Homeಮುಖಪುಟಮಣಿಪುರ | 7 ಜಿಲ್ಲೆಗಳಲ್ಲಿ ಮತ್ತೆ 3 ದಿನ ಮೊಬೈಲ್ ಇಂಟರ್ನೆಟ್ ಸ್ಥಗಿತ ವಿಸ್ತರಣೆ

ಮಣಿಪುರ | 7 ಜಿಲ್ಲೆಗಳಲ್ಲಿ ಮತ್ತೆ 3 ದಿನ ಮೊಬೈಲ್ ಇಂಟರ್ನೆಟ್ ಸ್ಥಗಿತ ವಿಸ್ತರಣೆ

- Advertisement -
- Advertisement -

ಮಣಿಪುರದಲ್ಲಿ ಹೇರಿದ್ದ ಮೊಬೈಲ್ ಇಂಟರ್ನೆಟ್ ಸೇವೆಗಳ ಸ್ಥಗಿತವನ್ನು ಏಳು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳವರೆಗೆ ರಾಜ್ಯ ಸರ್ಕಾರ ಬುಧವಾರ ವಿಸ್ತರಿಸಿದೆ ಎಂದು ವರದಿಯಾಗಿದೆ. ನವೆಂಬರ್ 16 ರಂದು ಸರ್ಕಾರವು ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿತ್ತು. ಮಣಿಪುರ

ರಾಜ್ಯದಲ್ಲಿ ಹಿಂಸಾಚಾರ ಹೆಚ್ಚುತ್ತಿರುವುದರಿಂದ ಹಾಗೂ ಕಾನೂನು ಸುವ್ಯವಸ್ಥೆಯ ಸಮಸ್ಯೆಗಳನ್ನು ಸೃಷ್ಟಿಸುವ ವಿಷಯವನ್ನು ಸಾಮಾಜಿಕ ವಿರೋಧಿ ಜನರು ಹರಡುವುದನ್ನು ತಡೆಯಲು ಸರ್ಕಾರವು ನವೆಂಬರ್ 16 ರಂದು ಎರಡು ದಿನಗಳವರೆಗೆ ಇಂಟರ್‌ನೆಂಟ್‌ಗಳ ಸೇವೆಗಳನ್ನು ಸ್ಥಗಿತಗೊಳಿಸಿತ್ತು. ಸೋಮವಾರ ಮತ್ತೆ ಎರಡು ದಿನ ಅದನ್ನು ವಿಸ್ತರಿಸಿತ್ತು. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚಾಲ್ತಿಯಲ್ಲಿರುವ ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಿದ ನಂತರ ರಾಜ್ಯ ಸರ್ಕಾರವು ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ಕಕ್ಚಿಂಗ್, ಬಿಷ್ಣುಪುರ್, ತೌಬಲ್, ಚುರಾಚಂದ್‌ಪುರ ಮತ್ತು ಮಣಿಪುರದ ಕಾಂಗ್‌ಪೋಕ್ಪಿಯ ಪ್ರಾದೇಶಿಕ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳ ಸ್ಥಗಿತವನ್ನು ಇನ್ನೂ ಮೂರು ದಿನಗಳವರೆಗೆ ಮುಂದುವರಿಸಲು ನಿರ್ಧರಿಸಿದೆ ಎಂದು ಅದು ಹೇಳಿದೆ.

ಆದಾಗ್ಯೂ, ಸಾಮಾನ್ಯ ಜನರ ಆರೋಗ್ಯ ಸೌಲಭ್ಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಇತರ ಕಚೇರಿಗಳು ಎದುರಿಸುತ್ತಿರುವ ಕಷ್ಟಗಳನ್ನು ಪರಿಗಣಿಸಿ ಬ್ರಾಡ್‌ಬ್ಯಾಂಡ್ ಸೇವೆಗಳ ಮೇಲಿನ ನಿರ್ಬಂಧವನ್ನು ಮಂಗಳವಾರ ತೆಗೆದುಹಾಕಿದೆ.

