Homeಮುಖಪುಟಮಣಿಪುರ: ‘ಒಂದೇ ಸಭಾಂಗಣದಲ್ಲಿ 500 ಜನರು, ಸ್ನಾನಗೃಹವಿಲ್ಲ,’ -ಹೃದಯ ವಿದ್ರಾವಕವಾಗಿವೆ ಶಿಬಿರಗಳು; INDIA ನಿಯೋಗ

ಮಣಿಪುರ: ‘ಒಂದೇ ಸಭಾಂಗಣದಲ್ಲಿ 500 ಜನರು, ಸ್ನಾನಗೃಹವಿಲ್ಲ,’ -ಹೃದಯ ವಿದ್ರಾವಕವಾಗಿವೆ ಶಿಬಿರಗಳು; INDIA ನಿಯೋಗ

- Advertisement -
- Advertisement -

ಮಣಿಪುರದಲ್ಲಿ ನಡೆದ ಹಿಂಸಾಚಾರದಿಂದಾಗಿ ನಿರಾಶ್ರಿತರಾಗಿರುವ ಜನರು ಸರ್ಕಾರ ಮಂಜೂರು ಮಾಡಿದ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಆದರೆ ಅಲ್ಲಿ ಮೂಲಭೂತ ಸೌಕರ್ಯಗಳಿಲ್ಲ ಎಂದು ಅಲ್ಲಿಯ ಜನರು ವಿರೋಧ ಪಕ್ಷಗಳ ಒಕ್ಕೂಟ INDIAದ ನಿಯೋಗದ ಎದುರು ನೋವು ತೋಡಿಕೊಂಡಿದ್ದಾರೆ.

ಮಣಿಪುರಕ್ಕೆ ಭೇಟಿ ನೀಡಿರುವ INDIAದ ನಿಯೋಗದ ಪರವಾಗಿ ಮಾತನಾಡಿದ ಕಾಂಗ್ರೆಸ್ ಸಂಸದೆ ಫುಲೋದೇವಿ ನೇತಂ ಅವರು, ”…ಒಂದು ಸಭಾಂಗಣದಲ್ಲಿ 400-500 ಜನರು ತಂಗಿದ್ದಾರೆ. ರಾಜ್ಯ ಸರ್ಕಾರ ಅವರಿಗೆ ದಾಲ್-ಚವಾಲ್ ನೀಡುತ್ತಿದೆ, ಮಕ್ಕಳಿಗೆ ಇಡೀ ದಿನ ತಿನ್ನಲು ಬೇರೆ ಏನೂ ಸಿಗುತ್ತಿಲ್ಲ. ಶೌಚಾಲಯ ಅಥವಾ ಸ್ನಾನದ ವ್ಯವಸ್ಥೆ ಇಲ್ಲ. ಶಿಬಿರಗಳಲ್ಲಿ ಜನರು ವಾಸಿಸುವ ರೀತಿ ತುಂಬಾ ಹೃದಯ ವಿದ್ರಾವಕವಾಗಿದೆ … ”

”ರಾಜ್ಯವು ಶಾಂತಿಯುತವಾಗಿದೆ ಎಂಬ ಸರ್ಕಾರದ ಹೇಳಿಕೆ ನಿಜವಾಗಿದ್ದರೆ, ಕಳೆದ ಮೂರು ತಿಂಗಳಿನಿಂದ ಬಂದಿರುವ ಪರಿಹಾರ ಶಿಬಿರಗಳನ್ನು ನಡೆಸುವ ಅಗತ್ಯವೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಮಣಿಪುರದಲ್ಲಿ ಮೂರು ತಿಂಗಳ ಕಾಲ ನಡೆದ ಜನಾಂಗೀಯ ಗಲಭೆಗಳ ಸಂತ್ರಸ್ತರನ್ನು ಭೇಟಿ ಮಾಡಲು 21 ಸಂಸದರ ಪ್ರತಿಪಕ್ಷಗಳ ನಿಯೋಗ ಶನಿವಾರ ಮಣಿಪುರಕ್ಕೆ ಆಗಮಿಸಿದೆ. ಭಾನುವಾರ ಅವರು ರಾಜಭವನದಲ್ಲಿ ಮಣಿಪುರ ರಾಜ್ಯಪಾಲರಾದ ಅನುಸೂಯಾ ಉಯಿಕೆ ಅವರನ್ನು ಭೇಟಿ ಮಾಡಿ ತಮ್ಮ ಅವಲೋಕನಗಳ ಕುರಿತು ಜ್ಞಾಪಕ ಪತ್ರವನ್ನು ಸಲ್ಲಿಸಿದರು.

