Homeಮುಖಪುಟಮಣಿಪುರ: ‘ಒಂದೇ ಸಭಾಂಗಣದಲ್ಲಿ 500 ಜನರು, ಸ್ನಾನಗೃಹವಿಲ್ಲ,’ -ಹೃದಯ ವಿದ್ರಾವಕವಾಗಿವೆ ಶಿಬಿರಗಳು; INDIA ನಿಯೋಗ

ಮಣಿಪುರ: ‘ಒಂದೇ ಸಭಾಂಗಣದಲ್ಲಿ 500 ಜನರು, ಸ್ನಾನಗೃಹವಿಲ್ಲ,’ -ಹೃದಯ ವಿದ್ರಾವಕವಾಗಿವೆ ಶಿಬಿರಗಳು; INDIA ನಿಯೋಗ

- Advertisement -
- Advertisement -

ಮಣಿಪುರದಲ್ಲಿ ನಡೆದ ಹಿಂಸಾಚಾರದಿಂದಾಗಿ ನಿರಾಶ್ರಿತರಾಗಿರುವ ಜನರು ಸರ್ಕಾರ ಮಂಜೂರು ಮಾಡಿದ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಆದರೆ ಅಲ್ಲಿ ಮೂಲಭೂತ ಸೌಕರ್ಯಗಳಿಲ್ಲ ಎಂದು ಅಲ್ಲಿಯ ಜನರು ವಿರೋಧ ಪಕ್ಷಗಳ ಒಕ್ಕೂಟ INDIAದ ನಿಯೋಗದ ಎದುರು ನೋವು ತೋಡಿಕೊಂಡಿದ್ದಾರೆ.

ಮಣಿಪುರಕ್ಕೆ ಭೇಟಿ ನೀಡಿರುವ INDIAದ ನಿಯೋಗದ ಪರವಾಗಿ ಮಾತನಾಡಿದ ಕಾಂಗ್ರೆಸ್ ಸಂಸದೆ ಫುಲೋದೇವಿ ನೇತಂ ಅವರು, ”…ಒಂದು ಸಭಾಂಗಣದಲ್ಲಿ 400-500 ಜನರು ತಂಗಿದ್ದಾರೆ. ರಾಜ್ಯ ಸರ್ಕಾರ ಅವರಿಗೆ ದಾಲ್-ಚವಾಲ್ ನೀಡುತ್ತಿದೆ, ಮಕ್ಕಳಿಗೆ ಇಡೀ ದಿನ ತಿನ್ನಲು ಬೇರೆ ಏನೂ ಸಿಗುತ್ತಿಲ್ಲ. ಶೌಚಾಲಯ ಅಥವಾ ಸ್ನಾನದ ವ್ಯವಸ್ಥೆ ಇಲ್ಲ. ಶಿಬಿರಗಳಲ್ಲಿ ಜನರು ವಾಸಿಸುವ ರೀತಿ ತುಂಬಾ ಹೃದಯ ವಿದ್ರಾವಕವಾಗಿದೆ … ”

”ರಾಜ್ಯವು ಶಾಂತಿಯುತವಾಗಿದೆ ಎಂಬ ಸರ್ಕಾರದ ಹೇಳಿಕೆ ನಿಜವಾಗಿದ್ದರೆ, ಕಳೆದ ಮೂರು ತಿಂಗಳಿನಿಂದ ಬಂದಿರುವ ಪರಿಹಾರ ಶಿಬಿರಗಳನ್ನು ನಡೆಸುವ ಅಗತ್ಯವೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಮಣಿಪುರದಲ್ಲಿ ಮೂರು ತಿಂಗಳ ಕಾಲ ನಡೆದ ಜನಾಂಗೀಯ ಗಲಭೆಗಳ ಸಂತ್ರಸ್ತರನ್ನು ಭೇಟಿ ಮಾಡಲು 21 ಸಂಸದರ ಪ್ರತಿಪಕ್ಷಗಳ ನಿಯೋಗ ಶನಿವಾರ ಮಣಿಪುರಕ್ಕೆ ಆಗಮಿಸಿದೆ. ಭಾನುವಾರ ಅವರು ರಾಜಭವನದಲ್ಲಿ ಮಣಿಪುರ ರಾಜ್ಯಪಾಲರಾದ ಅನುಸೂಯಾ ಉಯಿಕೆ ಅವರನ್ನು ಭೇಟಿ ಮಾಡಿ ತಮ್ಮ ಅವಲೋಕನಗಳ ಕುರಿತು ಜ್ಞಾಪಕ ಪತ್ರವನ್ನು ಸಲ್ಲಿಸಿದರು.

