Homeಚಳವಳಿಮಣಿಪುರ | ಎಎಫ್‌ಎಸ್‌ಪಿಎ ರದ್ದತಿಗೆ & ನಾಗರಿಕ ಹತ್ಯೆಗಳ ವಿರುದ್ಧ ಪ್ರತಿಭಟನೆ

ಮಣಿಪುರ | ಎಎಫ್‌ಎಸ್‌ಪಿಎ ರದ್ದತಿಗೆ & ನಾಗರಿಕ ಹತ್ಯೆಗಳ ವಿರುದ್ಧ ಪ್ರತಿಭಟನೆ

- Advertisement -
- Advertisement -

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ (ಎಎಫ್‌ಎಸ್‌ಪಿಎ) ಮತ್ತು “ಭಯೋತ್ಪಾದಕ”ರು ಎಂದು ಪ್ರತಿಪಾದಿಸಿ ನಾಗರಿಕ ಹತ್ಯೆ ನಡೆಸುವುದರ ವಿರುದ್ಧ ಮಂಗಳವಾರ ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ಸಾವಿರಾರು ಜನರು, ಅದರಲ್ಲೂ ಹೆಚ್ಚಾಗಿ ಮಹಿಳೆಯರು ಮತ್ತು ವಿದ್ಯಾರ್ಥಿಗಳು ಬೃಹತ್ ರ‍್ಯಾಲಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಎಎಫ್‌ಎಸ್‌ಪಿಎ ರದ್ದತಿ

ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನವಾಗಿರುವ ಡಿಸೆಂಬರ್ 10ದಂದು ನಡೆಸಲಾಗಿರುವ ಈ ರ‍್ಯಾಲಿಯನ್ನು ಮಣಿಪುರದ ಥಾವ್ ಮೈದಾನದಿಂದ ಪ್ರಾರಂಭಿಸಿ, ಅಲ್ಲಿಂದ 5 ಕಿಮೀ ದೂರದಲ್ಲಿರುವ ಖುಮಾನ್ ಲಂಪಾಕ್ ಸ್ಟೇಡಿಯಂನಲ್ಲಿ ಮುಕ್ತಾಯಗೊಂಡಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೊಬೈಲ್ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಒಂದು ದಿನದ ನಂತರ ಪ್ರತಿಭಟನೆ ದಾಖಲಾಗಿದೆ. ರಾಜ್ಯದಲ್ಲಿ ಹೊಸದಾಗಿ ಹಿಂಸಾಚಾರ ಪ್ರಾರಂಭವಾದ ಹಿನ್ನೆಲೆಯಲ್ಲಿ ನವೆಂಬರ್ 16 ರಂದು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಯಿತ್ತು.

ಆಲ್ ಮಣಿಪುರ ಯುನೈಟೆಡ್ ಕ್ಲಬ್ಸ್ ಆರ್ಗನೈಸೇಶನ್, ಪೊಯಿರೆ ಲೀಮಾರೊಲ್ ಅಪುನ್ಬಾ ಮೀರಾ ಪೈಬಿ, ಆಲ್ ಮಣಿಪುರ ಮಹಿಳಾ ಸ್ವಯಂಸೇವಕ ಸಂಘ, ಮಾನವ ಹಕ್ಕುಗಳ ಸಮಿತಿ ಮತ್ತು ಮಣಿಪುರ ವಿದ್ಯಾರ್ಥಿಗಳ ಒಕ್ಕೂಟದಂತಹ ಐದು ಸಂಸ್ಥೆಗಳು ರ‍್ಯಾಲಿಯನ್ನು ಆಯೋಜಿಸಿತ್ತು. ವಿವಿಧ ಸಮುದಾಯಗಳ ಜನರು ಮತ್ತು ನಿರಾಶ್ರಿತ ಶಿಬಿರದ ಜನರು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

