗೀಯ ಸಂಘರ್ಷವನ್ನು ಶೀಘ್ರವಾಗಿ ಪರಿಹರಿಸದಿದ್ದರೆ, ಅದು ದೇಶಕ್ಕೆ ಭದ್ರತಾ ಸಮಸ್ಯೆಗಳನ್ನು ಉಂಟುಮಾಡಬಹುದು” ಎಂದು ಪ್ರತಿಪಾದಿಸಿದರು.

”ರಾಜ್ಯಪಾಲರು ನಮ್ಮ ಅವಲೋಕನಗಳನ್ನು ಆಲಿಸಿದರು ಮತ್ತು ಅದಕ್ಕೆ ಸಮ್ಮತಿಸಿದರು. ಅವರು ಹಿಂಸಾಚಾರದ ಘಟನೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದರು ಮತ್ತು ಸಮುದಾಯಗಳ ನಡುವಿನ ಅಪನಂಬಿಕೆಯನ್ನು ಹೋಗಲಾಡಿಸಲು ಜನರೊಂದಿಗೆ ಮಾತನಾಡಲು ಸರ್ವಪಕ್ಷಗಳ ನಿಯೋಗ ಮಣಿಪುರಕ್ಕೆ ಭೇಟಿ ನೀಡಬೇಕು” ಎಂದು ಅವರು ಹೇಳಿದರು.

ಭೇಟಿ ನೀಡುವ ಸಂಸದರು ಮಣಿಪುರದ ಬಗ್ಗೆ ತಮ್ಮ ಅವಲೋಕನಗಳನ್ನು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ ಎಂದು ಚೌಧರಿ ಹೇಳಿದರು.

ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿರುವ ಕಾರಣ ಮಣಿಪುರ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಮನವಿ ಮಾಡಿದ್ದೇವೆ ಎಂದರು.

ಮಣಿಪುರದ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಹೇಯ ಕೃತ್ಯದ ವಿಡಿಯೋ ವೈರಲ್ ಆದ ಬಳಿಕ ಕೇಂದ್ರ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಯುದ್ಧವೇ ನಡೆಯಿತು. ಈ ವಿಚಾರವಾಗಿ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಮಾತನಾಡಬೇಕು ಎಂದು ಒತ್ತಾಯಿಸಿದರು. ಆದರೆ ಪ್ರಧಾನಿ ಮಾತ್ರ ಸಂಸತ್ತಿನಲ್ಲಿ ಮಾತನಾಡಲು ನಿರಾಕರಿಸಿದರು. ಹಾಗಾಗಿ ಕಲಾಪಕ್ಕೆ ಅಡಚಣೆಗಳು ಮತ್ತು ಮುಂದೂಡಿಕೆಗಳು ಹೆಚ್ಚಾದವು..

ಇದನ್ನೂ ಓದಿ: ಮಹಿಳೆಯರ ಬೆತ್ತಲೆ ಮೆರವಣಿಗೆ ವಿಚಾರದಲ್ಲಿ ಬಿಜೆಪಿ ಸರ್ಕಾರ ಧೃತರಾಷ್ಟ್ರನಂತೆ ಕುರುಡಾಗಿದೆ: ಉದ್ಭವ್ ಠಾಕ್ರೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...