ಸಭೆಯ ನಂತರ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ”ಮಣಿಪುರ ಜನಾಂಗೀಯ ಸಂಘರ್ಷವನ್ನು ಶೀಘ್ರವಾಗಿ ಪರಿಹರಿಸದಿದ್ದರೆ, ಅದು ದೇಶಕ್ಕೆ ಭದ್ರತಾ ಸಮಸ್ಯೆಗಳನ್ನು ಉಂಟುಮಾಡಬಹುದು” ಎಂದು ಪ್ರತಿಪಾದಿಸಿದರು.

”ರಾಜ್ಯಪಾಲರು ನಮ್ಮ ಅವಲೋಕನಗಳನ್ನು ಆಲಿಸಿದರು ಮತ್ತು ಅದಕ್ಕೆ ಸಮ್ಮತಿಸಿದರು. ಅವರು ಹಿಂಸಾಚಾರದ ಘಟನೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದರು ಮತ್ತು ಸಮುದಾಯಗಳ ನಡುವಿನ ಅಪನಂಬಿಕೆಯನ್ನು ಹೋಗಲಾಡಿಸಲು ಜನರೊಂದಿಗೆ ಮಾತನಾಡಲು ಸರ್ವಪಕ್ಷಗಳ ನಿಯೋಗ ಮಣಿಪುರಕ್ಕೆ ಭೇಟಿ ನೀಡಬೇಕು” ಎಂದು ಅವರು ಹೇಳಿದರು.

ಭೇಟಿ ನೀಡುವ ಸಂಸದರು ಮಣಿಪುರದ ಬಗ್ಗೆ ತಮ್ಮ ಅವಲೋಕನಗಳನ್ನು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ ಎಂದು ಚೌಧರಿ ಹೇಳಿದರು.

ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿರುವ ಕಾರಣ ಮಣಿಪುರ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಮನವಿ ಮಾಡಿದ್ದೇವೆ ಎಂದರು.

ಮಣಿಪುರದ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಹೇಯ ಕೃತ್ಯದ ವಿಡಿಯೋ ವೈರಲ್ ಆದ ಬಳಿಕ ಕೇಂದ್ರ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಯುದ್ಧವೇ ನಡೆಯಿತು. ಈ ವಿಚಾರವಾಗಿ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಮಾತನಾಡಬೇಕು ಎಂದು ಒತ್ತಾಯಿಸಿದರು. ಆದರೆ ಪ್ರಧಾನಿ ಮಾತ್ರ ಸಂಸತ್ತಿನಲ್ಲಿ ಮಾತನಾಡಲು ನಿರಾಕರಿಸಿದರು. ಹಾಗಾಗಿ ಕಲಾಪಕ್ಕೆ ಅಡಚಣೆಗಳು ಮತ್ತು ಮುಂದೂಡಿಕೆಗಳು ಹೆಚ್ಚಾದವು..

ಇದನ್ನೂ ಓದಿ: ಮಹಿಳೆಯರ ಬೆತ್ತಲೆ ಮೆರವಣಿಗೆ ವಿಚಾರದಲ್ಲಿ ಬಿಜೆಪಿ ಸರ್ಕಾರ ಧೃತರಾಷ್ಟ್ರನಂತೆ ಕುರುಡಾಗಿದೆ: ಉದ್ಭವ್ ಠಾಕ್ರೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...