ರ‍್ಯಾಲಿಯ ವೇಳೆ ಪ್ರತಿಭಟನಾಕಾರರು “ಎಎಫ್‌ಎಸ್‌ಪಿಎ ರದ್ದುಪಡಿಸಿ”, “ಮಣಿಪುರವನ್ನು ಅಳಿಸಬೇಡಿ”, “ಮಣಿಪುರವನ್ನು ಉಳಿಸಿ” ಇತ್ಯಾದಿ ಸಂದೇಶಗಳ ಫಲಕಗಳನ್ನು ಹಿಡಿದುಕೊಂಡಿದ್ದರು. ಸಶಸ್ತ್ರ ಪಡೆಗಳಿಗೆ ವ್ಯಾಪಕ ಅಧಿಕಾರವನ್ನು ನೀಡುವ AFSPA ಜಾರಿಯನ್ನು ರದ್ದುಗೊಳಿಸುವವರೆಗೆ ನಾವು ವಿರಮಿಸುವುದಿಲ್ಲ ಎಂದು ಪ್ರತಿಭಟನಾಕಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಾವು AFSPA ಯನ್ನು ವಿರೋಧಿಸುತ್ತೇವೆ. ಕುಕಿ ಬಂಡುಕೋರರು ನಡೆಸಿದ ಆರು ಅಮಾಯಕ ಮಹಿಳೆಯರು ಮತ್ತು ಮಕ್ಕಳ ಹತ್ಯೆಯನ್ನು ನಾವು ಖಂಡಿಸುತ್ತೇವೆ” ಎಂದು ಪ್ರತಿಭಟನಾಕಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಎಎಫ್‌ಎಸ್‌ಪಿಎ ರದ್ದತಿ

ಜಿರಿಬಾಮ್ ಜಿಲ್ಲೆಯ ಆರು ನಾಗರಿಕರ ಹತ್ಯೆ ನಡೆದ ನಂತರ ಕಳೆದ ತಿಂಗಳು ಇಂಫಾಲ್ ಕಣಿವೆಯಲ್ಲಿ ವ್ಯಾಪಕ ಪ್ರತಿಭಟನೆ ನಡೆದಿದ್ದವು. ಈ ಸಂದರ್ಭದಲ್ಲಿ ಆಕ್ರೋಶಗೊಂಡ ಜನಸಮೂಹವು ಮಂತ್ರಿಗಳು ಸೇರಿದಂತೆ ಹಲವಾರು ಶಾಸಕರ ಮನೆಗಳು ಮತ್ತು ಆಸ್ತಿಗಳಿಗೆ ಬೆಂಕಿ ಹಚ್ಚಿ ದಾಳಿ ನಡೆಸಿತ್ತು.

ಕಳೆದ ತಿಂಗಳು ಇಂಫಾಲ್ ಕಣಿವೆಯ ಆರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ AFSPA ಅನ್ನು ಮತ್ತೆ ಜಾರಿ ಮಾಡಲಾಗಿತ್ತು. ಇದು ಕಣಿವೆ ನಿವಾಸಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಆಡಳಿತರೂಢ ಎನ್‌ಡಿಎ ಪಕ್ಷಗಳ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಸಭೆ ನಡೆಸಿ ಕೇಂದ್ರ ಸರ್ಕಾರವನ್ನು ರದ್ದುಗೊಳಿಸುವಂತೆ ಒತ್ತಾಯಿಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ರೋಹಿಂಗ್ಯಾ ನಿರಾಶ್ರಿತರಿಗೆ ನೀರು, ವಿದ್ಯುತ್ ನೀಡುವುದು ನಮ್ಮ ಕರ್ತವ್ಯ: ಫಾರೂಕ್ ಅಬ್ದುಲ್ಲಾ

ರೋಹಿಂಗ್ಯಾ ನಿರಾಶ್ರಿತರಿಗೆ ನೀರು, ವಿದ್ಯುತ್ ನೀಡುವುದು ನಮ್ಮ ಕರ್ತವ್ಯ: ಫಾರೂಕ್ ಅಬ್ದುಲ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...