Homeಮುಖಪುಟಮಣಿಪುರ: ಬೆಂಕಿಗೆ ತುಪ್ಪ ಸುರಿದ ಅಮಿತ್‌ ಶಾ, 7 ನಿಮಿಷಕ್ಕೆ ಸುಸ್ತಾದ ಮೋದಿಜಿ

ಮಣಿಪುರ: ಬೆಂಕಿಗೆ ತುಪ್ಪ ಸುರಿದ ಅಮಿತ್‌ ಶಾ, 7 ನಿಮಿಷಕ್ಕೆ ಸುಸ್ತಾದ ಮೋದಿಜಿ

- Advertisement -
- Advertisement -

ಕಳೆದ ಮೂರು ತಿಂಗಳಿನಿಂದಲೂ ಮಣಿಪುರ ಹೊತ್ತು ಉರಿಯುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡುವವರಿಗೆಲ್ಲ ಭದ್ರತೆ ನೀಡಲು ಮುಂದಾಗುವ ನಮ್ಮ ದೇಶದ ಸರ್ಕಾರ ಮಣಿಪುರದಲ್ಲಿ ಇಲ್ಲಿಯವರೆಗೂ ಸರಿಯಾದ ಭದ್ರತೆ ನೀಡಲು ಸಾಧ್ಯವಾಗಿಲ್ಲ. ಭದ್ರತೆ ನೀಡುವುದಿರಲಿ, ಪೊಲೀಸರ ಹಾಗೂ ಪ್ಯಾರಾಮಿಲಿಟರಿ ಫೋರ್ಸ್‌ನ ಬಂದೂಕುಗಳನ್ನು ಮಣಿಪುರದ ತೀವ್ರಗಾಮಿಗಳು ಹೊತ್ತುಕೊಂಡು ಹೋಗಲು ಅನುವು ಮಾಡಿಕೊಡಲಾಗಿದೆ. ಮೈತೆ ಮತ್ತು ಕುಕಿ ಸಮುದಾಯಗಳೆರಡರ ಕಡೆಯೂ ಸಾವು ನೋವುಗಳಾಗಿವೆ. ಕುಕಿ ಸಮುದಾಯದ ಯುವತಿಯರನ್ನು ಅಮಾನವೀಯವಾಗಿ ವಿಕೃತವಾಗಿ ಬೆತ್ತಲೆ ಮೆರವಣಿಗೆ ಮಾಡಿದ್ದನ್ನು ಕೋಪ ಮತ್ತು ಕಣ್ಣಿರಿಲ್ಲದೆ ನೋಡಲು ಸಾಧ್ಯವೇ ಇಲ್ಲ. ಮಣಿಪುರದ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಮೋದಿಯವರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು ಎದ್ದು ಕಾಣುತ್ತಿದೆ. ಸ್ವತಃ ಮೋದಿಯವರೇ ಮಣಿಪುರದ ಬಗ್ಗೆ ತುಟಿ ಬಿಚ್ಚಲು ಎರಡು ತಿಂಗಳು ತೆಗೆದುಕೊಂಡಿದ್ದಾರೆ. ಭಾರತದ ಸಂವಿಧಾನಾತ್ಮಕ ಸದನವಾಗಿರುವ ಸಂಸತ್ತಿನಲ್ಲಿ ಮಣಿಪುರದ ಬಗ್ಗೆ ಪ್ರಧಾನಿಯವರ ತುಟಿ ಬಿಚ್ಚಿಸಲು ಅವಿಶ್ವಾಸ ನಿರ್ಣಯ ಕೈಗೊಳ್ಳುವ ದುಸ್ಥಿತಿಗೆ ದೇಶದ ಪ್ರಜಾಪ್ರಭುತ್ವ ತಲುಪಿದೆ. ಸಂಸತ್ತಿನಲ್ಲಿ ಮಣಿಪುರದ ಮಹಿಳೆಯರ ಆಕ್ರಂದನವನ್ನು ಕೇಳಬೇಕಿದ್ದ ಆಡಳಿತ ಪಕ್ಷದ ಮಹಿಳೆಯರು ʼಫ್ಲೈಯಿಂಗ್‌ ಕಿಸ್‌ʼ ಚರ್ಚೆ ಮಾಡುತ್ತಿದ್ದಾರೆ.

ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಗಾಗಿ ಕೊನೆಗೂ ಸಂಸತ್ತಿಗೆ ಬಂದ ಪ್ರಧಾನಿ ಮೋದಿಯವರು ಬರೋಬ್ಬರಿ 133 ನಿಮಿಶಗಳ ಕಾಲ ಭಾಷಣ ಮಾಡಿದ್ದಾರೆ. ಅಂದರೆ 2 ಗಂಟೆಗಳಿಗಿಂತಲೂ ಹೆಚ್ಚು ಸಮಯ ಮಾತಾಡಿದ್ದಾರೆ. ಇದರಲ್ಲಿ ಮಣಿಪುರದ ಬಗ್ಗೆ ಕೇವಲ 7 ನಿಮಿಷಗಳ ಕಾಲ ಮಾತಾಡಿದ್ದಾರೆ! ಅನ್ಯಾಯಕ್ಕೊಳಗಾಗಿರುವ ಮಣಿಪುರಕ್ಕೆ ಮತ್ತಷ್ಟು ಅನ್ಯಾಯ ಮಾಡಿದ್ದಾರೆ. 7 ನಿಮಿಷ ಮಾತನಾಡುವ ಮೂಲಕ ಮಣಿಪುರಕ್ಕೂ ಮೋದಿ ಸರ್ಕಾರಕ್ಕೂ ಸಂಬಂಧಿಲ್ಲವೆಂದೇ ಹೇಳುತ್ತಿದ್ದಾರೆ.

ಇದು ಒಂದು ಕಡೆಯಾದರೆ ಗೃಹಮಂತ್ರಿ ಅಮಿತ್‌ ಶಾ ಅವರು ಸಂಸತ್ತಿನಲ್ಲಿ ʼಮಣಿಪುರದ ಪ್ರಕ್ಷುಬ್ದತೆಗೆ ಮ್ಯಾನ್ಮಾರ್‌ನಿಂದ ವಲಸೆ ಬಂದಿರುವ ಕುಕಿಗಳು ಪ್ರಮುಖ ಪಾತ್ರ ವಹಸಿದ್ದಾರೆʼ ಎಂಬಂತಹ ಮಾತುಗಳನ್ನಾಡಿ ಮಣಿಪುರದಲ್ಲಿ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಮಣಿಪುರದ ಗಲಭೆಯನ್ನು ಶಮನ ಮಾಡಲಂತೂ ಇವರಿಗೆ ಸಾಧ್ಯವಾಗಲಿಲ್ಲ. ದಿನವೂ ಕೊಲೆ, ಸುಲಿಗೆ, ಅತ್ಯಾಚಾರಗಳು ವರದಿಯಾಗುತ್ತಿವೆ. ಮೈತೆ ಮತ್ತು ಕುಕಿಗಳ ನಡುವೆ ವೈಷಮ್ಯ ಮುಗಿಲುಮುಟ್ಟಿದೆ. ಪೊಲೀಸರು ಮತ್ತು ಸ್ಥಳೀಯ ಆಡಳಿತ ಕೈಕಟ್ಟಿ ಕುಳಿತಿದೆ. ಹೀಗಿರುವಾಗ ಅಮಿತ್‌ ಶಾ ಇಂತಹ ಹೇಳಿಕೆ ಕೊಟ್ಟಿರುವುದು ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯುವುರಲ್ಲಿ ಎರಡು ಮಾತಿಲ್ಲ. ಮಣಿಪುರದ ಮೈತೆಗಳ ಪರವಾಗಿ ಅಲ್ಲಿನ ಬಿಜೆಪಿ ಸರ್ಕಾರ ಬಹಿರಂಗವಾಗಿಯೇ ಕೆಲಸ ಮಾಡುತ್ತಿದೆ ಎಂಬ ವಿಚಾರಕ್ಕೆ ಅಮಿತ್‌ ಶಾ ಮಾತುಗಳು ಸಾಕ್ಷಿ ನೀಡುತ್ತಿವೆ. ಬೇಲಿಯೇ ಎದ್ದು ಹೊಲವನ್ನು ಮೇಯುತ್ತಿರುವಾಗ ಮಣಿಪುರವನ್ನು ಕಾಪಾಡುವವರಾರು? ಮಣಿಪುರ ಭಾರತದ ಅವಿಭಾಜ್ಯ ಅಂಗವಲ್ಲವೇ? ಕುಕಿಗಳು ಭಾರತೀಯರಲ್ಲವೇ?

– ಸಾಕ್ಯ ಸಮಗಾರ

ಇದನ್ನೂ ಓದಿ; ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...