Homeಮುಖಪುಟಮಣಿಪುರ | ಕಸ್ಟಡಿ ಸಾವು ಖಂಡಿಸಿ ರಾಜ್ಯ ಬಂದ್‌ಗೆ ಕರೆಕೊಟ್ಟ ಹೋರಾಟಗಾರರು

ಮಣಿಪುರ | ಕಸ್ಟಡಿ ಸಾವು ಖಂಡಿಸಿ ರಾಜ್ಯ ಬಂದ್‌ಗೆ ಕರೆಕೊಟ್ಟ ಹೋರಾಟಗಾರರು

- Advertisement -
- Advertisement -

ಈ ತಿಂಗಳ ಆರಂಭದಲ್ಲಿ ಸಂಭವಿಸಿದ 27 ವರ್ಷದ ವ್ಯಕ್ತಿಯೊಬ್ಬರ ಕಸ್ಟಡಿ ಸಾವು ಖಂಡಿಸಿ ಮಣಿಪುರದಲ್ಲಿ ಹೋರಾಟಗಾರರ ಗುಂಪೊಂದು ಶುಕ್ರವಾರ (ಏ.25) ರಾಜ್ಯ ಬಂದ್‌ಗೆ ಕರೆ ನೀಡಿದೆ ಎಂದು ವರದಿಯಾಗಿದೆ.

ನಿಷೇಧಿತ ಸಂಘಟನೆಯಾದ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಾರ್ಟಿ (ನೊಂಗ್ಡ್ರೆನ್‌ಖೋಂಬಾ) ಜೊತೆ ಸಂಬಂಧ ಹೊಂದಿರುವ ಆರೋಪದ ಮೇಲೆ ಮಾರ್ಚ್ 31ರಂದು ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಖೋಯಿಸ್ನಮ್ ಸನಾಜೋಬಾ ಎಂಬ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಅವರು ಏಪ್ರಿಲ್ 13 ರಂದು ಇಂಫಾಲ್‌ನ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾಗ ನಿಧನರಾಗಿದ್ದಾರೆ ಎಂದು ಇಂಡಿಯಾ ಟುಡೇ ಎನ್‌ಇ ವರದಿ ಮಾಡಿದೆ.

ಸನಾಜೋಬಾ ಅವರನ್ನು ಅವರು ಸಾವಿಗೀಡಾದ ದಿನವೇ ವೈದ್ಯಕೀಯ ಸಂಸ್ಥೆಗೆ ದಾಖಲಿಸಲಾಗಿತ್ತು. ಅವರನ್ನು ಏಪ್ರಿಲ್ 10 ರಂದು ಸಜಿವಾದಲ್ಲಿರುವ ಮಣಿಪುರ ಕೇಂದ್ರ ಕಾರಾಗೃಹಕ್ಕೆ ರಿಮಾಂಡ್ ಮಾಡಲಾಗಿತ್ತು.

ಸನಾಜೋಬಾ ಅವರಿಗೆ ನ್ಯಾಯ ದೊರಕಿಸಿಕೊಡಲು ರಚಿಸಲಾದ ಜಂಟಿ ಕ್ರಿಯಾ ಸಮಿತಿಯು ಅವರು ವಾಸ್ತವವಾಗಿ ‘ಗ್ರಾಮ ಸ್ವಯಂಸೇವಕ’ ಎಂದು ಹೇಳಿಕೊಂಡಿದ್ದು, ಅವರ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಸಮಿತಿಯ ಸದಸ್ಯರು ಸನಾಜೋಬಾ ಅವರಂತೆಯೇ ಇಂಫಾಲ್‌ನ ಖುರೈ ನಿಂಗ್‌ಥೌಬಂಗ್ ಲೈಕೈ ಪ್ರದೇಶದವರು.

ಮೇ 2023ರಲ್ಲಿ ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಜನಾಂಗೀಯ ಸಂಘರ್ಷ ಭುಗಿಲೆದ್ದಾಗಿನಿಂದ ಗ್ರಾಮಗಳನ್ನು ಕಾಯುತ್ತಿರುವ ಸಶಸ್ತ್ರ ನಾಗರಿಕರಿಗೆ ‘ಗ್ರಾಮ ಸ್ವಯಂಸೇವಕರು’ ಎಂಬ ಪದವನ್ನು ಬಳಸಲಾಗುತ್ತಿದೆ.

ಸಾವಿಗೀಡಾದ ಸನಾಜೋಬಾ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಅವರ ಹತ್ತಿರದ ಸಂಬಂಧಿಗೆ ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ಮರಣೋತ್ತರ ಪರೀಕ್ಷೆಯ ವರದಿ ಮತ್ತು ಪರೀಕ್ಷೆಯ ಕಚ್ಚಾ ವಿಡಿಯೋ ತುಣುಕನ್ನು ಸಾರ್ವಜನಿಕಗೊಳಿಸಬೇಕು ಎಂದು ಜಂಟಿ ಕ್ರಿಯಾ ಸಮಿತಿ ಒತ್ತಾಯಿಸಿದೆ.

ಮಣಿಪುರವು ಮೇ 2023ರಲ್ಲಿ ಭುಗಿಲೆದ್ದ ಮೈತೇಯಿ ಮತ್ತು ಕುಕಿ ಝೋ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷದ ಇದುವರೆಗೆ ಕನಿಷ್ಠ 258 ಜನರು ಸಾವನ್ನಪ್ಪಿದ್ದಾರೆ ಮತ್ತು 59,000ಕ್ಕೂ ಹೆಚ್ಚು ಜನರು ತಮ್ಮ ಮನೆಗಳನ್ನು ತೊರೆದು ವಿವಿಧ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ಈ ವರ್ಷದ ಫೆಬ್ರವರಿಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.

ಏಪ್ರಿಲ್ 19 ಮತ್ತು ಏಪ್ರಿಲ್ 21ರ ನಡುವೆ, ಮಣಿಪುರ ಪೊಲೀಸರು ರಾಜ್ಯದಲ್ಲಿ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಕ್ಷ (ನೊಂಗ್ಡ್ರೆನ್‌ಖೋಂಬಾ) ಸೇರಿದಂತೆ ಹಲವಾರು ನಿಷೇಧಿತ ಸಂಘಟನೆಗಳ ಕನಿಷ್ಠ 18 ಸದಸ್ಯರನ್ನು ಬಂಧಿಸಿದ್ದಾರೆ.

‘ಪಹಲ್ಗಾಮ್‌ನಲ್ಲಿ ಭದ್ರತಾ ಲೋಪವಾಗಿದೆ’: ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡ ಮೋದಿ ಸರ್ಕಾರ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...