ಸಭೆಯ ನಂತರ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ”ಮಣಿಪುರ ಜನಾಂಗೀಯ ಸಂಘರ್ಷವನ್ನು ಶೀಘ್ರವಾಗಿ ಪರಿಹರಿಸದಿದ್ದರೆ, ಅದು ದೇಶಕ್ಕೆ ಭದ್ರತಾ ಸಮಸ್ಯೆಗಳನ್ನು ಉಂಟುಮಾಡಬಹುದು” ಎಂದು ಪ್ರತಿಪಾದಿಸಿದರು.

”ರಾಜ್ಯಪಾಲರು ನಮ್ಮ ಅವಲೋಕನಗಳನ್ನು ಆಲಿಸಿದರು ಮತ್ತು ಅದಕ್ಕೆ ಸಮ್ಮತಿಸಿದರು. ಅವರು ಹಿಂಸಾಚಾರದ ಘಟನೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದರು ಮತ್ತು ಸಮುದಾಯಗಳ ನಡುವಿನ ಅಪನಂಬಿಕೆಯನ್ನು ಹೋಗಲಾಡಿಸಲು ಜನರೊಂದಿಗೆ ಮಾತನಾಡಲು ಸರ್ವಪಕ್ಷಗಳ ನಿಯೋಗ ಮಣಿಪುರಕ್ಕೆ ಭೇಟಿ ನೀಡಬೇಕು” ಎಂದು ಅವರು ಹೇಳಿದರು.

ಭೇಟಿ ನೀಡುವ ಸಂಸದರು ಮಣಿಪುರದ ಬಗ್ಗೆ ತಮ್ಮ ಅವಲೋಕನಗಳನ್ನು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ ಎಂದು ಚೌಧರಿ ಹೇಳಿದರು.

ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿರುವ ಕಾರಣ ಮಣಿಪುರ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಮನವಿ ಮಾಡಿದ್ದೇವೆ ಎಂದರು.

ಮಣಿಪುರದ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಹೇಯ ಕೃತ್ಯದ ವಿಡಿಯೋ ವೈರಲ್ ಆದ ಬಳಿಕ ಕೇಂದ್ರ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಯುದ್ಧವೇ ನಡೆಯಿತು. ಈ ವಿಚಾರವಾಗಿ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಮಾತನಾಡಬೇಕು ಎಂದು ಒತ್ತಾಯಿಸಿದರು. ಆದರೆ ಪ್ರಧಾನಿ ಮಾತ್ರ ಸಂಸತ್ತಿನಲ್ಲಿ ಮಾತನಾಡಲು ನಿರಾಕರಿಸಿದರು. ಹಾಗಾಗಿ ಕಲಾಪಕ್ಕೆ ಅಡಚಣೆಗಳು ಮತ್ತು ಮುಂದೂಡಿಕೆಗಳು ಹೆಚ್ಚಾದವು..

ಇದನ್ನೂ ಓದಿ: ಮಹಿಳೆಯರ ಬೆತ್ತಲೆ ಮೆರವಣಿಗೆ ವಿಚಾರದಲ್ಲಿ ಬಿಜೆಪಿ ಸರ್ಕಾರ ಧೃತರಾಷ್ಟ್ರನಂತೆ ಕುರುಡಾಗಿದೆ: ಉದ್ಭವ್ ಠಾಕ್ರೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...