Homeಮುಖಪುಟಮಣಿಪುರ: ಬೆಂಕಿಗೆ ತುಪ್ಪ ಸುರಿದ ಅಮಿತ್‌ ಶಾ, 7 ನಿಮಿಷಕ್ಕೆ ಸುಸ್ತಾದ ಮೋದಿಜಿ

ಮಣಿಪುರ: ಬೆಂಕಿಗೆ ತುಪ್ಪ ಸುರಿದ ಅಮಿತ್‌ ಶಾ, 7 ನಿಮಿಷಕ್ಕೆ ಸುಸ್ತಾದ ಮೋದಿಜಿ

- Advertisement -
- Advertisement -

ಕಳೆದ ಮೂರು ತಿಂಗಳಿನಿಂದಲೂ ಮಣಿಪುರ ಹೊತ್ತು ಉರಿಯುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡುವವರಿಗೆಲ್ಲ ಭದ್ರತೆ ನೀಡಲು ಮುಂದಾಗುವ ನಮ್ಮ ದೇಶದ ಸರ್ಕಾರ ಮಣಿಪುರದಲ್ಲಿ ಇಲ್ಲಿಯವರೆಗೂ ಸರಿಯಾದ ಭದ್ರತೆ ನೀಡಲು ಸಾಧ್ಯವಾಗಿಲ್ಲ. ಭದ್ರತೆ ನೀಡುವುದಿರಲಿ, ಪೊಲೀಸರ ಹಾಗೂ ಪ್ಯಾರಾಮಿಲಿಟರಿ ಫೋರ್ಸ್‌ನ ಬಂದೂಕುಗಳನ್ನು ಮಣಿಪುರದ ತೀವ್ರಗಾಮಿಗಳು ಹೊತ್ತುಕೊಂಡು ಹೋಗಲು ಅನುವು ಮಾಡಿಕೊಡಲಾಗಿದೆ. ಮೈತೆ ಮತ್ತು ಕುಕಿ ಸಮುದಾಯಗಳೆರಡರ ಕಡೆಯೂ ಸಾವು ನೋವುಗಳಾಗಿವೆ. ಕುಕಿ ಸಮುದಾಯದ ಯುವತಿಯರನ್ನು ಅಮಾನವೀಯವಾಗಿ ವಿಕೃತವಾಗಿ ಬೆತ್ತಲೆ ಮೆರವಣಿಗೆ ಮಾಡಿದ್ದನ್ನು ಕೋಪ ಮತ್ತು ಕಣ್ಣಿರಿಲ್ಲದೆ ನೋಡಲು ಸಾಧ್ಯವೇ ಇಲ್ಲ. ಮಣಿಪುರದ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಮೋದಿಯವರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು ಎದ್ದು ಕಾಣುತ್ತಿದೆ. ಸ್ವತಃ ಮೋದಿಯವರೇ ಮಣಿಪುರದ ಬಗ್ಗೆ ತುಟಿ ಬಿಚ್ಚಲು ಎರಡು ತಿಂಗಳು ತೆಗೆದುಕೊಂಡಿದ್ದಾರೆ. ಭಾರತದ ಸಂವಿಧಾನಾತ್ಮಕ ಸದನವಾಗಿರುವ ಸಂಸತ್ತಿನಲ್ಲಿ ಮಣಿಪುರದ ಬಗ್ಗೆ ಪ್ರಧಾನಿಯವರ ತುಟಿ ಬಿಚ್ಚಿಸಲು ಅವಿಶ್ವಾಸ ನಿರ್ಣಯ ಕೈಗೊಳ್ಳುವ ದುಸ್ಥಿತಿಗೆ ದೇಶದ ಪ್ರಜಾಪ್ರಭುತ್ವ ತಲುಪಿದೆ. ಸಂಸತ್ತಿನಲ್ಲಿ ಮಣಿಪುರದ ಮಹಿಳೆಯರ ಆಕ್ರಂದನವನ್ನು ಕೇಳಬೇಕಿದ್ದ ಆಡಳಿತ ಪಕ್ಷದ ಮಹಿಳೆಯರು ʼಫ್ಲೈಯಿಂಗ್‌ ಕಿಸ್‌ʼ ಚರ್ಚೆ ಮಾಡುತ್ತಿದ್ದಾರೆ.

ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಗಾಗಿ ಕೊನೆಗೂ ಸಂಸತ್ತಿಗೆ ಬಂದ ಪ್ರಧಾನಿ ಮೋದಿಯವರು ಬರೋಬ್ಬರಿ 133 ನಿಮಿಶಗಳ ಕಾಲ ಭಾಷಣ ಮಾಡಿದ್ದಾರೆ. ಅಂದರೆ 2 ಗಂಟೆಗಳಿಗಿಂತಲೂ ಹೆಚ್ಚು ಸಮಯ ಮಾತಾಡಿದ್ದಾರೆ. ಇದರಲ್ಲಿ ಮಣಿಪುರದ ಬಗ್ಗೆ ಕೇವಲ 7 ನಿಮಿಷಗಳ ಕಾಲ ಮಾತಾಡಿದ್ದಾರೆ! ಅನ್ಯಾಯಕ್ಕೊಳಗಾಗಿರುವ ಮಣಿಪುರಕ್ಕೆ ಮತ್ತಷ್ಟು ಅನ್ಯಾಯ ಮಾಡಿದ್ದಾರೆ. 7 ನಿಮಿಷ ಮಾತನಾಡುವ ಮೂಲಕ ಮಣಿಪುರಕ್ಕೂ ಮೋದಿ ಸರ್ಕಾರಕ್ಕೂ ಸಂಬಂಧಿಲ್ಲವೆಂದೇ ಹೇಳುತ್ತಿದ್ದಾರೆ.

ಇದು ಒಂದು ಕಡೆಯಾದರೆ ಗೃಹಮಂತ್ರಿ ಅಮಿತ್‌ ಶಾ ಅವರು ಸಂಸತ್ತಿನಲ್ಲಿ ʼಮಣಿಪುರದ ಪ್ರಕ್ಷುಬ್ದತೆಗೆ ಮ್ಯಾನ್ಮಾರ್‌ನಿಂದ ವಲಸೆ ಬಂದಿರುವ ಕುಕಿಗಳು ಪ್ರಮುಖ ಪಾತ್ರ ವಹಸಿದ್ದಾರೆʼ ಎಂಬಂತಹ ಮಾತುಗಳನ್ನಾಡಿ ಮಣಿಪುರದಲ್ಲಿ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಮಣಿಪುರದ ಗಲಭೆಯನ್ನು ಶಮನ ಮಾಡಲಂತೂ ಇವರಿಗೆ ಸಾಧ್ಯವಾಗಲಿಲ್ಲ. ದಿನವೂ ಕೊಲೆ, ಸುಲಿಗೆ, ಅತ್ಯಾಚಾರಗಳು ವರದಿಯಾಗುತ್ತಿವೆ. ಮೈತೆ ಮತ್ತು ಕುಕಿಗಳ ನಡುವೆ ವೈಷಮ್ಯ ಮುಗಿಲುಮುಟ್ಟಿದೆ. ಪೊಲೀಸರು ಮತ್ತು ಸ್ಥಳೀಯ ಆಡಳಿತ ಕೈಕಟ್ಟಿ ಕುಳಿತಿದೆ. ಹೀಗಿರುವಾಗ ಅಮಿತ್‌ ಶಾ ಇಂತಹ ಹೇಳಿಕೆ ಕೊಟ್ಟಿರುವುದು ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯುವುರಲ್ಲಿ ಎರಡು ಮಾತಿಲ್ಲ. ಮಣಿಪುರದ ಮೈತೆಗಳ ಪರವಾಗಿ ಅಲ್ಲಿನ ಬಿಜೆಪಿ ಸರ್ಕಾರ ಬಹಿರಂಗವಾಗಿಯೇ ಕೆಲಸ ಮಾಡುತ್ತಿದೆ ಎಂಬ ವಿಚಾರಕ್ಕೆ ಅಮಿತ್‌ ಶಾ ಮಾತುಗಳು ಸಾಕ್ಷಿ ನೀಡುತ್ತಿವೆ. ಬೇಲಿಯೇ ಎದ್ದು ಹೊಲವನ್ನು ಮೇಯುತ್ತಿರುವಾಗ ಮಣಿಪುರವನ್ನು ಕಾಪಾಡುವವರಾರು? ಮಣಿಪುರ ಭಾರತದ ಅವಿಭಾಜ್ಯ ಅಂಗವಲ್ಲವೇ? ಕುಕಿಗಳು ಭಾರತೀಯರಲ್ಲವೇ?

– ಸಾಕ್ಯ ಸಮಗಾರ

ಇದನ್ನೂ ಓದಿ; ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...