ಏತನ್ಮಧ್ಯೆ, ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂವನ್ನು ಸಡಿಲಿಕೆ ಮಾಡಿರುವುದರಿಂದ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ಕಾಕ್ಚಿಂಗ್ ಜಿಲ್ಲೆಗಳ ಮಾರುಕಟ್ಟೆಗಳಲ್ಲಿ ವ್ಯಾಪಾರ ಚಟುವಟಿಕೆ ಪ್ರಾರಂಭವಾಗಿದೆ ಎಂದು ವರದಿಯಾಗಿದೆ. ಕರ್ಫ್ಯೂ ಸಡಿಲಿಕೆಯಿಂದ ಗಲಭೆ ಪೀಡಿತ ಪ್ರದೇಶಗಳ ಮಾರುಕಟ್ಟೆಗಳು ಮತ್ತು ಪೆಟ್ರೋಲ್ ಪಂಪ್‌ಗಳಲ್ಲಿ ಉದ್ದನೆಯ ಸರತಿ ಸಾಲುಗಳು ಕಂಡುಬಂದಿವೆ ಎಂದು ವರದಿಯಾಗಿವೆ.

ಅದಾಗ್ಯೂ, ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳು ಮುಚ್ಚಿದ್ದವು. ಸುವ್ಯವಸ್ಥೆ ಕಾಪಾಡಲು ಅಪಾಯಕಾರಿ ಪ್ರದೇಶಗಳಲ್ಲಿ ಸೇನೆ, ಅರೆಸೇನಾ ಪಡೆ ಸಿಬ್ಬಂದಿ, ಪೊಲೀಸರು ಸೇರಿದಂತೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ರಾಜ್ಯದಲ್ಲಿ ಭುಗಿಲೆದ್ದ ವ್ಯಾಪಕ ಗುಂಪು ಹಿಂಸಾಚಾರಕ್ಕೆ ಪ್ರತಿಕ್ರಿಯೆಯಾಗಿ ನವೆಂಬರ್ 16 ರಂದು ಅನಿರ್ದಿಷ್ಟವಾಗಿ ಕರ್ಫ್ಯೂ ವಿಧಿಸಲಾಗಿತ್ತು. ಈ ಸಮಯದಲ್ಲಿ ಸಚಿವರು ಸೇರಿದಂತೆ ಹನ್ನೆರಡು ಶಾಸಕರ ಮನೆಗಳು ಮತ್ತು ಆಸ್ತಿಗಳನ್ನು ಸುಟ್ಟುಹಾಕಿ ಧ್ವಂಸಗೊಳಿಸಲಾದ್ದು, ಲೂಟಿ ಕೂಡಾ ಮಾಡಲಾಗಿದೆ.

ಜಿರಿಬಾಮ್ ಜಿಲ್ಲೆಯಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಆರು ನಾಗರಿಕರನ್ನು ಕೊಂದ ನಂತರ ರಾಜ್ಯದಲ್ಲಿ ಹೊಸದಾಗಿ ಹಿಂಸಾಚಾರ ಪ್ರಾರಂಭವಾಗಿತ್ತು. ಈ ಭೀಕರ ದಾಳಿಯು ವ್ಯಾಪಕ ಖಂಡನೆಗೆ ಗುರಿಯಾಗಿದ್ದು, ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ದುಷ್ಕರ್ಮಿಗಳನ್ನು ಕಾನೂನಿನ ಕುಣಿಕೆಗೆ ತರುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಘಟನೆಯನ್ನು ಬುಡಕಟ್ಟು ನಾಗಾ ಮಹಿಳಾ ಒಕ್ಕೂಟವು ಖಂಡಿಸಿದ್ದು, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯದಿಂದ ದೂರವಿರಲು ಮೈತೇಯಿ ಮತ್ತು ಕುಕಿ ಎರಡೂ ಸಮುದಾಯಗಳ ಸಶಸ್ತ್ರ ಗುಂಪುಗಳಿಗೆ ಕರೆ ನೀಡಿದೆ. ನಡೆಯುತ್ತಿರುವ ಸಂಘರ್ಷದ ನಡುವೆ ಎಲ್ಲಾ ಪಕ್ಷಗಳು ಮಾನವೀಯತೆಯನ್ನು ಎತ್ತಿಹಿಡಿಯುವ ಅಗತ್ಯವನ್ನು ಒತ್ತಿಹೇಳಿರುವ ಒಕ್ಕೂಟವು ಇಂತಹ ಕೃತ್ಯಗಳನ್ನು ನಿಲ್ಲಿಸುವಂತೆ ಮನವಿ ಮಾಡಿದೆ.

ಇದನ್ನೂ ಓದಿ: ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...