Homeಮುಖಪುಟಮಣಿಪುರ: ಬೆಂಕಿಗೆ ತುಪ್ಪ ಸುರಿದ ಅಮಿತ್‌ ಶಾ, 7 ನಿಮಿಷಕ್ಕೆ ಸುಸ್ತಾದ ಮೋದಿಜಿ

ಮಣಿಪುರ: ಬೆಂಕಿಗೆ ತುಪ್ಪ ಸುರಿದ ಅಮಿತ್‌ ಶಾ, 7 ನಿಮಿಷಕ್ಕೆ ಸುಸ್ತಾದ ಮೋದಿಜಿ

- Advertisement -
- Advertisement -

ಕಳೆದ ಮೂರು ತಿಂಗಳಿನಿಂದಲೂ ಮಣಿಪುರ ಹೊತ್ತು ಉರಿಯುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡುವವರಿಗೆಲ್ಲ ಭದ್ರತೆ ನೀಡಲು ಮುಂದಾಗುವ ನಮ್ಮ ದೇಶದ ಸರ್ಕಾರ ಮಣಿಪುರದಲ್ಲಿ ಇಲ್ಲಿಯವರೆಗೂ ಸರಿಯಾದ ಭದ್ರತೆ ನೀಡಲು ಸಾಧ್ಯವಾಗಿಲ್ಲ. ಭದ್ರತೆ ನೀಡುವುದಿರಲಿ, ಪೊಲೀಸರ ಹಾಗೂ ಪ್ಯಾರಾಮಿಲಿಟರಿ ಫೋರ್ಸ್‌ನ ಬಂದೂಕುಗಳನ್ನು ಮಣಿಪುರದ ತೀವ್ರಗಾಮಿಗಳು ಹೊತ್ತುಕೊಂಡು ಹೋಗಲು ಅನುವು ಮಾಡಿಕೊಡಲಾಗಿದೆ. ಮೈತೆ ಮತ್ತು ಕುಕಿ ಸಮುದಾಯಗಳೆರಡರ ಕಡೆಯೂ ಸಾವು ನೋವುಗಳಾಗಿವೆ. ಕುಕಿ ಸಮುದಾಯದ ಯುವತಿಯರನ್ನು ಅಮಾನವೀಯವಾಗಿ ವಿಕೃತವಾಗಿ ಬೆತ್ತಲೆ ಮೆರವಣಿಗೆ ಮಾಡಿದ್ದನ್ನು ಕೋಪ ಮತ್ತು ಕಣ್ಣಿರಿಲ್ಲದೆ ನೋಡಲು ಸಾಧ್ಯವೇ ಇಲ್ಲ. ಮಣಿಪುರದ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಮೋದಿಯವರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು ಎದ್ದು ಕಾಣುತ್ತಿದೆ. ಸ್ವತಃ ಮೋದಿಯವರೇ ಮಣಿಪುರದ ಬಗ್ಗೆ ತುಟಿ ಬಿಚ್ಚಲು ಎರಡು ತಿಂಗಳು ತೆಗೆದುಕೊಂಡಿದ್ದಾರೆ. ಭಾರತದ ಸಂವಿಧಾನಾತ್ಮಕ ಸದನವಾಗಿರುವ ಸಂಸತ್ತಿನಲ್ಲಿ ಮಣಿಪುರದ ಬಗ್ಗೆ ಪ್ರಧಾನಿಯವರ ತುಟಿ ಬಿಚ್ಚಿಸಲು ಅವಿಶ್ವಾಸ ನಿರ್ಣಯ ಕೈಗೊಳ್ಳುವ ದುಸ್ಥಿತಿಗೆ ದೇಶದ ಪ್ರಜಾಪ್ರಭುತ್ವ ತಲುಪಿದೆ. ಸಂಸತ್ತಿನಲ್ಲಿ ಮಣಿಪುರದ ಮಹಿಳೆಯರ ಆಕ್ರಂದನವನ್ನು ಕೇಳಬೇಕಿದ್ದ ಆಡಳಿತ ಪಕ್ಷದ ಮಹಿಳೆಯರು ʼಫ್ಲೈಯಿಂಗ್‌ ಕಿಸ್‌ʼ ಚರ್ಚೆ ಮಾಡುತ್ತಿದ್ದಾರೆ.

ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಗಾಗಿ ಕೊನೆಗೂ ಸಂಸತ್ತಿಗೆ ಬಂದ ಪ್ರಧಾನಿ ಮೋದಿಯವರು ಬರೋಬ್ಬರಿ 133 ನಿಮಿಶಗಳ ಕಾಲ ಭಾಷಣ ಮಾಡಿದ್ದಾರೆ. ಅಂದರೆ 2 ಗಂಟೆಗಳಿಗಿಂತಲೂ ಹೆಚ್ಚು ಸಮಯ ಮಾತಾಡಿದ್ದಾರೆ. ಇದರಲ್ಲಿ ಮಣಿಪುರದ ಬಗ್ಗೆ ಕೇವಲ 7 ನಿಮಿಷಗಳ ಕಾಲ ಮಾತಾಡಿದ್ದಾರೆ! ಅನ್ಯಾಯಕ್ಕೊಳಗಾಗಿರುವ ಮಣಿಪುರಕ್ಕೆ ಮತ್ತಷ್ಟು ಅನ್ಯಾಯ ಮಾಡಿದ್ದಾರೆ. 7 ನಿಮಿಷ ಮಾತನಾಡುವ ಮೂಲಕ ಮಣಿಪುರಕ್ಕೂ ಮೋದಿ ಸರ್ಕಾರಕ್ಕೂ ಸಂಬಂಧಿಲ್ಲವೆಂದೇ ಹೇಳುತ್ತಿದ್ದಾರೆ.

ಇದು ಒಂದು ಕಡೆಯಾದರೆ ಗೃಹಮಂತ್ರಿ ಅಮಿತ್‌ ಶಾ ಅವರು ಸಂಸತ್ತಿನಲ್ಲಿ ʼಮಣಿಪುರದ ಪ್ರಕ್ಷುಬ್ದತೆಗೆ ಮ್ಯಾನ್ಮಾರ್‌ನಿಂದ ವಲಸೆ ಬಂದಿರುವ ಕುಕಿಗಳು ಪ್ರಮುಖ ಪಾತ್ರ ವಹಸಿದ್ದಾರೆʼ ಎಂಬಂತಹ ಮಾತುಗಳನ್ನಾಡಿ ಮಣಿಪುರದಲ್ಲಿ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಮಣಿಪುರದ ಗಲಭೆಯನ್ನು ಶಮನ ಮಾಡಲಂತೂ ಇವರಿಗೆ ಸಾಧ್ಯವಾಗಲಿಲ್ಲ. ದಿನವೂ ಕೊಲೆ, ಸುಲಿಗೆ, ಅತ್ಯಾಚಾರಗಳು ವರದಿಯಾಗುತ್ತಿವೆ. ಮೈತೆ ಮತ್ತು ಕುಕಿಗಳ ನಡುವೆ ವೈಷಮ್ಯ ಮುಗಿಲುಮುಟ್ಟಿದೆ. ಪೊಲೀಸರು ಮತ್ತು ಸ್ಥಳೀಯ ಆಡಳಿತ ಕೈಕಟ್ಟಿ ಕುಳಿತಿದೆ. ಹೀಗಿರುವಾಗ ಅಮಿತ್‌ ಶಾ ಇಂತಹ ಹೇಳಿಕೆ ಕೊಟ್ಟಿರುವುದು ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯುವುರಲ್ಲಿ ಎರಡು ಮಾತಿಲ್ಲ. ಮಣಿಪುರದ ಮೈತೆಗಳ ಪರವಾಗಿ ಅಲ್ಲಿನ ಬಿಜೆಪಿ ಸರ್ಕಾರ ಬಹಿರಂಗವಾಗಿಯೇ ಕೆಲಸ ಮಾಡುತ್ತಿದೆ ಎಂಬ ವಿಚಾರಕ್ಕೆ ಅಮಿತ್‌ ಶಾ ಮಾತುಗಳು ಸಾಕ್ಷಿ ನೀಡುತ್ತಿವೆ. ಬೇಲಿಯೇ ಎದ್ದು ಹೊಲವನ್ನು ಮೇಯುತ್ತಿರುವಾಗ ಮಣಿಪುರವನ್ನು ಕಾಪಾಡುವವರಾರು? ಮಣಿಪುರ ಭಾರತದ ಅವಿಭಾಜ್ಯ ಅಂಗವಲ್ಲವೇ? ಕುಕಿಗಳು ಭಾರತೀಯರಲ್ಲವೇ?

– ಸಾಕ್ಯ ಸಮಗಾರ

ಇದನ್ನೂ ಓದಿ; ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...